ನ್ಯೂಜ್ ಡೆಸ್ಕ್:ಚಿಕ್ಕಬಳ್ಳಾಪುರ-ಪುಟ್ಟಪರ್ತಿ(ಶ್ರೀ ಸತ್ಯ ಸಾಯಿ ನಿಲಯಂ) ನಡುವಿನ 103 ಕೀ.ಮಿ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ₹713.33 ಕೋಟಿ ಮಂಜೂರು ಮಾಡುವ ಮೂಲಕ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ.ನೈಋತ್ಯ ರೈಲ್ವೆಯಲ್ಲಿ ಇದೊಂದು ಮಹತ್ತರ ಸಂಪರ್ಕದ ಬೆಳವಣಿಗೆ ಮತ್ತು ಆರ್ಥಿಕ ಬೆಳವಣಿಗೆಗೆ ನೆರವಾಗುತ್ತದೆ ಎನ್ನಲಾಗಿದೆ.ಬೆಂಗಳೂರು-ಚಿಕ್ಕಬಳ್ಳಾಪುರ-ಚಿಂತಾಮಣಿ-ಶ್ರೀನಿವಾಸಪುರ-ಕೋಲಾರ-ಬಂಗಾರಪೇಟೆ ನಡುವಿನ ರೈಲು ಮಾರ್ಗ ಜಾರಿಯಲ್ಲಿದ್ದುಬಂಗಾರಪೇಟೆ ರೈಲ್ವೆ ಜಂಕ್ಷನ್ ನಿಂದ ಚಿಕ್ಕಬಳ್ಳಾಪುರಕ್ಕೆ ರೈಲುಗಳು ಒಡಾಡಿದ್ದೆ ಆದರೆ ತಮಿಳುನಾಡು-ಕರ್ನಾಟಕ-ಆಂಧ್ರಪ್ರದೇಶದ ನಡುವಿನ ರೈಲು ಮಾರ್ಗ ಮಹತ್ತರ ಬೆಳವಣಿಗೆಗೆ ಕಾರಣವಾಗುತ್ತದೆ ಮತ್ತು ಸಾರಿಗೆ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುತ್ತದೆ ಇದರಿಂದ ಬೆಂಗಳೂರು-ಆಂಧ್ರ ಸಂಪರ್ಕದ ರಸ್ತೆಗಳ ಮೇಲೆ ಒತ್ತಡ ಕಡಿಮೆ ಆಗಲಿದೆ ಎಂದು ಸಾರಿಗೆ ತಜ್ಞರು ಹೇಳುತ್ತಾರೆ. ನೂತನ ರೈಲು ಮಾರ್ಗ ಹೀಗಿರುತ್ತದೆ.ಚಿಕ್ಕಬಳ್ಳಾಪುರ-ಪುಟ್ಟಪರ್ತಿ ನಡುವಿನ ನೂತನ ರೈಲು ಮಾರ್ಗ ಈ ಊರುಗಳನ್ನು ಸಂಪರ್ಕಿಸಲಿದ್ದು ಚಿಕ್ಕಬಳ್ಳಾಪುರ-ದಿಬ್ಬೂರು -ವರ್ಲಕೊಂಡ-ಬಾಗೇಪಲ್ಲಿ-ಚಿಲುಮತ್ತೂರು -ಗೋರಂಟ್ಲ-ಪೆದ್ದಪಲ್ಲಿ-ಕೊತ್ತಪಲ್ಲಿ-ಪುಟ್ಟಪರ್ತಿ ಪ್ರಶಾಂತಿ ನಿಲಯಂ ತಲುಪಲಿದ್ದು ಅಲ್ಲಿಂದ ಈಗಾಗಲೆ ಧರ್ಮಾವರಂಗೆ ರೈಲು ಮಾರ್ಗ ಚಾಲ್ತಿಯಲ್ಲಿದೆ.ಇದರಿಂದ ಚಿಕ್ಕಬಳ್ಳಾಪುರ-ಪುಟ್ಟಪರ್ತಿ ನಡುವಿನ ಪ್ರದೇಶಗಳಲ್ಲಿ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ಸಹಕಾರಿಯಾಗಲಿದೆ ದೇಶಾದ್ಯಂತದ ಭಕ್ತರು…
Author: Srinivas_Murthy
ನ್ಯೂಜ್ ಡೆಸ್ಕ್:ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇತ್ತೀಚೆಗೆ ತೆಲಗು ಸ್ಟಾರ್ ವಿಕ್ಟರ್ ವೆಂಕಟೇಶ್ ಅವರ ಹೈದರಾಬಾದ್ ಮನೆಯಲ್ಲಿ ತೆಲಗು ಹಿರಿಯ ನಟರು ಪ್ರಭಾವಿ ನಿರ್ದೇಶಕರು ಹಾಗು ಪ್ರಸಿದ್ದ ನಿರ್ಮಾಪಕರನ್ನು ಭೇಟಿಯಾಗಿ ಮಾತು ಮಂಥನ ನಡೆಸಿದ್ದಾರೆ.ಭೇಟಿ ಸಮಯದಲ್ಲಿ ಆರ್ಎಸ್ಎಸ್ ನಡೆಸುತ್ತಿರುವ ಸೇವಾ ಕಾರ್ಯಕ್ರಮಗಳ ಬಗ್ಗೆ ತೆಲಗು ಸಿನಿಮಾ ಮಂದಿಯೊಂದಿಗೆ ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) 100 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಸಂಸ್ಥೆಯ ಸರ್ ಸಂಘಚಾಲಕ್ ಮೋಹನ್ ಭಾಗವತ್ ಅವರು ದೇಶಾದ್ಯಂತ ವಿವಿಧ ನಗರಗಳಲ್ಲಿ ಹಲವಾರು ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ.ಇದರ ಭಾಗವಾಗಿ, ಅವರು ಇತ್ತೀಚೆಗೆ ಹೈದರಾಬಾದ್ನಲ್ಲಿ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.ಅವರು ಮೂರು ದಿನಗಳ ಹಿಂದೆ ನೊವಾಟೆಲ್ನ ಎಚ್ಐಸಿಸಿಯಲ್ಲಿ ಚಲನಚಿತ್ರ, ಸಾಹಿತ್ಯ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳ ಪ್ರಸಿದ್ಧ ವ್ಯಕ್ತಿಗಳನ್ನು ಭೇಟಿಯಾಗಿದ್ದರು ಅದಕ್ಕೂ ಒಂದು ದಿನ ಮೊದಲು,ತೆಲಗು ಸಿನಿಮಾ ರಂಗದ ಹಿರಿಯ ನಟ ವಿಕ್ಟರಿ ವೆಂಕಟೇಶ್ ಅವರ ಮನೆಯಲ್ಲಿ ತೆಲಗು ಚಲನಚಿತ್ರರಂಗದ ಪ್ರಮುಖರನ್ನು ಭೇಟಿಯಾದರು.ಈ ಸಂದರ್ಭದಲ್ಲಿ ನಾಯಕ ನಟರಾದ ಅಕ್ಕಿನೇನಿ ನಾಗಾರ್ಜುನ,ವಿಕ್ಟರಿ ವೆಂಕಟೇಶ್, ನಾನಿ,…
ಶ್ರೀನಿವಾಸಪುರ: ಅಪಘಾತ ತಪ್ಪಿಸಲು ಹೋದ ಪೊಲೀಸ್ ವಾಹನ ರಸ್ತೆ ವಿಭಜದ ಮೇಲೆ ಹತ್ತಿ ವಿದ್ಯತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾರಿ ಗಾತ್ರದ ಬೀದಿ ದೀಪದ ವಿದ್ಯತ್ ಕಂಬ ಉರುಳಿ ಬಿದ್ದ ಘಟನೆ ಇಂದು ಮಧ್ಯಾನ್ಹ ಪಟ್ಟಣದ ಎಂ.ಜಿ.ರಸ್ತೆಯಲ್ಲಿ ಅವರೆಕಾಯಿ ಮಂಡಿಗಳ ಬಳಿ ನಡೆದಿರುತ್ತದೆ.ಅದೃಶ್ಯಾವತ್ ಯಾವುದೆ ಸಾವು ನೋವು ಸಂಭವಿಸಿಲ್ಲ ದ್ವಿಚಕ್ರ ವಾಹನ ಸವಾರ ಮಹಿಳೆಗೆ ತಲೆಗೆ ಪೆಟ್ಟಾಗಿದ್ದು ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ರಸ್ತೆಯಲ್ಲಿ ಅವರೆಕಾಯಿ ಮಂಡಿ ರಸ್ತೆ ಸಂಚಾರಕ್ಕೆ ಕಂಟಕಎಂ.ಜಿ.ರಸ್ತೆಯಲ್ಲಿ ಅವರೆಕಾಯಿ ಮಂಡಿ ನಡೆಸುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ಸಮಸ್ಯೆ ಉಂಟಾಗಿದ್ದು ಅವರೆಕಾಯಿ ಮಂಡಿಗಳನ್ನು ಸ್ಥಳಾಂತರಿಸುವ ಬಗ್ಗೆ ಪರ-ವಿರೋದ ವ್ಯಕ್ತವಾದ ಹಿನ್ನಲೆಯಲ್ಲಿ ತಿಕ್ಕಾಟ ವಿವಾದಕ್ಕೆ ಕಾರಣವಾಗಿ ರಾಜಕೀಯ ತಿರವು ಪಡೆದುಕೊಂಡು ಅವರೆಕಾಯಿ ಮಂಡಿಗಳು ಎಂ.ಜಿ.ರಸ್ತೆಯಲ್ಲೆ ಮುಂದು ವರೆದಿತ್ತು ಇದು ಸ್ಥಳಿಯ ಜನರಿಗೆ ನುಂಗಲಾರದ ತುತ್ತಾಗಿ ಪರಣಮಿಸಿತ್ತು.ಅವರೆಕಾಯಿ ಮೂಟೆಗಳನ್ನು ಲೋಡ್ ಮಾಡಲು ನಿಲ್ಲಿಸುವ ಟೆಂಪೋ,ಆಟೋ ಟ್ರ್ಯಾಕ್ಟರ್ ಗಳಿಂದ ರಸ್ತೆ ನಿಯಮ ಉಲ್ಲಂಘನೆಯಾಗಿ ರಸ್ತೆ ಸಂಚಾರಕ್ಕೆ , ಸಮಸ್ಯೆ ಉಂಟಾಗಿ ಇಕ್ಕಟ್ಟಿನಲ್ಲೇ ವಾಹನ ಸಂಚಾರ…
ಶ್ರೀನಿವಾಸಪುರ:ಕೋಲಾರದ ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಎರಡು ನಿಮಿಶ ಮೌನಾಚರಣೆ ಮಾಡಿದ ಶ್ರೀನಿವಾಸಪುರದ ಪತ್ರಕರ್ತರು ಶ್ರದ್ದಾಂಜಲಿ ಸಲ್ಲಿಸಿದರು.ಈ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಮಾತನಾಡಿ ಅಗಲಿದ ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ್ ಅವರನ್ನು ಸ್ಮರಿಸುವುದು ಸಂಘದ ಕರ್ತವ್ಯವಾಗಿದೆ. ಎಲ್ಲರೊಂದಿಗೆ ಬೆರೆತು ಸಾಮಾಜಿಕ ಬದ್ಧತೆಯನ್ನು ಮೆರೆದವರು.ಅವರು ಜಿಲ್ಲೆಯ ಪತ್ರಿಕೋದ್ಯಮಕ್ಕೆ ನೀಡಿರುವ ಕೊಡುಗೆ ಅಪಾರ ಅನನ್ಯ ಎಂದರು. ಹಿರಿಯ ಪತ್ರಕರ್ತ ಚೌಡರೆಡ್ಡಿ ಮಾತನಾಡಿ ಎಂ.ಜಿ.ಪ್ರಭಾಕರ್ ಅವರು ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಸಾಮಾಜಿಕ ಬದ್ಧತೆ ಕಾಳಜಿ ಉಳ್ಳ ಪತ್ರಕರ್ತರಾಗಿದ್ದರು ಎಂದು ಅವರ ಗುಣಗಾನ ಮಾಡಿದರು.ಹಿರಿಯ ಪತ್ರಕರ್ತರಾದ ಚೌಡಪ್ಪ ಹಾಗು ಕೆ.ವಿ.ನಾಗರಾಜ್ ಮಾತನಾಡಿದರು.ಕಾರ್ಯಕ್ರಮದಲ್ಲಿ ಹಾಲು ಒಕ್ಕೂಟದ ನಿರ್ದೇಶಕ ಕಲ್ಲೂರುಮಂಜುನಾಥರೆಡ್ಡಿ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಚುಂಬಕವಾಣಿ ಲಕ್ಷ್ಮಣ್, ಖಜಾಂಜಿ ಲಕ್ಷ್ಮಣಬಾಬು,ಕೋಲಾರ ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕ ಉಪೇಂದ್ರ, ಪತ್ರಕರ್ತರಾದ ವೇಣೂಗೋಪಾಲ್, ಕಿಶೋರ್, ಸುರೇಶ್ ಮುಂತಾದವರು ಇದ್ದರು.ಮುಳಬಾಗಿಲು ಪತ್ರಕರ್ತರಿಂದ ಶ್ರದ್ಧಾಂಜಲಿ.ಅಗಲಿದ ಹಿರಿಯ ಪತ್ರಕರ್ತ ಪ್ರಭಾಕರ್ ಅವರಿಗೆ ಮುಳಬಾಗಿಲು ತಾಲೂಕು ಕಾರ್ಯನಿರತ…
ಕೋಲಾರ:ರಾಜ್ಯ ಸರ್ಕಾರ ಕರ್ನಾಟಕ ಆಡಳಿತ ಸೇವೆಯ (ಕೆಎಎಸ್-ಕಿರಿಯ ಶ್ರೇಣಿ) ಇಬ್ಬರು ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ಡಿಪಿಎಆರ್) ಈ ಕುರಿತು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ನ ವಿಶೇಷ ಭೂಸ್ವಾಧೀನಾಧಿಕಾರಿ-09 ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಜಂಬಗಿ ರೇಣುಕಾಪ್ರಸಾದ್ ದಿಲೀಪ್ ಅವರನ್ನು ಕೋಲಾರ ಉಪ ವಿಭಾಗಾಧಿಕಾರಿಯನ್ನಾಗಿ(AC) ನೇಮಕ ಮಾಡಲಾಗಿದೆ. ಕೋಲಾರ ಎಸಿಯಾಗಿದ್ದ ಡಾ. ಮೈತ್ರಿ ಹೆಚ್.ಪಿ.ಎಸ್. ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ರೇಣುಕಾಪ್ರಸಾದ್ ಅವರನ್ನು ನಿಯೋಜಿಸಲಾಗಿದೆ.ಈ ಆದೇಶದ ಅನ್ವಯ, ಸ್ಥಳ ನಿರೀಕ್ಷಣೆಯಲ್ಲಿರುವ ಅಧಿಕಾರಿಗಳಿಗೆ ತಕ್ಷಣವೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಥವಾ ತಮ್ಮ ಮಾತೃ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ.
ಬೆಂಗಳೂರು:ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ದಿಸಿ ಸೋತಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಹೊರಹಾಕಿದೆ. ಕೆಲ ದಿನಗಳ ಹಿಂದೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ ಆರೋಪ ಹೊತ್ತಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಮಾತನಾಡಿದ ಆಡಿಯೋ ವೈರಲ್ ಆಗಿತ್ತು ಇದನ್ನು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದವು.ರಾಜೀವ್ ಗೌಡ ವರ್ತನೆ ಬಗ್ಗೆ ಉನ್ನತ ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಸುಧಾಕರ್ ಸಹ ಬೇಸರ ವ್ಯಕ್ತಪಡಿಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ ನಮ್ಮ ಪಕ್ಷದವರೇ ಆದರೂ ಇಂತಹ ವರ್ತನೆಯನ್ನು ಪಕ್ಷ ಎಂದಿಗೂ ಸಹಿಸುವುದಿಲ್ಲ. ರಾಜೀವ್ ಗೌಡ ಅವರ ಆಡಿಯೋ ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ ಅಧಿಕಾರಿಗಳ ಗೌರವಕ್ಕೆ ಧಕ್ಕೆ ತರುವಂತಾಗಿದೆ. ಅಧಿಕಾರಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದರು.ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ರಾಜೀವ್…
ಶ್ರೀನಿವಾಸಪುರ:ಅರಣ್ಯ ಭೂಮಿ ಒತ್ತುವರಿ ವಿಚಾರದಲ್ಲಿ ಜನಪ್ರತಿನಿಧಿಗಳಾದ ನಾವು ಜನರ ಎದರು ಪ್ರಮಾಣಿಕರಾಗಿ ಸ್ಪಷ್ಟತೆಯಿಂದ ನಡೆದುಕೊಳ್ಳಬೇಕು ಎಂದು ಶಾಸಕ ವೆಂಕಟಶಿವಾರೆಡ್ಡಿ ಅವರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಹೇಳಿದರು.ಅವರು ಇಂದು ಶನಿವಾರ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ ಸಮಕಾಲಿನ ರಾಜಕಾರಣಿಗಳಾದ ನಾವಿಬ್ಬರು ಇವತ್ತು ರಾಜಕಾರಣದ ಸಂಧ್ಯಾಕಾಲದಲ್ಲಿ ಇದ್ದೀವಿ ನಮ್ಮ ಸಾರ್ವಜನಿಕ ಜೀವನದಲ್ಲಿ ಮಾತು ನಡವಳಿಕೆ ಸ್ಪಷ್ಟವಾಗಿರಬೇಕು ಸತ್ಯ ಮುಚ್ಚಿಟ್ಟು ಮಾತನಾಡಬಾರದು ಎಂದ ಅವರು ಕಾನೂನು ಬದ್ದವಾಗಿ ಭೂಮಿಯ ಹಕ್ಕನ್ನು ಪಡೆದು ಕೊಂಡಿದ್ದ ರೈತರನ್ನು ಒಕ್ಕಲೆಬ್ಬಿಸುವ ಮೂಲಕ ಅರಣ್ಯ ಇಲಾಖೆ ತೊಂದರೆ ನೀಡುತ್ತಿರುವ ವಿಷಯ ಪ್ರಸ್ತಾಪಿಸಿ ಮಾತನಾಡಿ ಇವತ್ತು ರೈತರು ಎದರಿಸುತ್ತಿರುವ ಜಮೀನು ಸಮಸ್ಯೆಗೆ ಅವರು ಅನುಭವಿಸುತ್ತಿರುವ ಕಷ್ಟಗಳಿಗೆ ಕಾರಣ ಯಾರು ಎಂಬುದು ಸ್ಪಷ್ಟವಾಗಬೇಕಿದೆ ಎಂದು ವೆಂಕಟಶಿವಾರೆಡ್ಡಿ ಹೇಳಿದರು. ರೈತರ ಜಮೀನು ಅರಣ್ಯ ಇಲಾಖೆಗೆ ಇಂಡಿಕರಣ ಆಗಿರುವುದು ಶ್ರೀನಿವಾಸಪುರ ತಾಲೂಕಿನಲ್ಲಿ ಮಾತ್ರ ಇದು ಗಂಭೀರವಾದ ವಿಚಾರ,ರೈತರ ಭೂಮಿ ಇಂಡಿಕರಣವಾದಾಗ 2021 ರಲ್ಲಿ ರಮೇಶ್ ಕುಮಾರ್ ಶಾಸಕರಾಗಿದ್ದರು, ಇದಾದ ನಂತರ ಸುಮಾರು ಏಳು…
ಶ್ರೀನಿವಾಸಪುರ:ಸಂಕ್ರಾಂತಿ ಹಬ್ಬದ ಹಿನ್ನಲೆಯಲ್ಲಿ ಇಂದು ಪಟ್ಟಣದಲ್ಲಿರುವ ರಾಸುಗಳಿಗೆ ಅಲಂಕಾರ ಮಾಡಿ ಸಂಪ್ರದಾಯದಂತೆ ಅವುಗಳನ್ನು ಮುಳಬಾಗಿಲು ರಸ್ತೆಯಲ್ಲಿ ಹೊಗಳಗೆರೆ ತಿರುವಿನಲ್ಲಿ ಇರುವ ಕಾಟಮರಾಯ ದೇವಾಲಯದ ಬಳಿ ಕರೆತಂದು ಪೂಜಿಸುವ ಮೂಲಕ ಸಂಭ್ರಮದಿಂದ ಸಂಕ್ರಾಂತಿಯನ್ನ ಆಚರಿಸಲಾಯಿತು. ಕಿಚ್ಚು ಹಾಕಿ ಸಂಭ್ರಮಿಸಿದರು.ಸಿಂಗರಿಸಿದ ಹಸು ಮತ್ತು ಎತ್ತುಗಳನ್ನು ಗೋಧೂಳಿ ಲಗ್ನದಲ್ಲಿ ಕಾಟಮರಾಯ ದೇವಾಲಯದ ಆವರಣಕ್ಕೆ ಕರೆತರಲಾಗುತ್ತದೆ ಅಲ್ಲಿ ಸಂಪ್ರದಾಯದಂತೆ ಅಪ್ಪೂರೊಳ್ಳು ಕುಟುಂಬಿಕರು ಗೋವುಗಳ ಕಾಲು ತೊಳೆದು ಪೂಜೆ ಮಾಡುತ್ತಾರೆ ನಂತರ ವಾಡಿಕೆಯಂತೆ ದೇವಾಲಯದ ಆವರಣದಲ್ಲಿ ಬೃಹತ್ ಎತ್ತರದಲ್ಲಿ ಹಾಕಲಾದ ಕಟ್ಟಿಗೆಗಳಿಗೆ ಅಗ್ನಿ ಸ್ಪರ್ಷ ಮಾಡಿ ಕಿಚ್ಚು ಹಚ್ಚುತ್ತಾರೆ ಬೆಂಕಿ ಉರಿದಷ್ಟು ರೈತರ ಜಾನುವಾರುಗಳ ಶ್ರೇಯಸ್ಸು ಹೆಚ್ಚುತ್ತದೆ ಮತ್ತು ರಕ್ಷಣೆ ಸಿಗುತ್ತದೆ ಎಂಬ ಉದ್ದೇಶದಿಂದ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಕಟ್ಟಿಗೆ ರಾಶಿ ಹಾಕಿ ಕಿಚ್ಚನ್ನು ಉರಿಸಲಾಗುತ್ತದೆ ಎಂದು ಊರಿನ ಹಿರಿಯರು ಸಂಪ್ರದಾಯದ ಮಹತ್ವ ತಿಳಿಸಿಕೊಟ್ಟರು.ನಮ್ಮ ಸಂಪ್ರದಾಯ ಸಂಸೃತಿ ಮುಂದಿನ ಪೀಳಿಗೆಗೆ ಕರೆದೊಯುವಂತಾಗಬೇಕು ಮುಂದಿನ ವರ್ಷಕ್ಕೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರಾಸುಗಳನ್ನು ಇಲ್ಲಿಗೆ ಕರೆ ತರಲು ಯುವ ಸಮುದಾಯ ಮುಂದೆ…
ಸಿನಿ ಡೆಸ್ಕ್:ತೆಲಗು ಸಿನಿಮಾ ರಂಗದಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿರೋ ನಿರ್ದೇಶಕ most lucky director ಅನಿಲ್ ರಾವಿಪುಡಿ ನಿರ್ದೇಶನದ ಮತ್ತೊಂದು ಸಿನಿಮಾ ರಿಲೀಸ್ ಆಗಿದೆ. ಮೆಗಾಸ್ಟಾರ್ ಚಿರಂಜೀವಿ ನಟಿಸಿರುವ “ಮನ ಶಂಕರ ವರಪ್ರಸಾದ್ ಗಾರು” ಸಿನಿಮಾದಲ್ಲಿ , ಸೌತ್ ಲೇಡಿ ಸೂಪರ್ಸ್ಟಾರ್ ನಯನತಾರಾ, ವಿಕ್ಟರಿ ವೆಂಕಟೇಶ್, ಕ್ಯಾಥರೀನ್ ಟ್ರೆಸಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜನವರಿ 12 ರಂದು ಸೋಮವಾರ ವಿಶ್ವದಾದ್ಯಂತ ರಿಲೀಸ್ ಆಗಿದೆ.ಬಾಲಿವುಡ್ನ ಹಿರಿಯ ನಟಿ ಜರೀನಾ ವಹಾಬ್, ಸಚಿನ್ ಖೇಡೆಕರ್, ಶರತ್ ಸಕ್ಸೇನಾ, ಹರ್ಷವರ್ಧನ್, ಅಭಿನವ್ ಗೋಮಠಂ ಮತ್ತು ರಘು ಬಾಬು ಅಂತಹ ಜನರು ಈ ಸಿನಿಮಾದಲ್ಲಿ ನಟಿಸಿರೋದು ಪ್ರಮುಖ ಆಕರ್ಷಣೆಯಾಗಿದ್ದು ಅನಿಲ್ ರಾವಿಪುಡಿ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸಾಹು ಗಾರಾಪಾಟಿ ಮತ್ತು ಸುಸ್ಮಿತಾ ಕೊನಿದೇಲಾ ಬಂಡವಾಳ ಹೂಡಿದ್ದಾರೆತಾಂತ್ರಿಕ ವರ್ಗದಲ್ಲಿ ಕ್ಯಾಮೆರಾ ಸಮೀರ್ ರೆಡ್ಡಿ,ಸಂಕಲನ ತಮ್ಮಿರಾಜು ಜವಾಬ್ದಾರಿ ಹೊತ್ತಿದ್ದಾರೆ. ಸಂಕ್ರಾಂತಿ ಫೇಮ್ ಭೀಮ್ಸ್ ಸಿಸಿರೋಲಿಯೋ ಸಂಗೀತದ ನೀಡಿದ್ದರೆ ಎ.ಎಸ್. ಪ್ರಕಾಶ್…
ಚಿಂತಾಮಣಿ:ಅತಿವೇಗವಾಗಿ ಬೆಳೆಯುತ್ತಿರುವ ಚಿಂತಾಮಣಿ Chintamani ನಗರದ ವ್ಯಾಪ್ತಿಯಲ್ಲಿ ದಿನೆ ದಿನೆ ಜನದಟ್ಟನೆ ವಾಹನ ದಟ್ಟಣೆ ಹೆಚ್ಚುತ್ತಿದ್ದು ಇದರಿಂದ ಸಂಚಾರ ವ್ಯವಸ್ಥೆ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿದೆ ಇದಕ್ಕಾಗಿ ನಗರದ ಉತ್ತರ ಭಾಗದ ಬಾಗೇಪಲ್ಲಿ ವೃತ್ತದಿಂದ ಚೇಳೂರು ರಸ್ತೆಗೆ ಬೈಪಾಸ್ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಯೋಜನೆ ರೂಪಿಸುವುದಾಗಿ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ Dr. M C. Sudhakar ಹೇಳಿದರು.ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಬುಕ್ಕನಹಳ್ಳಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಸುಮಾರು 42 ಲಕ್ಷ ರೂಪಾಯಿಗಳ ಕಾಮಗಾರಿಗೆ ಸಂಬಂದಿಸಿದಂತೆ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿ ತಿಳಿಸಿದರು.ಬುಕ್ಕನಹಳ್ಳಿ,ಚೊಕ್ಕರೆಡ್ಡಿಹಳ್ಳಿ,ಮುಂತಕದಿರೇನಹಳ್ಳಿ ಗ್ರಾಮಗಳ ಮಾರ್ಗವಾಗಿ ಬಾಗೇಪಲ್ಲಿ ವೃತ್ತದಿಂದ ಚೇಳೂರು ರಸ್ತೆಗೆ ಬೈಪಾಸ್ ರಸ್ತೆ ನಿರ್ಮಾಣ ಮಾಡಿದರೆ ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿರುತ್ತದೆ ಇದನ್ನು ಪರಿಗಣಿಸಬೇಕು ಎಂದು ಬುಕ್ಕನಹಳ್ಳಿ,ಮುಂತಕದಿರೇನಹಳ್ಳಿ ಗ್ರಾಮಗಳ ಜನರು ಸಚಿವರಿಗೆ ಮನವಿ ಸಲ್ಲಿಸಿದರು. ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಸಚಿವರು ಬೈಪಾಸ್ ರಸ್ತೆ ಕನಿಷ್ಠ 50 ಅಡಿ ಅಗಲ ಇದ್ದರೆ ವಾಹನ ಸಂಚಾರಕ್ಕೆ ಸುಗಮವಾಗಿರುತ್ತದೆ…


