ಶ್ರೀನಿವಾಸಪುರ : ಬಡ ಕುಟುಂಬದ ಹಿನ್ನಲೆಯಿಂದ ಬಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಡವರ ಹಸಿವು ನೋವು ಅರಿತವರಾಗಿ ಸಮಾನ್ಯನು ಅಕ್ಕಿ ಖರಿದಿ ಮಾಡಬೇಕು ಎಂಬ ಉದ್ದೇಶದಿಂದ ಭಾರತ್ ಅಕ್ಕಿಯನ್ನು 29 ರೂಗೆ ನೀಡುವಂತ ಮಹತ್ತರ ಯೋಜನೆಯನ್ನು ನರೇಂದ್ರ ಮೋದಿ ಜಾರಿಗೆ ತಂದಿದ್ದಾರೆ ಎಂದು ಬಿಜೆಪಿ ಕೋಲಾರ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ಹೇಳಿದರು.ಅವರು ಶ್ರೀನಿವಾಸಪುರದಲ್ಲಿ ತಾಲೂಕು ಬಿಜೆಪಿ ವತಿಯಿಂದ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಇದೊಂದು ಮಹತ್ತರ ಯೋಜನೆಯಾಗಿದ್ದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಜಾರಿಗೆ ತಂದಿದ್ದು,ಬಡವರು ಸಾಮನ್ಯರು ಇದರ ಸದುಪಯೋಗ ಪಡೆಸಿಕೊಳ್ಳುವಂತೆ ಕರೆ ಇತ್ತರು.
ಪ್ರಸ್ತುತ 2ಸಾವಿರ ಮೂಟೆಯನ್ನು ವಿತರಣೆ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಬೇಡಿಕೆ ತಕ್ಕಂತೆ ಭಾರತ್ ಅಕ್ಕಿಯನ್ನು ತರಿಸಿ ವಿತರಣೆ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ರೋಣೂರು ಚಂದ್ರು,ನಲ್ಲಪಲ್ಲಿ ರೆಡ್ಡಪ್ಪ, ಜೆಸಿಬಿ ಅಶೋಕ್ರೆಡ್ಡಿ,ರವಣಪ್ಪ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



