ನ್ಯೂಜ್ ಡೆಸ್ಕ್:ಕೇಂದ್ರ ಸರ್ಕಾರ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕಚ್ಚಾ ಮತ್ತು ಸಂಸ್ಕರಿಸಿದ ಖಾದ್ಯ ತೈಲಗಳ ಮೇಲಿನ ಮೂಲ ಆಮದು import ತೆರಿಗೆಯನ್ನು 20% ರಷ್ಟು ಹೆಚ್ಚಿಸಿದೆ. ಇದರಿಂದಾಗಿ ಖಾದ್ಯ ತೈಲ ಬೆಲೆಗಳನ್ನು ಹೆಚ್ಚಿಸಿ, ಬೇಡಿಕೆ ತಗ್ಗಿಸಬಹುದು ಎಂಬ ಅಂದಾಜಿನೊಂದಿಗೆ ತಾಳೆ ಎಣ್ಣೆ, ಸೋಯಾಬಿನ್ ಮತ್ತು ಸೂರ್ಯಕಾಂತಿ ಎಣ್ಣೆಯ ಸಾಗರೋತ್ತರ (ವಿದೇಶಿ) ಖರೀದಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು ಇದರಿಂದಾಗಿ ಚಿಕಾಗೋ ಬೋರ್ಡ್ ಆಫ್ ಟ್ರೇಡ್ ಸೋಯಾ ಎಣ್ಣೆ ನಷ್ಟ ಅನುಭವಿಸಿ ಶೇ 2ರಷ್ಟು ವ್ಯಪಾರ ಕುಸಿತ ಕಂಡಿದೆ. ಕಚ್ಛಾ ತಾಳೆ ಎಣ್ಣೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ಶೇ 20ರಷ್ಟು ಕನಿಷ್ಠ ಸೀಮಾ ಸುಂಕವನ್ನು ಏರಿಕೆ ಮಾಡಿದೆ. ಇದು ಮೂರು ಖಾದ್ಯ ತೈಲಗಳ ಮೇಲಿನ ಒಟ್ಟಾರೆ ಆಮದು ತೆರಿಗೆಯನ್ನು 5.5ರಷ್ಟು 27.5ರಷ್ಟು ಹೆಚ್ಚಿಸಲಿದೆ ಈ ಹಿನ್ನಲೆಯಲ್ಲಿ ಭಾರತದ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಹಾಗು ಸಮಾಜ ಕಲ್ಯಾಣ ಸರ್ಚಾರ್ಜ್ ಗೆ ಇದು ಒಳಪಟ್ಟಿರುತ್ತದೆ.
ಸರ್ಕಾರ ಗ್ರಾಹಕರು ಮತ್ತು ರೈತರ ಹಿತಾಸಕ್ತಿಗಳನ್ನು ಸಮತೋಲನಗೊಳಿಸುವ balancing ಮಾಡುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗಿದ್ದು ಇದರಿಂದ ರೈತರು ಸೋಯಾಬೀನ್ ಮತ್ತು ಎಣ್ಣೆ ಬೀಜಗಳ ಬೆಳೆಗಳಿಗೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆ ಪಡೆಯುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿಬರುತ್ತಿದೆ.
ದೇಶಿಯ ಸೋಯಾಬೀನ್ ದರ 100 ಕೆಜಿಗೆ 4,600 ರೂ ಇದ್ದು, ಇದು ರಾಜ್ಯ ನಿಗದಿಪಡಿಸಿರುವ ಬೆಂಬಲ ಬೆಲೆ 4,892ಕ್ಕಿಂತ ಕಡಿಮೆಯಾಗಿದೆ. ಭಾರತವೂ ಶೇ 70ರಷ್ಟು ಸಸ್ಯಜನ್ಯ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿದೆ.
ಇಂಡೊನೇಷ್ಯಾ, ಮಲೇಷ್ಯಾ ಮತ್ತು ಥಾಯ್ಕೆಂಡ್ನಿಂದ ತಾಳೆ ಎಣ್ಣೆಯನ್ನು ಖರೀದಿಸುತ್ತಿದೆ. ಸೋಯಾ ಮತ್ತು ಸೂರ್ಯಾಕಾಂತಿ ಎಣ್ಣೆಯನ್ನು ಅರ್ಜೆಂಟಿನಾ, ಬ್ರೆಜಿಲ್, ರಷ್ಯಾ ಮತ್ತು ಉಕ್ರೇನ್ನಿಂದ ತರಿಸಿಕೊಳ್ಳುತ್ತಿದೆ. ಭಾರತದ ಖಾದ್ಯ ತೈಲ ಶೇ 50ರಷ್ಟು ತಾಳೆ ಎಣ್ಣೆ ಆಮದು ಮಾಡಲಾಗುತ್ತಿದ್ದು, ಇದೀಗ ಸುಂಕ ಹೆಚ್ಚಳವು ಮುಂದಿನ ವಾರದಿಂದ ತಾಳೆ ಎಣ್ಣೆ ಬೆಲೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಲಾಗುತ್ತಿದೆ.
ಸುಂಕದರ ಏರಿಕೆ ಘೋಷಣೆ ಬೆನ್ನಲ್ಲೆ ಎಲ್ಲ ಬಗೆಯ ಅಡುಗೆ ಎಣ್ಣೆಗಳ ಬೆಲೆ ಲೀಟರ್ ಗೆ 15 ರಿಂದ 20 ರೂ ಏರಿಕೆಯಾಗಿದೆ ಇದು ಗ್ರಾಹಕರಿಗೆ ಹೊರೆ ಎನ್ನಬಹುದಾಗಿದ್ದು ತಾಳೆ ಎಣ್ಣೆ ₹100ರಿಂದ ₹115ಕ್ಕೆ, ಸೂರ್ಯಕಾಂತಿ ಎಣ್ಣೆ ₹115ರಿಂದ ₹130-140ಕ್ಕೆ, ಶೇಂಗಾ ಎಣ್ಣೆ ₹155ರಿಂದ ₹165ಕ್ಕೆ ಏರಿಕೆಯಾಗಿದೆ. ಪೂಜೆಗೆ ಬಳಸುವ ಎಣ್ಣೆಯನ್ನು ₹110ರಿಂದ ₹120ಕ್ಕೆ ವ್ಯಾಪಾರಸ್ಥರು ಮಾರಾಟ ಮಾಡುತ್ತಿದ್ದಾರೆ
ನವದೆಹಲಿ: ಶೇ. 20 ರಷ್ಟು ಹೆಚ್ಚಿಸಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26