ಶ್ರೀನಿವಾಸಪುರ:ಶ್ರೀನಿವಾಸಪುರದ ಗ್ರಾಮ ದೇವತೆಯಂದು ಪೂಜಿಸುವ ಶ್ರೀಚೌಡೇಶ್ವರಿ ವರ್ಧಂತೋತ್ಸವ ಜಯಂತಿ ಕಾರ್ಯಕ್ರಮ ಭಕ್ತಿ ಭಾವದಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಆಷಾಢದಲ್ಲಿ ಮಂಗಳಕರವಾದ ರೇವತಿ ನಕ್ಷತ್ರದಂದು ಚೌಡೇಶ್ವರಿ ವರ್ಧಂತಿಯನ್ನು ಆಚರಿಸಲಾಗುತ್ತದೆ.
ವರ್ಧಂತೋತ್ಸವ ಅಂಗವಾಗಿ ಚೌಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು ಬೆಳಿಗ್ಗೆ ಬ್ರಹ್ಮ ಮುಹೂರ್ತದ ಸಮಯದಲ್ಲಿ ಸುಪ್ರಭಾತ ಸೇವೆಯೊಂದಿಗೆ ಆರಂಭವಾದ ಪೂಜಾ ಕಾರ್ಯಕ್ರಮಗಳು ಪಂಚಾಮೃತಾಭಿಷೇಕ, ಪುಷ್ಪಾರ್ಚನೆ, ನಂತರ ಸಾಮೂಹಿಕ ಶ್ರೀಲಲಿತಾ ಸಹಸ್ರನಾಮ ಪಾರಯಣ. ಸಹಸ್ರನಾಮ ಕುಂಕುಮಾರ್ಚನೆ ಮಂತ್ರಪುಷ್ಪ, ಅಷ್ಟಾವಧ ಸೇವೆ ನಂತರ ಮತ್ತಿತರ ಧಾರ್ಮಿಕ ವಿಧಿವಿಧಾನಗಳ ಆಚರಣೆ ನಂತರ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.
ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾಧಿಗಳು
ವರ್ಧಂತೋತ್ಸವ ಅಂಗವಾಗಿ ಸಹಸ್ರ ಸಂಖ್ಯೆಯಲ್ಲಿ ಭಕ್ತಾಧಿಗಳು ಮುಂಜಾನೆಯಿಂದಲೆ ದೇವಾಲಯಕ್ಕೆ ಆಗಮಿಸಿ ಶ್ರೀಚೌಡೇಶ್ವರಿ ಅಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನಿತರಾದರು.ರಾತ್ರಿ ಒಂಬತ್ತು ಗಂಟೆಯಾದರೂ ಆಗಮಿಸುತ್ತಿದ್ದ ಭಕ್ತರು.
ಕೊಳ್ಳೂರು ಬಡಾವಣೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದಲ್ಲೂ ವರ್ಧಂತೋತ್ಸವ ಅಂಗವಾಗಿ ವಿಶೇಷ ಪೂಜೆ ದುರ್ಗಾ ಹೋಮ ಹವನ ನಡೆಸಿದ್ದು,ಭವ್ಯವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



