ಶ್ರೀನಿವಾಸಪುರ:ತಾಲೂಕಿನ ಕಸಬಾ ಹೋಬಳಿ ಪಾಳ್ಯ ಗ್ರಾಮದ ಹಾಲು ಉತ್ಪಾದಕರ ಸಂಘಕ್ಕೆ ಹಿರಿಯ ಸಹಕಾರಿ ಧುರಿಣ ಹಾಗು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟದ ಮಾಜಿ ನಿರ್ದೇಶಕ ಭೈರಾರೆಡ್ಡಿ ಆರನೆಯ ಬಾರಿಗೆ ಆವಿರೋಧವಾಗಿ ಆಯ್ಕೆಯಾಗಿದ್ದಾರೆ.ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭೈರಾರೆಡ್ಡಿ ಒಬ್ಬರೆ ನಾಮ ಪತ್ರವನ್ನು ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿದ್ದ ಶಂಕರ ನಾಮಪತ್ರ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಪರಿಶೀಲಿಸಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಆಗಿರುವುದನ್ನು ಘೋಷಿಸಿದರು.ಸುಮಾರು 12 ಮಂದಿ ನಿರ್ದೇಶಕರು ಇರುವ ಸಹಕಾರ ಸಂಘದಲ್ಲಿ ಭೈರಾರೆಡ್ಡಿ ಆರನೆಯ ಬಾರಿಗೆ ಅಧ್ಯಕ್ಷರಾಗಿ ಅಯ್ಕೆಯಾಗುವ ಮೂಲಕ ದಾಖಲೆ ಮಾಡಿರುತ್ತಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ಭೈರಾರೆಡ್ಡಿ ಮಾತನಾಡಿ ಕಸಬಾ ಹೋಬಳಿಯಲ್ಲಿ ಅತಿ ಹೆಚ್ಚುಹಾಲು ಶೇಖರಣೆಯಾಗುತ್ತಿರುವ ಹೆಗ್ಗಳಿಕೆ ಇರುವ ಪಾಳ್ಯ ಹಾಲು ಉತ್ಪಾದಕರ ಸಂಘದ ಅಭಿವೃದ್ಧಿಗಾಗಿ ಸದಸ್ಯರು ಮತ್ತು ನಿರ್ದೇಶಕರ ವಿಶ್ವಾಸ ತೆಗೆದುಕೊಂಡು ಯಾವುದೇ ಪಕ್ಷ ಬೇಧವಿಲ್ಲದೇ ಶ್ರಮಿಸುವುದಾಗಿ ಹೇಳಿದರು. ಹಾಲು ಉತ್ಪಾದಕರಿಗೆ ಸಹಕಾರ ಸಂಘದಿಂದ ಬರುವ ಸವಲತ್ತು ಮತ್ತು ಸಾಲ ಸೌಲಭ್ಯಗಳನ್ನು ನೇರವಾಗಿ ಹಾಲು ಉತ್ಪಾದಕರಿಗೆ ತಲುಪಿಸುವಂತ ಕಾರ್ಯ ಮಾಡುವುದಾಗಿ ಭರವಸೆ ಇತ್ತರು.
ಈ ಸಂದರ್ಭದಲ್ಲಿ ಸಹಕಾರ ಸಂಘದ ನಿರ್ದೇಶಕರಾದ ಪಾಪಿರೆಡ್ಡಿ,ಚೌಡರೆಡ್ಡಿ,ಬಿ.ಕೋದಂಡರೆಡ್ಡಿ, ನಾರಾಯಣಸ್ವಾಮಿ, ವಿ.ಕೋದಂಡರೆಡ್ಡಿ, ಪಿ.ಎಂ.ನಾರಾಯಣರೆಡ್ಡಿ,ಲಕ್ಷ್ಮಣರೆಡ್ಡಿ,ರೆಡ್ಡೆಪ್ಪ,ಜಯಮ್ಮ,ಆಶೋಕನಾಯಕ,ರಾಮಕೃಷ್ಣಪ್ಪ ಸೇರಿದಂತೆ ಸಂಘದ ಕಾರ್ಯದರ್ಶಿ ಪಿ.ಆರ್.ಶ್ರೀನಿವಾಸಶೆಟ್ಟಿ ಇದ್ದರು.ಈ ಸಂದರ್ಭದಲ್ಲಿ ಗ್ರಾಮದ ಯುವ ಮುಖಂಡ ಗೋಪಾಲರೆಡ್ಡಿ ನೂತನ ಅಧ್ಯಕ್ಷರಿಗೆ ಶುಭಕೋರಿದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27