Author: Srinivas_Murthy

ನ್ಯೂಜ್ ಡೆಸ್ಕ್:ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಯುವತಿಯೊಬ್ಬಳು ಕೌನ್ ಬನೇಗಾ ಕರೋಡ್ KBC ಪತಿಯಲ್ಲಿ ಭಾಗವಹಿಸಿ .50 ಲಕ್ಷ ರೂಪಾಯಿ ಬಹುಮಾನವನ್ನು ಗೆದ್ದಿದ್ದಾರೆ. ರಾಜಸ್ಥಾನದ ನರೇಷಿ ಮೀನಾ 2018 ರ ಎಸ್‌ಐ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು ಆಕೆಗೆ ಬ್ರೈನ್ ಟ್ಯೂಮರ್ ಇರುವುದು ಪತ್ತೆಯಾಗಿದೆ.ಚಿಕಿತ್ಸೆಗಾಗಿ ಆಕೆ ರೂಪಾಯಿ ರೂಪಾಯಿ ಕೂಡಿಡುತ್ತಿದ್ದ ಆಕೆ,ಇತ್ತೀಚೆಗೆ ನಡೆದ KBC ಶೋನಲ್ಲಿ ಭಾಗವಹಿಸಿ 50 ಲಕ್ಷ ರೂಪಾಯಿಗಳನ್ನು ತನ್ನದಾಗಿಸಿಕೊಂಡಿದ್ದಾಳೆ,ಆನಾರಗ್ಯದ ಸಂಕಷ್ಟದಲ್ಲೂ ಛಲ ಬಿಡದ ನರೇಷಿ ಮೀನಾ KBC ಶೋ ನಲ್ಲಿ ಭಾಗವಹಿಸಿದ್ದನ್ನು ಮೆಚ್ಚಿದ KBC ಶೋ ನಡೆಸುವ ಅಮಿತಾಭ್ ಅವರು ಆಕೆಯ ಚಿಕಿತ್ಸೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Read More

ಶ್ರೀನಿವಾಸಪುರ:ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಹಾಗಿದ್ದರೆ ಹಿಂದೆ ರೈಲ್ವೇ ಕೋಚ್ ಫ್ಯಾಕ್ಟರಿ ಮಾಡಲು ಗುರುತಿಸಿದ್ದ ಜಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿ ಇಲ್ಲವಾದರೆ ನಮ್ಮ ಕಂದಾಯ ಜಮೀನುಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದು ಬೇಡ ಎಂದು ಯದರೂರು ಭಾಗದ ರೈತರು ಒತ್ತಾಯಿದರು.ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ.ಬೇಟಪ್ಪ ಹಾಗು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶ್ಯಾಗತ್ತೂರು ಸುಧಾಕರ್ ನೇತೃತ್ವದಲ್ಲಿ ಯದರೂರು ಅರಕೇರಿ ಭಾಗದ ರೈತರು ಇಂದು ಸೋಮವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಎನ್.ಜಿ.ಬೇಟಪ್ಪ ಮಾತನಾಡಿ ಖಾಸಗಿ ಕೈಗಾರಿಕೆಗಳನ್ನು ಸ್ಥಾಪಿಸುವ ಗುಜರಾತ್ ಮಾರ್ವಾಡಿಗಳಿಗೆ ಫಲವತ್ತಾದ ಕೃಷಿ ಜಮೀನು ಬಿಟ್ಟುಕೊಟ್ಟರೆ ರೈತ ಸರ್ವನಾಶವಾಗುತ್ತಾನೆ ನಾವು ಬೆಳೆದಿರುವಂತ ಮಾವು, ರೇಷ್ಮೆ,ಹೂವಿನ ಬೇಸಾಯ ಅನ್ಯಾಯವಾಗಿ ಹೋಗುತ್ತದೆ ಜ್ಮೀನು ಇಲ್ಲ ಎಂದರೆ ಹೈನುಗಾರಿಕೆ ಇಲ್ಲವಾಗಿ ಹಾಲು ಉತ್ಪಾದನೆ ಕುಸಿದು ರೈತರು ಆರ್ಥಿಕವಾಗಿ ದಿವಾಳಿಯಾಗುತ್ತಾರೆ,ಖಾಸಗಿ ಕೈಗಾರಿಕೆಗಳ ಸ್ಥಾಪನೆಯಿಂದ ಅನಕೂಲಕ್ಕಿಂತ ಅನಾನುಕೂಲ ಹೆಚ್ಚಾಗಿರುತ್ತದೆ.ಕರ್ನಾಟಕ ಕೈಗಾರಿಕ ಪ್ರದೇಶಾಭಿವೃದ್ಧಿ ಮಂಡಳಿ ಖಾಸಗಿ ಕೈಗಾರಿಕಾ ಬಂಡವಾಳಗಾರ ನಡುವೆ ಮದ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತದೆ.ರೈತನ ಜಮೀನು ಅನ್ನು ಖಾಸಗಿ ವ್ಯಕ್ತಿಗಳಿಗೆ ಕೊಡಿಸುವ ಸರ್ಕಾರಿ ಸಂಸ್ಥೆ ಒಂದೆ ಹಂತದಲ್ಲಿ…

Read More

ಶ್ರೀನಿವಾಸಪುರ: ಅರಕೇರಿಯ ಶ್ರೀಕೋದಂಡರಾಮಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಪೂಜೆ ಹವನ ಶ್ರೀರಾಮತಾರಕ ಹೋಮ ಹಾಗು ಶ್ರೀ ಸಿತಾರಾಮ ಕಲ್ಯಾಣೋತ್ಸವ ಹಮ್ಮಿಕೊಳ್ಳಲಾಗಿತ್ತು.ದೇವಾಲಯದ ಪ್ರಧಾನ ಪೊಷಕರಾದ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ ಕುಟುಂಬದವರಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ವೈಖಾನಸ ನಿಪುಣ ಯಲ್ದೂರುಶೇಷಾದ್ರಿ ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಶ್ರೀ ರಾಮತಾರಕ ಹೋಮ ಹಾಗು ಶ್ರೀ ಸಿತಾರಾಮ ಕಲ್ಯಾಣೋತ್ಸವ ನಡೆಸುವುದರಿಂದ ಶ್ರೀರಾಮಚಂದ್ರ ಸ್ವಾಮಿ ಅನುಗ್ರಹ ಸಿದ್ದಿಸುತ್ತದೆ ಸುಖ, ಸಮೃದ್ಧಿ ಪ್ರಾಪ್ತಿ ಹಾಗು ಕುಟುಂಬದಲ್ಲಿ ಒಗ್ಗಟ್ಟು ಮೂಡುತ್ತದೆ. ಸೀತಾಮಾತೆ ಪೂಜೆಯಿಂದ ಸಂಸಾರದಲ್ಲಿರುವ ಭಿನ್ನಾಭಿಪ್ರಾಯಗಳು ಮನಸ್ತಾಪಗಳು ದೂರವಾಗುತ್ತವೆ. ಲಕ್ಷ್ಮಣನ ಪೂಜೆಯಿಂದ ಕುಟುಂಬಕ್ಕೆ ಭಗವಂತ ಶ್ರೀರಾಮನ ರಕ್ಷಣೆ ದೊರೆಯುತ್ತದೆ.ಭರತನ ಪೂಜೆಯಿಂದ ಕುಟುಂಬದಲ್ಲಿ ನ್ಯಾಯ ನೀತಿ ನೆಲೆಸುತ್ತದೆ. ಶತ್ರುಘ್ನನ ಪೂಜೆಯಿಂದ ಸೋದರರ ನಡುವೆ ಉತ್ತಮ ಅನ್ಯೋನ್ಯತೆ ಕಂಡುಬರುತ್ತದೆ. ಶ್ರೀ ಆಂಜನೇಯ ಸ್ವಾಮಿಯ ಪೂಜೆಯಿಂದ ಶತ್ರುಗಳು ಮಿತ್ರರಾಗಿ ಬದಲಾಗುತ್ತಾರೆ. ಶತ್ರುಗಳಿಂದ ಉಂಟಾಗುತ್ತಿರುವ ತೊಂದರೆ ಸಂಪೂರ್ಣ ನೀವಾರಣೆಯಾಗುತ್ತದೆ ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಸಕ ವೆಂಕಟಶಿವಾರೆಡ್ಡಿ,ಬೆಂಗಳೂರಿನ ಉದ್ಯಮಿ ರಾಮಾಂಜನೇಯ,ಡೈರಿ ಸೆಕ್ರೆಟರಿ ಶ್ರೀನಿವಾಸಯ್ಯಶೆಟ್ಟಿ,ಗ್ರಾಮದ…

Read More

ಶ್ರೀನಿವಾಸಪುರ:ತಾಲೂಕಿನ ಯುವಜನತೆಯ ಭವಿಷ್ಯತ್ ದೃಷ್ಟಿಯಲ್ಲಿ ಇಟ್ಟುಕೊಂಡು ತಾಲ್ಲೂಕಿನಲ್ಲಿ ಕೈಗಾರಿಕಾ ವಲಯಗಳ ಸ್ಥಾಪನೆಗೆ ಮುಂದಾಗಿದ್ದು ಇದಕ್ಕೆ ಯದರೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಸಹಕರಿಸಬೇಕೆಂದು ಶಾಸಕ ಜಿ. ಕೆ. ವೆಂಕಟಶಿವಾರೆಡ್ಡಿ ಕರೆ ನೀಡಿದರು.ಅವರು ತಾಲೂಕಿನ ಯದರೂರು ಗ್ರಾಮದಲ್ಲಿ ಯದರೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರ ಜೊತೆ ಸಭೆ ನಡೆಸಿ ಮಾತನಾಡಿ ನಮ್ಮ ತಾಲೂಕಿನ ಯುವಕರು ಉದ್ಯೋಗ ಆರಿಸಿ ಬೆಂಗಳೂರು ಇತರಡೆ ವಲಸೆ ಹೋಗುತ್ತಿರುವುದು ಮುಂದೆ ತಾಲೂಕಿನಲ್ಲಿ ಯಾವ ಪರಿಸ್ಥಿತಿ ನಿರ್ಮಾಣ ಆಗುತ್ತದೋ ಗೊತ್ತಿಲ್ಲ ಅದನ್ನು ತಡೆದು ಯುವಕರು ತಮ್ಮ ಭವಿಷ್ಯತ್ ಇಲ್ಲೆ ರೂಪಿಸಿಕೊಳ್ಳಲಿ ಎಂಬ ಉದ್ದೇಶ ಇಟ್ಟುಕೊಂಡು ತಾಲೂಕಿನಲ್ಲಿ ಎರಡು ಕಡೆ ಕೈಗಾರಿಕೆಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ ಇದಕ್ಕೆ ಕೆಲ ಪಟ್ಟಭದ್ರರು ವಿರೋಧ ವ್ಯಕ್ತಪಡಿಸುವ ಮಾತುಗಳನ್ನು ಆಡುತ್ತಿದ್ದು ಅಂತಹವರ ಮಾತುಗಳನ್ನು ನಂಬಬೇಡಿ ಅವರು ನಿಮ್ಮನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದು ಮೊನ್ನೆ ರೈತರ ಸಭೆ ಮಾಡಿದವರು ತಮ್ಮ ಜಮೀನುಗಳನ್ನು ಭದ್ರಮಾಡಿಕೊಳ್ಳಲು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಇಂತಹ ನಯವಂಚಕರ ಮಾತಿಗೆ ಯಾರು ಮರುಳಾಗಬಾರದೆಂದು ವಿನಂತಿಸಿದರು.ನಾನು…

Read More

ನ್ಯೂಜ್ ಡೆಸ್ಕ್:ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರು ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಕೂಲಿ’ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ರಜನಿ ಜೊತೆ ತೆರೆ ಹಂಚಿಕೊಳ್ಳುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ ಎಂದಿದ್ದಾರೆ. ಅವರೊಂದಿಗೆ ತೆಗೆಸಿಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಎದುರು ಉಪ್ಪಿ ಅಬ್ಬರ ಹೇಗಿರುತ್ತದೆ ಅನ್ನೋ ಕುತೂಹಲ ಕೂಡ ಜನರಲ್ಲಿ ಇದೆ ಇಲ್ಲಿವರೆಗೂ ಕೂಲಿ ಸಿನಿಮಾದಲ್ಲಿ ಉಪ್ಪಿ ಇದ್ದಾರೆ ಅನ್ನೋ ಸುದ್ದಿ ಕೇವಲ ಸೋಷಿಯಲ್ ಮೀಡಿಯಾದಲ್ಲಿಯೇ ಗಿರಿ ಗೀಟ್ಲೆ ಹೊಡೆಯುತಿತ್ತು ಈಗ ಹೊರಬಿದ್ದಿದೆ. ಸನ್ ಪಿಕ್ಚರ್ಸ್ ನಿರ್ಮಾಣದ ಈ ಚಿತ್ರವನ್ನು ಲೋಕೇಶ್ ಕನಕರಾಜ್ ನಿರ್ದೇಶಿಸುತ್ತಿದ್ದು, ಅನಿರುದ್ಧ್ ಸಂಗೀತ ಸಂಯೋಜನೆ ಮಾಡಿದ್ದಾರೆ.

Read More

ನೂಜ್ ಡೆಸ್ಕ್:ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ದಿನೇ ದಿನೇ ರಂಗೇರುತ್ತಿದ್ದು, ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಶನಿವಾರ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು,ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಿಡಿಪಿ ಅಧಿಕಾರಕ್ಕೆ ಬಂದರೆ ಉಚಿತ 200 ಯೂನಿಟ್ ವಿದ್ಯುತ್ ನೀಡುವುದಾಗಿ ಮತ್ತು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ.ಜೊತೆಗೆ ಆರ್ಟಿಕಲ್ 370 ಮತ್ತು 35ಎ ರದ್ದತಿಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಪುನಃಸ್ಥಾಪಿಸಲು ಕೆಲಸ ಮಾಡುತ್ತೆವೆ ಕಾಶ್ಮೀರಿ ವಿದ್ವಾಂಸರನ್ನು ಗೌರವಯುತವಾಗಿ ರಾಜ್ಯಕ್ಕೆ ಕರೆತಂದು ಅವರಿಗೆ ಡಬಲ್ ಬೆಡ್ ರೂಂ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ ಎಂದು ಹೇಳಿದ್ದಾರೆ. ಅಜೆಂಡಾ ಇಲ್ಲದೆ ಮೈತ್ರಿ ಇಲ್ಲವಿಧಾನಸಭೆ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಅವರು ಎರಡೂ ಪಕ್ಷಗಳು ಯಾವುದೇ ಅಜೆಂಡಾ ಹೊಂದಿಲ್ಲ ಮತ್ತು ಕೇವಲ ಸೀಟು ಹಂಚಿಕೊಂಡು ಅಧಿಕಾರಕ್ಕೆ ಬರುವುದಷ್ಟೇ ಮೈತ್ರಿ ಉದ್ದೇಶ. ತಮ್ಮ ಪಕ್ಷವು ಯಾವುದೇ…

Read More

ಶ್ರೀನಿವಾಸಪುರ:ಪುರಸಭೆಯ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾದರೆ ಉಪಾಧ್ಯಕ್ಷ ಸ್ಥಾನ ಜೆಡಿಎಸ್ ಅಬ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.ಶ್ರೀನಿವಾಸಪುರ: ಪುರಸಭೆ ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಭಾಸ್ಕರ್ ಅಧ್ಯಕ್ಷರಾಗಿ ಚುನಾಯಿತರಾದರೆ,ಉಪಾಧ್ಯಕ್ಷ ಸ್ಥಾನದಲ್ಲಿ ಜೆಡಿಎಸ್ ಅಬ್ಯರ್ಥಿ ಸುನಿತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಒಟ್ಟು 23 ಸಂಖ್ಯಾಬಲದ ಪುರಸಭೆಯಲ್ಲಿ ಕಾಂಗ್ರೇಸ್ 8 ಸದಸ್ಯರು ಜೆಡಿಎಸ್ 11 ಸದಸ್ಯರು,ಪಕ್ಷೇತರರು 4 ಸದಸ್ಯರಿದ್ದರು ಇವರಲ್ಲಿ ಕಳೆದ ಬಾರಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಮೂವರು ಪಕ್ಷೇತರ ಅಬ್ಯರ್ಥಿಗಳು ಕಾಂಗ್ರೆಸ್ ಪರವಾಗಿ ಘೋಷಿಸಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೆ ಮತ್ತೊರ್ವ ಸದಸ್ಯ ಜೆಡಿಎಸ್ ಗೆ ಘೋಷಿಸಿದ್ದರು. ಜೆಡಿಎಸ್ ಏಳು ಸದಸ್ಯರು ಗೈರು!ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಎಂ.ಭಾಸ್ಕರ್ ಹಾಗು ಜೆಡಿಎಸ್ ಅಭ್ಯರ್ಥಿಯಾಗಿ ಬಿ.ವೆಂಕಟರೆಡ್ಡಿ ಸ್ಪರ್ದಿಸಿದ್ದರು.ಕಾಂಗ್ರೆಸ್ ಅಭ್ಯರ್ಥಿ ಬಿ.ಎಂ.ಭಾಸ್ಕರ್ ಪರವಾಗಿ 11 ಸದಸ್ಯರು ಬೆಂಬಲಿಸಿದರೆ ಜೆಡಿಎಸ್ ಅಭ್ಯರ್ಥಿ ಬಿ.ವೆಂಕಟರೆಡ್ಡಿ ಪರವಾಗಿ ಏಳು ಸದಸ್ಯರು ಮತ್ತು ಶಾಸಕ ಹಾಗು ಸಂಸದರ ಸೇರಿ 9 ಸದಸ್ಯರು ಬೆಂಬಲಿಸಿದರು.ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್…

Read More

ಶ್ರೀನಿವಾಸಪುರ :ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಮಾಜದಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಜನರ ಬದುಕು ಹಸನಾಗಲು ನಿಸ್ವಾರ್ಥವಾಗಿ ಯೋಜನೆಗಳನ್ನು ಹಮ್ಮಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದು ಮಾದರಿ ರೈತ ಶಂಕರರೆಡ್ಡಿ ಹೇಳಿದರು ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಮೋರಪಲ್ಲಿಯ ಲಕ್ಕಮ್ಮನಕೆರೆ 2023 – 24 ನೇ ಸಾಲಿನ 669 ನೇ ನಮ್ಮೂರು ನಮ್ಮ ಕೆರೆ ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.ಧರ್ಮಸ್ಥಳ ಸಂಸ್ಥೆ ಬಡ ಹಾಗು ಮದ್ಯಮವರ್ಗದವರ ಬಗ್ಗೆ ಕಾಳಜಿ ವಹಿಸಿ ಸೇವಾಮನೋಭಾವದಿಂದ ಕೆಲಸ ಮಾಡುತ್ತಿದೆ ಎಂದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ ರಾಜ್ಯದೆಲ್ಲೆಡೆ ಮುಂಗಾರು ಉತ್ತಮವಾಗಿ ಆಗುತ್ತಿದ್ದು ದಕ್ಷಿಣ ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ ತಕ್ಕ ಮಟ್ಟಿಗೆ ಕೆರೆಗಳು ತುಂಬಿ ಕೃಷಿ ಚಟುವಟಿಕೆಗಳಿಗೆ ನೀರು ಬಳಕೆಯಾಗುತ್ತಿರುವುದು ಉತ್ತಮ ವಾತವರಣ ನಿರ್ಮಾಣ ಆಗಿದೆ ಎಂದರು.ರಾಜ್ಯದಲ್ಲಿ ಇನ್ನು ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ…

Read More

ಶ್ರೀನಿವಾಸಪುರ:ಖಾಸಗಿ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲ ಮಾಡಿಕೊಡಲು ಕರ್ನಾಟಕ ಕೈಗಾರಿಕ ಪ್ರದೇಶಾಭಿವೃದ್ಧಿ ಮಂಡಳಿ ರೈತರ ಜಮೀನು ಭೂಸ್ವಾಧೀನ ಮಾಡಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ.ಬೇಟಪ್ಪ ಹೇಳಿದರು.ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶ್ಯಾಗತ್ತೂರು ಸುಧಾಕರ್ ಹಾಗು ಶ್ರೀನಿವಾಸಪುರ ತಾಲೂಕಿನ ಯದರೂರು ಭಾಗದ ರೈತರೊಂದಿಗೆ ಬುಧವಾರ ಸಮಾಲೋಚನೆ ಸಭೆ ನಡೆಸಿ ಮಾತನಾಡಿದ ಅವರು ಖಾಸಗಿ ಕೈಗಾರಿಕೆಗಳಿಗೆ ಕೃಷಿ ಜಮೀನು ಬಿಟ್ಟುಕೊಟ್ಟರೆ ರೈತ ಸಂಸ್ಕೃತಿ ನಾಶವಾಗುತ್ತದೆ ರೈತರು ಬೆಳೆದಿರುವಂತ ಮಾವು, ರೇಷ್ಮೆ,ಹೈನುಗಾರಿಕೆ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಇದರಿಂದ ರೈತರು ಆರ್ಥಿಕವಾಗಿ ಹಾಗು ಸಾಮಾಜಿಕವಾಗಿ ಕುಂಠಿತರಾಗಿ ಕೃಷಿ ವ್ಯವಸ್ಥೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದರು.ಕೈಗಾರಿಕೆ ಸ್ಥಾಪನೆಯಿಂದ ಅನಾನುಕೂಲ ಹೆಚ್ಚುತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶ್ಯಾಗತ್ತೂರು ಸುಧಾಕರ್ ಮಾತನಾಡಿ ಕೈಗಾರಿಕೆಗಳ ಸ್ಥಾಪನೆಯಿಂದ ಅನುಕೂಲಗಳಿಗಿಂತ ಅನಾನುಕೂಲಗಲೇ ಹೆಚ್ಚಾಗಿದ್ದು ಸರ್ಕಾರ ಒಂದು ಸಲ ಈ ಭಾಗದ ಜಮೀನುಗಳನ್ನು ಭೂ ಸ್ವಾಧೀನ ಪ್ರಕ್ರಿಯೆಗೆ ನೋಟಿಪಿಕೇಷನ್ ಮಾಡಿದರೆ ಅದನ್ನು ಬಿಡಿಸಿಕೊಳ್ಳಲು ರೈತರಿಗೆ ಕಷ್ಟವಾಗುತ್ತದೆ. ಈ ಪ್ರದೇಶದ 1270…

Read More

ಶ್ರೀನಿವಾಸಪುರ: ಯಲ್ದೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಗಳಾಂಭ ವರ್ಗಾವಣೆಗೆ ಅಗ್ರಹಿಸಿ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗು ಸಾರ್ವಜನಿಕರು ಎರಡು ದಿನಗಳ ಕಾಲ ನಡೆಸಿದ ಪ್ರತಿಭಟನೆ ಹಿನ್ನಲೆಯಲ್ಲಿ ಅವರನ್ನು ವರ್ಗಾವಣೆ ಮಾಡಲು ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡುವುದಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎ.ಎನ್ ರವಿ ಭರವಸೆ ನೀಡಿರುತ್ತಾರೆ.ಶ್ರೀನಿವಾಸಪುರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರವಾಗಿ ಭೌಗೋಳಿಕವಾಗಿ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಗುರುತಿಸಿರುವ ಯಲ್ದೂರು ಗ್ರಾಮ ಪಂಚಾಯಿತಿ, ಅಲ್ಲಿನ ಪಂಚಾಯಿತಿ ಸದಸ್ಯರು ಹೇಳುವಂತೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿರುವ ಮಂಗಳಾಂಭ ವರ್ಗಾವಣೆಯಾಗಿ ಬಂದಾಗಿನಿಂದಲೂ ಪಂಚಾಯಿತಿ ಸದಸ್ಯರೊಂದಿಗೆ ಸೌಹಾರ್ದತೆ ಕಾಪಾಡಿಕೊಳ್ಳದ ಕಾರಣ ಪಂಚಾಯಿತಿ ಅಭಿವೃದ್ಧಿ ವಿಚಾರವಾಗಿ ನಿತ್ಯವೂ ಕಿತ್ತಾಟ ಸಾಮಾನ್ಯವಾಗಿತ್ತು ಇದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಮಸ್ಯಯಾಗಿತ್ತು ಈಗ ಇದು ಪಂಚಾಯಿತಿ ಅಭಿವೃದ್ಧಿ ವರ್ಗಾವಣೆಯಾದರೆ ಮಾತ್ರ ಸಮಸ್ಯೆ ನೀವಾರಣೆಯಾಗುತ್ತದೆ ಎಂದು ಸಾರ್ವಜನಿಕರು ಅಗ್ರಹಿಸುವವರಿಗೆ ಬಂದು ತಲುಪಿದೆ.ಕಳೆದ ಎರಡು ದಿನಗಳಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾದ್ಯಕ್ಷ ಹಾಗು ಸದಸ್ಯರು ಮತ್ತು ಸಾರ್ವಜನಿಕರು ಪಂಚಾಯಿತಿ ಕಚೇರಿ ಮುಂಬಾಗದಲ್ಲಿ ಪೆಂಡಾಲ್ ಹಾಕಿಕೊಂಡು…

Read More