ಶ್ರೀನಿವಾಸಪುರ: ಕಾಯಿಲೆಗಳಿಂದ ನರಳುವಂತ ಎಷ್ಟೊ ರೋಗಿಗಳಿಗೆ ಸಮಯಕ್ಕೆ ರಕ್ತ ಸಿಗದೆ ಜೀವ ಕಳೆದುಕೊಳ್ಳುವಂತ ಪರಿಸ್ಥಿತಿ ಇದೆ, ಇಂತಹವರನ್ನು ಬದುಕಿಸಲು ಆರೋಗ್ಯವಂತರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತಧಾನ ಮಾಡುವಂತೆ ಖ್ಯಾತ ಪ್ರಸೂತಿ ತಜ್ಞರಾದ ಡಾ.ಚಂದ್ರಕಳಾ ಶ್ರೀನಿವಾಸನ್ ಕರೆ ಇತ್ತರು.
ಇಂದು ಶ್ರೀನಿವಾಸಪುರ ಪಟ್ಟಣದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ದಿವಂಗತ ಎಂ.ಶ್ರೀನಿವಾಸನ್ ರವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ನನ್ನ ಪತಿ ಕೌನ್ಸಿಲರ್ ಎಂ.ಶ್ರೀನಿವಾಸ್ರವರು ಸಮಾಜ ಮುಖಿಯಾಗಿ ದಮನಿತರ ಧ್ವನಿಯಾಗಿದ್ದರು ಎಲ್ಲಾ ವರ್ಗದ ಜನರ ಬೆಂಬಲ ಪಡೆದಿದ್ದರು ಅವರ ಹೆಸರಿನಲ್ಲಿ ಅಭಿಮಾನಿಗಳು ಆಯೋಜಿಸಿರುವ ರಕ್ತಧಾನ ಕಾರ್ಯ ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ತಾಲೂಕಿನ ಕೊಪ್ಪವಾರಿಪಲ್ಲಿ ಮಂಜುನಾಥ ಕಟ್ಟಡಕಾರ್ಮಿಕನಾಗಿದ್ದು ಕಾರ್ಯನಿರ್ವಹಣೆ ಸಂದರ್ಭದಲ್ಲಿ ಮೃತಪಟ್ಟಿದ್ದು ಅವರಿಗೆ ಸರ್ಕಾರದಿಂದ ಬಿಡುಗಡೆಯಾದ 7.25 ಲಕ್ಷ ಪರಿಹಾರ ಹಣವನ್ನು ಕುಟುಂಬದವರಿಗೆ ನೀಡಲಾಯಿತು.
ರಕ್ತಧಾನ ಕಾರ್ಯಕ್ರಮಕ್ಕೂ ಮುಂಚಿತವಾಗಿ ಎಂ.ಶ್ರೀನಿವಾಸನ್ ಅಭಿಮಾನಿಗಳು ಹಾಗು ಕುಟುಂಬದವರು ಶ್ರೀನಿವಾಸನ್ ಸಮಾದಿಗೆ ಪೂಜೆ ಸಲ್ಲಿಸಿ,ಮುಳಬಾಗಿಲು ವೃತ್ತದಿಂದ ಶ್ರೀನಿವಾಸನ್ ರವರ ಬಾವಚಿತ್ರವನ್ನು ಪಲ್ಲಕ್ಕಿಯಲ್ಲಿ ಜಾನಪದ ತಂಡಗಳೊಂದಿಗೆ ಮೆರವಣಿಗೆ ಮೂಲಕ ಕರೆತಂದು ತಹಶೀಲ್ದಾರ್ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ, ಪುರಸಭೆ ಅಧ್ಯಕ್ಷ ಬಿ.ಆರ್.ಭಾಸ್ಕರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕಲ್ಲೂರುಮಂಜುನಾಥ್ರೆಡ್ಡಿ,ಗೌನಿಪಲ್ಲಿನರಸಿಂಹಯ್ಯ, ಕೊಪ್ಪವಾರಿಪಲ್ಲಿವೆಂಕಟೇಶ್,ಗೌನಿಪಲ್ಲಿ ಗ್ರಾ.ಪಂ.ಅಧ್ಯಕ್ಷ ಬಕ್ಷು ಸಾಭ್, ಕನಿಗಾನಹಳ್ಳಿವೆಂಕಟೇಶ್, ಬಂದಾರ್ಲಪಲ್ಲಿ ಮುನಿಯಪ್ಪ, ಗಾಂಡ್ಲಹಳ್ಳಿ ಚಲಪತಿ, ಹೆಬ್ಬಟ ಆನಂದ್, ಕಲ್ಲೂರು ವೆಂಕಟೇಶ್ ಹಾಗು ಶ್ರೀನಿವಾಸನ್ ಕುಟುಂಬದವರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26