ಶ್ರೀನಿವಾಸಪುರ : ಬಡ ಕುಟುಂಬದ ಹಿನ್ನಲೆಯಿಂದ ಬಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಡವರ ಹಸಿವು ನೋವು ಅರಿತವರಾಗಿ ಸಮಾನ್ಯನು ಅಕ್ಕಿ ಖರಿದಿ ಮಾಡಬೇಕು ಎಂಬ ಉದ್ದೇಶದಿಂದ ಭಾರತ್ ಅಕ್ಕಿಯನ್ನು 29 ರೂಗೆ ನೀಡುವಂತ ಮಹತ್ತರ ಯೋಜನೆಯನ್ನು ನರೇಂದ್ರ ಮೋದಿ ಜಾರಿಗೆ ತಂದಿದ್ದಾರೆ ಎಂದು ಬಿಜೆಪಿ ಕೋಲಾರ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ಹೇಳಿದರು.ಅವರು ಶ್ರೀನಿವಾಸಪುರದಲ್ಲಿ ತಾಲೂಕು ಬಿಜೆಪಿ ವತಿಯಿಂದ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಇದೊಂದು ಮಹತ್ತರ ಯೋಜನೆಯಾಗಿದ್ದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಜಾರಿಗೆ ತಂದಿದ್ದು,ಬಡವರು ಸಾಮನ್ಯರು ಇದರ ಸದುಪಯೋಗ ಪಡೆಸಿಕೊಳ್ಳುವಂತೆ ಕರೆ ಇತ್ತರು.
ಪ್ರಸ್ತುತ 2ಸಾವಿರ ಮೂಟೆಯನ್ನು ವಿತರಣೆ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಬೇಡಿಕೆ ತಕ್ಕಂತೆ ಭಾರತ್ ಅಕ್ಕಿಯನ್ನು ತರಿಸಿ ವಿತರಣೆ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ರೋಣೂರು ಚಂದ್ರು,ನಲ್ಲಪಲ್ಲಿ ರೆಡ್ಡಪ್ಪ, ಜೆಸಿಬಿ ಅಶೋಕ್ರೆಡ್ಡಿ,ರವಣಪ್ಪ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



