ಕೋಲಾರ: ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೋಂಡು ಪುನೀತರಾದರು. ಶ್ರೀವಿಶಾಲಾಕ್ಷಿ ಸಮೇತ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದಂತ ಶಿವ ಲಕ್ಷ ದೀಪೋತ್ಸವವನ್ನು ಹಾಗು ಒಂದು ಸಾವಿರಕ್ಕೂ ಹೆಚ್ಚು ಕೆಜಿ ಎಣ್ಣೆಯನ್ನು ಭಕ್ತರು ಹಣತೆಗಳಿಗೆ ಸುರಿದು ದೀಪ ಬೆಳಗಿಸಿ ಬೆಟ್ಟದ ದಾರಿಯುದ್ದಕ್ಕೂ ಬೆಳಕಿನ ಹಣತೆಗಳ ಸಾಲು ಚುಮುಚುಮು ಚಳಿಯಲ್ಲಿ ಭಕ್ತರ ಮನ ಸೇಳೆದು ಮುದ ನೀಡಿತು.ಬಸವನ ಬಾಯಿಂದ ಸದಾ ನೀರು ಹರಿಯುವ ಅಂತರಂಗೆಯ ಕಲ್ಯಾಣಿಯಲ್ಲಿ ತೆಪ್ಪೋತ್ಸವವನ್ನು ವೀಕ್ಷಿಸಿದ ಸಹಸ್ರಾರು ಭಕ್ತರು ಭಕ್ತಪರವಶರಾದರು ಇದೆ ಸಂದರ್ಭದಲ್ಲಿ ಬೆಟ್ಟದ ತಪ್ಪಲಲ್ಲಿನ ಜಲಕಂಠೇಶ್ವನಿಗೆ ಪಂಚಾಮೃತ ಅಭಿಷೇಕ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಶಿವ ಲಕ್ಷ ದೀಪೋತ್ಸವ ಹಾಗು ತೆಪ್ಪೋತ್ಸವ ಸಂದರ್ಬದಲ್ಲಿ ಏರ್ಪಡಿಸಿದ್ದ ನಾದಸ್ವರ ಮತ್ತು ಸ್ಯಾಕ್ಯೋಫೋನ್ ವಾದನದ ಗಮನ ಸೆಳೆಯಿತು. ಭಕ್ತರ ಭಜನೆ,ಹಾಡುಗಾರಿಕೆಯೂ ಜನಮನ ಸೆಳೆಯುವಲ್ಲಿ ಯಶಸ್ವಿಯಾಯಿತು.ಅರ್ಚಕರಾದ ಮಂಜುನಾಥ ದೀಕ್ಷಿತ್, ಚಂದ್ರಶೇಖರ್ ದೀಕ್ಷಿತ್, ಕಾಶಿವಿಶ್ವೇಶ್ವರ ದೀಕ್ಷಿತ್ ಪೂಜಾ ಕಾರ್ಯಕ್ರಮ ನಿರ್ವಹಿಸಿದರು.ಕಿಲಾರಿಪೇಟೆ…
Author: Srinivas_Murthy
ಬೆಂಗಳೂರು:ಪತ್ನಿಯ ಕಾಟಕ್ಕೆ ಬೆಸೆತ್ತು ಪೋಲಿಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯ ಹುಸಗೂರು ರೈಲ್ವೇ ಗೇಟ್ ಹತ್ತಿರ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಪೋಲಿಸ್ ಹೆಡ್ ಕಾನ್ಸ್ಟೇಬಲ್ ನನ್ನು ತಿಪ್ಪಣ್ಣ ಗುರುತಿಸಲಾಗಿದ್ದು ಇವರು ಬೆಂಗಳೂರು ನಗರದ ಹುಳಿಮಾವು ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.ಜೀವ ಬೆದರಿಕೆ ಇತ್ತು ಡೆತ್ ನೋಟ್ ನಲ್ಲಿ ಪ್ರಸ್ತಾಪ!ಮೂರು ವರ್ಷಗಳ ಹಿಂದೆ ತಿಪ್ಪಣ್ಣ ಅವರು ಮದುವೆಯಾಗಿದ್ದು ಒಂದು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಒಂದು ವರ್ಷದ ಬಳಿಕ ಸಂಸಾರದಲ್ಲಿ ವೈಮನಸ್ಸು ಮನೆ ಮಾಡಿತ್ತು ಪತ್ನಿ ಮತ್ತು ಆಕೆಯ ತಂದೆ ಯಮುನಪ್ಪ ಇಬ್ಬರು ಸೇರಿ ಮಾನಸಿಕವಾಗಿ ಹಿಂಸೆ ನೀಡುತ್ತ ಹಿಯ್ಯಾಳಿಸಿ ಅಶ್ಲೀಲವಾಗಿ ಬೈದು ಕಿರುಕುಳ ಕೊಡುತ್ತಿದ್ದರು ಜೊತೆಗೆ ಮಾವ ಯಮನಪ್ಪನಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆ ಡೆತ್ ನೋಟ್ ಪ್ರಸ್ತಾಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಪತ್ನಿ ಟಾರ್ಚರಗೆ ಸಾಫ್ಟವೇರ್ ಉದ್ಯೋಗಿ ಅತ್ಮಹತ್ಯೆಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ…
ಸಿನಿ ಡೆಸ್ಕ್:ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನದ ಎಪಿಸೋಡ್ ನಲ್ಲಿ ಬಹು ದೊಡ್ಡ ಟ್ವಿಸ್ಟ್ ಸಿಕ್ಕಿದೆ ಒಂದಡೆ ನಾಂಪಲ್ಲಿ ನ್ಯಾಯಾಲಯ 14 ದಿನಗಳ ಬಂಧನವನ್ನು ಘೋಷಿಸಿತ್ತು ಆದರೆ ಅವರಿಗೆ ಹೈಕೋರ್ಟ್ ನಲ್ಲಿ ಮಧ್ಯಂತರ ಜಾಮೀನು ಸಿಕ್ಕಿದೆ.ಪುಷ್ಪ 2 ಸಿನಿಮಾದ ಪ್ರಥಮ ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್ ರೇವತಿ ಎಂಬ ಮಹಿಳೆ ಸಾವಿಗಿಡಾಗಿದ್ದು ಇದಕ್ಕೆ ಸಂಬಂದಿಸಿದಂತೆ ಅಲ್ಲು ಅರ್ಜುನ್ ಸೇರಿದಂತೆ ಸಿನಿಮಾ ತಂಡದ ವಿರುದ್ಧ ಪೊಲೀಸರು ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದರು ಅದರಂತೆ ಶುಕ್ರವಾರ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್ನನ್ನು ಬಂಧಿಸಿದ್ದು ಮೊದಲು ಬನ್ನಿಯನ್ನು ಚಿಕ್ಕಡ್ ಪಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು.. ಪೊಲೀಸರು ಆತನ ಹೇಳಿಕೆಯನ್ನು ದಾಖಲಿಸಿಕೊಂಡು ಅಲ್ಲಿಂದ ಗಾಂಧಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ನಾಂಪಲ್ಲಿ ಕೋರ್ಟಿನಲ್ಲಿ ಹಾಜರುಪಡಿಸಿದ್ದು ಅಲ್ಲಿ ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯ ಅಲ್ಲು ಅರ್ಜುನ್ಗೆ 14 ದಿನಗಳ ಕಾಲ ರಿಮಾಂಡ್ ನೀಡಿತ್ತು ಅದರಂತೆ ಪೊಲೀಸರು ಆತನನ್ನು ಚಂಚಲ್ ಗುಡಾ ಜೈಲಿಗೆ…
ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ಏರ್ಪಡಿಸಿದ್ದ ಪುಷ್ಪ 2 ಸಿನಿಮಾ ಬೆನಿಫಿಟ್ ಶೊನಲ್ಲಿ ಜನ ಸಂದಣಿ ಹೆಚ್ಚಾಗಿ ನಡೆದಂತ ತಳ್ಳಾಟದದಲ್ಲಿ ಒರ್ವ ಮಹಿಳೆ ಕಾಲ್ತುಳಿತಕ್ಕೆ ಒಳಗಾಗಿ ಮೃತ ಪಟ್ಟಿದ್ದು ಇದಕ್ಕೆ ಸಂಬಂದಿಸಿದಂತೆ ಪೊಲೀಸರು ಥಿಯೇಟರ್ ಮಾಲೀಕ ಸೇರಿದಂತೆ ಮೂವರನ್ನು ಈಗಾಗಲೆ ಬಂಧಿಸಿದ್ದಾರೆ ಅದೆ ವಿಚಾರದಲ್ಲಿ ಈಗ ಅಲ್ಲು ಅರ್ಜುನನ್ನು ಬಂಧಿಸಲಾಗಿದೆ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಸಿನಿ ಡೆಸ್ಕ್:ತೆಲಗು ಚಿತ್ರರಂಗದ ಪ್ರಖ್ಯಾತ ಸಿನಿಮಾ ನಟ ಐಕಾನ್ ಸ್ಟಾರ್ ಅಲ್ಲು ಅರ್ಜುನ್@ಬನ್ನಿ ಅವರನ್ನು ತೆಲಂಗಾಣದ ಚಿಕ್ಕಡಪಲ್ಲಿ ಪೋಲಿಸರು ಬಂಧಿಸಿದ್ದಾರೆ. ಈ ತಿಂಗಳ 4 ರಂದು ಪುಷ್ಪ 2 ಸಿನಿಮಾ ಬೆನಿಫಿಟ್ ಶೊ ಕಾರ್ಯಕ್ರಮ ಹೈದರಾಬಾದನ್ ಸಂಧ್ಯಾ ಥಿಯೇಟರ್ ನಲ್ಲಿ ಆಯೋಜಿಸಿದ್ದು ಅಲ್ಲಿ ನಡೆದ ತಳ್ಳಾಟ ನೂಕಾಟದಲ್ಲಿ ಒರ್ವ ಮಹಿಳೆ ಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರ ಮೇಲೆ ಕೊಲೆಗೆ ಸಮಾನವಲ್ಲದ ನರಹತ್ಯೆ ಹಾಗೂ ಸ್ವಯಂಪ್ರೇರಣೆಯಿಂದ ಇನ್ನೊಬ್ಬರಿಗೆ ಹಾನಿ ಉಂಟುಮಾಡಿದ ಆರೋಪವನ್ನು ಅಲ್ಲು ಅರ್ಜುನ್ ವಿರುದ್ಧ…
ಬೆಂಗಳೂರು:ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ರದ್ದುಕೋರಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ಎಫ್ಐಆರ್ ರದ್ದುಪಡಿಸಲು ನಿರಾಕರಿಸಿದೆ. ಅಲ್ಲದೇ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣವನ್ನು ತನಿಖೆ ಮಾಡಲು ಆದೇಶಿಸಿದೆ. ಇದರಿಂದ ಕೋಲಾರ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಸಂಕಷ್ಟ ಎದುರಾಗಿದೆ.ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣ ಸಂಬಂಧ 2018ರಲ್ಲಿ ಫೋರ್ಜರಿ, ವಂಚನೆ, ಅಟ್ರಾಸಿಟಿ ಕಾಯ್ದೆಯಡಿ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ,ಹೈಕೋರ್ಟ್, ಮಂಜುನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿತ್ತು.ಈ ಪ್ರಕರಣವನ್ನು ರದ್ದುಕೋರಿ ಶಾಸಕ ಕೊತ್ತೂರು ಮಂಜುನಾಥ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಂದು (ಡಿಸೆಂಬರ್ 12) ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ಐಆರ್ ರದ್ದುಪಡಿಸಲು ನಿರಾಕರಿಸಿ ಅರ್ಜಿಯನ್ನು ತಿರಸ್ಕರಿಸಿದಲ್ಲದೇ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸೂಚಿಸಿದೆ.ಪ್ರಕರಣದ ಹಿನ್ನೆಲೆಪ್ರಕರಣದ ವಿವರ:ಪರಿಶಿಷ್ಟ ಜಾತಿಗಳ ಪಟ್ಟಿಗೆ ಬರುವ ಬುಡುಗ ಜಂಗಮ ಜಾತಿಗೆ ಸೇರಿದವರೆಂದು ಘೋಷಿಸಿಕೊಂಡು ಜಿ.ಮಂಜುನಾಥ್ ಅವರು 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ…
ಶ್ರೀನಿವಾಸಪುರ:ಎಲ್ಲ ಧರ್ಮ,ಮತಗಳಲ್ಲಿ ಸಾಮರಸ್ಯ ತರಲು ಭಗವದ್ಗೀತೆಯಿಂದ ಮಾತ್ರ ಸಾಧ್ಯ ಎಲ್ಲ ರೀತಿಯ ಸಮಸ್ಯೆಗಳಿಗೆ ಭಗವದ್ಗೀತೆಯಲ್ಲಿ ಪರಿಹಾರ ಸಿಗುತ್ತದೆ ಎಂದು ಸತ್ಸಂಗ ಬಳಗದ ಸಂಚಾಲಕ ಸತ್ಯಮೂರ್ತಿ ಹೇಳಿದರು.ಅವರು ಪಟ್ಟಣದ ಶಂಕರಮಠದಲ್ಲಿ ದಿನಾಂಕ 5-12-24 – ಗುರುವಾರ ದಿಂದ 11 – 12 – 24 – ಬುಧವಾರದವರೆಗೆ ಏಳು ದಿನಗಳ ಕಾಲ ನಡೆದಂತ ಭಗವದ್ಗೀತಾ ಸಪ್ತಾಹದ ಕಾರ್ಯಕ್ರಮದಲ್ಲಿ ಮಾತನಾಡಿದರುಪ್ರಾಚೀನ ಸಾಹಿತ್ಯಗಳು ಜ್ಞಾನಭಂಡಾರಗಳಾಗಿವೆ. ಅದರಲ್ಲೂ ಭಗವದ್ಗೀತೆ ಪ್ರತಿಯೊಬ್ಬರ ಮನಸ್ಸಿಗೆ ಮುದವನ್ನೂ ಹಾಗು ಬುದ್ಧಿಗೆ ಸಂಸ್ಕಾರವನ್ನೂ ನೀಡಲಿದೆ ಮಾನವನ ಮತ್ತು ಸಮಾಜದ ಉನ್ನತಿಗೆ ಸಹಕಾರಿಯಾಗಲಿದೆ. ಯುವ ಸಮುದಾಯಕ್ಕೆ ಭಗವದ್ಗೀತೆಯ ಅರ್ಥ ತಿಳಿಯುವ ಆಸಕ್ತಿ ಇದೆ. ಹಾಗಾಗಿ ಭಗವದ್ಗೀತಾ ಅಭಿಯಾನದಲ್ಲಿ ಉಪನ್ಯಾಸಕ್ಕೆ ಮಹತ್ವ ನೀಡಬೇಕು ಯುವ ಜತೆಗೆ ಒತ್ತಡದ ಬದುಕಿನಿಂದ ಹೊರಬರಲು ಭಗವದ್ಗೀತೆಯನ್ನು ಸಾರಂಶ ಸಮೇತ ತಿಳಿಸುವಂತ ಕೆಲಸ ಆಗಬೇಕು ಇದರಿಂದ ಭವಿಷ್ಯದಲ್ಲಿ ಸದೃಢ ಭಾರತ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು. ಸತ್ಸಂಗ ಬಳಗದ ಸಂಚಾಲಕರಾದ ಮಂಗಳಾ ಸತ್ಯಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ಸತ್ಸಂಗ ಬಳಗದ ಸದಸ್ಯರು ಸಾಮೂಹಿಕವಾಗಿ…
ನ್ಯೂಜ್ ಡೆಸ್ಕ್:ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಗೌರವಾರ್ಥ ರಾಜ್ಯ ಸರ್ಕಾರದಿಂದ ಸರ್ಕಾರಿ ರಜೆ ಘೋಷಿಸಲಾಗಿದೆ ಇದರಂತೆ ಕೆ ಎಸ್ ಆರ್ ಟಿ ನಿಗಮಗಳ ಅಧಿಕಾರಿ ಮತ್ತು ಕಚೇರಿ ಸಿಬ್ಬಂದಿಗಳಿಗೂ ಬುಧವಾರ ಸರ್ಕಾರಿ ರಜೆ ಘೋಷಿಸಿ ಆದೇಶಿಸಲಾಗಿದೆ.ಈ ಕುರಿತಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದು, ಎಸ್ ಎಂ ಕೃಷ್ಣ ಅವರ ನಿಧನದ ಪ್ರಯುಕ್ತ ದಿವಂಗತರ ಗೌರವಾರ್ಥವಾಗಿ ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಶಾಲಾ ಕಾಲೇಜುಗಳಿಗೆ ದಿನಾಂಕ 11-12-2024ರಂದು ಸಾರ್ವಜನಿಕ ರಜೆಯನ್ನು ಸರ್ಕಾರ ಘೋಷಿಸಲಾಗಿದ್ದುಕೆ ಎಸ್ ಆರ್ ಟಿ ಸಿ ನಿಗಮದ ಕೇಂದ್ರ ಕಚೇರಿ, ವಿಭಾಗೀಯ ಕಚೇರಿಗಳು, ತರಬೇತಿ ಕೇಂದ್ರಗಳಿಗೆ ಅನ್ವಯಿಸುವಂತೆ ದಿನಾಂಕ 11-12-2024ರಂದು KSRTC ರಜೆ ಘೋಷಿಸಲು ಸೂಕ್ತಾಧಿಕಾರಿಗಳು ಅನುಮೋದಿಸಿರುತ್ತಾರೆ. ಅದರಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.ಇನ್ನೂ ಕೆ ಎಸ್ ಆರ್ ಟಿ ಸಿ ಯ ನಂತರ ಇತರೆ ಸಾರಿಗೆ ನಿಗಮಗಳು ತಮ್ಮ ನಿಗಮದ ಅಧಿಕಾರಿ ಮತ್ತು ಕಚೇರಿ ಸಿಬ್ಬಂದಿಗಳಿಗೆ ನಾಳೆ ರಜೆಯನ್ನು…
ಶ್ರೀನಿವಾಸಪುರ: ಶ್ರೀನಿವಾಸಪುರದಲ್ಲಿ ರೈತ ಸಂಘ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಡ್ಡಿಪಡಿಸಿದ ಸಂದರ್ಭದಲ್ಲಿ ನಡೆದಂತ ತಳ್ಳಾಟ ನೂಕಾಟ ಸಮಯದಲ್ಲಿ ಆದ ಘಟನೆ ಕುರಿತಾಗಿ ತಹಶೀಲ್ದಾರ್ ಸುಧೀಂದ್ರ ಪ್ರತಿಕ್ರಿಯೆ ನೀಡಿದ್ದು ಕಚೇರಿ ಕೆಲಸದ ವೇಳೆ ಕೆಲವರು ಅರೆಬೆತ್ತಲೆ ಪ್ರತಿಭಟನೆ ಮಾಡುತ್ತ ಕಚೇರಿಗೆ ಬರುವಂತವರಿಗೆ ಅಡ್ಡಿಪಡಿಸುತ್ತ ಸ್ಥಳದಲ್ಲಿ ಅನಗತ್ಯ ಸಮಸ್ಯೆ ಸೃಷ್ಟಿಸುತ್ತಿದ್ದರು ಹಾಗೆ ಪ್ರತಿಭಟನೆ ಈ ಜಾಗ ಸೂಕ್ತ ಅಲ್ಲ ಜೊತೆಗೆ ಪ್ರತಿಭಟನೆ ಮಾಡುವವರು ಯಾವುದೆ ಅನುಮತಿ ಪಡೆದಿಲ್ಲ ಅವರಿಂದ ಇಲ್ಲಿ ಎರಡು ಗುಂಪುಗಳ ನಡುವೆ ತಳ್ಳಾಟ ನೂಕಾಟ ನಡೆಯಿತು ಇದಕ್ಕೆ ಅವಕಾಶ ಮಾಡಿಕೊಟ್ಟಿದ್ದು ಬಗ್ಗೆ ಬೇಸರ ವ್ಯಕ್ತಪಡಿಸಿ ವಿರೋಧಿಸಿದೆ ಇದರಲ್ಲಿ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಸ್ಪಷ್ಟಿಕರಿಸಿದ್ದಾರೆ. ರೈತರಿಗೊಂದು ನ್ಯಾಯ, ಶ್ರೀಮಂತರಿಗೆ ಒಂದು ನ್ಯಾಯಾನ ಎಂದು ಸಾರ್ವಜನಿಕರು ತಹಸೀಲ್ದಾರ್ ಅವರನ್ನು ಪ್ರಶ್ನಿಸಿದ್ದಾರೆ. ಪ್ರತಿಭಟನೆಗೆ ಕುಳಿತ ರೈತರನ್ನು ಬೆದರಿಸಿರುವ ತಹಶೀಲ್ದಾರ್ ಸುಧೀಂದ್ರ ಪ್ರತಿಭಟನೆ ಸ್ಥಳದಲ್ಲಿ ಸಮಸ್ಯೆಯನ್ನು ಅರಿತು ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರಬೇಕಿದ್ದ ತಹಶಿಲ್ದಾರರೇ ಕಾನೂನು ಕೈಗೆ ತೆಗೆದುಕೊಂಡು ರೈತ ಮುಖಂಡರ…
ನ್ಯೂಜ್ ಡೆಸ್ಕ್:ಸಾಮಾಜಿಕ ಜಾಲ ತಾಣದ ರೀಲ್ಸ್ ಹುಚ್ಚು ಯಾರನ್ನು ಬಿಟ್ಟಿಲ್ಲ ಈ ಹುಚ್ಚು ಬಹುತೇಕರನ್ನು ಆವರಿಸಿಕೊಂಡು ಬಿಟ್ಟಿದೆ. ಸಮಾಜದಲ್ಲಿ ಫೇಮಸ್ ಆಗಲು ಮಾರ್ಗ ಕಂಡುಕೊಂಡಿರುವ ಯುವ ಸಮುಧಾಯ ರೀಲ್ಸ್ (video) ಹುಚ್ಚಿಗೆ ಬಿದ್ದಿದೆ ಅದು ದೇವಸ್ಥಾನ ಇರಲಿ ಕಾಡಿರಲಿ ನದಿ ದಂಡೆಗಳಿರಲಿ ಜಲಪಾತಗಳಿರಲಿ ಅಪಾಯಕಾರಿ ಘಟ್ಟಗಳಲ್ಲಿ ರೀಲ್ಸ್ ಹುಚ್ಚರ ಸಂಖ್ಯೆ ಹೆಚ್ಚುತ್ತಿದೆ ಇದಕ್ಕೆ ಕಾಂಪಿಟೇಷನ್ ಕೂಡ ಜಾಸ್ತಿಯಾಗುತ್ತಿದೆ.ಅದಕ್ಕಾಗಿಯೇ ಕೆಲವರು ವಿಭಿನ್ನ ರೀತಿಯಲ್ಲಿ ರೀಲ್ಸ್ ಮಾಡುವ ತವಕದಲ್ಲಿ ಇದ್ದು ಈ ಕಾರಣಕ್ಕೆ ಎಷ್ಟೋ ಮಂದಿ ಅಪಾಯಕಾರಿ ಎನ್ನುವ ರೀಲ್ಸ್ ಮಾಡಿ ಜೀವ ಕಳೆದುಕೊಂಡವರಿದ್ದಾರೆ, ಕೈ-ಕಾಲು ಮುರಿದುಕೊಂಡು ನರಳುತ್ತಿರುವರು ಇದ್ದಾರೆ. ಇಂಥವರ ಬಗ್ಗೆ ಪ್ರತಿನಿತ್ಯ ಸುದ್ದಿಯಾಗುತ್ತಲೇ ಇರುತ್ತದೆ. ಭಕ್ತಿಯಿಂದ ತುಂಬಿರಬೇಕಾದ ಈ ಪವಿತ್ರ ಜಾಗವಾದ ತಿರುಮಲ ಬೆಟ್ಟದ ತಪ್ಪಲಿನಲ್ಲಿ ಪುಷ್ಪ 2 ಚಿತ್ರದ ಶ್ರೀಲೀಲಾ ನೃತ್ಯ ಮಾಡಿರುವ ಕಿಸ್ಸಿಕ್ ಐಟಂ ಸಾಂಗಿಗೆ ಹುಡುಗಿಯೊಬ್ಬಳು ಡ್ಯಾನ್ಸ್ ಮಾಡಿರುವ ರೀಲ್ಸ್ ತನ್ನ ಇನ್ಸ್ಟಾಗ್ರಾಂ ಪೇಜ್ನಲ್ಲಿ ಪೋಸ್ಟ್ ಮಾಡಿದು ಈಗ ವೈರಲ್ ಆಗಿದೆ ನೆಟ್ಟಿಗರು ಈ ಬಗ್ಗೆ ಕಣ್ಣು…
ನ್ಯೂಜ್ ಡೆಸ್ಕ್:ಬದುಕಿನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡು ಕಷ್ಟಪಟ್ಟು ಓದುತ್ತಿದ್ದ ಇಂಟರ್ ಹುಡುಗಿ ಯುವಕನೊಬ್ಬನ ಪ್ರೇಮವನ್ನು ಒಪ್ಪಿಕೊಳ್ಳಲಿಲ್ಲ ಎಂದು ಯುವಕ ವಿದ್ಯಾರ್ಥಿನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಪೈಶಾಚಿಕ ಘಟನೆ ಆಂಧ್ರದ ನಂದ್ಯಾಲ ಜಿಲ್ಲೆಯ ನಂದಿಕೋಟ್ಕೂರಿನ ಬೈರೆಡ್ಡಿ ನಗರದಲ್ಲಿ ದುಷ್ಕೃತ್ಯ ನಡೆದಿದೆ.ಪ್ರೇಮ ವ್ಯಸನಿ ಎಸಗಿರುವ ದೌರ್ಜನ್ಯಕ್ಕೆ ಇಂಟರ್ ವಿದ್ಯಾರ್ಥಿನಿ ಲಹರಿ (17)ಸ್ಥಳದಲ್ಲೆ ಸುಟ್ಟು ಹೋಗಿ ಸಾವನ್ನಪ್ಪಿದ್ದಾಳೆ. ನಂತರ ಯುವಕನು ಸಹ ಪೇಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು ಅವನು ತೀವ್ರ ಸುಟ್ಟ ಗಾಯಗಳಿಂದ ಬದುಕುಳಿದಿದ್ದಾನೆ ಆತನ ಪರಿಸ್ಥಿತಿ ಗಂಭೀರವಾಗಿದೆ.ತಂದೆ ಇಲ್ಲದ ನತದೃಷ್ಟೆತಂದೆ ತೀರಿಕೊಂಡ ಬಳಿಕ ಅಜ್ಜಿ ಮನೆಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ ನತದೃಷ್ಟೆ ಲಹರಿಯನ್ನು ಆರೋಪಿ ರಾಘವೇಂದ್ರ ಕೆಲ ದಿನಗಳಿಂದ ಪ್ರೀತಿಸುವಂತೆ ಕಾಡಿಸುತ್ತ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ.