ಶ್ರೀನಿವಾಸಪುರ:ತಾಲೂಕಿನ ಕಸಬಾ ಹೋಬಳಿ ಪಾಳ್ಯ ಗ್ರಾಮದ ಹಾಲು ಉತ್ಪಾದಕರ ಸಂಘಕ್ಕೆ ಹಿರಿಯ ಸಹಕಾರಿ ಧುರಿಣ ಹಾಗು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟದ ಮಾಜಿ ನಿರ್ದೇಶಕ ಭೈರಾರೆಡ್ಡಿ ಆರನೆಯ ಬಾರಿಗೆ ಆವಿರೋಧವಾಗಿ ಆಯ್ಕೆಯಾಗಿದ್ದಾರೆ.ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭೈರಾರೆಡ್ಡಿ ಒಬ್ಬರೆ ನಾಮ ಪತ್ರವನ್ನು ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿದ್ದ ಶಂಕರ ನಾಮಪತ್ರ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಪರಿಶೀಲಿಸಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಆಗಿರುವುದನ್ನು ಘೋಷಿಸಿದರು.ಸುಮಾರು 12 ಮಂದಿ ನಿರ್ದೇಶಕರು ಇರುವ ಸಹಕಾರ ಸಂಘದಲ್ಲಿ ಭೈರಾರೆಡ್ಡಿ ಆರನೆಯ ಬಾರಿಗೆ ಅಧ್ಯಕ್ಷರಾಗಿ ಅಯ್ಕೆಯಾಗುವ ಮೂಲಕ ದಾಖಲೆ ಮಾಡಿರುತ್ತಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ಭೈರಾರೆಡ್ಡಿ ಮಾತನಾಡಿ ಕಸಬಾ ಹೋಬಳಿಯಲ್ಲಿ ಅತಿ ಹೆಚ್ಚುಹಾಲು ಶೇಖರಣೆಯಾಗುತ್ತಿರುವ ಹೆಗ್ಗಳಿಕೆ ಇರುವ ಪಾಳ್ಯ ಹಾಲು ಉತ್ಪಾದಕರ ಸಂಘದ ಅಭಿವೃದ್ಧಿಗಾಗಿ ಸದಸ್ಯರು ಮತ್ತು ನಿರ್ದೇಶಕರ ವಿಶ್ವಾಸ ತೆಗೆದುಕೊಂಡು ಯಾವುದೇ ಪಕ್ಷ ಬೇಧವಿಲ್ಲದೇ ಶ್ರಮಿಸುವುದಾಗಿ ಹೇಳಿದರು. ಹಾಲು ಉತ್ಪಾದಕರಿಗೆ ಸಹಕಾರ ಸಂಘದಿಂದ ಬರುವ ಸವಲತ್ತು ಮತ್ತು ಸಾಲ ಸೌಲಭ್ಯಗಳನ್ನು ನೇರವಾಗಿ ಹಾಲು ಉತ್ಪಾದಕರಿಗೆ ತಲುಪಿಸುವಂತ ಕಾರ್ಯ ಮಾಡುವುದಾಗಿ ಭರವಸೆ ಇತ್ತರು.
ಈ ಸಂದರ್ಭದಲ್ಲಿ ಸಹಕಾರ ಸಂಘದ ನಿರ್ದೇಶಕರಾದ ಪಾಪಿರೆಡ್ಡಿ,ಚೌಡರೆಡ್ಡಿ,ಬಿ.ಕೋದಂಡರೆಡ್ಡಿ, ನಾರಾಯಣಸ್ವಾಮಿ, ವಿ.ಕೋದಂಡರೆಡ್ಡಿ, ಪಿ.ಎಂ.ನಾರಾಯಣರೆಡ್ಡಿ,ಲಕ್ಷ್ಮಣರೆಡ್ಡಿ,ರೆಡ್ಡೆಪ್ಪ,ಜಯಮ್ಮ,ಆಶೋಕನಾಯಕ,ರಾಮಕೃಷ್ಣಪ್ಪ ಸೇರಿದಂತೆ ಸಂಘದ ಕಾರ್ಯದರ್ಶಿ ಪಿ.ಆರ್.ಶ್ರೀನಿವಾಸಶೆಟ್ಟಿ ಇದ್ದರು.ಈ ಸಂದರ್ಭದಲ್ಲಿ ಗ್ರಾಮದ ಯುವ ಮುಖಂಡ ಗೋಪಾಲರೆಡ್ಡಿ ನೂತನ ಅಧ್ಯಕ್ಷರಿಗೆ ಶುಭಕೋರಿದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14