ನ್ಯೂಜ್ ಡೆಸ್ಕ್:ಮಾಧ್ಯಮ ಸಂಸ್ಥೆಯ ಮುಖ್ಯಸ್ಥ ಬಿ.ಆರ್.ನಾಯ್ಡು(72) ಅವರನ್ನು ತಿರುಮಲ ತಿರುಪತಿ ದೇವಸ್ಥಾನದ ಅಧ್ಯಕ್ಷರನ್ನಾಗಿ ಆಂಧ್ರಪ್ರದೇಶ ಸರ್ಕಾರ ಘೋಷಿಸಿದೆ.ಇವರೊಂದಿಗೆ 23 ಸದಸ್ಯರ ಆಡಳಿತ ಮಂಡಳಿಯನ್ನು ಸಹ ಪ್ರಕಟಿಸಿದೆ. ಆಂಧ್ರ ಸರ್ಕಾರ ಬುಧವಾರ ಹೊರಡಿಸಿರುವ ತಿರುಮಲ ತಿರುಪತಿ ದೇವಸ್ಥಾನದ ನೂತನ ಆಡಳಿತ ಮಂಡಳಿಯಲ್ಲಿ ಆಂಧ್ರದವರು 11 ಮಂದಿ ಇದ್ದು ಅವರಲ್ಲಿ ನಾಲ್ವರು ಶಾಸಕರಿದ್ದಾರೆ, ತೆಲಂಗಾಣದಿಂದ ಐವರು, ಕರ್ನಾಟಕದ ಮೂವರು,ತಮಿಳುನಾಡಿನ ಇಬ್ಬರು,ಗುಜರಾತ್ ಮತ್ತು ಮಹಾರಾಷ್ಟ್ರದಿಂದ ತಲಾ ಒಬ್ಬರಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನೊಂದು ಸ್ಥಾನವನ್ನು ಬಿಜೆಪಿಯಿಂದ ಮತ್ತೊಂದು ಹೆಸರು ಪ್ರಸ್ತಾಪವಾಗಬೇಕಿದ್ದು ಅಲ್ಲಿಂದ ಹೆಸರು ಬಂದರೆ ತಕ್ಷಣ ಆ ಸದಸ್ಯನನ್ನೂ ನೇಮಕ ಮಾಡಲಾಗುವುದು ಎಂದಿರುತ್ತಾರೆ.ಈ ಬಾರಿ ಟಿಟಿಡಿ ಆಡಳಿತ ಮಂಡಳಿ ಸದಸ್ಯರಲ್ಲಿ ಅರ್ಧದಷ್ಟು ಸ್ಥಾನವನ್ನು ಇತರೆ ರಾಜ್ಯಗಳಿಗೂ ಅವಕಾಶ ಕಲ್ಪಿಸಿದೆ.ನೂತನ ಆಡಳಿತ ಮಂಡಳಿ ಸದಸ್ಯರು ಇವರೆಟಿಟಿಡಿ ನೂತನ ಸದಸ್ಯರಲ್ಲಿ ಆಂಧ್ರಪ್ರದೇಶದ ಕೋಟಾದಲ್ಲಿ ಜಗ್ಗಂಪೇಟೆ ಶಾಸಕ ಜ್ಯೋತುಲಾ ನೆಹರು,ಮಡಕಶಿರಾ ಶಾಸಕ ಎಂ.ಎಸ್.ರಾಜು, ಕೊವ್ವೂರು ಶಾಸಕಿ ಪ್ರಶಾಂತಿ ರೆಡ್ಡಿ,ಕೇಂದ್ರಸರ್ಕಾರದ ಮಾಜಿ ಸಚಿವೆ ಪನಬಾಕ ಲಕ್ಷ್ಮಿ, ಸೇರಿದಂತೆ ಜಾಸ್ತಿ ಪೂರ್ಣ ಸಾಂಬಶಿವರಾವ್, ನನ್ನಪನೇನಿ…
Author: Srinivas_Murthy
ನ್ಯೂಜ್ ಡೆಸ್ಕ್: ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲ್ ನಲ್ಲಿದ್ದ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿ ದರ್ಶನ್ ಅವರು ನನಗೆ ತುಂಬಾ ಆಪ್ತರಾಗಿದ್ದು ಅವರಿಗೆ ಜಾಮೀನು ಸಿಕ್ಕಿರುವುದು ನನಗೆ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಚುನಾವಣೆ ಕ್ಯಾಂಪೈನ್ ನಲ್ಲಿರುವ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ ನ್ಯಾಯಾಲಯದಲ್ಲಿ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಎಂದು ಗೊತ್ತಾಯಿತು. ಅವರು ನನ್ನ ಆಪ್ತರು. ಆತ್ಮೀಯರಾಗಿರುವ ಕಾರಣಕ್ಕೆ ಜಾಮೀನು ಸಿಕ್ಕಿರುವುದು ಸಹಜವಾಗಿಯೇ ಖುಷಿ ತಂದಿದೆ. ಅವರ ಆರೋಗ್ಯ ವಿಚಾರಿಸುತ್ತೇನೆ. ಅಲ್ಲದೆ ಈ ಘಟನೆಗೂ ಮುನ್ನ ಆಗಾಗ ಭೇಟಿಯಾಗುತ್ತಿದ್ದೆವು ಎಂದು ಹೇಳಿದರು.ಇದೆ ವೇಳೆ ಉಪಚುನಾವಣೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇಡೀ ರಾಜ್ಯವನ್ನು ಅಭಿವೃದ್ಧಿ ಮಾಡಿದ್ದಾರೆ. ಆದರೆ ಬೊಮ್ಮಾಯಿ ರಾಜ್ಯ ಇರಲಿ, ತಮ್ಮ ಕ್ಷೇತ್ರವನ್ನೂ ಸಹ ಅಭಿವೃದ್ಧಿ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ…
ಶ್ರೀನಿವಾಸಪುರ:ಸರ್ಕಾರಿ ನೌಕರರ ಸಂಘದ ಸೋಮವಾರ ನಡೆದ ಶಿಕ್ಷಕರ ಕ್ಷೇತ್ರದ ಚುನಾವಣೆ ಯಾವುದೇ ಸಾರ್ವತ್ರಿಕ ಚುನಾವಣೆಗಳಿಗೂ ಕಡಿಮೆ ಇಲ್ಲದಂತೆ ಅಭ್ಯರ್ಥಿಗಳು ಮತದಾರರನ್ನು ನಾನಾ ರೀತಿಯಲ್ಲಿ ಕಸರತ್ತು ನಡೆಸಿ ಮತಯಾಚಿಸುತ್ತಿದ್ದರು.ತಾಲೂಕಿನ 24 ಇಲಾಖೆ ವ್ಯಾಪ್ತಿಯಲ್ಲಿ 32 ಸ್ಥಾನಗಳಿಗೆ 27 ಸ್ಥಾನಗಳ ಅವಿರೋಧ ಅಯ್ಕೆಯಾಗಿದ್ದು ಇದರಲ್ಲಿ ಪ್ರಮುಖ ಇಲಾಖೆಗಳಾದ ಆರೋಗ್ಯ ಇಲಾಖೆಯಿಂದ 4 ಕಂದಾಯ ಇಲಾಖೆಯಲ್ಲಿ 3 ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 2 ಭೂಮಾಪನ ಇಲಾಖೆಯಲ್ಲಿ 2 ಸೇರಿದಂತೆ ಉಳಿದ ಎಲ್ಲಾ ಇಲಾಖೆಯಿಂದ ತಲಾ ಒಬ್ಬರು ಅಯ್ಕೆಯಾಗಿದ್ದಾರೆ. ಕೆಲ ಇಲಾಖೆಗಳಲ್ಲಿ ನೌಕರರು ಕನಿಷ್ಠ ಸಂಖ್ಯೆಯಲ್ಲೂ ಇಲ್ಲದ ಕಾರಣ ಕೆಲವೊಂದು ಇಲಾಖೆಗಳ ಜೋತೆ ಸೇರಿಸಿ ಪ್ರತಿನಿಧಿಗಳನ್ನು ಅಯ್ಕೆ ಮಾಡಿಕೊಳ್ಳಲಾಗಿದೆ.ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ,ಪ್ರೌಢಶಾಲಾ ಶಿಕ್ಷಕರ ಸಂಘದ ಹಾಗು ಬಿಇಒ ಕಚೇರಿ ನೌಕರರ ಸಂಬಂದಿಸಿದಂತೆ ಅಭ್ಯರ್ಥಿಗಳು ಚುನಾವಣೆಗೆ ಮುಂದಾಗಿದ್ದು ಇದರಲ್ಲಿ ಪ್ರೌಡಶಾಲೆ ಶಿಕ್ಷಕರ ಕ್ಷೇತ್ರದಲ್ಲಿ 160 ಮತದಾರರಿದ್ದು ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರೆ,ಕ್ಷೇತ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ 14 ಮತದಾರಲ್ಲಿ ಒಮ್ಮತ ಇಲ್ಲದೆ ಒಂದು ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು…
ನ್ಯೂಜ್ ಡೆಸ್ಕ್:ಹಿರಿಯ ನಾಗರಿಕರ ಆರೋಗ್ಯ ವೃದ್ಧಿಸುವಂತಹ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಗಿದ್ದು ದೇಶದ ಹಿರಿಯ ನಾಗರಿಕರಿಗೆ ಇಂಥದ್ದೊಂದು ಶುಭಸುದ್ಧಿಗೆ ಅನುಮೋದನೆ ನೀಡಿದ್ದಾರೆ.ದೇಶದ 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಉತ್ತಮ ಆರೋಗ್ಯ ಸೌಲಭ್ಯಗಳು ಸಿಗಲಿ ಎಂಬ ಉದ್ದೇಶದಿಂದ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಅನ್ನು ಔಪಚಾರಿಕವಾಗಿ ಪ್ರಧಾನಿ ಮೋದಿ ಅವರು ಪ್ರಾರಂಭಿಸಲಿದ್ದಾರೆ. ಆರ್ಥಿಕ ವ್ಯವಸ್ಥೆಯನ್ನು ಪರಿಗಣಿಸದೆ 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಆರೋಗ್ಯ ಸೌಲಭ್ಯಗಳು ಸಿಗಬೇಕು ವಾರ್ಷಿಕವಾಗಿ ರೂ.5 ಲಕ್ಷದವರೆಗೆ ಮೌಲ್ಯದ ಪ್ರಯೋಜನವನ್ನು ಪಡೆಯಬಹುದಾಗಿದ್ದು 29 ಸಾವಿರಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ AB-PMJAYಸೇವೆ ಲಭ್ಯವಿದೆ. ಅರ್ಹ ಅಭ್ಯರ್ಥಿಗಳು PMJAY ಪೋರ್ಟಲ್ ಅಥವಾ ಆಯುಷ್ಮಾನ್ ಭಾರತ್ ಆಪ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ನ್ಯೂಜ್ ಡೆಸ್ಕ್: ಚನ್ನಪಟ್ಟಣ ಉಪಚುನಾವಣೆ ರಾಜ್ಯದಲ್ಲಿ ಅಲ್ಲ ಇಡೀ ದೇಶದ ಗಮನ ಸೇಳೆದು ದೇಶಾದ್ಯಂತ ಸದ್ದು ಮಾಡುತ್ತಿದೆ. ಸ್ವಕ್ಷೇತ್ರದಲ್ಲಿ ಮಗನನ್ನು ಗಲ್ಲಿಸಿಕೊಳ್ಳಲು ಪಣ ತೊಟ್ಟಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭಾನುವಾರ ಪತ್ನಿ ಸೊಸೆ ಮೊಮ್ಮಗನೊಂದಿಗೆ ಹಾಸನಾಂಬೆ ದರ್ಶನ ಪಡೆದರು.ಪುತ್ರ ನಿಖಿಲ್ ಚನ್ನಪಟ್ಟಣದಲ್ಲಿ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮಾಡಿದರು.ಹಾಸನಾಂಬೆಗೆ ಪೂಜೆಯ ನಂತರ ಕುಮಾರಸ್ವಾಮಿ ಕುಟುಂಬ ಸಮೇತ ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸಿದ್ದೇಶ್ವರ ಸ್ವಾಮಿ ಬಲಭಾಗದಿಂದ ಹೂ ಪ್ರಸಾದ ಸಿಕ್ಕಿದೆ ಇದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರಿಗೆ ಶುಭ ಸೂಚನೆ ಎಂಬ ಕುತೂಹಲಕಾರ ವಿಚಾರ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.ಹಿಂದೂ ಸಂಪ್ರದಾಯದ ಪದ್ಧತಿಗಳಲ್ಲಿ ದೇವರ ಪೂಜೆ ನಡೆಯುವ ವೇಳೆ ಪ್ರಾರ್ಥಿಸುವಾಗ ಅಕಸ್ಮಾತಾಗಿ ದೇವರ ಮೂರ್ತಿಯ ಬಲಗಡೆಯಿಂದ ಹೂವು ಬಿದ್ದರೆ ಶುಭ ಶಕುನ ಹಾಗೂ ಮನಸಲ್ಲಿ ಬೇಡಿಕೊಂಡಿರುವ ಇಚ್ಛೆ ನೇರವೇರುತ್ತದೆ ಎಂಬುದು ನಂಬಿಕೆ ಇದೆ ಅನುಭವ ಹೆಚ್ ಡಿ ಕುಮಾರಸ್ವಾಮಿ ಅಗಿದ್ದು ಸಿದ್ದೇಶ್ವರ ಸ್ವಾಮೀಜಿ ಬಳಿ ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿಕೊಂಡ…
ನ್ಯೂಜ್ ಡೆಸ್ಕ್: ತಿರುಮಲ ಬೆಟ್ಟಕ್ಕೆ ನಡೆದು ಹೋಗುವಂತ ಭಕ್ತರಲ್ಲಿ ಹೃದಯ ಸಂಬಂಧಿ ಖಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಟಿಟಿಡಿ ವಿಶೇಷ ಸೂಚನೆಗಳನ್ನು ನೀಡಿದೆ. ಬಿಪಿ, ಅಸ್ತಮಾ, ಮೂರ್ಛೆ, ಸಂಧಿವಾತ ಇರುವವರು ನಡೆದು ಬೆಟ್ಟ ಹತ್ತಿಕೊಂಡು ಬಾರದಂತೆ ಸೂಚಿಸಲಾಗಿದೆ. ಸಮುದ್ರ ಮಟ್ಟದಿಂದ ಎತ್ತರದಲ್ಲಿರುವುದರಿಂದ ಆಮ್ಲಜನಕದ ಮಟ್ಟವು ಕಡಿಮೆಯಾಗಿದ್ದು ಮೇಲೆ ತಿಳಿಸಿರುವ ಸಮಸ್ಯೆಗಳು ಇದ್ದವರು 1500 ಮೆಟ್ಟಿಲುಗಳು,ಗಾಳಿಗೋಪುರ ಮತ್ತು ಭಾಷ್ಯಕಾರ್ಯ ಪ್ರದೇಶದಗಳಲ್ಲಿ ವೈದ್ಯಕೀಯ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಶ್ರೀನಿವಾಸಪುರ:ಹುಚ್ಚು ನಾಯಿಯೊಂದು 10 ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ತಾಲೂಕಿನ ರೋಣೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ನಡದಿರುತ್ತದೆ.ತಾಲೂಕಿನ ರೋಣೂರು ಪಂಚಾಯಿತಿ ವ್ಯಾಪ್ತಿಯ ಚಿಕ್ಕತಿಮ್ಮನಹಳ್ಳಿ,ರೆಡ್ಡಂಪಲ್ಲಿ, ಕೋಟಪಲ್ಲಿ, ಲೋಜರಪಲ್ಲಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಒಡಾಡಿರುವ ಹುಚ್ಚು ನಾಯಿ ದಾರಿಹೋಕ ಮಹಿಳೆಯರು,ವೃದ್ಧರು ಸೇರಿದಂತೆ ಹಲವರನ್ನು ಕಚ್ಚಿ ಗಾಯಗೊಳಿಸಿದ್ದು ಗಾಯಗೊಂಡವರು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿದಗ ಹಿನ್ನಲೆಯಲ್ಲಿ ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಚಿಕ್ಕತಿಮ್ಮನಹಳ್ಳಿ ರೆಡ್ಡಿ, ಲೋಜರಪಲ್ಲಿ ತಿಪ್ಪಮ್ಮ 70, ರೆಡ್ಡಂಪಲ್ಲಿ ಗೀತಮ್ಮ50, ಕೋಟಪಲ್ಲಿ ಮುನಿಯಪ್ಪರಿಗಂತೂ ತೀವ್ರವಾಗಿ ಕಚ್ಚಿ ಗಾಯಗೊಳಿಸಿದೆ ಎನ್ನುತ್ತಾರೆ,ಈ ಬಗ್ಗೆ ಗ್ರಾಮಸ್ಥರು ಮಾತನಾಡಿ ಒಂದೆನಾಯಿ ಎಲ್ಲಾ ಗ್ರಾಮಗಳಲ್ಲೂ ದಾಳಿಮಾಡಿದ್ದು ದಿನೆದಿನೆ ಗ್ರಾಮಗಳಲ್ಲಿ ನಾಯಿಗಳ ಉಳಪಟ ಹೆಚ್ಚುತ್ತಿದ್ದು ಸಂಜೆ ಮಬ್ಬುಗತ್ತಲಿನಲ್ಲೂ ಒಡಾಡಲು ಹೆದರುವಂತ ಪರಿಸ್ಥಿತಿ ನಿರ್ಮಾಣವಾಗಿದೆ,ದ್ವಿಚಕ್ರವಾಹನದಲ್ಲಿ ಹೋಗುವಾಗ ನಾಯಿಗಳ ಹಿಂಡು ದಾಳಿ ಮಾಡುತ್ತವೆ ಎಂದು ಹೇಳುತ್ತಾರೆ. ಗ್ರಾಮಸ್ಥರು ಜಾಗೃತರಾಗಿರಿ ಇವೊಹುಚ್ಚು ನಾಯಿ ದಾಳಿ ವಿಚಾರದಲ್ಲಿ ತಾಲೂಕು ಪಂಚಾಯಿತಿ ಇವೋ ರವಿ vcsnewz.comಗೆ ಪ್ರತಿಕ್ರಿಯೆ ನೀಡಿ ಹುಚ್ಚುನಾಯಿ ದಾಳಿ ವಿಚಾರದಲ್ಲಿ…
ಶ್ರೀನಿವಾಸಪುರ:ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಶ್ರೀನಿವಾಸಪುರ ತಾಲೂಕು ಘಟಕಕ್ಕೆ 2024-29ನೇ ಸಾಲಿಗೆ 5 ವರ್ಷದ ಅವಧಿಗೆ ಆಕ್ಟೋಬರ್ 28 ರಂದು ಚುನಾವಣೆ ನಡೆಯಲಿದ್ದು,ತಾಲೂಕಿನ 24 ಇಲಾಖೆ ವ್ಯಾಪ್ತಿಯಲ್ಲಿ 32 ಸ್ಥಾನಗಳಿಗೆ 27 ಸ್ಥಾನಗಳ ಅವಿರೋಧ ಅಯ್ಕೆಯಾಗಿದ್ದು ಇದರಲ್ಲಿ ಪ್ರಮುಖ ಇಲಾಖೆಗಳಾದ ಆರೋಗ್ಯ ಇಲಾಖೆಯಿಂದ 4 ಕಂದಾಯ ಇಲಾಖೆಯಲ್ಲಿ 3 ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 2 ಭೂಮಾಪನ ಇಲಾಖೆಯಲ್ಲಿ 2 ಸೇರಿದಂತೆ ಉಳಿದ ಎಲ್ಲಾ ಇಲಾಖೆಯಿಂದ ತಲಾ ಒಬ್ಬರು ಅಯ್ಕೆಯಾಗಿದ್ದಾರೆ. ಕೆಲ ಇಲಾಖೆಗಳಲ್ಲಿ ನೌಕರರು ಕನಿಷ್ಠ ಸಂಖ್ಯೆಯಲ್ಲೂ ಇಲ್ಲದ ಕಾರಣ ಕೆಲವೊಂದು ಇಲಾಖೆಗಳ ಜೋತೆ ಸೇರಿಸಿ ಪ್ರತಿನಿಧಿಗಳನ್ನು ಅಯ್ಕೆ ಮಾಡಿಕೊಳ್ಳಲಾಗಿದೆ.ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ,ಪ್ರೌಢಶಾಲಾ ಶಿಕ್ಷಕರ ಸಂಘದ ಹಾಗು ಬಿಇಒ ಕಚೇರಿ ನೌಕರರ ಸಂಬಂದಿಸಿದಂತೆ ಅಭ್ಯರ್ಥಿಗಳು ಚುನಾವಣೆಗೆ ಮುಂದಾಗಿದ್ದು ಇದರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 677 ಮತದಾರರಿದ್ದು 9 ಜನ ಶಿಕ್ಷಕರು ಮೂರು ತಂಡಗಳಾಗಿ(ಪ್ಯಾನಲ್) ಅಭ್ಯರ್ಥಿಗಳಾಗಿ ಕಣದಲ್ಲಿದ್ದು ಚುನಾವಣೆ ಕಣ ರಂಗೇರಿದೆ ಹೈಓಲ್ಟೇಜ್ ಕಣವಾಗಿ ಮಾರ್ಪಟ್ಟಿದೆ ಎನ್ನುವ ಮಾತು…
ನ್ಯೂಜ್ ಡೆಸ್ಕ್:ಗಂಟಲಲ್ಲಿ ದೋಸೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಆಶ್ಚರ್ಯಕರ ಘಟನೆ ತೆಲಂಗಾಣ ರಾಜ್ಯದ ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ನಡೆದಿದೆ. ಕಲ್ವಕುರ್ತಿಯ 41 ವರ್ಷದ ವೆಂಕಟಯ್ಯ ಎಂಬಾತನಿಗೆ ಮದ್ಯ ಸೇವಿಸುವ ಅಭ್ಯಾಸವಿದೆ ಎಂದಿನಂತೆ ಮದ್ಯ ಸೇವಿಸಿದ್ದಾನೆ ನಂತರ ಊಟಕ್ಕೆ ಕೂತಿದ್ದಾನೆ ಊಟಕ್ಕೆ ದೋಸೆ ಮಾಡಿದ್ದು ಅದನ್ನು ತಿನ್ನುವಾಗ ದೋಸೆ ಗಂಟಲಲ್ಲಿ ಸಿಕ್ಕಿಕೊಂಡಿದೆ ಉಸಿರಾಡಲು ಸಾಧ್ಯವಾಗಿಲ್ಲ. ಪ್ರಜ್ಞಾಹೀನನಾಗಿದ್ದಾನೆ ಕೂಡಲೇ ಸ್ಥಳಿಯ ಆಸ್ಪತ್ರೆಗೆ ಸಾಗಿಸಿರುತ್ತಾರೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೊನ್ನೆ ಕೇರಳದಲ್ಲಿ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿ ತಿನ್ನುವಾಗ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ.ಮೃದುವಾದ ದೋಸೆ ಮತ್ತು ಇಡ್ಲಿ ತಿನ್ನುವಾಗ ಪ್ರಾಣಕ್ಕೆ ಸಂಚಕಾರ ತರುವುದು ಅಂದರೆ ಶಾಕಿಂಗ್ ವಿಚಾರ ಎನ್ನುತ್ತಾರೆ.
ಚಿಂತಾಮಣಿ:ಚಿಂತಾಮಣಿ ನಗರದಲ್ಲಿ ಮಂಗಳವಾರ ಮಧ್ಯಾನಃ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಆರ್ಭಟದ ಮಳೆಯಿಂದ ಹಳ್ಳ-ಕೊಳ್ಳ ಚರಂಡಿಗಳಲ್ಲಿ ನೀರು ತುಂಬಿ ಹರಿಯುತ್ತಿದ್ದ ದೃಶ್ಯ ಎಲ್ಲಡೆ ಕಂಡು ಬಂತು.ಕುಂಬದ್ರೋಣವಾಗಿ ಸುರಿದ ಮಳೆಗೆ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.ರಸ್ತೆ ಕಾಲುವೆ ವ್ಯತ್ಯಾಸ ಇಲ್ಲದೆ ನೀರು ರಸ್ತೆ ಮೆಲೆ ಹರಿದಿದ್ದರಿಂದ ಒಡಾಡಲು ಜನ ಪರದಾಡಿದ್ದಾರೆ ನಗರದ ಬಹುತೇಕ ರಸ್ತೆಗಳು ಜಲಾವೃತವಾಗಿದ್ದು ರಸ್ತೆ ಮೆಲೆ ಜುಳು ಜುಳು ಎಂದು ನೀರು ಹರಿದು ಬಂದಿದೆ, ಜಲಾವೃತವಾದ ರೇಷ್ಮೇ ಗೂಡು ಮಾರುಕಟ್ಟೆರಾಮಕುಂಟೆ ರಸ್ತೆಯಲ್ಲಿನ ರೇಷ್ಮೆಗೂಡು ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡು ಗೂಡು ಹರಾಜಿಗೆ ತಂದಿದ್ದ ರೈತರು ತಮ್ಮ ಗೂಡಿನ ಮೂಟೆಗಳನ್ನು ನೀರಿನಿಂದ ಕಾಪಾಡಲು ಹೈರಾಣವಾಗಿ ಕೊನೆಗೆ ತಗಡಿನ ಹರಾಜು ಕಟ್ಟೆ ಏರಿ ಗೂಡುಮೂಟೆಗಳನ್ನು ಹೊತ್ತುಕೊಂಡು ನಿಂತಿದ್ದಾರೆ.ಬೆಟ್ಟಗಳಿಂದ ಹರಿದು ಬಂದ ನೀರು ಟ್ಯಾಂಕ್ ಬಂಡ್ ರಸ್ತೆ ಮೂಲಕ ರಾಯಲ್ ಸರ್ಕಲ್ ಕಿಶೋರ್ ಸ್ಕೂಲ್ ಮುಂಭಾಗದ ರಸ್ತೆಗಳಲ್ಲಿ ಧಾರಕಾರವಾಗಿ ನದಿ ನಾಲೆಗಳಂತೆ ರಸ್ತೆ ಮೇಲೆ ಹರಿದುಕೊಂಡು ಸುಮಾ ನರ್ಸಿಂಗ್ ಹೋಂ ಪ್ರದೇಶ ಸೇರಿದಂತೆ ಮಳೆ…


