Author: Srinivas_Murthy

ನ್ಯೂಜ್ ಡೆಸ್ಕ್:ದಾರಿ ತಪ್ಪಿದ ಒಂಟಿ ಆನೆಯೊಂದು ಜನ ವಸತಿ ಪ್ರದೇಶಕ್ಕೆ ಬಂದು ಮತ್ತೆ ಕಾಡಿಗೆ ಹೋಗಲು ದಾರಿಕಾಣದೆ ಜನರನ್ನು ನೋಡಿ ಗಾಭರಿಯಿಂದ ರಾದಾಂತ ಸೃಷ್ಟಿಸಿದ ಘಟನೆ ಆಂಧ್ರದ ಚಿತ್ತೂರು ಜಿಲ್ಲೆ ಪಲಮನೇರು ನಗರದ ಹೊರಭಾಗದ ಪ್ರಶಾಂತ ನಗರದಲ್ಲಿ ನಡೆದಿದ್ದು ಅನೆ ದಾಳಿಯಲ್ಲಿ ಅರಣ್ಯಾಧಿಕಾರಿಯೊಬ್ಬರು ಗಾಯಗೊಂಡಿದ್ದಾರಲ್ಲದೆ ಹಸುವಿನ ಕರುವು ಮೇಲು ಆನೆ ದಾಳಿ ಮಾಡಿದ ಹಿನ್ನಲೆಯಲ್ಲಿ ಕರು ಸ್ಥಳದಲ್ಲೆ ಸಾವನಪ್ಪಿದೆ.ಬೆಳಿಗ್ಗೆ 6 ಗಂಟೆಗೆ ಸಮಯದಲ್ಲಿ ನಗರದ ಹೋರವಲಯದ ಹೆದ್ದಾರಿ ಬಳಿ ಮಲವಿಸರ್ಜನೆ ಮಾಡುತ್ತಿದ್ದ ಒಂಟಿ ಆನೆಯನ್ನು ನೋಡಿದ ಕೆಲವರು ಮೊಬೈಲ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ ಇದರಿಂದ ಗುಂಪು ಗುಂಪಾಗಿ ಜನರು ಹೆಚ್ಚಾಗಿ ಬಂದ ಹಿನ್ನಲೆಯಲ್ಲಿ ಗಾಭಾರಿಯಾದ ಆನೆ ಸುಮಾರು 5 ಗಂಟೆಗಳ ಕಾಲ ದಿಕ್ಕೆಟ್ಟು ಎಲ್ಲೆಂದರಲ್ಲಿ ಒಡಾಡುತ್ತ ಅರಣ್ಯ ಅಧಿಕಾರಿಗಳನ್ನು ಕಾಡಿಸಿದೆ ಇನ್ನೊಂದಡೆ ಸ್ಥಳಿಯ ನಿವಾಸಿಗಳಿಗೆ ಆತಂಕ ಸೃಷ್ಟಿಯಾಗಿದೆ ಇದರಿಂದಾಗಿ ಸತ್ಯನಾರಾಯಣ ದೇವಸ್ಥಾನದ ಬಳಿಯ ಚಿನ್ನೂರು ಸೇತುವೆಯಿಂದ ಗಂಗಾವರಂ ಕಡೆಗೆ ವಾಹನವನ್ನು ಕಾಡಿಗೆ ತಿರುಗಿಸಲು ಪ್ರಯತ್ನಿಸುತ್ತಿದ್ದ ಅರಣ್ಯ ವಿಭಾಗಾಧಿಕಾರಿ ಸುಕುಮಾರ್ ಮೇಲೆ ಆನೆ…

Read More

ನ್ಯೂಜ್ ಡೆಸ್ಕ್:ಮಹಿಳೆ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಬಳಿಅಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ.ಮಹಿಳೆಯ ಗಂಡನ ಮನೆಯವರು ಮನೆ ಸೊಸೆ ಮೇಲೆ ಮೃಗೀಯವಾಗಿ ವರ್ತಿಸಿದ್ದಾರೆ.ಬೆಂಗಳೂರಿನ ಆನೇಕಲ್ ಪಟ್ಟಣದ ನಾರಾಯಣಪುರದ ಅರುಣ್ 5 ವರ್ಷಗಳ ಹಿಂದೆ ಕುಟುಂಬದವರೆ ನೋಡಿದ ಹೆಣ್ಣು ಶ್ರೀಲಜಾ ಎಂಬಾಕೆಯನ್ನು ಮದುವೆಯಾಗಿದ್ದರು. ಈ ದಂಪತಿಗಳಿಗೆ ನಾಲ್ಕು ವರ್ಷದ ಹೆಣ್ಣು ಮಗು ಕೂಡ ಇದೆ.ಅದರೆ ಇತ್ತಿಚಿಗೆ ಗಂಡ ಅರುಣ್ ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದು,ಗಜೇಂದ್ರ, ನರಸಿಂಹಮೂರ್ತಿ, ಲಕ್ಷ್ಮಿ, ಚೌಡಪ್ಪ ಎನ್ನುವರೂ ಸಹ ಸಹಕಾರ ನೀಡಿದಲ್ಲದೆ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.ಶ್ರೀಲಜಾ ಮೇಲೆ ಅನುಮಾನ ವ್ಯಕ್ತಪಡಿಸುತ್ತ, ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದು ಇದಕ್ಕಾಗಿ ಆಗಾಗ ಜಗಳ ನಡೆಯುತ್ತಿದ್ದು ಇದಕ್ಕಾಗಿ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯತಿ ಕೂಡ ನಡೆದಿತ್ತು. ಕಳೆದ ಒಂದು ವಾರದ ಹಿಂದೆ ಶ್ರೀಲಜಾ ತವರು ಮನೆಗೆ ತೆರಳಿದ್ದು ಇದೀಗ ಅತ್ತೆ ಮನೆಗೆ ವಾಪಸ್ಸು…

Read More

ನ್ಯೂಜ್ ಡೆಸ್ಕ್:ಕನ್ನಡ ಚಿತ್ರ ರಂಗದ ದೊಡ್ಮನೆ ಸೊಸೆ ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ್ ಪತ್ನಿ ಗೀತಾ ಅವರು ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.2024ರ ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ನಿಂತು ಸೋತಿದ್ದ ಅವರು ಶಿವಮೊಗ್ಗದ ಕಾಂಗ್ರೆಸ್ ಕಚೇರಿಯಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಗೀತಾ ಶಿವರಾಜ್ ಕುಮಾರ್, ನಾನು ಚುನಾವಣೆಗಳಲ್ಲಿ ಸ್ಪರ್ಧಿಸಲ್ಲ. ಆದರೆ ನಿಮ್ಮೆಲ್ಲರ ಜೊತೆ ಇರುತ್ತೇನೆ. ಮುಂದಿನ ಚುನಾವಣೆಗೂ ಬಂದು ಪ್ರಚಾರ ಮಾಡುತ್ತೇನೆ ಎಂದು ಹೇಳಿದರು. ಮಹಿಳೆಯರು ಯಾರೂ ಅಬಲೆಯೆರಲ್ಲ, ಎಲ್ಲರೂ ಸಬಲೆಯರು. ಮಹಿಳೆಯರಿಗೆ ಶಕ್ತಿ ನೀಡಿದರೆ ಎಂತಹ ಕೆಲಸವನ್ನಾದರೂ ಮಾಡುತ್ತಾರೆ. ಇನ್ನು ನಿಮಗೆ ಯಾವುದೇ ಸಮಸ್ಯೆ, ಕಷ್ಟಗಳಿದ್ದರೂ ಸಚಿವ ಮಧು ಬಂಗಾರಪ್ಪ ಅವರನ್ನು ಕಂಡು ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಿ ಎಂದು ಹೇಳಿದರು. ಶಿವಮೊಗ್ಗ ಲೋಕಸಭಾಕ್ಷೇತ್ರ ಮೊದಲಿನಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿತ್ತು 1996 ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಕರ್ನಾಟಕ ವಿಕಾಸ ಪಕ್ಷದಿಂದ ಸ್ಪರ್ದಿಸಿ ಮೊದಲಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿದ್ದರು ನಂತರದಲ್ಲಿ 1998 ರಲ್ಲಿ ಭಾರತೀಯಯ ಜನತಾ…

Read More

ಮಾಲೂರು:ಪೋಷಕರು ಮದುವೆ ವಿರೋಧಿಸಿದಕ್ಕೆ ಅಪ್ರಾಪ್ತ ಪ್ರೇಮಿಗಳು ಚಲಿಸುವ ರೈಲಿಗೆ ತಲೆಕೊಟ್ಟು ಆತಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಶೆಟ್ಟಹಳ್ಳಿ ನಿವಾಸಿ ಸತೀಶ್ (18) ಹಾಗೂ ಪಣಮಾಕನಹಳ್ಳಿ ಶ್ವೇತ (17) ಆತ್ಮಹತ್ಯೆಗೆ ಶರಣಾಗುವ ಮೂಲಕ ಬಾಳಿ ಬೆಳಗಬೇಕಾಗಿದ್ದ ತಮ್ಮ ಬದುಕನ್ನು ಅಂತ್ಯವಾಗಿಸಿಕೊಂಡಿದ್ದಾರೆ.ಮೃತ ಸತೀಶ್‌ ಐಟಿಐ ವ್ಯಾಸಂಗ ಮಾಡಿದ್ದು, ಶ್ವೇತಾ ಮೊದಲ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಇವರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದು ಮದುವೆಯಾಗಲು ನಿರ್ಧರಿಸಿ ತಮ್ಮ ಪ್ರೀತಿಯನ್ನು ಪೋಷಕರ ಬಳಿ ಹೇಳಿಕೊಂಡಿದ್ದು ಇಬ್ಬರ ಜಾತಿ ಬೇರೆ ಬೇರೆಯಾದ್ದರಿಂದ ಇವರ ಪೋಷಕರು ಮದುವೆಗೆ ವಿರೋಧಮಾಡಿದ್ದಾರೆ ಎನ್ನುತ್ತಾರೆ.ನಿನ್ನೆಯಷ್ಟೆ ಸತೀಶ್‌ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ.ಇಂದು ಬೆಳಗ್ಗೆ ಎಂದಿನಂತೆ ಬೆಳಿಗ್ಗೆ ಎದ್ದು ತನ್ನ ತಾಯಿಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾನೆ ನಂತರ ತನ್ನ ಬೈಕ್‌ನಲ್ಲಿ ತನ್ನ ಲವರ್ ಶ್ವೇತಾಳನ್ನು ಕರೆದುಕೊಂಡು ಮಾಲೂರಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣಕ್ಕೆ ಹೋಗಿ ಬಳಿ ಬೈಕ್‌ ನಿಲ್ಲಿಸಿದ…

Read More

ಶ್ರೀನಿವಾಸಪುರ:ಅರಣ್ಯ ಪ್ರದೇಶ ನಿರ್ವಹಣೆ ಗುತ್ತಿಗೆ ಪಡೆದಿದ್ದ ವ್ಯಕ್ತಿಯೋರ್ವ ಅನಧಿಕೃತವಾಗಿ ಮರಕಡಿದು ಸಾಗಿಸುತ್ತಿರುವುದನ್ನು ಸ್ಥಳೀಯರು ತಡೆದು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ಮರಗಳ್ಳತನ ಮಾಡಿದವರು ರಾಜರೋಷವಾಗಿ ಹತ್ತಾರು ಲೋಡ್ ಮರಗಳನ್ನು ರಾಯಲ್ಪಾಡು ಹೋಬಳಿಯ ಗುಂಟಿಪಲ್ಲಿ ಅರಣ್ಯಪ್ರದೇಶದಿಂದ ಸಾಗಿಸಿರುವುದಾಗಿ ಹೇಳಲಾಗಿದೆ.ಸಣ್ಣ ಪುಟ್ಟ ಗಿಡ ಗಂಟಿಗಳನ್ನು ತೆಗೆದು ಸ್ವಚ್ಛಗೊಳಿಸುವ ಟೆಂಡರ್ ಪಡೆದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಹತ್ತಾರು ವರ್ಷಗಳಿಂದ ಬೃಹದಾಕಾರವಾಗಿ ಬೆಳೆದು ನಿಂತಿದ್ದ ನೀಲಗಿರಿ ಹಾಗು ಇನ್ನಿತರೆ ಮರಗಳನ್ನು ಆಧುನಿಕ ಯಂತ್ರಗಳನ್ನು ಬಳಸಿ ಕಡಿದು ಅವುಗಳನ್ನು ಜೆ.ಸಿ.ಬಿ ಮೂಲಕ ಲಾರಿಗಳಿಗೆ ತುಂಬಿಸಿ ಸಾಗಾಣೆ ಮಾಡುತ್ತಿರುವ ಕುರಿತಾಗಿ ಗುಂಟಪಲ್ಲಿ ಅರಣ್ಯ ಭಾಗದ ಸ್ಥಳೀಯರ ಆರೋಪ,ಸುಮಾರು ಒಂದೂವರೆ ತಿಂಗಳಿಂದ ಬುಡ ತೆಗೆಯುವ ನೆಪದಲ್ಲಿ 40-50 ವರ್ಷಗಳ ನೂರಾರು ನೀಲಗಿರಿ ಇನ್ನಿತರೆ ಮರಗಳನ್ನು ರಾಜಾರೋಷವಾಗಿ ಮಾರಾಟ ಮಾಡಿಕೊಳ್ಳಲಾಗುತ್ತಿದ್ದು, ಪ್ರತಿನಿತ್ಯ ಲಾರಿಗಳ ಮೂಲಕ ಬಾರಿ ಗಾತ್ರದ ದಿಮ್ಮೆಗಳನ್ನು ಶ್ರೀನಿವಾಸಪುರ-ಕೋಲಾರ ಮಾರ್ಗವಾಗಿ ಮಾಲೂರು ಗಡಿ ತಲುಪಿಸಲಾಗುತ್ತಿದೆ,ಇದಕ್ಕೆ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳ ಬೆಂಬಲ ಇದೆ…

Read More

ಶ್ರೀನಿವಾಸಪುರ:ಅಕ್ರಮ ಸಂಬಂಧ ತಿಳಿದ ಅತ್ತೆ ನಮ್ಮ ಜೀವನಕ್ಕೆ ತೊಂದರೆ ಮಾಡುತ್ತಾಳೆ ಎಂದು ಸೊಸೆ ಹಾಗೂ ಆಕೆಯ ಪ್ರಿಯಕರ ಸೇರಿ ಆತ್ತೆಯ ತಲೆಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶ್ರೀನಿವಾಸಪುರ ತಾಲೂಕು ರಾಯಲ್ಪಾಡು ಪೋಲಿಸ್ ಠಾಣೆ ವ್ಯಾಪ್ತಿಯ ಎಮ್.ತುಮ್ಮಲಪಲ್ಲಿ ಗ್ರಾಮದಲ್ಲಿ ನಡೆದಿದೆ.ಹಲ್ಲೆ ಆರೋಪದಲ್ಲಿ ಸೊಸೆ ರೇಖಾ ಮತ್ತು ಆಕೆಯ ಪ್ರಿಯಕರ ಶಶಿಕುಮಾರ್‌ ರವರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಅತ್ತೆ ರಮಣಮ್ಮ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಮ್.ತುಮ್ಮಲಪಲ್ಲಿ ಗ್ರಾಮದ ಮಂಜುನಾಥರೆಡ್ಡಿ ಆಂಧ್ರಪ್ರದೇಶದ ರೇಖಾ ಎಂಬಾಕೆಯನ್ನು ಕಳೆದ 7 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಅದರೆ ಇತ್ತಿಚಿಗೆ ಸೊಸೆ ರೇಖಾ ಮೊಬೈಲ್ ಖಾಯಾಲಿಗೆ ಬಿದ್ದಿದ್ದಾಳೆ ಅಷ್ಟೆ ಅಲ್ಲದೆ ಶಶಿಕುಮಾರ್‌ ಎಂಬ ಯುವಕನೊಂದಿಗೆ ಅಕ್ರಮ ಸಂಬಂಧವನ್ನು ಬೆಳೆಸಿದ್ದಾಳೆ ಜೊತೆಗೆ ಪ್ರಿಯಕರ ಕೊಟ್ಟ ಮೊಬೈಲ್ ಅನ್ನು ಮನೆಯಲ್ಲಿ ಯತೇಚ್ಚವಾಗಿ ಬಳಸುವುದು, ನಡೆಯಿತಿತ್ತು ಇದು ಮನೆಯಲ್ಲಿ ಅತ್ತೆ ಸೊಸೆ ನಡುವೆ ರಾದ್ದಾಂತಕ್ಕೆ ಕಾರಣವಾಗಿದೆ ರೇಖಾ ಗಂಡ ಹಾಲು ವಾಹನದ ಚಾಲಕನಾಗಿದ್ದು ಹೆಚ್ಚಾಗಿ ಮನೆಯಲ್ಲಿ ಇರುತ್ತಿರಲಿಲ್ಲ,ಇದು ರೇಖಾ ಹಾಗು…

Read More

ಹಾಸನ:ಹಾಸನ ಜಿಲ್ಲೆಯ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಘೋರ ಅಪಘಾತದಲ್ಲಿ ಕ್ಯಾಂಟರ್ ಹರಿದು 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ ಈಗ 10ಕ್ಕೆ ಏರಿಕೆಯಾಗಿದೆ.20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇದೀಗ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವಯ್ಯನ ಕೊಪ್ಪಲು ಗ್ರಾಮದ ಚಂದನ್ (26) ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿದ ಮುಖ್ಯಮಂತ್ರಿ. ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಗಿದೆ ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.ಜೆಡಿಎಸ್ ದೇವೇಗೌಡರಿಂದಲೂ…

Read More

ಶ್ರೀನಿವಾಸಪುರ:ವಿದ್ಯಾರ್ಥಿಗಳ ಕೊರತೆ ಶಿಥಲವಾದ ಕಟ್ಟಡಗಳು ಸಾರಿಗೆ ವ್ಯವಸ್ಥೆ ಕೊರತೆ ಹೀಗೆ ನಾನಾ ರಿತಿಯ ಸಮಸ್ಯೆಗಳಿಂದ ಇಂದು ದೊಡ್ದ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ.ಆದರೆ ಇಲ್ಲೊಂದು ಸರ್ಕಾರಿ ಶಾಲೆ ಇವೆಲ್ಲದಕ್ಕೂ ಭಿನ್ನ ಎನ್ನುವಂತೆ ಪುಟ್ಟ ಗ್ರಾಮ ಕಶೆಟ್ಟಿಹಳ್ಳಿಯ ಉನ್ನತೀಕೃತ ಸರ್ಕಾರಿ ಶಾಲೆಯಲ್ಲಿ ಭರ್ಜರಿ ನೂರ ಇಪತ್ತು ವಿಧ್ಯಾರ್ಥಿಗಳ ಸಂಖ್ಯೆ ಹೊಂದಿದ್ದು ಇಂತಹ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಸ್ಥಳೀಯವಾಗಿ ಷಡ್ಯಂತರ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.ಇಂದು ಶಾಲ ವಿದ್ಯಾರ್ಥಿಗಳು ಗ್ರಾಮಸ್ಥರು ಶಾಲ ಆವರಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿರುವ ಪಟ್ಟಬದ್ರರಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಪ್ರಗತಿ ಪರ ರೈತ ರಾಮಚಂದ್ರಾರೆಡ್ಡಿ ಹಲವಾರು ವರ್ಷಗಳಿಂದ ಉತ್ತಮವಾಗಿ ಯಾವುದೆ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿರುವ ಕಶೆಟ್ಟಿಹಳ್ಳಿ ಸರ್ಕಾರಿ ಶಾಲೆಯನ್ನು ಕೆಲ ಪಟ್ಟಬದ್ರರು ತಮ್ಮ ಬೆಳೆ ಬೆಯಿಸಿಕೊಳ್ಳುವ ಸಲುವಾಗಿ ಇಲ್ಲಿನ ಶಿಕ್ಷಕರ ವಿರುದ್ದ ಇಲ್ಲಸಲ್ಲದ ಸಬೂಬು ಹೇಳಿ ವರ್ಗಾವಣೆ…

Read More

ನ್ಯೂಜ್ ಡೆಸ್ಕ್: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮೊನ್ನೆ ಭಾನುವಾರ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಬಳಿಕ ಮದ್ದೂರು ಪ್ರಕ್ಷುಬ್ದ ಸ್ಥಿತಿ ತಲುಪಿ ಬೂದಿ ಮುಚ್ಚಿದ ಕೆಂಡದಂತಿತ್ತು ಇದಕ್ಕಾಗಿ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳು ಬುಧವಾರ ಇಂದು ಅದ್ಧೂರಿಯಾಗಿ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆ ಜನಸಾರದ ನಡುವೆ ನಡೆಯಿತು.ಮದ್ದೂರು ಪಟ್ಟಣದಲ್ಲಿ ಪ್ರತಿಷ್ಟಾಪಿಸಿದ್ದ ಸುಮಾರು ಹತ್ತು ಗಣಪತಿ ಮೂರ್ತಿಗಳನ್ನು ಮತ್ತು ತಾಲೂಕಿನ ವಿವಿಧ ಗ್ರಾಮಗಳ 18ಕ್ಕೂ ಹೆಚ್ಚು ಗಣಪತಿ ಮೂರ್ತಿಗಳನ್ನು ಮದ್ದೂರು ಪಟ್ಟಣದಲ್ಲಿ ಅಬ್ಬರ ಮತ್ತು ಆಡಂಬರದೊಂದಿಗೆ ಒಟ್ಟು 28 ಗಣಪತಿ ಮೂರ್ತಿಗಳ ವಿಸರ್ಜನ ಮೆರವಣಿಗೆಯನ್ನು ಬಿಗಿ ಪೋಲಿಸ್ ಭದ್ರತೆ ನಡುವೆ ಮಾಡಲಾಯಿತು ಹಿಂದೂಪರ ಸಂಘಟನೆಗಳು ಆಯೋಜಿಸಿದ್ದ ಶಕ್ತಿ ಪ್ರದರ್ಶನದಲ್ಲಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಟಾಪಿಸಿದ್ದ ಯುವಕ ಸಂಘದ ಸದಸ್ಯರು ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದರು.ಮದ್ದೂರು ಪಟ್ಟಣದ ಕಾಶಿ ವಿಶ್ವನಾಥ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಹೊಳೆಬೀದಿ,ಪೇಟೆ ಬೀದಿ, ಟಿಬಿ ಸರ್ಕಲ್‌, ಹಳೆ ಬೆಂಗಳೂರು-ಮೈಸೂರು ರಸ್ತೆ ಸೇರಿದಂತೆ ಸುಮಾರು ಮೂರು ಕಿಲೋ ಮೀಟರ್‌ ದೂರ ಸಂಚರಿಸಿ…

Read More

ನ್ಯೂಜ್ ಡೆಸ್ಕ್:ಆಂಧ್ರದ ಪ್ರಭಾವಿ ಸಚಿವ ಅಲ್ಲಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮಗ Andhra Pradesh ಶಿಕ್ಷಣ ಮತ್ತು ಐಟಿ ಇಲಾಖೆ ಮಂತ್ರಿ ನಾರಾಲೋಕೇಶ್ Nara Lokesh ಅವರು ಸಾಮಾಜಿಕ ಆಧ್ಯಾತ್ಮಿಕ ಕೇಂದ್ರವಾದ ನಾಗಂಗಲದ ಶ್ರೀಆದಿಚುಂಚನಗಿರಿ ಮಹಾಸಂಸ್ಥಾನದ ಮಠ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದರುಈ ಸಂದರ್ಭದಲ್ಲಿ ನಾರಾಲೋಕೇಶ್ www.naralokesh.in ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಗದ್ದುಗೆಗೆ ಪುಜೆ ಸಲ್ಲಿಸಿ ಕ್ಷೇತ್ರದ ಕ್ಷೇತ್ರಪಾಲಕ ಶ್ರೀ ಕಾಲಭೈರವೇಶ್ವರ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ನಂತರ ಮಠದ ಪೀಠಾಧಿಪತಿ ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳ ಭೇಟಿ ಮಾಡಿದರು ಈ ಸಂದರ್ಭದಲ್ಲಿ ಮಠದ ಸಂಪ್ರದಾಯದಂತೆ ಶ್ರೀಗಳು ಮಂತ್ರಿಯನ್ನು ಗೌರವಿಸಿ ನೆನಪಿನ ಕಾಣಿಕೆ ನೀಡಿ ಆಶೀರ್ವಾದ ಮಾಡಿದರು.ಕೆಲ ಹೊತ್ತು ಮಾತುಕತೆ ನಡೆಸಿದರು. ಮಠದ ಕಾರ್ಯಚಟುವಟಿಕೆಗಳ ಮಾಹಿತಿ ಪಡೆದ ಸಚಿವಮಠದ ಆಶ್ರಯದಲ್ಲಿ ನಡೆಯುತ್ತಿರುವ ಶಾಲೆಗಳು, ಮೆಡಿಕಲ್ ಕಾಲೇಜು, ಆಸ್ಪತ್ರೆ, ವಿಶ್ವವಿದ್ಯಾಲಯಗಳಿಗೆ ಸಚಿವ ಭೇಟಿ ಇತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಕೈಗೊಂಡಿರುವ ವಿವಿಧ ಸೇವಾ, ಆಧ್ಯಾತ್ಮಿಕ ಕಾರ್ಯಕ್ರಮಗಳ ಕುರಿತು ಮಾಹಿತಿ…

Read More