ಶ್ರೀನಿವಾಸಪುರ:ಶ್ರೀನಿವಾಸಪುರ ಪಟ್ಟಣದ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಅಭಿವೃದ್ಧಿಗೆ ಒಂದು ಕೋಟಿ ಅನುಧಾನಕ್ಕೆ ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಿರುವುದಾಗಿ ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು.ಕಾರ್ತಿಕ ಮಾಸದ ಅಂಗವಾಗಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೂ ಮುನ್ನಾ ದೇವಾಲಯಕ್ಕೆ ಭೇಟಿ ನೀಡಿದ ಶಾಸಕ ದೇವರ ದರ್ಶನ ಪಡೆದು ನಂತರ ಮಾತನಾಡಿ ಲಕ್ಷದೀಪೋತ್ಸವ ಕಾರ್ಯಕ್ರಮದ ಉತ್ತಮವಾದ ಸೇವೆ ಆಯೋಜಕರಿಗೆ ಒಳ್ಲೆಯದಾಗಲಿ ಎಂದ ಅವರು ಆಯೋಜಕರ ಆಹ್ವಾನದ ಮೇರೆಗೆ ದೇವರ ದರ್ಶನಕ್ಕೆ ಆಗಮಿಸಿದ್ದು,ಇದೊಂದು ಪುರಾತನ ಆಲಯವಾಗಿದೆ ಇದರ ಅಭಿವೃದ್ಧಿಗೆ ಸರ್ಕಾರದಲ್ಲಿ ಹಣ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದ್ದು ಸುಮಾರು ಒಂದು ಕೋಟಿ ವೆಚ್ಚದಲ್ಲಿ ಅಭೀವೃದ್ಧಿ ಮಾಡುವ ಯೋಚನೆ ಇದ್ದು ಊರಿನ ಪ್ರಮುಖರು ಹಿರಿಯರು ಸಹಕಾರ ಪಡೆದು ದೇವಾಲಯದ ಗೋಪುರ ಇನ್ನಿತರೆ ಕಾರ್ಯಗಳಿಗೆ ಹಣ ವಿನಿಯೋಗಿಸುವುದಾಗಿ ಹೇಳಿದರು.ವಾಣಿಜ್ಯ ಕಟ್ಟಡಗಳು ಬೇಡ ಈ ಸಂದರ್ಭದಲ್ಲಿ ಪ್ರಮುಖ ವಾಣಿಜ್ಯೋದ್ಯಮಿ ವೈ.ಆರ್.ಎಸ್ ಪ್ರಕಾಶ್ ಮಾತನಾಡಿ ದೇವಾಲಯದ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ ಆವರಣದ ಸುತ್ತ ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡಬೇಡಿ ಎಂದು ಮನವಿ ಮಾಡಿದರು. ಈ…
Author: Srinivas_Murthy
ಶ್ರೀನಿವಾಸಪುರ:ಲೋಕ ಕಲ್ಯಾಣಾರ್ಥವಾಗಿ ಕಾರ್ತಿಕ ಮಾಸದ ಅಂಗವಾಗಿ ಶ್ರೀನಿವಾಸಪುರ ಪಟ್ಟಣದ ಪುರಾತನವಾದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ಇದೆ ಮೊದಲ ಬಾರಿಗೆ ಲಕ್ಷದೀಪೋತ್ಸವ ನಡೆಯಲಿದೆ. ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಇರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ 25ರ ಶನಿವಾರ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನೀರಿಕ್ಷೆ ಇದೆ.ಶನಿವಾರ ಬೆಳಗ್ಗೆ ಮೂಲದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಹಾಗೂ ಪೂಜೆ ನಡೆಯಲಿದ್ದು ರಾತ್ರಿ ಲಕ್ಷ ದೀಪೋತ್ಸವ ಹಾಗೂ ಬಾಣಬಿರುಸುಗಳ ಪ್ರದರ್ಶನ, ನಡುವೆ ದೇವರ ಭವ್ಯ ಮೆರವಣಿಗೆ ಪಟ್ಟಣದಲ್ಲಿ ನಡೆಯಲಿದೆ.ಲಕ್ಷದೀಪೋತ್ಸವದ ಅಂಗವಾಗಿ ನಡೆಯುವ ಅದ್ದೂರಿ ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು ಭಾಗವಹಿಸಲಿದ್ದು ಡೊಳ್ಳು ಕುಣಿತ, ವೀರಗಾಸೆ, ಗಾರುಡಿ ಗೊಂಬೆಗಳು, ಪೂಜೆ ತಮಟೆ, ಅಣ್ಣಮ್ಮನ ತಮಟೆ ಮತ್ತಿತರ ಕಲಾವಿದರ ತಂಡಗಳು ಪಾಲ್ಗೊಂಡು ಮೆರವಣಿಗೆಗೆ ಮೆರಗು ನೀಡಲಿರುವುದಾಗಿ ಕಾರ್ಯಕ್ರಮದ ವ್ಯವಸ್ಥಾಪಕರು ತಿಳಿಸಿದ್ದಾರೆ ಭಕ್ತಾದಿಗಳು ಸಕಾಲದಲ್ಲಿ ಆಗಮಿಸಿ ಈ ಪುಣ್ಯ ಕಾರ್ಯಕ್ರಮದಲ್ಲಿ ಸಮಸ್ತ ಭಕ್ತಾದಿಗಳು ಪಾಲ್ಗೊಂಡು ದೇವರ ಅನುಗ್ರಹಕ್ಕೆ…
ಶ್ರೀನಿವಾಸಪುರ:ಪಟ್ಟಣದ ನಾಗರೀಕರು ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದು ಪುರಸಭೆ ಆಡಳಿತಕ್ಕೆ ಇದರ ಅರಿವೆ ಇಲ್ಲದಂತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಮರ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಯಾದವ್ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಜನ ಪ್ರತಿನಿತ್ಯ ಅನುಭವಿಸುವಂತ ಸಮಸ್ಯೆಗಳನ್ನು ಆಳುವವರು ಗಮನಿಸುತ್ತಿಲ್ಲ ಸಾರ್ವಜನಿಕರು ನರಕಯಾತನೆಯಲ್ಲಿ ಜೀವನ ಕಳೆಯುವಂತಾಗಿದೆ.ಪಟ್ಟಣದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿದ್ದು ಪ್ರದೇಶದ ವ್ಯಾಪ್ತಿಯನ್ನು ವಿಸ್ತರಿಸುತ್ತ ಸಾಗಿದೆ ಅದಕ್ಕೆ ತಕ್ಕನಂತೆ ನಾಗರೀಕರಿಗೆ ಅಗತ್ಯ ಮೂಭೂತ ಸೌಕರ್ಯಗಳನ್ನು ಒದಗಿಸುವ ಜವಬ್ದಾರಿ ಆಳುವವರಿಗೆ ಇರಬೇಕಾಗುತ್ತದೆ ಪುರಸಭೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆ ಮಾಡಿಸಿರುವಂತ ಬೈರಪಲ್ಲಿ,ಕೊಳ್ಳೂರು.ಉನಿಕಿಲಿ,ನಲ್ಲಪಲ್ಲಿ ಇಂದಿರಾನಗರ ಪ್ರದೇಶಗಳಲ್ಲಿ ಉತ್ತಮ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಯಾವುದು ಚರಂಡಿ ಯಾವುದು ಎಂಬ ವ್ಯತ್ಯಾಸ ಇಲ್ಲದೆ ನೀರು ರಸ್ತೆ ಮೇಲೆ ಹರಿಯುತ್ತಿದೆ ಇಲ್ಲಿ ರಸ್ತೆಗಳ ಪರಿಸ್ಥಿತಿ ಅಯೋಮಯದಂತಿದೆ ಎನ್ನುತ್ತಾರೆ.ಪಟ್ಟಣದಲ್ಲಿ ದಿನೆ ದಿನೆ ಜನಸಂಖ್ಯೆ ಹೆಚ್ಚಳವಾಗುತ್ತಿದೆ ಜೊತೆಗೆ ವಾಹನಗಳ ಸಂಚಾರದ ಸಂಖ್ಯೆಯೂ ಹೆಚ್ಚುತ್ತಿದೆ ಇದರಿಂದ ಪಾರ್ಕಿಂಗ್ ಸಮಸ್ಯೆ ಎದುರಾಗಿದೆ,ಈ ಕುರಿತು ಅಗತ್ಯ ಕ್ರಮ ತಗೆದುಕೊಳ್ಳಬೇಕಾದ ಜವಾಬ್ದಾರಿ ಪುರಸಭೆಗೆ…
ನ್ಯೂಜ್ ಡೆಸ್ಕ್:ರಿಲ್ಸ್ ಮಾಡಿ ಅದನ್ನು Instagram ನಲ್ಲಿ ಪೋಸ್ಟ್ ಮಾಡಲು ಹುಚ್ಚಿಗೆ ಬಿದ್ದ ಯುವಕನೊಬ್ಬ ಜಲಪಾತದಲ್ಲಿ ನೈಜತೆ ತೋರಿಸುವ ಆತುರುದಲ್ಲಿ ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಬಿದ್ದು ಸಾವನಪ್ಪಿರುವ ಘಟನೆ ಆಂಧ್ರದ ಪಲಮನೇರು ಸಮೀಪ ಇರುವಂತ ಕಲ್ಯಾಣರೆವು ಜಲಪಾತದಲ್ಲಿ ನಡೆದಿದೆ.ಮೃತ ಯುವಕನನ್ನು ಪಲಮನೇರು ಚಿಕನ್ ಅಂಗಡಿಯ ನೌಕರ ಯೂನಸ್ (24) ಎಂದು ಗುರುತಿಸಲಾಗಿದೆ.ಕಳೆದ ಐದಾರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಕಲ್ಯಾಣರೆವು ಜಲಪಾತಕ್ಕೆ ಹೋಗಿದ್ದ ಅಲ್ಲಿ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ನೀರು ದುಮ್ಮಿಕ್ಕುವುದನ್ನು ನೈಜವಾಗಿ ತೋರಿಸಲು ರೀಲ್ಸ್ ಮಾಡಲು ಮಾಡಲು ಹೋಗಿ ಆಯಾ ತಪ್ಪಿ ಜಲಪಾತದಲ್ಲಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ,ಅವನ ಕಿರುಚಾಟ ಕೇಳಿ ಅವನ ಸ್ನೇಹಿತರು ಅವನಿಗೆ ಸಹಾಯ ಮಾಡಲು ಪ್ರಯತ್ನಿಸಿದ್ದಾರೆ ಸ್ನೇಹಿತರ ಮುಂದೆಯೆ ಯುವಕ ನೀರಿನ ರಭಸದಲ್ಲಿ ಕೊಚ್ಚಿಹೋಗಿದ್ದಾನೆ ಇದನ್ನು ನೊಡುತ್ತಿದ್ದ ಸ್ನೇಹಿತರು ಹಿಂದೆ ಸರಿದಿದ್ದಾರೆ.ಇತ್ತಿಚಿಗೆ ಬಿಡದೆ ಸುರಿಯುತ್ತಿರುವ ಮಳೆಯಿಂದ ಮುಳಬಾಗಿಲಿನ ನಂಗಲಿ ಸುತ್ತಮುತ್ತಲಿನಿಂದ ಹರಿಯುವ ಕೌಂಡಿನ್ಯ ನದಿ ನೀರಿನ ಹರಿವು ಹೆಚ್ಚಾಗಿರುವ ಹಿನ್ನಲೆಯಲ್ಲಿ ಕಲ್ಯಾಣರೆವು ಜಲಪಾತದಲ್ಲಿ ಪ್ರಸ್ತುತ ನೀರಿನ…
ನ್ಯೂಜ್ ಡೆಸ್ಕ್:ರಾಜ್ಯದಲ್ಲಿ ಮಳೆಯ ಆರ್ಭಟ ಇನ್ನೂ ಮುಂದುವರೆಯಲಿದೆ ಮುಂದಿನ 10 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.ನಾಳೆ ಭಾರಿ ಮಳೆ ಸಾಧ್ಯತೆಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ 7 ಜಿಲ್ಲೆಗಳಾದ ದಕ್ಷಿಣ ಒಳನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.24 ಜಿಲ್ಲೆಗಳಲ್ಲಿ ಸಾಧಾರಾಣ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಇರಲಿದೆ ಎನ್ನುತ್ತಾರೆ.ರಾಜ್ಯದಲ್ಲಿ ಮಳೆ ಮತ್ತಷ್ಟು ದಿನ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದು, ಚಾಮರಾಜನಗರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಬೆಂಗಳೂರಲ್ಲಿ ಗಾಳಿ ಮಳೆ ಸಾಧ್ಯತೆರಾಜಧಾನಿ ಬೆಂಗಳೂರಲ್ಲಿ ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶೇಕಡಾ 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ…
ಮದುವೆಯಾಗಲು ಹೆಣ್ಮಕ್ಕಳೆ ಸಿಗುತ್ತಿಲ್ಲ ವಧು ದಕ್ಷಿಣೆ ನೀಡುವಂತ ಪರಿಸ್ಥಿತಿ ಏರ್ಪಟ್ಟಿದೆ ಎಂದು ಯುವಕರು ಪರಿತಪಿಸುತ್ತಿದ್ದಾರೆ. ಇಂತಹ ಕಾಲದಲ್ಲಿ ವರದಕ್ಷಿಣೆ ಪಡೆದು ಭರ್ಜರಿಯಾಗಿ ಮದುವೆ ಮಾಡಿಕೊಂಡು ತಾಳಿ ಕಟ್ಟಿ ಹೊಸಿಲು ಮೆಟ್ಟಿಸಿ ಮನೆ ತುಂಬಿಸಿಕೊಂಡ ಹೆಣ್ಣಿಗೆ ಸೈಟು ಮತ್ತಷ್ಟು ಹಣ ತರಲು ಒತ್ತಾಯಿಸಿ ವರದಕ್ಷಿಣೆ ಕಿರುಕುಳ ನೀಡಿದಲ್ಲದೆ ಆಕೆ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿ ನಿರ್ಮಾಣ ಮಾಡಿದ ಧಾರುಣ ಘಟನೆ ದೊಡ್ದಬಳ್ಳಾಪುರದಲ್ಲಿ ನಡೆದಿದೆ. ದೊಡ್ದಬಳ್ಳಾಪುರ:ಗಂಡನ ಮನೆಯವರ ಹಿಂಸೆ ಹಾಗು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಉಪನ್ಯಾಸಕಿಯೊಬ್ಬಳು ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಬಳಿ ಇರುವಂತ ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡು ಮೃತ ಪಟ್ಟಿರುವ ಉಪನ್ಯಾಸಕಿಯನ್ನು ದೊಡ್ಡಬಳ್ಳಾಪುರದ ಸೋತೇನಹಳ್ಳಿ ನಿವಾಸಿ ಪುಷ್ಪವತಿ (23) ಎಂದು ಗುರುತಿಸಲಾಗಿದ್ದು ಈಕೆಯ ಪೋಷಕರಿಗೆ 4 ಜನ ಹೆಣ್ಣು ಮಕ್ಕಳಿದ್ದು, ಮೃತಳು ಕೊನೆಯವರಾಗಿದ್ದು ಈಕೆಯನ್ನು ದೊಡ್ಡಬಳ್ಳಾಪುರ ತಪಸೀಹಳ್ಳಿ ಗ್ರಾಮದ ವೇಣು ಎಂಬಾತನಿಗೆ ಕಳೆದ 2024ರ ನವೆಂಬರ್ನಲ್ಲಿ ದೊಡ್ಡ ಮಟ್ಟದಲ್ಲಿ ವರದಕ್ಷಿಣೆ…
ಶ್ರೀನಿವಾಸಪುರ:ಶ್ರೀನಿವಾಸಪುರ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (PLDಬ್ಯಾಂಕ್) ಸದಸ್ಯರು ಹಾಗು ಬ್ಯಾಂಕ್ ಅಧ್ಯಕ್ಷ ದಿಂಬಾಲ ಆಶೋಕ್ ನಡುವಿನ ಭಿನ್ನಮತ ತಾರಕಕ್ಕೆ ತಲುಪಿತ್ತು ನನ್ನ ವಿರುದ್ದ ಚಿತಾವಣಿ ನಡೆಸಿರುವ ಸದಸ್ಯರು ನನ್ನ ಗಮನಕ್ಕೆ ಬಾರದೆ ನಡೆಸಿದ ಸಭೆ ನಡಾವಳಿಗಳು ಉರ್ಜಿತವಾಗುವುದಿಲ್ಲ ಎಂದು PLD ಬ್ಯಾಂಕ್ ಅಧ್ಯಕ್ಷ ಆಶೋಕ್ ತೀವ್ರ ಸ್ಥಾಯಿಯಲ್ಲಿ ತಮ್ಮ ಅಸಮಧಾನ ಹೋರಹಾಕಿದ್ದರು.ಡೆಲಿಗೇಟ್ ಪಡೆದರ ಉಪಾಧ್ಯಕ್ಷಡೆಲಿಗೇಟ್(ಮತದಾನದ ಹಕ್ಕು) ಪಡೆದುಕೊಳ್ಳುವ ವಿಚಾರದಲ್ಲಿ ಸದಸ್ಯರು ಒಗ್ಗೂಡಿ PLD ಬ್ಯಾಂಕ್ ಅಧ್ಯಕ್ಷ ದಿಂಬಾಲ ಆಶೋಕ್ ಅವರನ್ನು ದೂರ ಇಟ್ಟು ಸಭೆ ನಡೆಸಿದ ಉಪಾಧ್ಯಕ್ಷ ಕೋಡಿಪಲ್ಲಿಸುಬ್ಬರೆಡ್ಡಿ ಅಪೇಕ್ಸ್ ಬ್ಯಾಂಕ್ ಮತದಾನದ ಹಕ್ಕು ಪಡೆಯುವ(ಡಿಲಿಗೇಟ್)ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದ್ದು,ಈ ಬಗ್ಗೆ ಪ್ರತಿಷ್ಟೆಗೆ ಧಕ್ಕೆಯಾಗಿ ತಮ್ಮ ವಿರುದ್ದದ ಚಿತಾವಣೆ ನಡೆದಿದೆ ಎನ್ನುತ್ತಿದ್ದ ಬ್ಯಾಂಕ್ ಅಧ್ಯಕ್ಷ ದಿಂಬಾಲ ಆಶೋಕ್ಆಕ್ರೋಶ ಈಗ ತಣ್ಣಗಾಗಿದಿಯಂತೆ ಎನ್ನುವ ಮಾತು ಕೇಳಿಬರುತ್ತಿದೆ. ಸಹಕಾರಿ ಚುನಾವಣೆಗಳಲ್ಲಿ ಕೈ ಸನ್ನೆ ಆಯ್ಕೆಗಳು!ಶ್ರೀನಿವಾಸಪುರದ ಐದು ದಶಕಗಳ ರಾಜಕಾರಣದಲ್ಲಿ ತಾಲೂಕಿನ ಯಾವುದೆ ಸಹಕಾರ ಸಂಘಗಳ ಚುನಾವಣಾ ಚಟುವಟಿಕೆಗಳಲ್ಲಿ ವಿರೋಧ…
ಶ್ರೀನಿವಾಸಪುರ:ಗುರುವಾರ ಹಾಗು ಶುಕ್ರವಾರ ರಾತ್ರಿ ಸಮಯದಲ್ಲಿ ಅರ್ಭಟಿಸುತ್ತ ಸುರಿದ ಧಾರಾಕಾರ ಮಳೆಗೆ ಶ್ರೀನಿವಾಸಪುರ ಪಟ್ಟಣದ ಜನತೆ ತತ್ತರಿಸಿ ಹೋಗಿದ್ದಾರೆ. ಗುಡುಗು ಸಹಿತ ಆರ್ಭಟದ ಭಾರೀ ಮಳೆಗೆ ಈಚಲಕುಂಟೆ ಸ್ಲಂ ಮನೆಗಳು,ಕೋರ್ಟ್ ಅವರಣ ಎ.ಪಿ.ಎಂ.ಸಿ ಆವರಣ ಜಲಾವೃತವಾದರೆ ಕೋಲಾರ ನ್ಯೂಸರ್ಕಲ್, ಡಿಗ್ರಿ ಕಾಲೇಜ್ ಹಿಂಬದಿಯ ಭಾಗದಲ್ಲಿ ಒತ್ತುವರಿಯಾಗಿ ಅನಧಿಕೃತವಾಗಿ ನಿರ್ಮಾಣವಾಗಿರುವ ಮನೆಗಳಿಗೆ ಕೊಳ್ಳೂರು ಭಾಗದಿಂದ ರಾಜಕಾಲುವೆಯಲ್ಲಿ ಬರುವ ಮಳೆ ನೀರು ಮನೆಗಳಿಗೆ ನುಗ್ಗಿದೆ, ತಾಲೂಕಿನ ಕೆಲವೊಂದು ಕೆರೆಗಳು ಕೊಡಿ ಬಿದ್ದಿವೆ.ತಾಲೂಕಿನಾದ್ಯಂತ ಬಹುತೇಕ ಕಡೆ ಧಾರಾಕಾರ ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಗಳು ಇದ್ದು ಸಣ್ಣ-ಪುಟ್ಟ ಕೆರೆಗಳು ತುಂಬಿ ಹರಿಯುತ್ತಿವೆ ಹೊಸ ಬಸ್ ನಿಲ್ದಾಣ ಇದಕ್ಕೂ ಮುಂಚೆ ಈಚಲಕುಂಟೆ ಕೆರೆಯಂಗಳವಾಗಿದ್ದರೆ ಕೋರ್ಟ್ ಆವರಣ ಈಚಲಕುಂಟೆ ಕೆರೆ ಅಚ್ಚುಕಟ್ಟು ಆಗಿತ್ತು ರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ದೊಡ್ಡಮಟ್ಟದಲ್ಲಿ ನೀರು ಹರಿಯುತ್ತಿರುವ ಹಿನ್ನಲೆಯಲ್ಲಿ ಚಿಕ್ಕದಾಗಿ ನಿರ್ಮಿಸಿರುವ ರಾಜಕಾಲುವೆಗಳು ನೀರು ಹರಿವಿಗೆ ಸಾಕಾಗದೆ ಸಾಯಿ ಬಾಬಾ ದೇವಾಲಯದ ಮುಂಬಾಗ ರಸ್ತೆ ಮೆಲೆ ನೀರು ಹರಿದಿದೆ.ಕೊಳ್ಳೂರಿಗೆ ಹೊಂದಿಕೊಂಡಿರುವ ದೊಡಮಲದೊಡ್ಡಿ…
ಚಿಂತಾಮಣಿ:ಕೋಲಾರ-ಚಿಕ್ಕಬಳ್ಳಾಪುರ ಬೆಂಗಳೂರಿಗೆ ಅಹಾರ ತರಕಾರಿ ನೀಡುವ ಭೂಮಿಯಾಗಿದ್ದು ಇಲ್ಲಿನ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಒರ್ವ ಸಹೋದರನಾಗಿ ಸಹಕಾರ ನೀಡುವ ಪ್ರಯತ್ನ ಮಾಡುವೆ ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಸಂಬಂಧ ಪರಸ್ಪರ ಗೌರವ ಸೌಹಾರ್ದತೆಯಿಂದ ಕೂಡಿದೆ ನಾವೆಲ್ಲ ಭಾರತ ಮಾತೆಯ ಮಕ್ಕಳು ಎಂದು ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಹೇಳಿದರು. ಅವರು ಇಂದು ಚಿಂತಾಮಣಿಯಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರ ಹುಟ್ಟುಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕದ ಪ್ರಜೆಗಳಿಗೆ ನನ್ನ ನಮಸ್ಕಾರ ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿ ಕರ್ನಾಟಕ ಅದ್ಭುತ ಪರಂಪರೆ, ಸಂಸ್ಕೃತಿಯ ನಾಡು ಕಲೆ ಮತ್ತು ಸಂಸ್ಕೃತಿ ನಮ್ಮನ್ನು ಒಂದೂಗಿಡಿಸಿದೆ,ಪ್ರಪಂಚ ಮೆಚ್ಚುವಂತ ವ್ಯಕ್ತಿಗಳಿಗೆ ಜನ್ಮ ನೀಡಿರುವ ಪುಣ್ಯಭೂಮಿ ಇಲ್ಲಿ ಜನಿಸಿದ ಮೊಕ್ಷಗುಂಡಮ್ ವಿಶ್ವೇಶ್ವರಯ್ಯ,ತಮ್ಮ ರಚನೆಗಳಿಂದ ಪ್ರಖ್ಯಾತರಾದ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ಅವರಿಗೂ ನಮನಗಳು ಎಂದ ಅವರು ನ್ಯಾಯಮೂರ್ತಿ ವಿ.ಗೋಪಾಲಗೌಡರ ಕಾರ್ಯವೈಖರಿ ಸಮಾಜ ಮುಖಿ ಚಿಂತನೆಗಳಿಂದ ಕೂಡಿರುತ್ತದೆ ಜನಸೇನಾ ಪಕ್ಷಕ್ಕೆ ಬಲ ನೀಡಿದವರಲ್ಲಿ ನ್ಯಾ.ಗೋಪಾಲಗೌಡ…
ನ್ಯೂಜ್ ಡೆಸ್ಕ್:ತೆಲಗು ಚಿತ್ರರಂಗದ ಅತ್ಯಂತ romantic ಜೋಡಿ ಎಂದೆ ಖ್ಯಾತರಾಗಿ ಸುದ್ದಿಯಲ್ಲಿರುವ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ. ಇಬ್ಬರ ನಡುವಿನ ಪ್ರೇಮ ಪ್ರಿತಿ ಬಗ್ಗೆ ಗುಸು ಗುಸು ಸದಾ ಸುದ್ಧಿಯಲ್ಲಿರುತಿತ್ತು,ಅದಕ್ಕೆ ಅವರ ಆಪ್ತರು ಸ್ಪಷ್ಟನೆ ನೀಡಿದ್ದು ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಮತ್ತು ಮುಂದಿನ ವರ್ಷ 2026 ಫೆಬ್ರವರಿಯಲ್ಲಿ ಮದುವೆಯಾಗಲಿದ್ದಾರೆ ಎಂಬ ಪ್ರಕಟಣೆ ಹೊರಬಿದ್ದಿದೆ.ಈ ಸುದ್ದಿಯಿಂದ ಅಭಿಮಾನಿಗಳು ಹೆಚ್ಚಿನ ಸಂತೋಷವನ್ನು ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ, ಈ ಇಬ್ಬರ ನಡುವಿನ ವಯಸ್ಸಿನ ವ್ಯತ್ಯಾಸವನ್ನು ಕಂಡುಹಿಡಿಯಲು ಮುಂದಾಗಿ ಗೂಗಲ್ನ searchನಲ್ಲಿ ಸಿನಿರಸಿಕರಿಗೆ ಸಿಕ್ಕಿದ್ದು ಮೂಲತಃ ಕರುನಾಡಿನ ಕೊಡಗಿನವರಾದ ರಶ್ಮಿಕಾ ಮಂದಣ್ಣ 1996ರ ಏಪ್ರಿಲ್ 5ರಂದು ಕರ್ನಾಟಕದ ಕೊಡಗಿನಲ್ಲಿ ಜನಿಸಿದರು. ಸದ್ಯ ಅವರಿಗೆ 29 ವರ್ಷ. ಟಾಲಿವುಡ್ನಲ್ಲಿ ಗುರುತಿಸಿಕೊಂಡಿರುವ ವಿಜಯ್ ದೇವರಕೊಂಡ 1989ರ ಮೇ 9ರಂದು ಹೈದರಾಬಾದ್ನಲ್ಲಿ ಜನಿಸಿದರು. ಪ್ರಸ್ತುತ ಅವರ ವಯಸ್ಸು 36 ವರ್ಷ. ಈ ಪ್ರೇಮಪಕ್ಷಿಗಳ ನಡುವಿನ ವಯಸ್ಸಿನ ಅಂತರ 7 ವರ್ಷಗಳು.ಪ್ರೇಮಕಥೆ ಹೇಗೆ ಪ್ರಾರಂಭವಾಗಿದ್ದು ಹೇಗೆ?2018…


