ಚೆನ್ನೈ:ಬಸ್ ಟಿಕೆಟ್ ಪಡೆಯುವಂತೆ ಹೇಳಿದ ಬಸ್ ಕಂಡೆಕ್ಟರ್ ನನ್ನು ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕಂಡೆಕ್ಟರ್ ನನ್ನು ಬಸ್ ನಿಂದ ಹೊರಗಡೆಗೆ ತಳ್ಳಿ ಸಾಯಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿರುತ್ತದೆ.
ತಮಿಳುನಾಡಿನ ಕೊಯಮತ್ತೂರು ನಿಂದ ವಿಲ್ಲಿಪುರಂ ಗೆ ಶನಿವಾರ ಬೆಳಗಿನ ಜಾವದಲ್ಲಿ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹೊರಟಿದ್ದ ಸಾರಿಗೆ ಬಸ್ಸಿನಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಹತ್ತಿದ್ದಾನೆ ಬಸ್ ಕಂಡಕ್ಟರ್ ಪ್ರಯಾಣಿಕರಿಗೆ ಟಿಕೆಟ್ ನೀಡುತ್ತ ಪಾನಮತ್ತ ವ್ಯಕ್ತಿಗೆ ಟಿಕೆಟ್ ತೆಗೆದುಕೊಳ್ಳುವಂತೆ ಹೇಳಿದ್ದು ಇದರಿಂದ ಕುಪಿತಗೊಂಡ ಕುಡುಕ ವ್ಯಕ್ತಿ ಕಂಡೆಕ್ಟರ್ ಜೊತೆ ಜಗಳ ತಗೆದಿದ್ದಾನೆ ಇದಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು ತಳ್ಳಾಟ ನೂಕಾಟಗಳು ನಡೆದಿದೆ ಈ ಸಂದರ್ಭದಲ್ಲಿ ಕುಡುಕ ಮುರುಗ ಕಂಡೆಕ್ಟರ್ ನನ್ನು ಬಸ್ಸಿನಿಂದ ತಳ್ಳಿ ಪರಾರಿಯಾಗಿದ್ದಾನೆ .
ಬಸ್ಸಿನಿಂದ ಕೆಳಗೆ ಬಿದ್ದ ಕಂಡಕ್ಟರ್ ಪೆರುಮಾಳ್ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮೇಲ್ಮರುವತ್ತೂರಿನ ಖಾಸಗಿ ಆಸ್ಪತ್ರೆಗೆ ಸೇಎಇಸಿದ್ದಾರೆ ಆದರೂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುತ್ತಾನೆ. ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಕುಡುಕ ಮುರುಗನ್ ನನ್ನು ಬಂಧಿಸಿದ್ದಾರೆ.
ಘಟನೆ ಕುರಿತಾಗಿ ತಿಳಿದುಕೊಂಡ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕರ್ತವ್ಯದಲ್ಲಿ ಮೃತಪಟ್ಟ ಕಂಡಕ್ಟರ್ ಪೆರುಮಾಳ್ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ ಜೊತೆಗೆ 10 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿ ಮಾನವಿಯತೆ ಮೆರೆದಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15