Author: Srinivas_Murthy

ಚಿಂತಾಮಣಿ:ವಿಚ್ಛೇದಿತ ಮಹಿಳೆಯರನ್ನು ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ್ದ ಆರೋಪಿ ಗಿರೀಶ್​​ ನೇಣಿಗೆ ಶರಣಾಗಿದ್ದಾನೆ. ಚಿಂತಾಮಣಿ ನಗರದ ಕನ್ನಂಪಲ್ಲಿಯಲ್ಲಿದ್ದ ಆರೋಪಿ ಮನೆಯಲ್ಲಿ ನೇಣು ಬಿಗಿದು ಗಿರೀಶ್​​ ಆತ್ಮಹತ್ಯೆ ​ ಮಾಡಿಕೊಂಡಿದ್ದು, ಮೃತ ಆರೋಪಿ ವಂಚನೆಗೆ ಒಳಗಾಗಿದ್ದ ನಾಲ್ವರು ಸಂತ್ರಸ್ತೆಯರು ಈತನ ವಿರುದ್ಧ ಚಿಕ್ಕಬಳ್ಳಾಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ದೂರು ದಾಖಲಾಗುತ್ತಿದ್ದಂತೆ ಗಿರೀಶ್​​ ನೇಣಿಗೆ ಶರಣಾಗಿರುವ ಕುರಿತು ಶಂಕೆ ವ್ಯಕ್ತಪಡಿಸಲಾಗಿದೆ.ತಿಂಗಳ ಹಿಂದೆಯೂ ಈತ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆದಿದ್ದ ಎನ್ನಲಾಗಿದೆ.ಸಿ.ಎಂ.ಗಿರೀಶ್ ಅಲಿಯಾಸ್ ಸಾಯಿಸುದೀಪ್ ಎನ್ನುವ ಈತ ಒಬ್ಬಂಟಿ ವಿವಾಹಿತ ಮಹಿಳೆಯರನ್ನೇ ಟಾರ್ಗೆಟ್​​ ಮಾಡುತ್ತಿದ್ದು ಫೇಸ್​​ಬುಕ್​ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯ ಮಾಡಿಕೊಂಡು,ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ Fraud promising marriage ಅವರನ್ನು ಪುಸಲಾಯಿಸಿ ಅದರಲ್ಲೂ ಕೆಲವರನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡು,ಅಂತಹ ವಿಡಿಯೋಗಳನ್ನು ತೊರಿಸಿ ಹೆದರಿಸುತ್ತ ಒಡವೆ ಹಾಗು ಹಣಕ್ಕಾಗಿ ಪೀಡಿಸುತ್ತ ಇದ್ದನೆಂದು ಹೇಳಲಾಗಿದೆನಂದಗುಡಿ, ಬೆಂಗಳೂರು, ಚಿಕ್ಕಬಳ್ಳಾಪುರ, ಬಂಗಾರಪೇಟೆ ಸೇರಿದಂತೆ 5ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ, ಅವರಿಂದ ಲಕ್ಷಾಂತರ ರೂ. ಹಣ ಪಡೆದುಕೊಂಡಿದ್ದ ಎಂದು ಆರೋಪಿಸಲಾಗಿದ್ದು…

Read More

ಶ್ರೀನಿವಾಸಪುರ:ಉದ್ದೇಶಿತ ಯದರೂರು ಕೈಗಾರಿಕೆ ವಲಯ ನಿರ್ಮಾಣ ಸಂಬಂದ ಜಮೀನು ಸರ್ವೆ ಮಾಡಲು ಬಂದಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)Karnataka Industrial Areas Development Board ಅಧಿಕಾರಿಗಳ ವಾಹನ ತಡೆದ ರೈತರ ಗುಂಪು ಸರ್ವೆ ಮಾಡಲು ಅವಕಾಶ ನೀಡದೆ ವಾಪಸ್ಸು ಕಳುಹಿಸಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಯದರೂರು ಗ್ರಾಮದ ಬಳಿ ಮಂಗಳವಾರ ನಡೆದಿದೆ.ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳಾದ ಶ್ರೀನಾಥ್ ಮತ್ತು ಮಂಜುನಾಥ್ ಆಗಮಿಸಿದ ವೇಳೆ ಅವರನ್ನು ಸ್ಥದಲ್ಲಿದ್ದ ಕೆಲ ರೈತರು ಬೈದು ಗಲಾಟೆ ಮಾಡಿ ಒಂದಿಂಚು ಜಮೀನು ಕೊಡಲ್ಲ ಎಂದು ಆಕ್ರೋಶ ಭರಿತರಾಗಿ ಮಾತನಾಡಿ ಬೆದರಿಸಿದ್ದಾರೆ ಎನ್ನಲಾಗಿದ್ದು.ರೈತರಿಗೆ ಯಾವುದೇ ಮಾಹಿತಿ ನೀಡದೆ ಸರ್ವೇ ಮಾಡಲು ಬಂದಿರುವುದು ತಪ್ಪು ಎಂದು ಅಧಿಕಾರಿಗಳನ್ನ ವಾಪಸ್ ಕಳಿಸಿದರು.ಕೆಐಎಡಿಬಿ ಅಧಿಕಾರಿಗಳನ್ನು ಕಾರಿನಿಂದ ಇಳಿಯಲು ಬಿಡದೆ ವಾಗ್ವಾದಕ್ಕೆ ಇಳಿದ ರೈತರು ಮಾತಿನ ಚಕಮಕಿ ನಡೆಸಿದಲ್ಲದೆ ಪ್ರಾಣ ಬಿಟ್ಟೆವು ಜಮೀನು ಕೊಡುವುದಿಲ್ಲ.ನಿಮ್ಮ ವಾಹನಗಳನ್ನು ಸುಟ್ಟುಹಾಕುತ್ತೇವೆ ಎಂದು ತೀವ್ರವಾಗಿ ಎಚ್ಚರಿಕೆನೀಡಿದ್ದಾರೆ.ಯದರೂರು ಕಂದಾಯ ವೃತ್ತದಲ್ಲಿ ಕೈಗಾರಿಕ ವಲಯಯದರೂರು ಕಂದಾಯ…

Read More

ಚಿಂತಾಮಣಿ:ತೆಲಗು ಚಿತ್ರರಂಗದ ಪ್ರಖ್ಯಾತ ನಟ ನಂದಮೂರಿ ನಟಸಿಂಹ ಬಾಲಕೃಷ್ಣ ಇಂದು ಶುಕ್ರವಾರ ಚಿಂತಾಮಣಿ ನಗರಕ್ಕೆ ಆಗಮಿಸುತ್ತಿದ್ದಾರೆ ಇವರೊಂದಿಗೆ ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ವೇದಿಕೆ ಹಂಚಿಕೊಳ್ಳೊತ್ತಿದ್ದು ಇವರೊಂದಿಗೆ ನಿರ್ದೇಶಕ ಬೋಯಪಾಟಿ ಶ್ರೀನು ಇರಲಿದ್ದಾರೆ.ನಂದಮೂರಿ ಬಾಲಕೃಷ್ಣ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಅಖಂಡ-2’ ಟ್ರೈಲರ್ ಇಂದು (ನವೆಂಬರ್ 21) ಕರ್ನಾಟಕದಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳ್ಳಲಿದ್ದು ಈ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮ ಚಿಂತಾಮಣಿಯಲ್ಲಿ ನಡೆಯುತ್ತಿದೆ.ತೆಲುಗು ಚಿತ್ರರಂಗದ ಮೆಗಾ ಹಿಟ್ ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿರುವ ‘ಅಖಂಡ-2’ ಸಿನಿಮಾಡಿಸೆಂಬರ್ 5, 2025ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದ್ದು ಚಿತ್ರದ ಪ್ರಚಾರ ಕಾರ್ಯಕ್ರಮಗಳು ಭರದಿಂದ ಸಾಗಿದ್ದು, ಇಂದು ಕರ್ನಾಟಕದ ಚಿಂತಾಮಣಿ ಬೈಪಾಸ್ ಬಳಿ ಟ್ರೈಲರ್ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿದೆ. ಸಂಜೆ 6 ಗಂಟೆಗೆ ವರ್ಣರಂಜಿತ ಕಾರ್ಯಕ್ರಮ ಆರಂಭವಾಗಲಿದೆ.ನಂದಮೂರಿ ಮತ್ತು ರಾಜ್‌ಕುಮಾರ್ ಕುಟುಂಬಗಳ ನಡುವಿನ ಆತ್ಮೀಯ ಬಾಂಧವ್ಯ ಎಲ್ಲರಿಗೂ ತಿಳಿದಿದೆ. ಅದೇ ಸ್ನೇಹ ಮತ್ತು ಗೌರವದ ಹಿನ್ನೆಲೆಯಲ್ಲಿ, ನಟ ಶಿವರಾಜ್‌ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ, ಟ್ರೈಲರ್…

Read More

ನ್ಯೂಜ್ ಡೆಸ್ಕ್:ಬಾರ್​ ಮಾಡಲು ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ರಾತ್ರೋ ರಾತ್ರಿ ಜೆಸಿಬಿ ತಂದು ಕಿಡಿಗೇಡಿಗಳು ಆಂಜನೇಯ ಸ್ವಾಮಿಯ ದೇವಸ್ಥಾನವನ್ನೇ ಧ್ವಂಸ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ‌ತಾಲೂಕಿನ ನಂದಗುಡಿ ಗ್ರಾಮದಲ್ಲಿ ನಡೆದಿದೆ.ಕೆಲ ಸ್ಥಳೀಯರು ಕಳೆದ ಕೆಲ ದಿನಗಳ ಹಿಂದೆ ದೇವಸ್ಥಾನದ ಸಮೀಪದಲ್ಲೇ ಬಾರ್​​ ನಿರ್ಮಾಣ ಮಾಡಲು ಮುಂದಾಗಿ ಅಬಕಾರಿ ಇಲಾಖೆಗೆ ಅರ್ಜಿ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು ಈ ವಿಷಯ ತಿಳಿದ ದೇವಸ್ಥಾನದ ಆಡಳಿತ ಮಂಡಳಿಯವರು ಅನುಮತಿ ನೀಡದಂತೆ ಅಬಕಾರಿ ಇಲಾಖೆಗೆ ಪತ್ರ ಬರೆದಿದ್ದಾರಂತೆ.ಉದ್ದೇಶಿತ ಬಾರ್ ಮಾಡುವ ಸಮೀಪ ಆಂಜನೇಯನ ದೇಗುಲವಿದೆ. ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಭಕ್ತರು ದೇಗುಲಕ್ಕೆ ಬರುತ್ತಾರೆ ಬಾರ್​ ನಿರ್ಮಾಣ ಮಾಡಿದ್ರೆ ತೊಂದರೆಯಾಗುತ್ತೆ ಎಂಬ ಕಾರಣಕ್ಕೆ ದೇವಸ್ಥಾನ ಆಡಳಿತ ಮಂಡಳಿ ಪತ್ರ ಬರೆದಿತ್ತು. ಇದರಿಂದ ಕಿಡಿಗೇಡಿಗಳು ರಾತ್ರೋ ರಾತ್ರಿ ದೇಗುಲವನ್ನೇ ಕೆಡವಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.ನಸುಕಿನಲ್ಲಿ ವಾಕಿಂಗ್ ಬಂದಿದ್ದವರು ದೇಗುಲ ನೆಲಸಮ ಆಗಿದ್ದನ್ನು ಗಮನಿಸಿ ನಂದಗುಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು…

Read More

ನ್ಯೂಜ್ ಡೆಸ್ಕ್:ವಿದ್ಯಾರ್ಥಿಗಳ ಕೈಯಲ್ಲಿದ್ದ ದಾರ ಜನಿವಾರ ತಗೆಸಿದ ಆರೋಪದಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರೊಬ್ಬರನ್ನು ಇಲಾಖೆ ವಜಾಗೊಳಿಸಲಾಗಿದೆ.ಉಡುಪಿ ಜಿಲ್ಲೆಯ ಕಾರ್ಕಳದ ಮಿಯ್ಯಾರು ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರಾಂಶುಪಾಲರು ಅತಿಥಿ ಶಿಕ್ಷಕರಾಗಿರುವ ದೈಹಿಕ ಶಿಕ್ಷಕ,ಕಲಬುರ್ಗಿಯ ಮೂಲದ ಮದರಶಾ ಎಸ್ ಮಕಂದಾರ್ ಅವರನ್ನು ವಜಾಗೊಳಿಸಲಾಗಿದೆ.ವಿದ್ಯಾರ್ಥಿಗಳಿಗೆ ವಿನಾಕಾರಣ ಬಸ್ಕಿ ಹೊಡೆಸುವುದು,ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಸೂಚಿಸುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.ವಿದ್ಯಾರ್ಥಿಗಳು ಶಿಕ್ಷಕರ ವರ್ತನೆಯನ್ನು ವರದಿ ಮಾಡಿದ ನಂತರ ವಿವಾದ ಭುಗಿಲೆದ್ದಿತು. ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ಶಾಲೆಯಲ್ಲಿ ಜಮಾಯಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮಕಂದಾರ್ ಕ್ಷಮೆಯಾಚಿಸಿದ್ದರೂ, ಶಾಲಾ ಆಡಳಿತವು ಅವರನ್ನು ವಜಾಗೊಳಿಸಿದೆ.

Read More

ನ್ಯೂಜ್ ಡೆಸ್ಕ್:ರಾಜ್ಯದಲ್ಲಿ ವಿಪರೀತ ಚಳಿಯ ಅನುಭವ ಆಗುತ್ತಿದ್ದು,ದೇಹ ಗಡ ಗಡ ನಡುಗುವಂತಹ ಸ್ಥಿತಿ ಬಂದಿದೆ. ಅರಂಭದ ಥಂಡಿಗೆ ಜನ ತತ್ತರಿಸಿದ್ದಾರೆ ಎತ್ತಿಟ್ಟಿದ್ದ ಕಂಬಳಿ ರಗ್ಗು ಮೊರೆ ಹೋಗಿದ್ದಾರೆ. ಹಗಲು ರಾತ್ರಿ ಎನ್ನದೇ ಶೀತಗಾಳಿಯ ಆರ್ಭಟ ಜನರನ್ನು ನಡುಗಿಸುತ್ತಿದೆ.ದಿನ ಕಳೆದಂತೆ ಚಳಿ ತೀವ್ರತೆ ಹೆಚ್ಚಾಗುತ್ತಿದ್ದು ಜನರು ಥಂಡಿಗೆ ಮುದುಡಿ ಹೋಗಿದ್ದಾರೆ. ಅದರಲ್ಲೂ ಕೋಲಾರ ಭಾಗದ ಬಯಲುಸೀಮೆ ಪ್ರದೇಶದಲ್ಲೂ ಚಳಿಯ ತೀವ್ರತೆ ಹೆಚ್ಚಾಗಿದೆ ಮುಂದಿನ ಎರಡು ದಿನಗಳ ಕಾಲ ಶೀತಗಾಳಿಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಮುಂದಿನ ಎರಡು ದಿನ ಥಂಡಿ ಹೆಚ್ಚಾಗಲಿದ್ದು.ಇನ್ನೂ ಒಂದು ವಾರಕಾಲ ಚಳಿಯ ವಾತಾವರಣ ಮುಂದುವರೆಯಲಿದೆ ಎನ್ನಲಾಗಿದ್ದು ಈ ವರ್ಷ ವಾಡಿಕೆಗಿಂತ ಮುಂಚಿತವಾಗಿ ಚಳಿಗಾಲ ಎಂಟ್ರಿಯಾಗಿದೆ ಎನ್ನುತ್ತಾರೆ.ಅರಂಭದಲ್ಲೆ ಜನರು ಹೈರಾಣಾಗಿದ್ದಾರೆ. ಚಳಿಗಾಲದ ಸಲಹೆಗಳುಚಳಿಗಾಲದಲ್ಲಿ ತಂಪಾದ ಗಾಳಿ, ಕಡಿಮೆ ತಾಪಮಾನ ಮತ್ತು ಶುಷ್ಕ ಗಾಳಿಯನ್ನು ತರುತ್ತದೆ, ಇದು ನಮ್ಮ ಆರೋಗ್ಯ ಮತ್ತು ದೈನಂದಿನ ದಿನಚರಿಯ ಮೇಲೆ ಪರಿಣಾಮ ಬೀರುತ್ತದೆ. ಕೆಲವು ಸರಳ ಸಲಹೆಗಳನ್ನು ಅನುಸರಿಸುವ ಮೂಲಕ, ನೀವು ಈ ಕಾಲದಲ್ಲಿ ಬೆಚ್ಚಗಿರಲು, ಆರೋಗ್ಯವಾಗಿರಲು…

Read More

ನ್ಯೂಜ್ ಡೆಸ್ಕ್:ರಾಜ್ಯದ ಎಲ್ಲಾ ಕೆಲಸಗಳಲ್ಲೂ ಹಿಂದಿಯವರದೆ ಮೆಲೂಗೈ ಆಗಿದೆ ಅದು ಮಾಲ್ ಇರಬಹುದು ಆಫಿಸ್ ಬಾಯ್ ಆಗಿರಬಹುದು ಸಾಫ್ಟವೇರ್, ಬಯೋಟೆಕ್ನಾಲಜಿ, ಫೈನಾನ್ಸ್, ಎಚ್ಆರ್ ಉದ್ಯೋಗ ಕ್ಷೇತ್ರಗಳಲ್ಲಿ ಹಿಂದಿಯವರ ಕಾರುಬಾರು ಜೋರಾಗಿದೆ, ಕಾರ್ಪೆಂಟರಿಂಗ್, ಪೈಟಿಂಗ್, ಬ್ಯಾಂಕಿಂಗ್, ಟ್ರಾನ್ಸಪೋರ್ಟ್ ಕ್ಷೇತ್ರಕ್ಕೂ ವಿಸ್ತರಿಸಲಾರಂಭಿಸಿದ್ದು ಗ್ರಾಮೀಣ ಭಾಗದಲ್ಲಿ ಇಟ್ಟಿಗೆ ಭಟ್ಟಿ, ಹಸು ಸಾಕಾಣಿಕೆ ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಹಿಂದಿ ವಾಲಗಳದೆ ಪಾರು ಪತ್ಯೆ.ಬೆಂಗಳೂರಿನ ಹೋಟೆಲ್ ಗಳಿಗೂ ಹಿಂದಿ ವಾಲಗಳು ಎಂಟ್ರಿ ಕೊಟ್ಟಿದ್ದು ಆರಂಭದಲ್ಲಿ ಸ್ವಚ್ಚತೆಯಲ್ಲಿ ಮಾತ್ರ ಇದ್ದ ಇವರ ಕಾರ್ಯ ಇತ್ತಿಚಿಗೆ ದರ್ಶಿನಿ ಹೋಟೆಲ್ ಉಡುಪಿ ಹೋಟೆಲ್ ಫಾಸ್ಟ್ ಫುಡ್ ಸೆಂಟರ್ ಗಳಲ್ಲಿ ಹಿಂದಿ ಭಾಷಿಕರು ಕೌಂಟರ್ ನಿಂದ ಹಿಡಿದು ಎಲ್ಲಾ ಕಡೆ ವಿಭಾಗಗಳಲ್ಲೂ ತುಂಬಿದ್ದಾರೆ.ನಮ್ಮ ರಾಜ್ಯದ ಹೆಮ್ಮೆಯ ತಿಂಡಿಗಳಾದ ಇಡ್ಲಿ ವಡೆ ದೋಸೆ ಸೇರಿದಂತೆ ಇನ್ನಿತರೆ ತಿಂಡಿ ತಿನಿಸುಗಳನ್ನು ಮಾಡುವಲ್ಲಿ ಹಿಂದಿವಾಲಗಳು ಸೈ ಎನಿಸಿಕೊಂಡಿದ್ದಾರಂತೆ ಹಿಗೆಂದು ಕೆಲ ಹೋಟೆಲ್ ಮಾಲಿಕರು ಹೇಳುತ್ತಾರೆ.ಹಿಂದೆಲ್ಲಾ ದರ್ಶಿನಿ ಹೋಟೆಲ್ ಗಳು ಕರಾವಳಿ ಭಾಗದವರದೆ ಹೆಚ್ಚಾಗಿತ್ತು ಅಲ್ಲಿ ಅಡುಗೆ ಭಟ್ಟರಿಂದ…

Read More

ಇದೊಂದು ಮಾನವೀಯತೆ ಎತ್ತಿಹಿಡಿಯುವ ಕಥೆ.ಝಣ ಝಣ ಕಾಂಚಾಣದ ಲೋಕದಲ್ಲಿ ದುಡ್ಡೆ ದೊಡ್ಡಪ್ಪ ದೌಲತ್ತು ಅವರಪ್ಪ ಎಂಬ ಭ್ರಮಾ ಲೋಕದಲ್ಲಿ ತೆಲುತ್ತಿರುವ ಕಾಲಘಟ್ಟದಲ್ಲಿ ಕಸದ ತೊಟ್ಟಿಯಲ್ಲಿದ್ದ ನವಜಾತ ಶಿಶುವಿಗೆ ಜೀವನೀಡಿದ ವೈದ್ಯೆಯರು ಮತ್ತೊಂದು ಪ್ರಕರಣದಲ್ಲಿ ಸಾಮಾನ್ಯ ಕುಟುಂಬದ 19 ದಿನದ ನವಜಾತಾ ಶಿಶು ಉಸಿರಾಟ ನಿಲ್ಲಿಸಿ ದೇಹದ ಸ್ವಾಧಿನ ಕಳೆದುಕೊಂಡಿದ್ದ ಶಿಶುವಿಗೆ ಪ್ರಾಣ ನೀಡುವ ಮೂಲಕ ದೊಡ್ಡಬಳ್ಳಾಪುರದ ಸರ್ಕಾರಿ ವೈದ್ಯೆಯರು ಮಹಾನ್ ಮಾನವೀಯತೆ ಮೆರೆದಿರುವ ಅಪರೂಪದ ಘಟನೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ:ಇದೊಂದು ಅಪರೂಪದ ಸೇವೆ ಎನ್ನಬಹುದು, ದೊಡ್ಡಬಳ್ಳಾಪುರ ಭಾಗದಲ್ಲಿ ಕೂಲಿ-ನಾಲಿ ಮಾಡಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆದರ್ಶ ಮತ್ತು ಗುಡಿಯ ಕುಮಾರಿ ದಂಪತಿಗಳ 19 ದಿನಗಳ ನವಜಾತಾ ಶಿಶು ಉಸಿರಾಟ ನಿಂತು ದೇಹದ ಸಂಪೂರ್ಣ ಸ್ವಾದಿನ ಕಳೆದುಕೊಂಡ ಸ್ಥಿತಿಯಲ್ಲಿ ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಗೆ ತಂದಿದ್ದಾರೆ ಅಸಾಯಕರಾದ ಪೋಷಕರು ಮಗು ನಮ್ಮ ಪಾಲಿಗಿಲ್ಲ ಎಂದು ಕೈಚಲ್ಲಿ ಕೂತಿದ್ದರು ಆದರೆ ಮಕ್ಕಳ ತಜ್ಞರಾದ ಡಾ.ಸವಿತ ಹಾಗು ಡಾ. ಗಾಯತ್ರಿ.…

Read More

ಶ್ರೀನಿವಾಸಪುರ:ಅಯ್ಯಪ್ಪ ಮಾಲಧಾರಿ ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಸರ್ಕಾರಿ ಶಾಲೆ ಶಿಕ್ಷಕನನ್ನು ಗ್ರಾಮಸ್ಥರು ತರಾಟೆಗೆ ತಗೆದುಕೊಂಡು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಪುಲಗೂರಕೋಟೆ ಸರ್ಕಾರಿ ಉನ್ನತೀಕರಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.ತಾಲೂಕಿನ ಪುಲಗೂರಕೋಟೆ ಸರ್ಕಾರಿ ಉನ್ನತೀಕರಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ8 ನೇ ತರಗತಿ ವಿಧ್ಯಾರ್ಥಿಗಳು ಇದ್ದು, ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದಿದ್ದಾರೆ ಇದನ್ನು ವಿರೋಧಿಸಿದ ಶಾಲಾ ಮುಖ್ಯ ಶಿಕ್ಷಕ ರವಿಕುಮಾರ್ ಮಾಲಧಾರಿ ವಿದ್ಯಾರ್ಥಿಗಳನ್ನು ಕರೆದು ನನ್ನ ಅನುಮತಿ ಪಡೆಯದೇ ಅಯ್ಯಪ್ಪ ಮಾಲೆ ಧರಿಸಿದ್ದೀರಾ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ.ಈ ಬಗ್ಗೆ ಪೋಷಕರಾದ ಮಧುಸೂದನ, ಆಂಜಪ್ಪ ಹಾಗು ಗ್ರಾಮಸ್ಥರು ಶಾಲೆ ಬಳಿ ತೆರಳಿ ಮುಖ್ಯ ಶಿಕ್ಷಕ ರವಿಕುಮಾರ್ ಅವರನ್ನು ತೀವ್ರವಾಗಿ ತರಾಟೆಗೆ ತಗೆದುಕೊಂಡಿದ್ದಾರೆಶಿಕ್ಷಕ ಉದ್ಧಟತನ ವರ್ತನೆ ದೂರುಪೋಷಕರು ಹೇಳುವಂತೆ ನಾವು ಪ್ರತಿ ವರ್ಷ ಅಯ್ಯಪ್ಪ ದರ್ಶನಕ್ಕೆ ಶಬರಿಮಲೆಗೆ ಹೋಗಲು ಅಯ್ಯಪ್ಪ ಮಾಲೆ ಧರಿಸುತ್ತೆವೆ ಮಕ್ಕಳಿಗೆ ಮಾಲೆ…

Read More

ಕೋಲಾರ:ರಾಜ್ಯ ಪ್ರವಾಸ ಮಾಡಿದ ಸಂದರ್ಭದಲ್ಲಿ  ಜೆಡಿಎಸ್ ಬಿಜೆಪಿ ಕಾರ್ಯಕರ್ತರಲ್ಲಿ ಸೌಹಾರ್ದತೆಯ ವಾತಾವರಣ ಇದೆ ಎಂಬುದು ತಿಳಿಯಿತು. ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.ಅವರು ಕೋಲಾರದ ಸಂಸದ ಮಲ್ಲೇಶ್ ಬಾಬು ಅವರ ತಾಯಿ ಕೋಲಾರ ಜಿಲ್ಲಾಪಂಚಾಯತಿ ಮಾಜಿ ಅಧ್ಯಕ್ಷೆ ಮಂಗಮ್ಮ ಮುನಿಸ್ವಾಮಿ ಅವರು 75 ನೇ ಜನುಮದಿನ ಸಂದರ್ಭದಲ್ಲಿ ಆಯೋಜಿಸಿದ್ದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಶ್ರೀನಿವಾಸಪುರದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಆರಿಕುಂಟೆ ಲಕ್ಷ್ಮಣರೆಡ್ಡಿ ಅವರು ಅಣ್ಣನ ಮಗಳ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ನಿಖಿಲ್ ರಾಜ್ಯಕ್ಕೆ ಕುಮಾರಣ್ಣನ ನಾಯಕತ್ವ ಬೇಕು ಎಂದು ರಾಜ್ಯದ  ಉದ್ದಗಲಕ್ಕೂ ಜನತೆ ಬಯಸುತ್ತಿದ್ದಾರೆ ಎಂದ ಅವರು ಶಾಸಕ ವೆಂಕಟಶಿವಾರೆಡ್ಡಿ ಅನುದಾನ ತಾರತಮ್ಯ ವಿರೋಧಿಸಿ ನ್ಯಾಯಾಲಯದ ಮೆಟ್ಟಿಲು ಹತ್ತಿರುವುದನ್ನು ಪ್ರಸ್ತಾಪಿಸಿ ಮಾತನಾಡಿ ಕುಮಾರಣ್ಣ ಅಧಿಕಾರವಧಿಯಲ್ಲಿ ಆಡಳಿತದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿರಲಿಲ್ಲ ರೈತರ ಸಾಲ ಮನ್ನಾ ಮಾಡಲಾಯಿತು ಆ ಪಕ್ಷ ಈ ಪಕ್ಷ ಅಂತ ತಾರತಮ್ಯ ಮಾಡದೆ ಎಲ್ಲಾ ರಾಜಕೀಯ…

Read More