ಶ್ರೀನಿವಾಸಪುರ:ಬರ ಅದ್ಯಯನಕ್ಕೆ ಹಾಗು ತಾಲೂಕಿನಲ್ಲಿ ಅರಣ್ಯ ಭೂಮಿ ತೆರವು ಕಾರ್ಯಚರಣೆಯಿಂದ ಜಮೀನು ಕಳೆದುಕೊಂಡ ರೈತರನ್ನು ಸಂತೈಸಲು ರಾಜ್ಯ ಬಿಜೆಪಿ ಮುಖಂಡರು ಇಂದು ಶ್ರೀನಿವಾಸಪುರಕ್ಕೆ ಆಗಮಿಸಿ ಬರ ವೀಕ್ಷಣೆ ಮಾಡಿ ಭೂಮಿ ಕಳೆದುಕೊಂಡ ರೈತರ ಸಮಸ್ಯೆ ಆಲಿಸಿದರು.
ಶ್ರೀನಿವಾಸಪುರ ತಾಲ್ಲೂಕಿನ ಪಾತಪಲ್ಲಿಗೆ ಆಗಮಿಸಿದ ಬಿಜೆಪಿ ಮುಖಂಡರ ತಂಡ ಪಾತಪಲ್ಲಿ ಗ್ರಾಮದ ರೈತರ ತೋಟಗಳಿಗೆ ಅಧ್ಯನ ತಂಡ ಭೇಟಿ ನೀಡಿ ಪರಿಶೀಲಿಸಿತು.ಸುರಿವ ಮಳೆಯಲ್ಲೆ ರೈತರೊಂದಿಗೆ ಹೊಲಗಳಲ್ಲಿ ಓಡಾಡಿದ ಬಿಜೆಪಿ ಮುಖಂಡ ಚಿ.ಟಿ.ರವಿ ಸಂಸದ ಮುನಿಸ್ವಾಮಿ ರೈತರಿಂದ ಮಾಹಿತಿ ಪಡೆದರು.
ಸ್ವಾತಂತ್ರ್ಯ ಪೂರ್ವದಲ್ಲಿ ಜಮೀನು ಮಂಜೂರು ಆಗಿದ್ದು ಅರಣ್ಯ ಇಲಾಖೆಯವರು ರಾತ್ರೋರಾತ್ರಿ ದೌರ್ಜನ್ಯದಿಂದ ಜಮೀನಿನೊಳಗೆ ಪ್ರವೇಶ ಮಾಡಿ ಬಹು ಗಾತ್ರದ ಮಾವಿನ ಮರಗಳನ್ನು ನಾಶಪಡಿಸಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಮಯದಲ್ಲಿ ರೈತರನ್ನು ಹೀನಾಯವಾಗಿ ಹೊರ ತಳ್ಳಿದರು ಎಂದು ರೈತ ಚೌಡರೆಡ್ಡಿ ಅಳಲು ತೋಡಿಕೊಂಡರು.ನಮಗೆ ಕಂದಾಯ ಇಲಾಖೆಯಿಂದ ಮಂಜೂರು ಆಗಿರುವುದಕ್ಕೆ ಸಮರ್ಪಕವಾದ ದಾಖಲೆಗಳು ಸಹ ಇವೆ, ಒತ್ತುವರಿ ತೆರವಿಗೂ ಮುನ್ನ ಕಾನೂನಿನ ಪ್ರಕಾರ ಪೂರ್ವ ನೋಟೀಸ್ ನೀಡಿಲ್ಲ, ಇಲಾಖಾ ಅಧಿಕಾರಿಗಳ ವರ್ತನೆಗೆ ರೈತರು ಬೀದಿಪಾಲಾಗಬೇಕಾಗಿದೆ ಎಂದು ಕಣ್ಣೀರಿಟ್ಟು ತಮ್ಮ ನೋವು ಹೇಳಿಕೊಂಡರು.
ರೈತರ ಮನವಿಗೆ ಸ್ಪಂದಿಸಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಕಟುಕರು ಮಾಡುವಂತ ಕೆಲಸ ಅಧಿಕಾರಿಗಳು ಮಾಡಿದ್ದಾರೆ,
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು ಶ್ರೀನಿವಾಸಪುರ ತಾಲೂಕಿನಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಜಿಲ್ಲಾಡಳಿತ,ಅರಣ್ಯ ಇಲಾಖೆ ಓಗ್ಗೂಡಿ ಮಾಡುತ್ತಿರುವುದನ್ನು ನೋಡಿದರೆ ಅಧಿಕಾರಿಗಳಿಗೆ ಮಾನವೀಯತೆಯೆ ಇಲ್ಲ ಎಂದು ಸರ್ಕಾರ,ಜಿಲ್ಲಾಡಳಿತ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ತೀವ್ರವಾದ ಧಾಟಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.ಸ್ವಾತಂತ್ರ್ಯ ಪೂರ್ವದಲ್ಲಿ ನಿಯಮಾವಳಿಗಳಂತೆ ಕಾನೂನಾತ್ಮಕವಾಗಿ ಸರ್ಕಾರವೇ ಜಮೀನು ಮಂಜೂರು ಮಾಡಿದೆ. ಇಂತಹ ಜಮೀನಿನಲ್ಲಿ ಮರಗಳನ್ನು ಕಡಿಯಲು ಅರಣ್ಯ ಇಲಾಖೆಯವರು ಯಾರು ರೈತರು ಅರಣ್ಯ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದರು ಸ್ವೀಕರಿಸದೆ ಪೊಲೀಸರು ಸಹ ಈ ವಿಚಾರದಲ್ಲಿ ತಪ್ಪು ನಿರ್ಧಾರ ಮಾಡಿದ್ದಾರೆ,ನಿಮ್ಮ ಬಳಿಯಿರುವ ದಾಖಲೆಗಳನ್ನು ನೀಡಿ ನ್ಯಾಯ ಸಿಗುವ ತನಕ ಹೋರಾಟ ಮಾಡುವ ಮೂಲಕ ರೈತರಿಗೆ ನ್ಯಾಯದೊರಕಿಸುತ್ತೇವೆ ಎಂದು ಭರವಸೆ ನೀಡಿದರು.
ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, 1942-43 ರಲ್ಲಿ ರೈತರಿಗೆ ಜಮೀನು ಮಂಜೂರಾಗಿದೆ. ಆ ಭೂಮಿ ಅರಣ್ಯ ಇಲಾಖೆಯವರದು ಎನ್ನುವುದಾದರೆ ಬೆಸ್ಕಾಂ ಇಲಾಖೆಯ ಕಂಬಗಳನ್ನು ನಡೆಲು ಒಪ್ಪಿಗೆ ಕೊಟ್ಟವರು ಯಾರು ಜಮೀನುಗಳಲ್ಲಿ ವಿದ್ಯತ್ ಕಂಬಗಳನ್ನು ನಟ್ಟಿರುವುದಕ್ಕೆ ಜಮೀನು ಮಾಲಿಕನಿಗೆ ಕೇಂದ್ರ ಸರ್ಕಾರದ ಪವರ್ ಗ್ರಿಡ್ ವತಿಯಿಂದ ಪರಿಹಾರ ನೀಡಲಾಗಿದೆ ಎಂದರು.ಆಗ ಅರಣ್ಯ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಕುರಿತಾಗು ಅಸಮಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎಂ.ಎಲ್.ಸಿ ಚಲವಾದಿನಾರಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್, ರೈತ ಹೋರಾಟಗಾರ ಮುಳಬಾಗಿಲುಗೋಪಾಲ್, ಮಾಜಿ ಶಾಸಕ ವೈ.ಸಂಪಂಗಿ, ಮುಖಂಡರಾದ ಕೃಷ್ಣಮೂರ್ತಿ,ವಕೀಲ ನಾರಯಣಸ್ವಾಮಿ, ಇತರರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27