ಶ್ರೀನಿವಾಸಪುರ:ಶ್ರೀನಿವಾಸಪುರದ ಗ್ರಾಮ ದೇವತೆಯಂದು ಪೂಜಿಸುವ ಶ್ರೀಚೌಡೇಶ್ವರಿ ವರ್ಧಂತೋತ್ಸವ ಜಯಂತಿ ಕಾರ್ಯಕ್ರಮ ಭಕ್ತಿ ಭಾವದಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಆಷಾಢದಲ್ಲಿ ಮಂಗಳಕರವಾದ ರೇವತಿ ನಕ್ಷತ್ರದಂದು ಚೌಡೇಶ್ವರಿ ವರ್ಧಂತಿಯನ್ನು ಆಚರಿಸಲಾಗುತ್ತದೆ.
ವರ್ಧಂತೋತ್ಸವ ಅಂಗವಾಗಿ ಚೌಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು ಬೆಳಿಗ್ಗೆ ಬ್ರಹ್ಮ ಮುಹೂರ್ತದ ಸಮಯದಲ್ಲಿ ಸುಪ್ರಭಾತ ಸೇವೆಯೊಂದಿಗೆ ಆರಂಭವಾದ ಪೂಜಾ ಕಾರ್ಯಕ್ರಮಗಳು ಪಂಚಾಮೃತಾಭಿಷೇಕ, ಪುಷ್ಪಾರ್ಚನೆ, ನಂತರ ಸಾಮೂಹಿಕ ಶ್ರೀಲಲಿತಾ ಸಹಸ್ರನಾಮ ಪಾರಯಣ. ಸಹಸ್ರನಾಮ ಕುಂಕುಮಾರ್ಚನೆ ಮಂತ್ರಪುಷ್ಪ, ಅಷ್ಟಾವಧ ಸೇವೆ ನಂತರ ಮತ್ತಿತರ ಧಾರ್ಮಿಕ ವಿಧಿವಿಧಾನಗಳ ಆಚರಣೆ ನಂತರ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.
ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾಧಿಗಳು
ವರ್ಧಂತೋತ್ಸವ ಅಂಗವಾಗಿ ಸಹಸ್ರ ಸಂಖ್ಯೆಯಲ್ಲಿ ಭಕ್ತಾಧಿಗಳು ಮುಂಜಾನೆಯಿಂದಲೆ ದೇವಾಲಯಕ್ಕೆ ಆಗಮಿಸಿ ಶ್ರೀಚೌಡೇಶ್ವರಿ ಅಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನಿತರಾದರು.ರಾತ್ರಿ ಒಂಬತ್ತು ಗಂಟೆಯಾದರೂ ಆಗಮಿಸುತ್ತಿದ್ದ ಭಕ್ತರು.
ಕೊಳ್ಳೂರು ಬಡಾವಣೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದಲ್ಲೂ ವರ್ಧಂತೋತ್ಸವ ಅಂಗವಾಗಿ ವಿಶೇಷ ಪೂಜೆ ದುರ್ಗಾ ಹೋಮ ಹವನ ನಡೆಸಿದ್ದು,ಭವ್ಯವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



