ಶ್ರೀನಿವಾಸಪುರ:ಶ್ರೀನಿವಾಸಪುರದ ಗ್ರಾಮ ದೇವತೆಯಂದು ಪೂಜಿಸುವ ಶ್ರೀಚೌಡೇಶ್ವರಿ ವರ್ಧಂತೋತ್ಸವ ಜಯಂತಿ ಕಾರ್ಯಕ್ರಮ ಭಕ್ತಿ ಭಾವದಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಆಷಾಢದಲ್ಲಿ ಮಂಗಳಕರವಾದ ರೇವತಿ ನಕ್ಷತ್ರದಂದು ಚೌಡೇಶ್ವರಿ ವರ್ಧಂತಿಯನ್ನು ಆಚರಿಸಲಾಗುತ್ತದೆ.
ವರ್ಧಂತೋತ್ಸವ ಅಂಗವಾಗಿ ಚೌಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು ಬೆಳಿಗ್ಗೆ ಬ್ರಹ್ಮ ಮುಹೂರ್ತದ ಸಮಯದಲ್ಲಿ ಸುಪ್ರಭಾತ ಸೇವೆಯೊಂದಿಗೆ ಆರಂಭವಾದ ಪೂಜಾ ಕಾರ್ಯಕ್ರಮಗಳು ಪಂಚಾಮೃತಾಭಿಷೇಕ, ಪುಷ್ಪಾರ್ಚನೆ, ನಂತರ ಸಾಮೂಹಿಕ ಶ್ರೀಲಲಿತಾ ಸಹಸ್ರನಾಮ ಪಾರಯಣ. ಸಹಸ್ರನಾಮ ಕುಂಕುಮಾರ್ಚನೆ ಮಂತ್ರಪುಷ್ಪ, ಅಷ್ಟಾವಧ ಸೇವೆ ನಂತರ ಮತ್ತಿತರ ಧಾರ್ಮಿಕ ವಿಧಿವಿಧಾನಗಳ ಆಚರಣೆ ನಂತರ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.
ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾಧಿಗಳು
ವರ್ಧಂತೋತ್ಸವ ಅಂಗವಾಗಿ ಸಹಸ್ರ ಸಂಖ್ಯೆಯಲ್ಲಿ ಭಕ್ತಾಧಿಗಳು ಮುಂಜಾನೆಯಿಂದಲೆ ದೇವಾಲಯಕ್ಕೆ ಆಗಮಿಸಿ ಶ್ರೀಚೌಡೇಶ್ವರಿ ಅಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನಿತರಾದರು.ರಾತ್ರಿ ಒಂಬತ್ತು ಗಂಟೆಯಾದರೂ ಆಗಮಿಸುತ್ತಿದ್ದ ಭಕ್ತರು.
ಕೊಳ್ಳೂರು ಬಡಾವಣೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದಲ್ಲೂ ವರ್ಧಂತೋತ್ಸವ ಅಂಗವಾಗಿ ವಿಶೇಷ ಪೂಜೆ ದುರ್ಗಾ ಹೋಮ ಹವನ ನಡೆಸಿದ್ದು,ಭವ್ಯವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27