ಶ್ರೀನಿವಾಸಪುರ:ದೇವರ ಪೂಜೆ ಹವನ ಹೋಮ ನಮ್ಮ ಹಿರಿಕರು ಹಾಕಿಕೊಟ್ಟ ಸಂಸ್ಕೃತಿ ಎಂದು ಶ್ರೀ ಅನ್ನುಪೂರ್ಣೆಶ್ವರಿ ಮಹಿಳಾ ಮಂಡಳಿ ಪ್ರತಿನಿಧಿಗಳು ಹೇಳುತ್ತಾರೆ ಅವರು ನವರಾತ್ರಿ ಅಂಗವಾಗಿ ತಮ್ಮ ಮಂಡಳಿಯಲ್ಲಿ ದಸರ ಬೊಂಬೆ ಕೂರಿಸಿ ದುರ್ಗಾದೇವಿಯನ್ನು ಪ್ರತಿಷ್ಠಾಪಿಸಿ ಒಂಬತ್ತು ದಿನಗಳ ಕಾಲ ಸಂಪ್ರದಾಯದಂತೆ ನವದುರ್ಗೆ ವೈಭವ ಎನ್ನುವ ರಿತಿಯಲ್ಲಿ ಪ್ರತಿದಿನ ವೈಶಿಷ್ಠವಾಗಿ ವಿವಿಧ ರೂಪದಲ್ಲಿ ಅಲಂಕರಿಸಿ ಪೂಜೆ ಸಲ್ಲಿಸುತ್ತಾರೆ ಅದರಂತೆ ಬಾಲತ್ರಿಪುರ ಸುಂದರಿ ದೇವಿ ರೂಪದಲ್ಲೂ ಪೂಜೆ ಸಲ್ಲಿಸುವುದು ಪದ್ದತಿ ಎಂದು ಮಹಿಳಾ ಮಂಡಳಿ ಪ್ರತಿನಿಧಿ ವಿನಿತಾಶ್ರೀನಿವಾಸನ್ ಹೇಳುತ್ತಾರೆ.
ದುರ್ಗಾದೇವಿಯನ್ನು ತ್ರಿಪುರಸುಂದರಿ, ಬಾಲಾತ್ರಿಪುರ ಸುಂದರಿ, ಮತ್ತು ತ್ರಿಪುರ ಭೈರವಿ ಎಂಬ ಮೂರು ರೂಪಗಳಲ್ಲಿ ಪೂಜಿಸಲಾಗುತ್ತದೆ ತ್ರಿಪುರ ಬಾಲಾ ಸುಂದರಿ ಯುವ ಕನ್ಯೆಯ ದೇವತೆಯ ಪ್ರತಿನಿಧಿಯಾಗಿ ಸಣ್ಣ ವೈಯಸ್ಸಿನ ಹೆಣ್ಮಕ್ಕಳನ್ನು ಕೂರಿಸಿ ಅಲಂಕಾರ ಮಾಡಿ ಬಾಲ ತ್ರಿಪುರ ಸುಂದರಿ ಪ್ರತೀಕ ಎಂದು ಪೂಜೆ ಸಲ್ಲಿಸುವುದು ಹಿರಿಯರು ಹಾಕಿಕೊಟ್ಟಂತ ಆದ್ಯಾತ್ಮಿಕ ಸಂಪ್ರದಾಯ ಎಂದು ವಿವರಿಸುತ್ತಾರೆ.ಅದರಂತೆ ವೈಶಿಷ್ಠತೆಯಿಂದ ಅಲಂಕಾರ ಮಾಡಿದ ಹೆಣ್ಮಗುವನ್ನು ಕೂರಿಸಿ ಆಕೆಯನ್ನು ದೇವರೆಂದು ಪೂಜಿಸಲಾಗುತ್ತದೆ ಹಿರಿಯರಾದಿಯಾಗಿ ಆಕೆಗೆ ಪೂಜೆ ಸಲ್ಲಿಸಿ ಆಶಿರ್ವಾದ ಪಡೆಯುವುದು ವಾಡಿಕೆ.ಪೂಜಾ ಕಾರ್ಯಕ್ರಮದಲ್ಲಿ ಮಹಿಳಾ ಮಂಡಳಿ ಸದಸ್ಯರಾದ ವನಜಾಕ್ಷ್ಮಮ್ಮ,ಮಾಲಿನಿಸುರೇಶ್,ಸಹನಾಶಿವಕುಮಾರ್,ಧನಲಕ್ಷ್ಮಿ ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



