ಶ್ರೀನಿವಾಸಪುರ:ಕಾಂಗ್ರೆಸ್ ಪಕ್ಷ ಮುಸ್ಲಿಂರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡದೆ ಕೆವಲ ವೋಟ್ ಬ್ಯಾಂಕ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ವಿಧಾನಪರಿಷತ್ ಮುಖ್ಯಸಚೇತಕ ವೈ.ಎ. ನಾರಾಯಣಸ್ವಾಮಿ ಆರೋಪಿಸಿದರು ಅವರು ತಮ್ಮ ಸ್ವಗ್ರಾಮ ಹೆಚ್ಚನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಆಯೋಜಿಸಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವದಲ್ಲಿ ಭಾಗವಹಿಸಿದ್ದ ಅವರು ಗಂಗಾಕಲ್ಯಾಣ ಯೋಜನೆಯಲ್ಲಿ ಆಯ್ಕೆಯಾದ ವಿವಿಧ ಸಮುದಾಯದ ಫಲಾನುಭವಿಗಳಿಗೆ ಆದೇಶ ಪತ್ರಗಳು ಮತ್ತು ಶ್ರಮ ಶಕ್ತಿಯೋಜನೆಯಲ್ಲಿ ಮುಸ್ಲಿಂ ಮಹಿಳೆಯರಿಗೆ ನೇರ ಸಾಲ ವಿತರಣೆ ಮಾಡಿದ ಅವರು ಭಾರತೀಯ ಜನತಾ ಪಕ್ಷ ಯಾವುದೇ ಕಾರಣಕ್ಕೂ ಮುಸ್ಲಿಂ ವಿರೋಧಿ ಅಲ್ಲ ಎಂದು ಹೇಳಿದರು.ಎಲ್ಲಾ ಜಾತಿ ಧರ್ಮದ ಮಹಿಳೆಯರಿಗೆ ಅನಕೂಲ ಆಗಬೇಕು ಎಂದು ವಿಶೇಷವಾಗಿ ಮುಸ್ಲಿಂ ಮಹೆಳೆಯರು ಯೋಜನೆಯ ಪ್ರಯೋಜನ ಪಡೆಯಲು ಹತ್ತು ಸಾವಿರ ನೇರ ಸಾಲ ಯೋಜನೆಯನ್ನು ಪ್ರಧಾನಿ ಮೋದಿ ಜಾರಿಗೆ ತಂದಿರುವುದಾಗಿ ಹೇಳಿದರು.
ಕೆಸಿ ವ್ಯಾಲಿ ಎರಡನೇಯ ಹಂತ
ಕೆಸಿ ವ್ಯಾಲಿ ಯೋಜನೆಯ ಎರಡನೆಯ ಹಂತಕ್ಕೆ ಸರ್ಕಾರ ನಾಲ್ಕನೂರ ಐವತ್ತು ಕೋಟಿ ಹಣ ಬೀಡುಗಡೆ ಮಾಡಲಾಗಿದ್ದು ಈ ಯೋಜನೆ ಅಡಿಯಲ್ಲಿ ಮುದುವಾಡಿ ಕೆರೆಯಿಂದ ಹೆಚ್ಚನಳ್ಳಿ ಕೆರೆಗೆ ನೇರವಾಗಿ ನೀರು ಬರಲಿದೆ ಎಂದು ತಿಳಿಸಿದರು.
ಮುಳಬಾಗಿಲು ಘಟನೆ ಬೇಸರ ವ್ಯಕ್ತಪಡಿಸಿದ ವೈ.ಎ.ಎನ್.
ಮುಳಬಾಗಿಲಿನಲ್ಲಿ ನಡೆದಂತ ಶ್ರೀರಾಮರ ಶೋಭಾಯಾತ್ರೆ ವೇಳೆ ಕಲ್ಲು ಬೀಸಿದ ದುಷ್ಕರ್ಮಿಗಳ ವಿರುದ್ದ ಪೋಲಿಸರು ಕಠಿಣ ಕ್ರಮ ಜರುಗಿಸಬೇಕು ಎಂದು ವೈ.ಎ. ನಾರಾಯಣಸ್ವಾಮಿ ಒತ್ತಾಯಿಸಿದರು.ಮುಳಬಾಗಿಲು ಘಟನೆ ಪೂರ್ವಯೋಜಿತ ಕೃತ್ಯವಾಗಿದ್ದು ವಿದ್ಯತ್ ಕಡಿತ ಗೋಳಿಸಿ ಮಾಡಲಾಗಿರುವ ಕೃತ್ಯ ಹಿಂದೆ ಯಾರ ಕೈವಾಡ ಇದೆ ಎಂಬುದಾಗಿ ತನಿಖೆ ನಡೆಸುವಂತೆ ಮತ್ತು ಕಲ್ಲು ತೂರಿದವರನ್ನು ಗೂಂಡಾ ಕಾಯೆಯಡಿ ಬಂಧಿಸಿವಂತೆ ಪೋಲಿಸರನ್ನು ಒತ್ತಾಯಿಸಿದರು.
ಮಾವಿನ ಬೆಳೆಗಾರನಿಗೆ ಅನ್ಯಾಯವಾಗಬಾರದು
ನಾನು ಸ್ವತಃ ಮಾವು ಬೆಳೆಗಾರನಾಗಿದ್ದು ಮಾವಿನ ಬೆಳೆ ಬೆಳೆಯಲು ಏನೆಲ್ಲ ಸಮಸ್ಯೆಗಳು ಇದೆ ಎಂಬ ಅರಿವು ಇದೆ ಮಾವಿನ ಬೆಳೆಗಾರನಿಗೆ ಯಾವುದೇ ರೀತಿಯ ಅನ್ಯಾಯ ಆಗಬಾರದು ಎಂಬುದು ನನ್ನ ಕಳಕಳಿ ಎಂದ ಅವರು ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಗಳು ಮಾವಿನ ಮಂಡಿ ತೆರೆದು ವಹಿವಾಟು ನಡೆಸಲಿ ಎಂದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್,ತಾಲೂಕು ಅಧ್ಯಕ್ಷ ಅಶೋಕ್ ರೆಡ್ಡಿ,ಪುರಸಭೆ ಸದಸ್ಯ ನಲ್ಲಪಲ್ಲಿ ರೆಡ್ಡೆಪ್ಪ,ಜಯರಾಮರೆಡ್ಡಿ,ಷಫೀಉಲ್ಲಾ,ಫೈರೋಜ್,ರೋಣೂರುಚಂದ್ರಶೇಖರ್,ರಮೇಶ್ ರೆಡ್ದಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



