ಶ್ರೀನಿವಾಸಪುರ:ಚರಂಡಿ ನೀರು ಹರಿಯುವ ವಿಚಾರದಲ್ಲಿ ಎರಡು ಕುಟುಂಬಗಳ ಕಲಹ ರಾಜಕೀಯ ಬಣ್ಣ ಪಡೆದುಕೊಂಡು ಗುಂಪು ಘರ್ಷಣೆಗೆ ಕಾರಣವಾಗಿರುವ ಘಟನೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯತಿಯ ಗೌಡತಾತನಗಡ್ಡ ಗ್ರಾಮದಲ್ಲಿ ನಡದಿರುತ್ತದೆ.ಶ್ರೀನಿವಾಸಪುರ ತಾಲೂಕಿನಲ್ಲಿ ಬಹುತೇಕ ನಿಂತುಹೋಗಿದ್ದ ಹೊಡಿ ಬಡಿ ರಾಜಕೀಯಕ್ಕೆ ಗೌಡತಾತನಗಡ್ಡ ಗ್ರಾಮದ ಘಟನೆ ಮತ್ತೆ ನಾಂದಿ ಹಾಡುತ್ತ ಎಂಬ ಆತಂಕ ಎಲ್ಲರನ್ನು ಕಾಡುತ್ತಿದೆ.ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಬೆಂಬಲಿಗರ ಮಧ್ಯೆ ಮಾರಾ ಮಾರಿನಡೆದು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬರುತ್ತಿದೆ.ತಾಲೂಕಿನ ಗೌಡತಾತನಗಡ್ಡ ಗ್ರಾಮದಲ್ಲಿ ಮಂಗಮ್ಮ ಹಾಗು ಬಾಲಾವತಿ ಮನೆಗಳವರು ಇಬ್ಬರು ದಾಯದಿಗಳಾಗಿದ್ದು ಇತ್ತಿಚಿಗೆ ಗ್ರಾಮದಲ್ಲಿ ನಡೆದಂತ ರಾಜಕೀಯ ಸಭೆಗಳಿಂದ ಎರಡು ಕುಟುಂಬಗಳ ನಡುವೆ ವೈಮನಸ್ಯ ಏರ್ಪಟ್ಟಿದೆ ಇದು ಬೂದಿ ಮುಚ್ಚಿದ ಕೆಂಡದಾಂತೆ ಇರುವಾಗಲೆ ಮನೆ ಮುಂದೆ ಚರಂಡಿ ನೀರು ಹರಿಯುವ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಕೈ ಕೈ ಮೀಲಾಯಿಸಿಕೊಂಡಿದ್ದಾರೆ ಎರಡು ಕುಟುಂಬಗಳ ಜಗಳ ಗ್ರಾಮದ ರಾಜಕೀಯ ಪಕ್ಷದ ಕಾರ್ಯಕರ್ತರ ನಡುವೆ…
Author: Srinivas_Murthy
ಕೋಲಾರ:ಕೋಲಾರ ಜಿಲ್ಲಾ ಕಾಂಗ್ರೆಸ್ ಎಸ್.ಸಿ ವಿಭಾಗದ ಉಪಾಧ್ಯಕ್ಷರಾಗಿ ಶ್ರೀನಿವಾಸಪುರ ತಾಲೂಕಿನ ಪಣಸಮಾಕನಹಳ್ಳಿ ನರಸಿಂಹಮೂರ್ತಿ ನೇಮಕ ಗೊಂಡಿರುತ್ತಾರೆ.ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ನರಸಿಂಹಮೂರ್ತಿ ನಮ್ಮ ಕುಟುಂಬ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಸೇವೆ ಗುರುತಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನಖರ್ಗೆ ಹಾಗು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೋಲಾರ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಜಯದೇವ್ ಅನುಮೋದನೆ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಧರ್ಮಸೇನ ಅವರು ನನ್ನ ಮೆಲೆ ವಿಶ್ವಾಸ ಇಟ್ಟು ಕೋಲಾರ ಜಿಲ್ಲಾ ಕಾಂಗ್ರೆಸ್ ಎಸ್.ಸಿ ವಿಭಾಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ ಅವರ ಸೂಚನೆಯಂತೆ ಕೋಲಾರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಸಂಘಟನೆಗೆ ಒತ್ತು ನೀಡುವ ಮೂಲಕ ಎಲ್ಲರನ್ನೂ ಒಟ್ಟಿಗೆ ಸೇರಿಸಿಕೊಂಡು ಪಕ್ಷ ಸಂಘಟನೆ ಮಾಡುವುದಾಗಿ ನರಸಿಂಹಮೂರ್ತಿ ತಿಳಿಸಿದರು.
ನ್ಯೂಜ್ ಡೆಸ್ಕ್:ಬೆಂಗಳುರು ನಗರದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಾರ್ಚ್ 30 ರಿಂದ ನ್ಯಾಷನಲ್ ಕಾಮನ್ ಮೊಬಲಿಟಿ ಕಾರ್ಡ್ (ಎನ್ಸಿಎಂಸಿ) ಪ್ರಯಾಣಿಕರಿಗೆ ಲಭ್ಯವಾಗಲಿದೆ. ಬೆಂಗಳೂರು ಮೆಟ್ರೋ ರೈಲ್ವೆ ನಿಗಮ(ಬಿಎಂಆರ್ಸಿಎಲ್) ನೂತನ ವ್ಯವಸ್ಥೆಯನ್ನು ಜನರಿಗೆ ನೀಡಿದೆ. ಒಂದು ದೇಶ, ಒಂದು ಕಾರ್ಡ್ ಘೋಷಣೆ ಅಡಿ ಈ ನೂತನ ವ್ಯವಸ್ಥೆ ಜಾರಿ ಮಾಡಲಾಗಿದೆ.ಬೆಂಗಳೂರು ಮೆಟ್ರೋ ರೈಲು ನಿಗಮ ಆರ್ಬಿಎಲ್ ಬ್ಯಾಂಕ್ ಸಹಯೋಗದಲ್ಲಿ ರುಪೇ ಎನ್ಸಿಎಂಸಿ ಕಾರ್ಡ್ ಪೂರೈಕೆಗೆ ಒಡಂಬಡಿಕೆ ಮಾಡಿಕೊಂಡಿದ್ದು ಕಾರ್ಡನ್ನು ಡೆಬಿಟ್, ಕ್ರೆಡಿಟ್ ಕಾರ್ಡ್ನಂತೆ ರಿಚಾರ್ಜ್ ಮಾಡಿಸಿಕೊಂಡು ಮೆಟ್ರೋದಲ್ಲಿ ಪ್ರಯಾಣ ಮಾಡಬಹುದಾಗಿದೆ ಕೇವಲ ಮೆಟ್ರೋ ಅಷ್ಟೇ ಅಲ್ಲದೇ ಮೆಟ್ರೋದಿಂದ ಹೊರೆಗೂ ಕಾರ್ಡ್ ಅನ್ನು ಬಳಕೆ ಮಾಡಬಹುದು. ಕಾರ್ಡ್ ಬಳಸಿ ಶಾಪಿಂಗ್, ಇಂಧನ ಖರೀದಿ, ಟೋಲ್ ಶುಲ್ಕ ಪಾವತಿ ಸೇರಿದಂತೆ ಇತರೆ ಪಾವತಿಗಳನ್ನು ಮಾಡಬಹುದಾಗಿದೆ ಎನ್ನಲಾಗಿದ್ದು ಕಾರ್ಡ್ ಬಳಕೆಗಾಗಿ ನಗರದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಆರ್ಬಿಎಲ್ ಬ್ಯಾಂಕ್ ನಿಂದ ಪಿಓಎಸ್ ಮೆಷಿನ್ ಗಳ ವ್ಯವಸ್ಥೆ ಮಾಡಲಾಗಿದೆ. ನಗರದ 6 ಲಕ್ಷಕ್ಕೂ ಹೆಚ್ಚಿನ ಮೆಟ್ರೋ ಪ್ರಯಾಣಿಕರಿಗೆ ಈ…
ಶ್ರೀನಿವಾಸಪುರ:ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸುತ್ತೇನೆ ಎಂದು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದಲ್ಲಿ ಪರಿಚಿತರಾಗಿದ್ದ ಗುಂಜೂರು ಶ್ರೀನಿವಾಸರೆಡ್ದಿ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಈ ಬೆಳವಣಿಗೆ ಶ್ರೀನಿವಾಸಪುರ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ಕರ್ನಾಟಕದ ಪ್ರಭಾವಿ ಮಂತ್ರಿಗಳಾದ ಭೈರತಿಬಸವರಾಜ್,ಡಾ.ಅಶ್ವಥನಾರಯಣ್,ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಜಯಚಂದ್ರಾರೆಡ್ದಿ,ಹಿರಿಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾ,ಜನರಲ್ ಸೆಕೆಟ್ರಿ ಸಿದ್ದರಾಜ್, ಸಮ್ಮುಖದಲ್ಲಿ ಬೆಂಗಳೂರು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನಾಥ ಭವನದಲ್ಲಿ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ.ನಾರಯಣಸ್ವಾಮಿ ನೇತೃತ್ವದಲ್ಲಿ ಗುಂಜೂರು ಶ್ರೀನಿವಾಸರೆಡ್ದಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ರವಿಕುಮಾರ್,ತಾಲೂಕು ಬಿಜೆಪಿ ಅಧ್ಯಕ್ಷ ತಿಮ್ಮಸಂದ್ರಆಶೋಕ್ ರೆಡ್ದಿ,ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಪೆದ್ದರೆಡ್ಡಿರಾಜೇಂದ್ರಪ್ರಸಾದ್,ಅತ್ತಿಕುಂಟೆರಾಜಶೇಖರರೆಡ್ದಿ,ಅಹಿಂದ ಮುಖಂಡ ಶ್ರೀರಾಮ್,ಬಂಗವಾದಿನಾಗರಾಜ್,ಗೌವನಪಲ್ಲಿಶೇಖರ್,ಕೊಟ್ರಗೂಳಿನಾರಯಣಸ್ವಾಮಿ,ಬಂಗವಾದಿಶಿವಶಂಕಗೌಡ,ಯಲ್ದೂರು ಶಿವಣ್ಣ,ಹಳೇಪೆಟೆ ಮುನಿರೆಡ್ಡಿ ಮುಂತಾದವರು ಇದ್ದರು. ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಅಶ್ವಥನಾರಯಣ್ ಶ್ರೀನಿವಾಸರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗಿರುವುದು ಶ್ರೀನಿವಾಸಪುರ ಕ್ಷೇತ್ರದಲ್ಲಿ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಅವರಿಗೆ ಪಕ್ಷ ಉನ್ನತ ಸ್ಥಾನ ನೀಡುವುದರೊಂದಿಗೆ ಅತ್ಯಂತ ಗೌರವದಿಂದ ನಡೆಸಿಕೊಳ್ಳುತ್ತದೆ ಎಂದರು. ಸಚಿವ ಭೈರತಿಬಸವರಾಜ್ ಮಾತನಾಡಿ ಗುಂಜೂರು ಶ್ರೀನಿವಾಸರೆಡ್ದಿ ಉತ್ತಮ…
ಶ್ರೀನಿವಾಸಪುರ: ತಾಲೂಕಿನಲ್ಲಿ ಹೊಸ ರಾಜಕಿಯ ಭಾಷ್ಯ ಬರೆಯಲು ಮುಂದಾಗಿ ಕಳೆದ ಒಂದು ವರ್ಷದಿಂದ ಪಕ್ಷೇತರ ಅಭ್ಯರ್ಥಿಯಂದು ಕ್ಷೇತ್ರದಾದ್ಯಂತ ಸುತ್ತಾಡಿ ಪರಿಚಿತರಾಗಿರುವ ಗುಂಜೂರು ಶ್ರೀನಿವಾಸರೆಡ್ದಿ 2023ರ ವಿಧಾನಸಭಾ ಘೋಷಣೆಯಾದ ಮರು ದಿನವೆ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.ಗುಂಜೂರು ಶ್ರೀನಿವಾಸರೆಡ್ದಿ ಅವರ ಆಪ್ತ ವಲಯದ ಮುಖಂಡರು ಹೇಳುವಂತೆ ದಿನಾಂಕ 30/3/23 ಗುರುವಾರ ಶ್ರೀರಾಮನವಮಿಯಂದು ಶ್ರೀನಿವಾಸರೆಡ್ದಿ ಬಿಜೆಪಿಗೆ(BJP) ಸೇರಲಿದ್ದಾರಂತೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವುದಾಗಿ ಹೇಳುತ್ತಾರೆ.ಬೆಂಗಳೂರು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನಾಥ ಭವನದಲ್ಲಿ ಗುರುವಾರ ಮಧ್ಯಾಹಃ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ.ನಾರಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.ತಮ್ಮ ಬೆಂಬಲಿಗರನ್ನು ಬೆಂಗಳೂರಿಗೆ ಕರೆದೊಯ್ಯಲು ಗುಂಜೂರು ಶ್ರೀನಿವಾಸರೆಡ್ದಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಬಸ್ಸುಗಳನ್ನು ಮತ್ತು ಟಾಟಾ ಸುಮೊಗಳನ್ನು ಬಾಡಿಗೆಗೆ ನಿಗದಿಪಡೆಸಿರುವುದಾಗಿ ಹೇಳಲಾಗುತ್ತಿದೆ.
ಶ್ರೀನಿವಾಸಪುರ:ಶ್ರೀನಿವಾಸಪುರ ಪಟ್ಟಣದ ಸರೋಜಿನಿರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಮಠವನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸುಮಾರು 50 ಲಕ್ಷ ವೆಚ್ಚದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠವನ್ನು ನಿರ್ಮಿಸಿ ರಾಯರ ಮೃತ್ತಿಕಾ ಬೃಂದಾವನವನ್ನು ಪುನರ್ ಪ್ರತಿಷ್ಠಾಪಿಸಲಾಗಿದೆ.ವಿದ್ಯತ್ ಕಂಟ್ರಾಕ್ಟರ್ ಬಾಬುರೆಡ್ಡಿ ಉಪಾದ್ಯಾಯ ಪದ್ಮನಾಭ್ ಕುಟುಂಬದವರು ಪ್ರಮುಖದಾನಿಗಳಾಗಿ ನಿರ್ಮಾಣ ಮಾಡಿರುವಂತರಾಯರ ಮಠದಲ್ಲಿ ರಾಯರ ಮೃತ್ತಿಕಾ ಬೃಂದಾವನ,ಶ್ರೀನಿವಾಸ ದೇವರ, ಮುಖ್ಯ ಪ್ರಾಣದೇವರ,ಪುನರ್ ಪ್ರತಿಷ್ಠಾಪನೆ ಮಾಡಲಾಗಿದೆ ಇಲ್ಲಿ ಹಿಂದೆ ಮುಖ್ಯಪ್ರಾಣದೇವರು ಶ್ರೀ ಅಂಜನೇಯ ಸ್ವಾಮಿ ದಕ್ಷಿಣಾಮುಖವಾಗಿ ಸಣ್ಣ ದೇವಾಲಯ ಇದ್ದು ಈಗ್ಗೆ 40-50 ವರ್ಷಗಳ ಹಿಂದೆ ಸುಖತೀರ್ಥಾಚಾರ್ ಕಾಲದಲ್ಲಿ ಅಲ್ಲಿ ನಿತ್ಯ ಪೂಜೆ ಕಾರ್ಯಕ್ರಮಗಳು ನಡೆಯುತಿತ್ತು ದಕ್ಷಿಣಾಮುಖವಾಗಿರುವಂತ ಅಂಜನೇಯನ ಪೂಜೆ ಸಲ್ಲಿಸಿದರೆ ಗ್ರಹ ದೋಷಗಳು ನಿವಾರಣೆಯಾಗುತ್ತದೆ ಎಂಬ ಪ್ರತಿತಿ ಸ್ಥಳೀಯರಲ್ಲಿ ಇತ್ತು ಇತ್ತಿಚಿಗೆ ಸುಖತೀರ್ಥಾಚಾರ್ ಕುಟುಂಬದ ಶ್ರೀನಾಥ್ ಭಕ್ತಾದಿಗಳ ನೆರವಿನಿಂದ ರಾಘವೇಂದ್ರ ರಾಯರ ಮೃತ್ತಿಕಾ ಬೃಂದಾವನವನ್ನು ಪ್ರತಿಷ್ಠಾಪಿಸಿ ಪೂಜಾ ಕಾರ್ಯಗಳನ್ನು ನೇರವೇರಿಸಲಾಗುತಿತ್ತು ಅಲ್ಲಿ ಶ್ರೀ ಅಂಜನೇಯ ಸ್ವಾಮಿ ದಕ್ಷಿಣಾಮುಖವಾಗಿ,ರಾಯರ ಬೃಂದಾವನ ಪೂರ್ವಾಭಿಮುಖವಾಗಿ ಪೂಜಾಕಾರ್ಯಕರಮಗಳನ್ನು ನಡೆಸಲಾಗುತಿತ್ತು ಈ ಬಗ್ಗೆ ವಾಸ್ತು ತಙ್ಞರ ಸೂಚನೆಯಂತೆ…
ಶ್ರೀನಿವಾಸಪುರ: ಚುನಾವಣೆ ಹತ್ತಿರ ಇರುವಾಗ ಎಂ.ಜಿ. ರಸ್ತೆಯಲ್ಲಿ ಕೆ.ಸಿ. ವ್ಯಾಲಿ ಪೈಪ್ ಲೈನ್ ಕಾಮಗಾರಿಯನ್ನು ತರಾತುರಿಯಲ್ಲಿ ಮಾಡುತ್ತಿರುವುದು ನೋಡಿದರೆ ಇದೊಂದು ಚುನಾವಣೆ ಗಿಮಿಕ್ ಗಾಗಿ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ರಮೇಶ್ಕುಮಾರ್ ವಿರುದ್ದ ಜೆ.ಡಿ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವಿ. ಶಿವಾರೆಡ್ಡಿ ಆರೋಪಸಿದರು.ಅವರು ಜೆ.ಡಿ.ಎಸ್ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಪಟ್ಟಣದ ರಸ್ತೆಗಳನೆಲ್ಲ ಅಗೆದು ಹಾಳು ಮಾಡಿದ್ದಾರೆ ಆತುರ ಆತುರವಾಗಿ ಮಾಡುತ್ತಿರುವ ಕಾಮಗಾರಿಯಿಂದ ಪಟ್ಟಣದಲ್ಲಿ ಸಂಚಾರಿ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿ ಹೋಗಿದೆ.ಕನಿಷ್ಠ ಸಾರ್ವಜನಿಕರು ಒಡಾಡಲು ಸಾದ್ಯವಾಗದ ಪರಿಸ್ಥಿತಿ ನಿರ್ಮಿಸಿದ್ದಿರ,ಎಂ.ಜಿ. ರಸ್ತೆಯಲ್ಲಿ ಕೆ.ಸಿ. ವ್ಯಾಲಿ ಪೈಪ್ ಲೈನ್ ಕಾಮಗಾರಿ ಮಾಡುವ ಅವಶ್ಯಕತೆ ಏನಿತ್ತು ಪರ್ಯಾಯ ಮಾರ್ಗವಾಗಿ ಪಟ್ಟಣದ ಹೊರವಲಯದಲ್ಲಿ ಪೈಪ್ ಲೈನ್ ಕಾಮಗಾರಿ ಮಾಡಬಹುದಾಗಿತ್ತಲ್ವಾ ಶಾಸಕರೆ ಚುನಾವಣಾ ಗಿಮಿಕ್ ಗಾಗಿ ಪ್ರತಿಷ್ಟೆಗೆ ಬಿದ್ದು ಪಟ್ಟಣದಲ್ಲಿ ಪೈಪ್ ಲೈನ್ ಕಾಮಗಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದಾರೆ ಎಂದು ದೂರಿದರು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ. ರಾಜಣ್ಣ ಮಾತನಾಡಿ, ಶಾಸಕ ರಮೇಶ್ಕುಮಾರ್ ಅವಧಿಯಲ್ಲಿ ತಾಲ್ಲೂಕಿನ ಅಭಿವೃದ್ದಿ…
ಶ್ರೀನಿವಾಸಪುರ:ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ಪಕ್ಷಗಳನ್ನು ತೋರೆದು ಗುಂಜೂರುಶ್ರೀನಿವಾಸರೆಡ್ಡಿ ಬಣಕ್ಕೆ ಸೇರ್ಪಡೆಯಾಗಿದ್ದಾರೆ.ತಾಲೂಕಿನ ಕಸಬಾ ಹೋಬಳಿ ಜೆ.ತಿಮ್ಮಸಂದ್ರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಸುರೇಶ್,ನಾಗರಾಜು,ಚೌಡರೆಡ್ಡಿ,ನಾರಯಣಸ್ವಾಮಿ,ಶ್ರೀನಿವಾಸ್,ಇ.ಕೆ.ವೆಂಕಟರೆಡ್ಡಿ,ವೆಂಕಟೇಶ್ ಸೇರಿದಂತೆ ಹಲವರು ಗುಂಜೂರುಶ್ರೀನಿವಾಸರೆಡ್ಡಿ ಬಣಕ್ಕೆ ಸೇರ್ಪಡೆಯಾಗಿರುತ್ತಾರೆ.ಈ ಸಂದರ್ಬದಲ್ಲಿ ಮಾತನಾಡಿದ ಗುಂಜೂರುಶ್ರೀನಿವಾಸರೆಡ್ಡಿ ತಾಲೂಕಿನ ಅಭಿವೃದ್ಧಿಯನ್ನು ನಿರ್ಲಕ್ಷಿಸಿರುವಂತ ಇಲ್ಲಿನ ಅಧಿಕಾರರೂಡ ರಾಜಕೀಯ ಮುಖಂಡರ ನಡವಳಿಕೆಗೆ ಬೆಸೆತ್ತ ಜನ ತಮ್ಮ ಬಣಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಯಾರೆ ತಮ್ಮ ಬಣಕ್ಕೆ ಸೇರ್ಪಡೆಯಾದರು ಅವರನ್ನು ಅತ್ಯಂತ ಗೌರವದಿಂದ ನಡೆಸಿಕೊಳ್ಳುತ್ತೇವೆ ಎಂದರು.ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರವನ್ನು ಮಾದರಿ ಅಭಿವೃದ್ಧಿ ಕ್ಷೇತ್ರವನ್ನಾಗಿ ಮಾಡುವ ಗುರಿ ಹೊಂದಿರುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಗುಂಜೂರುಶ್ರೀನಿವಾಸರೆಡ್ಡಿ ಬಣದ ಮುಖಂಡರಾದ ಪೆದ್ದರೆಡ್ಡಿರಾಜೇಂದ್ರಪ್ರಸಾದ್,ಪಾಳ್ಯಂಲಕ್ಷ್ಮಣರೆಡ್ಡಿ,ರಾಜಶೇಖರೆಡ್ದಿ,ಅಹಿಂದ ಮುಖಂಡ ಶ್ರೀರಾಮ್, ಗೌವನಪಲ್ಲಿಶೇಖರ್ ಮುಂತಾದವರು ಇದ್ದರು.
ಶ್ರೀನಿವಾಸಪುರ:ಕರೋನಾ ಸಂಕಷ್ಟದಲ್ಲಿ ಜನತೆ ನರಳುತ್ತಿದ್ದರೆ ಕೇಂದ್ರ ಸರ್ಕಾರ ಜನರಿಗೆ ಮೊಂಬತ್ತಿ ಬೆಳಗಿಸಿ ದೀಪ ಹಚ್ಚಿಡಿ ಎಂದು ಯಾಮಾರಿಸಿದರು ಎಂದು ಮೋದಿ ಸರ್ಕಾರದ ವಿರುದ್ದ ಶಾಸಕ ರಮೇಶ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದರು ಅವರು ವಿವಿಧ ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ ಕರೋನಾ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡು ಎಷ್ಟೊ ಮಕ್ಕಳು ಅನಾಥರಾಗಿದ್ದಾರೆ ಮಕ್ಕಳನ್ನು ಕಳೆದುಕೊಂಡ ಎಷ್ಟೊ ಪೋಷಕರು ಬೀದಿಪಾಲಾಗಿದ್ದರೆ ಚಾಮರಾಜನಗದ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮರ್ಪಕವಾಗಿ ಸರಬರಾಜು ಮಾಡಲಾಗದ ಬಿಜೆಪಿ ಸರ್ಕಾರದ ಹೊಣಗೇಡಿತನದಿಂದ ಮೂವತ್ತಕ್ಕು ಹೆಚ್ಚು ವಗಳು ಪ್ರಾಣಬಿಟ್ಟಿದೆ ಎಂದು ತೀವ್ರ ಧಾಟಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಆರೋಪಿಸಿದ ಅವರು ಅದ್ಯಾರೋ ಆರೋಗ್ಯ ಮಂತ್ರಿಯಂತೆ ನನ್ನನ್ನು ಸೋಲಿಸಲು ನೂರು ಬಾರಿ ಶ್ರೀನಿವಾಸಪುರಕ್ಕೆ ಬರ್ತಾನಂತೆ ಈಗ ಒಂದು ಬಾರಿ ಬರಲಿ ನೋಡೋಣ ಎಂದ ಅವರು ಸ್ವಾರ್ಥ ರಾಜಕೀಯಕ್ಕೆ ಚುನಾವಣೆಗೋಸ್ಕರ ಜನರನ್ನು ರೊಚ್ಚಿಗೇಬ್ಬಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.ರಾಮನ ಹೇಸರಿನಲ್ಲಿ ರಾಜಕೀಯ ಮಾಡುವಂತ ಬಿಜೆಪಿಗರೆ ನಿಮ್ಮ ರಾಮ ಯಾರು ತೋಟರಾಮುಡ,ದೊಂಗರಾಮುಡ,ಅಗ್ಗಿರಾಮುಡ ಆಯೋದ್ಯರಾಮನ ಯಾರು…
ಬೆಂಗಳೂರು: ಬಹು ನಿರೀಕ್ಷಿತ ನಮ್ಮ ಮೆಟ್ರೋ ನೆಟ್ವರ್ಕ್ ಅನ್ನು ಬೆಂಗಳೂರಿನ ಪ್ರತಿಷ್ಠಿತ ಐಟಿ ಕಾರಿಡಾರ್ ವೈಟ್ಫೀಲ್ಡ್ ವರಿಗೂ ವಿಸ್ತರಿಸಿರುವ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಿದರು.ಪ್ರಧಾನಿ ನರೇಂದ್ರ ಮೋದಿ ವೈಟ್ಫೀಲ್ಡ್- ಕೆಆರ್ ಪುರಂ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಿದ್ದಾರೆ. ಸುಮಾರು 13.71 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ಇದಾಗಿದ್ದು ಇದರಿಂದ ಐಟಿಬಿಟಿ ನೌಕರರಿಗೆ ಹೆಚ್ಚಿನ ಖುಷಿಯಾಗಿದೆ.ಮೆಟ್ರೋ ಉದ್ಘಾಟನೆ ಬಳಿಕ ನರೇಂದ್ರ ಮೋದಿಯವರು ಅದೇ ಮೆಟ್ರೋದಲ್ಲಿ ಪ್ರಯಾಣಿಸಿದರು. ಮೋದಿ ಜೊತೆ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ ಸಂಸದ ಪಿ.ಸಿ.ಮೋಹನ್ ಸಹ ಪ್ರಯಾಣಿಸಿದರು.ಪ್ರಯಾಣ ಸಂದರ್ಭದಲ್ಲಿ ಮೋದಿಯವರು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು.ಮೆಟ್ರೋದಲ್ಲಿ ಸಂಚಾರ ನಡೆಸಿದ ಮೋದಿ ಅವರು ಮೆಟ್ರೋ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು. 13.71 ಕಿಲೋ ಮೀಟರ್ ಉದ್ದದ ನೇರಳೆ ಬಣ್ಣದ ಈ ಮಾರ್ಗದಲ್ಲಿ ಒಟ್ಟು 12 ಸ್ಟೇಷನ್ಗಳು ಬರಲಿವೆ. ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದರಿಂದ ಕೆ.ಆರ್.ಪುರ, ವೈಟ್ ಫೀಲ್ಡ್ ಭಾಗದಲ್ಲಿ ಆಗ್ತಿದ್ದ ಸಂಚಾರ ದಟ್ಟಣೆ ಸ್ವಲ್ಪಮಟ್ಟಿಗೆ ನಿವಾರಣೆಯಾಗಲಿದೆ . ವೈಟ್ಫೀಲ್ಡ್ನಲ್ಲಿ…


