ಮದನಪಲ್ಲಿ: ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ಪ್ರಖ್ಯಾತ ಪುಣ್ಯಕ್ಷೇತ್ರ ಬೋಯಕೊಂಡ ಗಂಗಮ್ಮ ದೇವಾಲಯ ಭಾನುವಾರ ಭಕ್ತರಿಂದ ತುಂಬಿ ತುಳುಕಾಡಿದೆ. ಆಷಾಡ ಮಾಸದ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದರುಶನಕ್ಕೆ ಬಂದಿದ್ದಾರೆಂದು ದೇವಾಲಯದ ಅಧಿಕಾರಿಗಳು ಹೇಳುತ್ತಾರೆ.
ಆಷಾಡದ ಮೊದಲ ಭಾನುವಾರ ಗಂಗಮ್ಮನನ್ನು ವಿಶೇಷವಾಗಿ ಚಿನ್ನಾಭರಣ ಮತ್ತು ಪುಷ್ಪಗಳಿಂದ ಅಲಂಕರಿಸಿ, ಭಕ್ತರ ದರುಶನಕ್ಕೆ ಏರ್ಪಾಡು ಮಾಡಲಾಗಿತ್ತು ಆಂಧ್ರ ತೆಲಂಗಾಣ ತಮಿಳುನಾಡು ಮತ್ತು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನಲೆಯಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದರುಶನ ಪಡೆದರು.
ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 7 ಗಂಟೆಗೆ ಅಮ್ಮನ ದರ್ಶನ ಆರಂಭವಾಗುತ್ತದೆ ಅದರೆ ಇಂದು ಆಷಾಡದ ಭಾನುವಾರದ ಹಿನ್ನಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಬೆಳಗ್ಗೆ 5 ಗಂಟೆಗೆ ದರ್ಶನ ಆರಂಭವಾಯಿತು,ಸಂಜೆ 5 ಗಂಟೆಯವರೆಗೂ ಭಕ್ತರ ದಟ್ಟಣೆ ಮುಂದುವರಿದಿತ್ತು. ಸುಮಾರು 40 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದ್ದು ವಿವಿಧ ಸೇವಾ ಟಿಕೆಟ್ ಗಳ ಮೂಲಕ ಒಂದೇ ದಿನದಲ್ಲಿ ರೂ.10.50 ಲಕ್ಷ ಆದಾಯ ಸಂಗ್ರಹವಾಗಿದೆ. ದೇಗುಲದ ಅಧ್ಯಕ್ಷ ಶಂಕರ ನಾರಾಯಣ ಹಾಗೂ ಇವೋ ಚಂದ್ರಮೌಳಿ ಮತ್ತು ಸಿಬ್ಬಂದಿ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



