ಮದನಪಲ್ಲಿ: ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ಪ್ರಖ್ಯಾತ ಪುಣ್ಯಕ್ಷೇತ್ರ ಬೋಯಕೊಂಡ ಗಂಗಮ್ಮ ದೇವಾಲಯ ಭಾನುವಾರ ಭಕ್ತರಿಂದ ತುಂಬಿ ತುಳುಕಾಡಿದೆ. ಆಷಾಡ ಮಾಸದ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದರುಶನಕ್ಕೆ ಬಂದಿದ್ದಾರೆಂದು ದೇವಾಲಯದ ಅಧಿಕಾರಿಗಳು ಹೇಳುತ್ತಾರೆ.
ಆಷಾಡದ ಮೊದಲ ಭಾನುವಾರ ಗಂಗಮ್ಮನನ್ನು ವಿಶೇಷವಾಗಿ ಚಿನ್ನಾಭರಣ ಮತ್ತು ಪುಷ್ಪಗಳಿಂದ ಅಲಂಕರಿಸಿ, ಭಕ್ತರ ದರುಶನಕ್ಕೆ ಏರ್ಪಾಡು ಮಾಡಲಾಗಿತ್ತು ಆಂಧ್ರ ತೆಲಂಗಾಣ ತಮಿಳುನಾಡು ಮತ್ತು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನಲೆಯಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದರುಶನ ಪಡೆದರು.
ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 7 ಗಂಟೆಗೆ ಅಮ್ಮನ ದರ್ಶನ ಆರಂಭವಾಗುತ್ತದೆ ಅದರೆ ಇಂದು ಆಷಾಡದ ಭಾನುವಾರದ ಹಿನ್ನಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಬೆಳಗ್ಗೆ 5 ಗಂಟೆಗೆ ದರ್ಶನ ಆರಂಭವಾಯಿತು,ಸಂಜೆ 5 ಗಂಟೆಯವರೆಗೂ ಭಕ್ತರ ದಟ್ಟಣೆ ಮುಂದುವರಿದಿತ್ತು. ಸುಮಾರು 40 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದ್ದು ವಿವಿಧ ಸೇವಾ ಟಿಕೆಟ್ ಗಳ ಮೂಲಕ ಒಂದೇ ದಿನದಲ್ಲಿ ರೂ.10.50 ಲಕ್ಷ ಆದಾಯ ಸಂಗ್ರಹವಾಗಿದೆ. ದೇಗುಲದ ಅಧ್ಯಕ್ಷ ಶಂಕರ ನಾರಾಯಣ ಹಾಗೂ ಇವೋ ಚಂದ್ರಮೌಳಿ ಮತ್ತು ಸಿಬ್ಬಂದಿ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



