Author: Srinivas_Murthy

ಶ್ರೀನಿವಾಸಪುರ: ತಾಲೂಕಿನ ಪಾತ ನೆಲವಂಕಿ ಗ್ರಾಮದಲ್ಲಿ ಜಿಲ್ಲಾಡಿತದ ನಡೆ ಹಳ್ಳಿಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಬಹುತೇಕ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯದಿಂದ ಅಂತರ ಕಾಪಾಡಿಕೊಂಡಂತೆ ಇತ್ತೆ ಇತ್ತು .ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ ಸಾರ್ವಜನಿಕರ ಮನೆ ಬಾಗಿಲಿಗೆ ಎನ್ನುತ್ತಾರೆ ಇಲ್ಲಿನೋಡಿದರೆ ಸರ್ಕಾರಿ ಕಾರ್ಯಕ್ರಮದಲ್ಲಿ ಇಲಾಖೆ ಅಧಿಕಾರಿಗಳೆ ಬಾಗವಹಿಸದೆ ಹೋದರೆ ಕಾರ್ಯಕ್ರಮ ನಡೆಯುವುದಾದರೂ ಯಾರಿಗಾಗಿ ಎನ್ನುತ್ತಾರೆ ಜನತೆ.ತಾಲ್ಲೂಕಿನ ನೆಲವಂಕಿ ಹೋಬಳಿಯ ಪಾತ ನೆಲವಂಕಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ತಹಶೀಲ್ದಾರ್ ಶೀರಿನ್ ತಾಜ್ ಉದ್ಘಾಟಿಸಿದರಾದರೂ ಕಾರ್ಯಕ್ರಮದಲ್ಲಿ ಅಧಿಕಾರಿಗಳೆ ಇರಲಿಲ್ಲ,ದೂರು ದುಮ್ಮಾನಗಳೊಂದಿಗೆ ಬಂದಿದ್ದ ಸಾರ್ವಜನಿಕರು ಯಾರಿಗೆ ಹೇಳಿಕೊಳ್ಳಬೇಕುಸಮಾಜಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಬಿ.ಇ.ಒ. ಎ.ಪಿ.ಎಂ.ಸಿ. ಸಾಮಾಜಿಕ ಅರಣ್ಯ ಮತ್ತು ವಲಯ ಅರಣ್ಯ ಇಲಾಖೆ, ಕೆ.ಎಸ್.ಆರ್.ಟಿ.ಸಿ, ಬಿ.ಸಿ.ಎಂ. ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್, ಸ್ಥಳಿಯ ಸಹಕಾರ ಸಂಘ ,ತಾಲ್ಲೂಕು ಆರೋಗ್ಯಾಧಿಕಾರಿ,ಮೀನಿಗಾರಿಕೆಇಲಾಖೆ, ಭೂ ದಾಖಲೆಗಳ ಇಲಾಖೆ ಅಧಿಕಾರಿಗಳ ಸುಳಿವು ಇಲ್ಲದಾಗಿತ್ತು ರಾಜ್ಯ ಬಿಜೆಪಿ ಸರ್ಕಾರದ ಮಹತ್ತರ ಎನ್ನುವಂತ ಜಿಲ್ಲಾಧಿಕಾರಿಗಳ ಗ್ರಾಮ…

Read More

ಶ್ರೀನಿವಾಸಪುರ:ಗದ್ದಲ ಕೂಗಾಟ ಅರಚಾಟಗಳ ನಡುವೆಯೂ ಪುರಸಭೆಯ ವಿಶೇಷ ಸಭೆಯಲ್ಲಿ ಮೂರು ವಿಷಯಗಳಿಗೆ ಒಪ್ಪಿಗೆ ಪಡೆಯಲಾಯಿತು,ಮತ್ತು ಶಾಸಕರು ಶಿಫಾರಸ್ಸು ಮಾಡಿದ್ದ ಯೋಗಿನಾರಯಣ ಪ್ರತಿಮೆ ಸ್ಥಾಪಿಸಲು ಸಭೆ ನಿರ್ಣಯಿಸಿತು.ಸಾಮಾನ್ಯ ಸಭೆ ನಡಸದೆ ನಿಮ್ಮ ಅಗತ್ಯಗಳಿಗೆ ವಿಶೇಷಸಭೆ ಕರೆದು ನಿಮ್ಮ ಅನಕೂಲಗಳನ್ನು ನೋಡಿಕೊಳ್ಲುತ್ತಿದ್ದಿರಿ ಎಂದು ಸದಸ್ಯ ರಾಜು ಪುರಸಭೆ ಮುಖ್ಯಾಧಿಕಾರಿ ಜಯರಾಂ ವಿರುದ್ದ ಆಕ್ರೋಶ ವ್ಯಕ್ತಪಡಿಸಿದಾಗ ಸದಸ್ಯ ಅನಂದಗೌಡ ರಸೂಲು ಮುಂತಾದವರು ಸಾಥ್ ನೀಡಿದರು ಈ ಸಂದರ್ಭದಲ್ಲಿ ಸಭೆಯಲ್ಲಿ ಗದ್ದಲ ಶುರುವಾಯಿತು ಸದಸ್ಯರ ಕೂಗಾಟ ಎಲ್ಲೆ ಮೀರಿತು ಇದರ ನಡುವೆ ಅಡಳಿತ ಪಕ್ಷದ ಭಾಸ್ಕರ್ ಪುರಸಭೆಯಲ್ಲಿ ಜೆಸಿಬಿ ಇದ್ದರು ಹೊರಗಡೆಯಿಂದ ಜೆಸಿಬಿ ಕರೆಸಿ ಕೆಲಸ ಮಾಡಿಸಿ ಅಕ್ರಮವಾಗಿ ಬಿಲ್ಲುಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದಾಗ ತೊತ್ಲಾಶಬ್ಬಿರ್ ಮುಂತಾದವರು ಹೌದು ಅಕ್ರಮಗಳು ನಡೆಯುತ್ತಿದೆ ಎಂದು ಕೂಗಾಡಿದರು.ನಾಮಿನಿ ಸದಸ್ಯ ನಲ್ಲಪಲ್ಲಿರೆಡ್ದೆಪ್ಪ ಮಾತನಾಡಿ ಪುರಸಬೆಗೆ ನೂತನವಾಗಿ ಸೇರಿಸಿಕೊಂಡಿರುವಂತ ಹಳ್ಳಿಗಳ ನಿವೇಶನ ಮನೆಗಳನ್ನು ಪುರಸಬೆಗೆ ಸೇರಿಸುವ ಕುರಿತಾಗಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು ಇದಕ್ಕೆ ಪಕ್ಷ ಬೇದ ಮರೆತು ಸದಸ್ಯರು ಬೆಂಬಲಿಸಿದಾಗ ಮುಖ್ಯಾಧಿಕಾರಿ ಈ…

Read More

ಶ್ರೀನಿವಾಸಪುರ : KSRTC ಬಸ್ಸುಗಳನ್ನು ಮದುವೆ ರಾಜಕೀಯ ಸಮಾವವೇಶಗಳಿಗೆ ಒಪ್ಪಂದದ ಮೇರೆಗೆದೊಡ್ದ ಸಂಖ್ಯೆಯಲ್ಲಿ ಬಸ್ಸುಗಳನ್ನು ಕಳೆಸುತ್ತಿರುವುದರಿಂದ, ಮಾರ್ಗದಲ್ಲಿ ರೆಗ್ಯೂಲರ್ ಆಗಿ ಒಡಾಡುತ್ತಿದ್ದ ಬಸ್ಸುಗಳಿಲ್ಲದೆ ಹಳ್ಳಿಗಾಡಿನ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಲು ಹಾಗು ಸಾರ್ವಜನಿಕರು ಪಟ್ಟಣ ಪ್ರದೇಶಗಳಿಗೆ ಒಡಾಡಲು ಪ್ರಯಾಸ ಪಡುವಂತಾಗಿದೆ ಎಂದು ಆರೋಪಿಸಿ ಕೂರಿಗೇಪಲ್ಲಿ ಮುದಿಮಡಗು ಭಾಗದ ವಿದ್ಯಾರ್ಥಿಗಳು ಹಾಗು ಸಾರ್ವಜನಿಕರು ತಮ್ಮ ಗ್ರಾಮಕ್ಕೆ ಬಂದಂತ ಬಸ್ ಅನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.ಶ್ರೀನಿವಾಸಪುರ ತಾಲೂಕಿನ ಬಹುತೇಕ ಗಡಿಯಂಚಿನ ಗ್ರಾಮಗಳಿಗೆ ಶ್ರೀನಿವಾಸಪುರ ಹಾಗು ಚಿಂತಾಮಣಿಯಿಂದ ಶಾಲಾ ಕಾಲೇಜು ಸಮಯಕ್ಕೆ ಬಸ್ ಗಳನ್ನು ಕೆ ಎಸ್ ಆರ್ ಟಿ ಸಿ ಒದಗಿಸಿದೆ. ಇತ್ತಿಚಿಗೆ ರಾಜಕೀಯ ಸಮಾವೇಶಗಳು ಇತರೆ ಖಾಸಗಿ ಕಾರ್ಯಕ್ರಮಗಳು ಸಬೆ ಸಮಾರಂಬಗಳಿಗೆ ತೆರಳಲು KSRTC ಸಂಸ್ಥೆ ಬಸ್ಸುಗಳನ್ನು ಒಪ್ಪಂದದ ಮೇರೆಗೆ ಕಳಿಸುತ್ತಿರುವ ಹಿನ್ನಲೆಯಲ್ಲಿ ರೆಗ್ಯೂಲರ್ ಆಗಿ ಒಡಾಡುವ ಮಾರ್ಗದಲ್ಲಿ ಬಸ್ ಇಲ್ಲದಂತಾಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುತ್ತದೆ ಜೊತೆಗೆ ಬಡ ವಿದ್ಯಾರ್ಥಿಗಳು ಪಾಸ್ ಇದ್ದರು ಇಂತಹ ಸಂದರ್ಬದಲ್ಲಿ ದುಬಾರಿ ಹಣ ತೆತ್ತು…

Read More

ಶ್ರೀನಿವಾಸಪುರ: ತೆಲುಗು ಚಿತ್ರ ರಂಗದ ರೆಬಲ್ ಸ್ಟಾರ್ ಕೃಷ್ಣಂರಾಜು ಹಾಗು ಪದ್ಮಶ್ರೀ,ನಟಶೇಖರ ಕೃಷ್ಣ ಅವರುಗಳಿಗೆ ಶ್ರೀನಿವಾಸಪುರದಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಶ್ರದ್ದಾಂಜಲಿ ಅರ್ಪಿಸಲಾಯಿತು.ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗು ದಲಿತ ಸಮುದಾಯದ ಹಿರಿಯ ಮುಖಂಡ ಉಪ್ಪರಪಲ್ಲಿ ತಿಮ್ಮಯ್ಯ ಮಾತನಾಡಿ ತೆಲುಗು ಚಿತ್ರ ನಟರಾದ ಹಾಗು ಕೃಷ್ಣಂರಾಜು ಒಂದೇ ಸಮಕಾಲಿನ ನಟರು ಇಬ್ಬರು ಸಹ ನಿರ್ದೇಶಕರಾಗಿ ನಿರ್ಮಾಪಕರು ಆಗಿದ್ದರು.ಬ್ರಿಟಿಷರ್ ವಿರುದ್ದ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸಿತಾರಾಮರಾಜು ಪಾತ್ರ ಮಾಡುವ ಮೂಲಕ ತೆಲಗು ಸಿನಿಮಾ ಮೂಲಕ ದೊಡ್ಡಸ್ಟಾರ್ ಪಟ್ಟ ಗಳಿಸಿದ ಸೂಪರ್ ಸ್ಟಾರ್ ಕೃಷ್ಣ ಅದ್ಭುತವಾದ ಕಲಾವಿದ ಮಹಾನ್ ಸಾಹಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತ ಕೌಟುಂಬಿಕ ಸಾಮರಸ್ಯದ ಅನೇಕ ಚಿತ್ರಗಳಲ್ಲಿ ನಟಿಸಿ ತೆಲಗು ಚಿತ್ರರಂಗದಲ್ಲಿ ದಾಖಲೆ ಸೃಷ್ಟಿಸಿದ ಮೇರು ನಟರಾಗಿದ್ದ ಕೃಷ್ಣ ರಾಜಕೀಯವಾಗಿ ದೂರ ಉಳಿದಿದ್ದರು ಎಂದು ಅವರ ಜೀವನ ಚರಿತ್ರೆಯ ಕುರಿತಾಗಿ ಹೇಳಿದರು.ತೆಲಗು ಚಿತ್ರ ರಂಗದ ರೆಬೆಲ್ ಸ್ಟಾರ್ ಕೃಷ್ಣಂರಾಜು ಸಹ…

Read More

ಶ್ರೀನಿವಾಸಪುರ:ಬೆಸ್ಕಾಂ ಸಿಬ್ಬಂದಿ ವಿದ್ಯತ್ ಕಂಬದ ಮೇಲೆ ಹರಡಿದ್ದ ಮರದ ಕೊಂಬೆ ತಗೆಯುವಾಗ ಮುರಿದ ವಿದ್ಯತ್ ಕಂಬಗಳು ಶಾಲ ಆವರಣದಲ್ಲಿ ಉರಳಿ ಬಿದ್ದು ಆವರಣದಲ್ಲಿ ಊಟ ಮಾಡುತ್ತಿದ್ದ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯಲ್ಲಿರುವ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಯಲ್ಲಿ ಇಂದು ಮಧ್ಯಾನಃ ನಡೆದಿರುತ್ತದೆ ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಮಾರಣಾಂತಿಕವಾಗಿ ಗಾಯಗೊಂಡಿರುತ್ತಾರೆ. ಕಂಬ ಬಿಳುತ್ತಿದ್ದಂತೆ ವಿದ್ಯಾರ್ಥಿಗಳು ಒಡಿ ಹೋಗಲು ಪ್ರಯತ್ನಿಸಿರುತ್ತಾರೆ ಆದರೂ ಸಾಧ್ಯವಾಗದೆ ಗಾಯಗೊಂಡಿರುತ್ತಾರೆ ಅವರು ಊಟ ತಟ್ಟೆ ನೀರಿನ ಬಾಟಲಗಳು ಚಪ್ಪಲಿಗಳು ಕಂಬದ ಅಡಿಯಲ್ಲಿ ಸಿಲುಕಿ ನುಜ್ಜುಗುಜ್ಜಾಗಿವೆ.ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ಹಾದು ಹೋಗಿರುವ ವಿದ್ಯತ್ ತಂತಿಗಳ ಮೇಲೆ ಶಾಲ ಅವರಣದಲ್ಲಿನ ಮರದ ಕೊಂಬೆಗಳು ಹರಡಿಕೊಂಡಿದ್ದು ಇದನ್ನು ತೆರವುಗೊಳಿಸುವ ಸಲುವಾಗಿ ಬೆಸ್ಕಾಂ ಸಿಬ್ಬಂದಿ ಕೊಂಬೆಗಳನ್ನು ಕಡದಿರುತ್ತಾರೆ ಕಡಿದ ಕೊಂಬೆಗಳು ವಿದ್ಯತ್ ತಂತಿಗಳ ಮೇಲೆ ಬಿದ್ದಾಗ ಅದನ್ನು ತಗೆಯಲು ಬೆಸ್ಕಾಂ ಸಿಬ್ಬಂದಿ ಇಲ್ಲದೆ ಹಗ್ಗ ಹಾಕಿ ಎಳೆದಾಗ ಎರಡು ವಿದ್ಯತ್ ಕಂಬಗಳು ನೆಲಕ್ಕೆ ಉರಳಿ ಬಿದ್ದಿವೆ ಈ ಸಂದರ್ಭದಲ್ಲಿ ಶಾಲಾ…

Read More

ಶ್ರೀನಿವಾಸಪುರ:ಕನಾ೯ಟಕ ರಾಜ್ಯ ದೇವಗಾಣಿಗ,ಓಂಟೆತ್ತು ಗಾಣಿಗರ ಸಂಘದ ರಾಜ್ಯ ಮಟ್ಟದ ಸಮಾವೇಶ ಡಿಸೆಂಬರ್ 18 ರಂದು ಬೆಂಗಳೂರಿನಲ್ಲಿ ನಡೆಯಲಿರುವುದಾಗಿ ಈ ಸಮಾವೇಶಕ್ಕೆ ತಾಲೂಕಿನಲ್ಲಿರುವ ದೇವಗಾಣಿಗ ಮತ್ತು ಓಂಟೆತ್ತು ಗಾಣಿಗರ ಕುಲಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕನಾ೯ಟಕ ರಾಜ್ಯ ದೇವಗಾಣಿಗರ ಸಂಘದ ಅಧ್ಯಕ್ಷ ಕುರುಬೂರು ರಮೇಶ್ ಹೇಳಿದರು ಅವರು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಗಾಣಿಗರ ಸಂಘದ ರಾಜ್ಯ ಮಟ್ಟದ ಸಮಾವೇಶ ಸಂಬಂಧ ಆಯೋಜಿಸಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಗಾಣಿಗ ಸಮುದಾಯಗಳ ಜನತೆ ಸಂಘಟಿತರಾಗಬೇಕಿದೆ ಸರ್ಕಾರದ ಮೀಸಲಾತಿ ಪಟ್ಟಿಯಲ್ಲಿ ನಮ್ಮ ಸಮಾಜದ ಹೆಸರು ಗಾಂಡ್ಲ ಎಂದು ನಮೂದಾಗಿದೆ ಇದನ್ನು ಸರ್ಕಾರ ತೀವ್ರವಾಗಿ ಪರಿಗಣಿಸಿ ದೇವಗಾಣಿಗ ಹಾಗು ಒಂಟೆತ್ತು ಗಾಣಿಗ ಎಂದು ನಮೂದಿಸಿ ಮೀಸಲಾತಿ 2 ಉಪಜಾತಿಯಾಗಿ ನಮೂದಿಸಬೇಕೆದೆ ಗಾಣಿಗ ಅಭಿವೃದ್ದಿ ನಿಗಮ ಸ್ಥಾಪಿಸುವ ಮೂಲಕ ಸಮಾಜದ ಅಭಿವೃದ್ದಿಗೆ ಸರ್ಕಾರ ಮುಂದಾಗಬೇಕು ಈ ಸಮಾವೇಶದಲ್ಲಿ ದೇವ ಜ್ಯೋತಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಾರಂಭ ಮಾಡಲಾಗುತ್ತದೆ ಹಾಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ…

Read More

ಕೋಲಾರ: ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರು ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುವುದಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿರುತ್ತಾರೆ.ಶ್ರೀನಿವಾಸಪುರದಲ್ಲಿ ಶನಿವಾರ ಶ್ರೀ ವೆಂಕಟೇಶ್ ಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕುರಿತಾಗಿ ಕೋಲಾರದಲ್ಲಿ ಮಾಧ್ಯಮದವರಲ್ಲಿ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು. ವ್ಯಕ್ತಿಗಿಂತ ಪಕ್ಷ ದೊಡ್ದದು ಪಕ್ಷ ಯಾರನ್ನು ಗುರುತಿಸಿ ಟಿಕೆಟ್ ನೀಡಿದರೆ ಅವರೆ ಅಧಿಕೃತ ಅಭ್ಯರ್ಥಿ ಯಾರಿಗೂ ನಾನು ಅಡ್ಡಿ ಪಡಿಸಲು ಹೋಗುವುದಿಲ್ಲ ಎಂದ ಅವರು ನನ್ನ ಅವಶ್ಯಕತೆ ಇದ್ದರೆ ನನಗೆ ಪಕ್ಷ ಟಿಕೆಟ್ ನೀಡುತ್ತದೆ ಎಂದು ಮಾರ್ಮಿಕವಾಗಿ ನುಡಿದಿರುತ್ತಾರೆ.

Read More

ನ್ಯೂಜ್ ಡೆಸ್ಕ್: ತೆಲಗುಚಿತ್ರರಂಗದ ಸ್ಟಾರ್ ನಟ ನಟಸಿಂಹ ನಂದಮೂರಿ ಬಾಲಕೃಷ್ಣ ಮತ್ತು ನಿರ್ದೇಶಕ ಗೋಪಚಂದ್ ಮಲ್ಲಿನೇನಿ ಕಾಂಬಿನೇಷನ್ ನಲ್ಲಿ ಮಾಸ್ ಆಕ್ಷನ್ ಎಂಟರ್‌ಟೈನರ್ ವೀರಸಿಂಹ ರೆಡ್ಡಿ.ಸಂಪೂರ್ಣ ಕಮರ್ಷಿಯಲ್ ಎಂಟರ್‌ಟೈನರ್ ಶೂಟಿಂಗ್ ಶುರುವಾಗಿರುದ್ದು ಬಾಲಕೃಷ್ಣ ಅಭಿಮಾನಿಗಳು ಬಿಡುಗಡೆಗೆ ಕಾಯುತ್ತಿದ್ದಾರೆ.ವೀರಸಿಂಹ ರೆಡ್ಡಿ ಚಿತ್ರಕ್ಕೆ ಗಾಡ್ ಆಫ್ ಮಾಸ್ ಎಂದು ಉಪ ಶೀರ್ಷಿಕೆ ನೀಡಲಾಗಿದೆ. ಈ ಶೀರ್ಷಿಕೆಯಂತೆ ಬಾಲಯ್ಯ ಊರು ಮಾಸ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.ಕೆಲವು ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕ ಗೋಪಿಚಂದ್ ಮಲಿನೇನಿ ಈ ಕಥೆಯನ್ನು ಸಿದ್ಧಪಡಿಸಿದ್ದಾರೆ.ಅಖಂಡ ಬ್ಲಾಕ್‌ಬಸ್ಟರ್‌ ಹಿಟ್ ನಂತರ ಬಾಲಕೃಷ್ಣ ಅಭಿಮಾನಿಗಳು ಮತ್ತೊಂದು ಯಶಸ್ಸಿಗೆ ಕಾಯುತ್ತಿದ್ದರೆ ನಿರ್ದೇಶಕ ಗೋಪಚಂದ್ ಮಲ್ಲಿನೇನಿ “ಕ್ರಾಕ್‌” ಸಿನಿಮಾದ ಯಶಸ್ವಿಯ ಫಾರ್ಮ್ ನಲ್ಲಿದ್ದಾರೆ. ಸಿನಿ ಪ್ರೇಕ್ಷಕರು ಈ ಜೋಡಿಯಿಂದ ಮತ್ತೊಂದು ಬ್ಲಾಕ್ ಬಸ್ಟರ್ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಇಲ್ಲಿ ಮತ್ತೊಂದು ರೋಚಕ ಅಂಶವೆಂದರೆ ವೀರಸಿಂಹರೆಡ್ಡಿ ಕರ್ನೂಲ್ ಫ್ಯಾಕ್ಷನ್ ಹಿನ್ನೆಲೆಯಲ್ಲಿ ಮೂಡಿಬರಲಿದೆ ಎನ್ನಲಾಗುತ್ತಿದೆ.ಚಿತ್ರಕ್ಕೆ ಸಂಬಂಧಿಸಿದ ಕೆಲಸಗಳು ಶರವೇಗದಲ್ಲಿ ಸಾಗುತ್ತಿದ್ದು ಈ ತಿಂಗಳ 9 ರಿಂದ 13 ರವರೆಗೆ ಐದು…

Read More

ಶ್ರೀನಿವಾಸಪುರ: ಬಿಜೆಪಿ ಮುಖಂಡ ಕ್ಷೇತ್ರದ ಟಿಕೆಟ್ ಅಕಾಂಕ್ಷಿಯಾಗಿರುವ SLN ಮಂಜುನಾಥ್ ನಿಧಾನವಾಗಿ ಕ್ಷೇತ್ರದಲ್ಲಿ ನೆಲೆ ಉರುವ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿದ್ದಾರೆ ಕಾರ್ಯಕರ್ತರ ಸಮಾರಂಭಗಳಲ್ಲಿ ಪಾಲ್ಗೋಳ್ಳುವ ಮೂಲಕ ಭಾನುವಾರ ವಿಕೇಂಡ್ ಟ್ರಿಪ್ ಎನ್ನುವಂತೆ ಕ್ಷೇತ್ರಾದ್ಯಂತ ಆಕ್ಟಿವ್ ಆಗಿ ಒಡಾಡಿದ್ದಾರೆ. ತಾಲೂಕಿನಲ್ಲಿ ಇಂದು ನಡೆದ ಬಿಜೆಪಿ ಪಕ್ಷದ ಕಾರ್ಯಕ್ರಮಗಳಲ್ಲಿ ಮತ್ತು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ ಬೆಳ್ಳಂಬೆಳಿಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಹಾಗು ತಾಲೂಕು ಅಧ್ಯಕ್ಷ ಅಶೋಕ್ ರೆಡ್ದಿ ಅವರೊಂದಿಗೆ ಪಕ್ಷದ ಸಂಘಟನೆ ಕುರಿತಂತೆ ನಡೆದ ಸಭೆಯಲ್ಲಿ ಪಾಲ್ಗೋಂಡಿದ್ದ ಮಂಜು ಅಲ್ಲಿಂದ ರೋಣೂರಿನ ಆಪ್ತರ ಮನೆ ಗೃಹಪ್ರವೇಶದಲ್ಲಿ ಪಾಲ್ಗೋಂಡಿದ್ದರು ನಂತರ ಲಕ್ಷ್ಮೀಪುರದಲ್ಲಿ ಪ್ರಭಾವಿ ಮುಖಂಡರೊಬ್ಬರನ್ನು ಭೇಟಿಯಾಗಿ ಬಿಜೆಪಿ ಸೇರುವಂತೆ ಅಹ್ವಾನ ನೀಡಿರುತ್ತಾರೆ, ಅಲ್ಲಿಂದ ನೇರವಾಗಿ ಚಿಂತಾಮಣಿಯ VPಪ್ಯಾಲೆಸ್ ನಲ್ಲಿ ನಡೆದ ಪುರಸಭೆ ಸದಸ್ಯ ಭಾಸ್ಕರ್ ಮಗನ ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀನಿವಾಸಪುರಕ್ಕೆ ಆಗಮಿಸಿ ಪಟ್ಟಣದ ಮೋತಿಲಾಲ್ ರಸ್ತೆಯಲ್ಲಿ ತಮ್ಮ ಆಪ್ತ ಕಾರ್ಯಕರ್ತನ ಹುಟ್ಟಿದಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಚಲ್ದಾಗನಹಳ್ಳಿ ಬಳಿ ಯುವ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ…

Read More

ಕೋಲಾರ:ಮುಂಬರುವ 2023 ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಪದೇ ಪದೇ ಒತ್ತಡ ಹೇರುತ್ತಿರುವುರುವ ಹಿನ್ನಲೆಯಲ್ಲಿ ಸ್ಪರ್ದಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹಾಗು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಕೋಲಾರದಲ್ಲಿ ಹೇಳಿದರು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ತರಬೇಕು ಎಂಬ ಉದ್ದೇಶದಿಂದ ಎಲ್ಲಾ ಜನರು ಪಕ್ಷವನ್ನು ಬೆಂಬಲಿಸುವ ಅವಶ್ಯಕತೆ ಇದೆ ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆಯ ಭಾಗವಾಗಿ ಜಿಲ್ಲೆಗೆ ಭೇಟಿ ನೀಡಿರುವುದಾಗಿ ಸಿದ್ದರಾಮಯ್ಯ ಹೇಳಿದರು. ಸಿದ್ದರಾಮಯ್ಯ ಇಂದು ಬೆಂಗಳೂರಿನಿಂದ ವಿಶೇಷ ಬಸ್(Caravan) ನಲ್ಲಿ ಕೋಲಾರಕ್ಕೆ ಆಗಮಿಸಿದ ಅವರನ್ನು ಕಾಂಗ್ರೆಸ್ ಮುಖಂಡರು ಅದ್ಧೂರಿಯಾಗಿ ಸ್ವಾಗತ ಮಾಡಿದರು.ಕೋಲಾರಕ್ಕೆ ಆಗಮಿಸಿದ ಕೂಡಲೇ ಸಿದ್ದರಾಮಯ್ಯ ನೇರವಾಗಿ ಕೋಲಾರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು ನಂತರ ಚರ್ಚ್ ಗೆ ಹೋಗಿ ಪ್ರಾರ್ಥನೆ ಸಲ್ಲಿಸಿದರು ಅಲ್ಲಿ ಕ್ರೈಸ್ತ ಸಮುದಾಯದ ಮುಖಂಡರೊಂದಿಗೆ ಮಾತನಾಡಿ ನಾನು ಇವತ್ತು ನಾಮಿನೇಷನ್‌ ಮಾಡಲು ಬಂದಿಲ್ಲ. ಕೋಲಾರದಲ್ಲಿ ನಿಲ್ಲಬೇಕು ಎಂದು ಒತ್ತಡವಿದೆ ಇಲ್ಲಿನ ಜನರ ಮೇಲೆ ಪ್ರೀತಿ ಇದೆ.…

Read More