ಕೋಲಾರ: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್)ನ ನೂತನ ಅಧ್ಯಕ್ಷರಾಗಿ ಶಾಸಕರೊಬ್ಬರು ಆಯ್ಕೆಯಾಗಲಿದ್ದಾರೆ ಎಂಬ ಸುಳಿವನ್ನು ಶಾಸಕ ಕೆ.ವೈ.ನಂಜೇಗೌಡರು ನೀಡಿದ್ದು ಈ ವಿಚಾರ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಸಾಕಷ್ಟು ರಾಜಕೀಯ ಚರ್ಚೆಗೆ ಕಾರಣವಾಗಿದೆ.ಪ್ರಸ್ತಾಪಿಸದೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಜಿಲ್ಲೆಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹೆಸರು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ತಿರ್ಮಾನ ಆಗಿದೆ ಸೆ.7 ರಂದು ನಿಗದಿಯಂತೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ನಡೆಯಲಿದೆ ಎಂದು ಶಾಸಕ ಕೆ.ವೈ.ನಂಜೇಗೌಡರು ಹೇಳಿದ್ದಾರೆ.ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆಗಳನ್ನು ತಡೆಯಲು ಕೆಲವರು ನಿರಂತರವಾಗಿ ಕಾಣದ ಕೈಗಳು ಕೆಲಸ ಮಾಡುತಿದ್ದು ಈಗಾಗಲೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹೈಕೋರ್ಟ್ನ ಏಕಸದಸ್ಯ ಪೀಠವಾಗಲಿ ಅಥವಾ ದ್ವಿಸದಸ್ಯ ಪೀಠವಾಗಲಿ ಚುನಾವಣೆಗೆ ಯಾವುದೇ ತಡೆ ನೀಡಿಲ್ಲ. ಹೀಗಾಗಿ ಸೆ.7ರಂದು ಚುನಾವಣೆ ನಡೆಯುವುದು ಖಚಿತ ಎಂದು ಅವರು ಸ್ಪಷ್ಟಪಡಿಸಿದ್ದಾರೆರೈತರು, ಮಹಿಳಾ ಸಂಘಗಳ ಹಿತ ಕಾಪಾಡುವ ಅಗತ್ಯಕಳೆದ…
Author: Srinivas_Murthy
ಅಧಿಕಾರ ಕಳೆದುಕೊಂಡ ತೆಲಂಗಾಣದ ಸರ್ಕಾರದ ಮಹಿಳಾ ಸಚಿವೆ ಕೊಂಡಾ ಸುರೇಖಾ! ನ್ಯೂಜ್ ಡೆಸ್ಖ್: ಮಗಳು ಆಡಿದ ಮಾತಿನಿಂದ ತಾಯಿಯ ಮಂತ್ರಿ ಪದವಿಗೆ ಧಕ್ಕೆಯಾಗಿದೆ.ಅಧಿಕಾರ ಕಳೆದುಕೊಂಡ ಮಹಿಳಾ ಮಂತ್ರಿ ತೆಲಂಗಾಣ ಸರ್ಕಾರದಲ್ಲಿ ಅರಣ್ಯ ಇಲಾಖೆ ಹಾಗು ಧಾರ್ಮಿಕ ದತ್ತಿ ಸಚಿವೆ ಕೊಂಡಾ ಸುರೇಖಾ. ಈ ವಿಚಾರ ತೆಲಂಗಾಣ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಕೊಂಡಾ ಸುರೇಖಾ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸಚಿವ ಸಂಪುಟದಿಂದ ಕೈಬಿಟ್ಟಿದ್ದಾರೆ. ತೆಲಂಗಾಣ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿಯ ಶಿಫಾರಸು ಪ್ರಮುಖ ಕಾರಣವಾಗಿದೆ. ಈ ಬೆಳವಣಿಗೆಯ ಹಿಂದೆ ಕಾಂಗ್ರೆಸ್ ಶಿಸ್ತು ಸಮಿತಿಯ ಶಿಫಾರಸು ಪ್ರಮುಖ ಕಾರಣವಾಗಿದೆ ಎಂಬುದು ವರದಿಗಳಲ್ಲಿದೆ.ಮಗಳ ಹೇಳಿಕೆ ತಂದ ಸಂಕಷ್ಟಕೊಂಡಾ ಸುರೇಖಾ ಅವರ ಪುತ್ರಿ ಕೊಂಡಾ ಸುಷ್ಮಿತಾ ಪಟೇಲ್ ಅವರು ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್ನ ಕೆಲವು ನಾಯಕರ ವಿರುದ್ಧ ಬಹಿರಂಗವಾಗಿ ಟೀಕೆ ಮಾಡಿದ್ದರು. ಇದೇ ವೇಳೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಾರ್ಕಲ್ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಆಸಕ್ತಿಯನ್ನೂ ವ್ಯಕ್ತಪಡಿಸಿದ್ದರು…
ಶ್ರೀನಿವಾಸಪುರ:ತಾಲ್ಲೂಕಿನ ದೇವಲಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.ಕಂಪ್ಯೂಟರ್ ತರಬೇತಿ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಕಂಪ್ಯೂಟರ್ ಕೋಠಡಿಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದ್ದು ವಿದ್ಯಾರ್ಥಿನಿಯರು ಮಾನಸಿಕವಾಗಿ ಕಿರುಕುಳ ಅನುಭವಿಸುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ.ದೇವಲಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕ ವಿಜಯ್ ಕುಮಾರ್ ವಿರುದ್ಧ ಸಂತ್ರಸ್ತ ವಿದ್ಯಾರ್ಥಿನಿಯರ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ಹೋರಹಾಕಿದ್ದಾರೆ.ಇತ್ತಿಚಿಕೆ ಶಿಕ್ಷಕನ ಕೀಚಕ ವರ್ತನೆ ಅತಿಯಾದ ಹಿನ್ನಲೆಯಲ್ಲಿ ಮಕ್ಕಳು ಶಾಲೆಯಲ್ಲಿ ನಡೆಯುತ್ತಿದ್ದ ಘಟನೆಗಳ ಕುರಿತಾಗಿ ಪೋಷಕರೊಂದಿಗೆ ಭಯದಿಂದ ಹಂಚಿಕೊಂಡ ಹಿನ್ನಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರ ಹಾಗು ಪೋಷಕರ ಆರೋಪದ ಪ್ರಕಾರ ಶಿಕ್ಷಕನ ಅಸಭ್ಯ ವರ್ತನೆ ಮೊದಲಿನಿಂದಲೂ ಇದ್ದು ಮಕ್ಕಳು ಮನೆಯಲ್ಲಿ ಹೇಳಲು ಹೆದರಿದ ಹಿನ್ನಲೆಯಲ್ಲಿ ವಿಷಯ ಗೊತ್ತಾಗಿರಲಿಲ್ಲ ಎನ್ನುತ್ತಾರೆ ಇತ್ತೀಚೆಗೆ ಪೋಷಕರಿಗೆ ಮಾಹಿತಿ ನೀಡಿದ ಬಳಿಕ ಎಂದು ಪೋಷಕರು ಶಿಕ್ಷಕನ ವಿರುದ್ದ ತಿರುಗಿ ಬಿದಿದ್ದಾರೆ.…
ನ್ಯೂಜ್ ಡೆಸ್ಕ್: ನೇಪಾಳದ ಭೀಕರ ಪ್ರವಾಹದ ಸಂದರ್ಭದಲ್ಲಿ ಮುಖ್ಯ ಶಿಕ್ಷಕನ ಸಮಯಪ್ರಜ್ಞೆಯಿಂದ ಸಾವಿರಾರು ವಿದ್ಯಾರ್ಥಿಗಳ ಪ್ರಾಣ ಉಳಿದಿದೆ.ನೇಪಾಳದ ಟ್ರಿಶೂಲಿ ಕಣಿವೆಯಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದ ಸಂದರ್ಭದಲ್ಲಿ ಮುಖ್ಯ ಶಿಕ್ಷಕರೊಬ್ಬರ ಸಮಯೋಚಿತ ನಿರ್ಧಾರದಿಂದ 1,643 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೇಪಾಳದ ನುವಾಕೋಟ್ ಜಿಲ್ಲೆಯ ಬಿದುರ್ನಲ್ಲಿರುವ ತ್ರಿಭುವನ್ ತ್ರಿಶೂಲಿ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ರಾಜೇಂದ್ರ ದವಾಡಿ ಅವರು ಎಂದಿನಂತೆ ತರಗತಿ ನಡೆಯುತ್ತಿದ್ದ ವೇಳೆ ಪ್ರವಾಹದ ಅಪಾಯದ ಮಾಹಿತಿ ಪ್ರವಾಹದ ನೀರು ಶಾಲೆಯತ್ತ ಧಾವಿಸುತ್ತಿರುವ ಮಾಹಿತಿ ಸಿಕ್ಕ ಕೂಡಲೆ ಮುಖ್ಯ ಶಿಕ್ಷಕ ರಾಜೇಂದ್ರ ದವಾಡಿ ಕಾರ್ಯಪ್ರವೃತ್ತರಾಗಿದ್ದಾರೆ ತಕ್ಷಣ Non-teaching staff ಅನ್ನು ಕರೆದು ಶಾಲೆ ಬೆಲ್ ಹೋಡೆದು ಶಾಲೆಯನ್ನು ಖಾಲಿ ಮಾಡಿಸಿ ವಿದ್ಯಾರ್ಥಿಗಳನ್ನು ಎತ್ತರದ ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ದಿದ್ದಾರೆ.ಶಾಲೆಯ ಅಕೌಂಟೆಂಟ್ಗೆ ರಾಸುವಾದಲ್ಲಿದ್ದ ಸಂಬಂಧಿಕರಿಂದ ಕರೆ ಬಂದಿದ್ದು, ಪ್ರವಾಹದ ನೀರು ಭಾರೀ ಪ್ರಮಾಣದಲ್ಲಿ ಕೆಳಭಾಗದತ್ತ ಹರಿಯುತ್ತಿರುವುದಾಗಿ ತಿಳಿದುಬಂದಿತ್ತು.ಮಾಹಿತಿ ಬಂದಾಗ ಪರಿಸ್ಥಿತಿ ಎಷ್ಟು ಗಂಭೀರವಾಗಿತ್ತು ಎನ್ನುವುದಾದರೆ ಅಂತಹ ಸಾವು-ಬದುಕಿನ ನಡುವಿನ ನೂಕುನುಗ್ಗಲಿನಲ್ಲಿ ಒಬ್ಬ…
ನ್ಯೂಜ್ ಡೆಸ್ಕ್: ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಮುಖಂಡ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ವಿಂಟೇಜ್ ಕಾರುಗಳ ಮಾಲೀಕ ಡಾ. ರವಿಪ್ರಕಾಶ್ ಅವರ ಕಿಡ್ನಾಪ್ ಪ್ರಕರಣ ಹೊಸ ತಿರವು ಪಡೆದಿದ್ದು ಈಗ ಬಂದಿರುವ ಮಾಹಿತಿಯಂತೆ ಅವರನ್ನು ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ಮೈದುಕೂರು ಠಾಣೆ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರಂತೆ.ಬೆಂಗಳೂರಿನಲ್ಲಿ ಆಂಧ್ರದ ಕಡಪಾ ಜಿಲ್ಲೆಯ ಮೈದುಕೂರು ಶಾಸಕ ಪುತ್ತಾ ಸುಧಾಕರ್ ಹಾಗೂ ಅವರ ಪುತ್ರ ರವಿಕುಮಾರ್ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದ್ದು ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರದಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಗಳೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಬೆಂಗಳೂರಿನ ಬಿಜೆಪಿ ಮುಖಂಡ ವಿಂಟೆಜ್ ಕಾರುಗಳ ಮಾಲಿಕ ಹಾಗು ರಿಯಲ್ ಎಸ್ಟೇಟ್ ಉದ್ಯಮಿ ರವಿಪ್ರಕಾಶ್ ಅವರನ್ನು ಅಪಹರಿಸಲಾಗಿದೆ ಎಂದು ಅವರ ಕುಟುಂಬದ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿತ್ತು ಅದರಂತೆ ಅದರಂತೆ ಬೆಂಗಳೂರು ಪೊಲೀಸರು ಪುಟ್ಟ ಸುಧಾಕರ್ ಹಾಗು ಮಗನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮಾಡಿದಾಗ ಆಗಸ್ಟ್ 30ರಂದು ಆರ್.ಆರ್. ನಗರದಲ್ಲಿರುವ…
ಶ್ರೀನಿವಾಸಪುರ: ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರಾಗಿ (MANAGER) ಶ್ರೀನಿವಾಸಪುರ ಶಾಖೆಯಲ್ಲಿ ಕಾರ್ಯನಿರ್ವಹಿಸಿ, ವರ್ಗಾವಣೆಯಾಗಿರುವ ಪಿ. ಭರತ್ ಕುಮಾರ್ ರೆಡ್ಡಿ ಅವರಿಗೆ ಬ್ಯಾಂಕ್ ಸಿಬ್ಬಂದಿ, ಗ್ರಾಹಕರು ಹಾಗೂ ಹಿತೈಷಿಗಳ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ತಮ್ಮ ಕರ್ತವ್ಯನಿಷ್ಠೆ, ಸರಳ ನಡೆ, ಗ್ರಾಹಕರೊಂದಿಗೆ ಆತ್ಮೀಯವಾಗಿ ಬೆರೆಯುವ ಗುಣ ಹಾಗೂ ಸಮಾಜಮುಖಿ ಚಿಂತನೆಯ ಮೂಲಕ ಬ್ಯಾಂಕ್ನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಬ್ಯಾಂಕ್ಗೆ ಬರುವ ಗ್ರಾಹಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಪರಿಹರಿಸಲು ಅವರು ಪ್ರಯತ್ನಿಸುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ವಿಶೇಷವಾಗಿ ಗ್ರಾಹಕರನ್ನು ಆಪ್ಯಾಯತೆಯಿಂದ ಮಾತಾನಾಡುತ್ತ ಬ್ಯಾಂಕಿಂಗ್ ಸೇವೆಗಳ ಕುರಿತು ಜನಸಾಮಾನ್ಯರಿಗೆ ಸರಳವಾಗಿ ತಲುಪಿಸುತ್ತಿದ್ದರು. ಅವರ ಸೇವಾ ಅವಧಿಯಲ್ಲಿ ಯೂನಿಯನ್ ಬ್ಯಾಂಕ್ ಶ್ರೀನಿವಾಸಪುರದ ಶಾಖೆ ಹಾಗು ಗ್ರಾಹಕರ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಿದೆ ಎಂದು ಮಟ್ಟಕನಸಂದ್ರನಾರಯಣಸ್ವಾಮಿ ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ ವರ್ಗಾವಣೆಯಾಗದ ಬ್ಯಾಂಕ್ ವ್ಯವಸ್ಥಾಪಕ ಪಿ. ಭರತ್ ಕುಮಾರ್ ರೆಡ್ಡಿ, ತಮ್ಮ ಸೇವಾ ಅವಧಿಯಲ್ಲಿ ಸಹಕಾರ ನೀಡಿದ ಬ್ಯಾಂಕ್ ಸಿಬ್ಬಂದಿ, ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಕೃತಜ್ಞತೆ…
ಶ್ರೀನಿವಾಸಪುರ: ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ನಿವಾಸಿ, ನಿವೃತ್ತ ಶಿಕ್ಷಕ ಎಸ್.ಆರ್. ವೆಂಕಟೇಶ್ ರಾವ್ (SRV) (85) ಅವರು ತಮ್ಮ ಸ್ವಗೃಹದಲ್ಲಿ ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ರಾಯಲ್ಪಾಡು, ಸೋಮಯಾಜಲಹಳ್ಳಿ ಹೈಸ್ಕೂಲ್ ಹಾಗೂ ಬಳಿಕ ಶ್ರೀನಿವಾಸಪುರದ ಬಾಲಕಿಯರ ಕಾಲೇಜಿನಲ್ಲಿ ಗಣಿತಶಾಸ್ತ್ರ ಮತ್ತು ವಿಜ್ಞಾನ ಬೋಧಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.ನಂತರದಲ್ಲಿ ಶಿಡ್ಲಘಟ್ಟ ತಾಲೂಕಿನ ಚೀಮಂಗಲ ಹೈಸ್ಕೂಲಿಗೆ ವರ್ಗಾವಣೆ ಗೋಂಡು ಅಲ್ಲಿಯೇ ನಿವೃತ್ತರಾಗಿದ್ದರು.SRV ಮೇಷ್ಟ್ರು ಎಂದೆ ಖ್ಯಾತರಾಗಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಸರಳತೆ, ಶಿಸ್ತು, ಸೇವಾ ಮನೋಭಾವ ಹಾಗೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ಅಪಾರ ಗೌರವಕ್ಕೆ ಪಾತ್ರರಾಗಿದ್ದರು. ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಅವರು, ಹಲವು ತಲೆಮಾರುಗಳ ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದರು. ಶಿಕ್ಷಣ ಕ್ಷೇತ್ರದಿಂದ ನಿವೃತ್ತರಾದ ನಂತರವೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಸೋಮಯಾಜಲಹಳ್ಳಿ ಭಾಗದ ಜನರ ಸಾಮಾಜಿಕ ಆರ್ಥಿಕ ಉನ್ನತಿಗಾಗಿ…
ಕೋಲಾರ ಜಿಲ್ಲೆಯಲ್ಲಿ ರೈಲ್ವೆ ಗೇಟ್ ಮುಕ್ತಗೊಳಿಸುವುದಾಗಿ ಸಚಿವ ವಿ. ಸೋಮಣ್ಣ ಘೋಷಣೆ ಶ್ರೀನಿವಾಸಪುರ: ಅಗತ್ಯ ಜಾಗ ಒದಗಿಸಿದರೆ ರೈಲ್ವೆ ಇಲಾಖೆಯೊಂದಿಗೆ ಚರ್ಚಿಸಿ, ಶ್ರೀನಿವಾಸಪುರದಲ್ಲಿ ಸುಮಾರು 2,000 ಮಂದಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಸಚಿವ ವಿ. ಸೋಮಣ್ಣ ಭರವಸೆ ನೀಡಿದರು. ಸ್ಥಳೀಯವಾಗಿ ಲಭ್ಯವಿರುವ ಸೂಕ್ತ ಜಾಗದ ಕುರಿತು ಮಾಹಿತಿ ನೀಡಿದರೆ, ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಲ್ಲಿನ ಸಾಧ್ಯತೆಗಳನ್ನು ಪರಿಶೀಲಿಸಲಾಗುವುದು. ಈ ಮೂಲಕ ಶ್ರೀನಿವಾಸಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು. ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿವಿಧ ಚಟುವಟಿಕೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಅವಕಾಶ ದೊರೆತರೆ, ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗುವುದರ ಜೊತೆಗೆ ವ್ಯಾಪಾರ–ವಹಿವಾಟು ಮತ್ತು ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದರು..ಮಾತನಾಡಿದರು. ಈ ಸೇತುವೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ವಾಹನ ಸಂಚಾರ ಸುಗಮವಾಗಲಿದೆ. ರೈಲ್ವೆ ಗೇಟ್ ಬಳಿ ವಾಹನಗಳು ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ…
ಶ್ರೀನಿವಾಸಪುರ: ತಾಲೂಕಿನ ರೋಣೂರು ಪಂಚಾಯಿತಿ ವ್ಯಾಪ್ತಿಯ ನಾರಮಾಕಲಹಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆಯ ಸಂಕಷ್ಟ ಗ್ರಾಮಸ್ಥರು ಎದುರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಅಳವಡಿಸಿರುವ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಜಲ ಜೀವನ್ ಮಿಷನ್ (JJM) ಸೇರಿದಂತೆ ಕುಡಿಯುವ ನೀರಿನ ವ್ಯವಸ್ಥೆ ಇದ್ದರೂ ನೀರಿನ ಸೌಲಭ್ಯ ಸಮರ್ಪಕವಾಗಿಲ್ಲ ಎಂಬುದು ಸ್ಥಳೀಯರ ಆರೋಪ. ನೀರಿನ ನಳಗಳು ಬಳಕೆಯಲ್ಲಿಲ್ಲದಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ನೀರಿಗಾಗಿ ಗ್ರಾಮಸ್ಥರು ಪರದಾಡುತ್ತಿರುವಾಗ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸದೆ ಇರುವುದು ದುರಂತ ಎನ್ನುತ್ತಾರೆ.ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪ್ರತಿದಿನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನೀರಿನ ಮೂಲ, ಪೈಪ್ಲೈನ್, ನಳಗಳ ಕಾರ್ಯನಿರ್ವಹಣೆ ಹಾಗೂ ನೀರು ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರ ಒತ್ತಾಯ. ಶಾಸಕರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಪಂದಿಸಿ ನಿಯಮಿತ ಹಾಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ಕಲ್ಪಿಸಬೇಕು…
ನ್ಯೂಜ್ ಡೆಸ್ಕ್:ಮಳೆ ಕೊರತೆ, ಕಡಿಮೆ ಬಿತ್ತನೆ ಕುಂಠಿತಗೊಂಡ ಪರಿಣಾಮ ರಾಜ್ಯದಲ್ಲಿ ಅಗತ್ಯ ಆಹಾರ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದೀಗ ಈರುಳ್ಳಿ ಬೆಲೆ ಗ್ರಾಹಕರಿಗೆ ಮತ್ತಷ್ಟು ಬಿಸಿ ಮುಟ್ಟಿಸಿದೆ. ಮಾರುಕಟ್ಟೆಯಲ್ಲಿ ಈರುಳ್ಳಿ ದರ ತೀವ್ರವಾಗಿ ಕೆಲವು ವಾರಗಳ ಹಿಂದೆ ಕೆ.ಜಿ.ಗೆ ₹20–30ರಷ್ಟಿದ್ದ ಈರುಳ್ಳಿ ದರ ಇದೀಗ ₹40ರಿಂದ ₹52ರ ವರೆಗೆ ಏರಿಕೆಯಾಗಿದೆ. ಮಳೆ ಕೊರತೆಯಿಂದ ಕರ್ನಾಟಕದಲ್ಲಿ ಈರುಳ್ಳಿ ಬಿತ್ತನೆ ಕುಂಠಿತಗೊಂಡಿದ್ದು, ನೆರೆಯ ಮಹಾರಾಷ್ಟ್ರದಲ್ಲೂ ಬೆಳೆ ಹಾನಿಯಾಗಿರುವುದು ಸಕ್ಕರೆ ಪೂರೈಕೆಯ ಮೇಲೆ ಪರಿಣಾಮ ಬೀರಿದ್ದು ಹೊಸ ಬೆಳೆ ಮಾರುಕಟ್ಟೆಗೆ ಬರುವುದರಲ್ಲಿ ವಿಳಂಬವಾಗುವ ಸಾಧ್ಯತೆಯೂ ಇದೆ.ಕಳೆದ ಕೆಲವು ವಾರಗಳಿಂದ ಈರುಳ್ಳಿ ಸಗಟು ದರದಲ್ಲಿ ಸರಾಸರಿ ಪ್ರತಿ ಕೆಜಿಗೆ 15 ರೂಪಾಯಿ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಗಳಲ್ಲಿ ಈ ಹಿಂದೆ 20 ರಿಂದ 30 ರೂಪಾಯಿ ಇದ್ದ ಒಂದು ಕೆಜಿ ಈರುಳ್ಳಿ ಬೆಲೆ, ಇದೀಗ 40 ರಿಂದ 50 ರೂಪಾಯಿ ತಲುಪಿದೆ. ಈರುಳ್ಳಿ ಬೆಲೆ ಏರಿಕೆಯ ಬೆನ್ನಲ್ಲೇ ಸಕ್ಕರೆ ದರದಲ್ಲೂ ಹೆಚ್ಚಳ ಕಂಡು ಬಂದಿದ್ದು ದೇಶದ ಸರಾಸರಿ…


