ಶ್ರೀನಿವಾಸಪುರ: ಶ್ರೀನಿವಾಸಪುರದಲ್ಲಿ ಅದೇಷ್ಟೊ ಗ್ರಾಮೀಣ ಕುಟುಂಬಗಳ ಮಕ್ಕಳಿಗೆ ಆಸರೆ ನೀಡಿ ಅನ್ನ ಶಿಕ್ಷಣ ನೀಡಿದ ಅವರು ಶ್ರೀ ಭೈರವೇಶ್ವರ ಶಿಕ್ಷಣ ಸಂಸ್ಥೆ ಸ್ಥಾಪಕರಾಗಿದ್ದ ಖ್ಯಾತ ಶಿಕ್ಷಣ ತಜ್ಞ,ಪರಿಸರ ಪ್ರೇಮಿ ಶ್ರೀನಿವಾಸಪುರ ತಾಲೂಕಿನಲ್ಲಿ ತ್ರಿದಾಹೋಹಿ ಪರಂಪರೆ ಹುಟ್ಟುಹಾಕಿದ್ದ ಇಮರಕುಂಟ ಶ್ರೀರಾಮರೆಡ್ಡಿ(84)ಮೇಷ್ಟ್ರು ಇನ್ನಿಲ್ಲ.ಹಲವಾರು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ತಡ ಸಂಜೆ ಹೃದಾಘಾತಕ್ಕೆ ಒಳಗಾಗಿದ್ದಾರೆ.
ಇಮರಕುಂಟ ಮೇಷ್ಟ್ರು ಎಂದು ಗ್ರಾಮೀಣ ಭಾಗದಲ್ಲಿ ಹೆಸರು ವಾಸಿಯಾಗಿದ್ದ ಶ್ರೀರಾಮರೆಡ್ಡಿ ಪತ್ನಿ ನಂಜಮ್ಮ,ಇಬ್ಬರು ಪುತ್ರರು ಒರ್ವ ಪುತ್ರಿ ಹಾಗು ದೊಡ್ಡ ಸಂಖ್ಯೆಯಲ್ಲಿ ಶಿಷ್ಯ ವರ್ಗವನ್ನು ಅಗಲಿದ್ದಾರೆ.
ಕೋಲಾರದ ಕಲಾಂ ಅಂತಲೆ ಖ್ಯಾತರಾಗಿದ್ದ ಶ್ರೀರಾಮರೆಡ್ಡಿ ಹಲವಾರು ಅವಿಷ್ಕಾರಗಳಿಗೆ ರೂಪ ಕೊಟ್ಟಂತ ಮಹಾನ್ ವ್ಯಕ್ತಿ,ಸರ್ಕಾರಿ ಸೇವೆಯಲ್ಲಿ ಶಿಕ್ಷಕರಾಗಿ ಮೂರುವರೆ ದಶಕಗಳ ಸೇವೆ ಸಲ್ಲಿಸಿ ನಿವೃತ್ತರಾದ ಅವರು 24 ವರ್ಷಗಳ ಹಿಂದೆ ಭೈರವೇಶ್ವರ ಶಿಕ್ಷಣ ಸಂಸ್ಥೆ ಕಟ್ಟಿ ಬಾನೆತ್ತರಕ್ಕೆ ಬೆಳೆಸಿ ಜಗತ್ತೆ ನನ್ನ ಕುಟುಂಬ ಎಂದು ಕುಟುಂಬವನ್ನೆ ಮರೆತು ಶಿಕ್ಷಣ ಸಂಸ್ಥೆಯಲ್ಲೆ ಜೀವನ ಕಳೆಯುತ್ತಿದ್ದರು,ಶೈಕ್ಷಣಿಕ ಕ್ಷೇತ್ರವೆ ನನ್ನ ಬದುಕು ಎಂದು ಶಿಕ್ಷಕರಾಗಿ ಸುಮಾರು 55 ವರ್ಷಗಳ ಕಾಲ ಮಕ್ಕಳಿಗೆ ಪಾಠ ಹೇಳಿಕೊಡುತ್ತ ಮಕ್ಕಳೊಂದಿಗೆ ಮಗುವಾಗಿ ವಿದ್ಯಾರ್ಥಿಗಳ ಬದುಕಿಗೆ ಅಗತ್ಯ ಕೌಶಲ್ಯಗಳನ್ನು ಕಲಿಸುತ್ತಿದ್ದರು ಇವರಿಂದ ಪ್ರೇರಿಪಿತರಾದ ಹಲವಾರು ವಿದ್ಯಾರ್ಥಿಗಳು ಸ್ವಯಂ ಉದ್ಯೋಗಿಗಳಾಗಿ ಸಣ್ಣ-ಪುಟ್ಟ ಉದ್ಯಮಗಳನ್ನು ನಡೆಸುತ್ತಿದ್ದಾರೆ.ಹಲವಾರು ಮಂದಿ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ನೆಲೆಸಿದ್ದಾರೆ.
ಪ್ರಶಸ್ತಿಗಳ ಮಹಾಪೂರ
ಸರ್ಕಾರಿ ಶಿಕ್ಷಕರಾಗಿ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ,ಬಸವರಾಜು ಪ್ರತಿಷ್ಠಾನದ ಪ್ರಶಸ್ತಿ,ವೃಕ್ಷ ಮಿತ್ರ ಪ್ರಶಸ್ತಿ,ಶ್ರೀ ಆದಿಚುಂಚನಗಿರಿ ಕ್ಷೇತ್ರ ಕೊಡಮಾಡುವ ಚುಂಚಶ್ರೀ ಪ್ರಶಸ್ತಿ ಸೇರಿದಂತೆ ಕೋಲಾರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದ ಅವರು ಇನ್ನು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.ಶ್ರೀನಿವಾಸಪುರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27