ಮದನಪಲ್ಲಿ: ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ಪ್ರಖ್ಯಾತ ಪುಣ್ಯಕ್ಷೇತ್ರ ಬೋಯಕೊಂಡ ಗಂಗಮ್ಮ ದೇವಾಲಯ ಭಾನುವಾರ ಭಕ್ತರಿಂದ ತುಂಬಿ ತುಳುಕಾಡಿದೆ. ಆಷಾಡ ಮಾಸದ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದರುಶನಕ್ಕೆ ಬಂದಿದ್ದಾರೆಂದು ದೇವಾಲಯದ ಅಧಿಕಾರಿಗಳು ಹೇಳುತ್ತಾರೆ.
ಆಷಾಡದ ಮೊದಲ ಭಾನುವಾರ ಗಂಗಮ್ಮನನ್ನು ವಿಶೇಷವಾಗಿ ಚಿನ್ನಾಭರಣ ಮತ್ತು ಪುಷ್ಪಗಳಿಂದ ಅಲಂಕರಿಸಿ, ಭಕ್ತರ ದರುಶನಕ್ಕೆ ಏರ್ಪಾಡು ಮಾಡಲಾಗಿತ್ತು ಆಂಧ್ರ ತೆಲಂಗಾಣ ತಮಿಳುನಾಡು ಮತ್ತು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನಲೆಯಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದರುಶನ ಪಡೆದರು.
ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 7 ಗಂಟೆಗೆ ಅಮ್ಮನ ದರ್ಶನ ಆರಂಭವಾಗುತ್ತದೆ ಅದರೆ ಇಂದು ಆಷಾಡದ ಭಾನುವಾರದ ಹಿನ್ನಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಬೆಳಗ್ಗೆ 5 ಗಂಟೆಗೆ ದರ್ಶನ ಆರಂಭವಾಯಿತು,ಸಂಜೆ 5 ಗಂಟೆಯವರೆಗೂ ಭಕ್ತರ ದಟ್ಟಣೆ ಮುಂದುವರಿದಿತ್ತು. ಸುಮಾರು 40 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದ್ದು ವಿವಿಧ ಸೇವಾ ಟಿಕೆಟ್ ಗಳ ಮೂಲಕ ಒಂದೇ ದಿನದಲ್ಲಿ ರೂ.10.50 ಲಕ್ಷ ಆದಾಯ ಸಂಗ್ರಹವಾಗಿದೆ. ದೇಗುಲದ ಅಧ್ಯಕ್ಷ ಶಂಕರ ನಾರಾಯಣ ಹಾಗೂ ಇವೋ ಚಂದ್ರಮೌಳಿ ಮತ್ತು ಸಿಬ್ಬಂದಿ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27