ಶ್ರೀನಿವಾಸಪುರ:ಶ್ರೀನಿವಾಸಪುರದ ಗ್ರಾಮ ದೇವತೆಯಂದು ಪೂಜಿಸುವ ಶ್ರೀಚೌಡೇಶ್ವರಿ ವರ್ಧಂತೋತ್ಸವ ಜಯಂತಿ ಕಾರ್ಯಕ್ರಮ ಭಕ್ತಿ ಭಾವದಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಆಷಾಢದಲ್ಲಿ ಮಂಗಳಕರವಾದ ರೇವತಿ ನಕ್ಷತ್ರದಂದು ಚೌಡೇಶ್ವರಿ ವರ್ಧಂತಿಯನ್ನು ಆಚರಿಸಲಾಗುತ್ತದೆ.
ವರ್ಧಂತೋತ್ಸವ ಅಂಗವಾಗಿ ಚೌಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು ಬೆಳಿಗ್ಗೆ ಬ್ರಹ್ಮ ಮುಹೂರ್ತದ ಸಮಯದಲ್ಲಿ ಸುಪ್ರಭಾತ ಸೇವೆಯೊಂದಿಗೆ ಆರಂಭವಾದ ಪೂಜಾ ಕಾರ್ಯಕ್ರಮಗಳು ಪಂಚಾಮೃತಾಭಿಷೇಕ, ಪುಷ್ಪಾರ್ಚನೆ, ನಂತರ ಸಾಮೂಹಿಕ ಶ್ರೀಲಲಿತಾ ಸಹಸ್ರನಾಮ ಪಾರಯಣ. ಸಹಸ್ರನಾಮ ಕುಂಕುಮಾರ್ಚನೆ ಮಂತ್ರಪುಷ್ಪ, ಅಷ್ಟಾವಧ ಸೇವೆ ನಂತರ ಮತ್ತಿತರ ಧಾರ್ಮಿಕ ವಿಧಿವಿಧಾನಗಳ ಆಚರಣೆ ನಂತರ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.
ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾಧಿಗಳು
ವರ್ಧಂತೋತ್ಸವ ಅಂಗವಾಗಿ ಸಹಸ್ರ ಸಂಖ್ಯೆಯಲ್ಲಿ ಭಕ್ತಾಧಿಗಳು ಮುಂಜಾನೆಯಿಂದಲೆ ದೇವಾಲಯಕ್ಕೆ ಆಗಮಿಸಿ ಶ್ರೀಚೌಡೇಶ್ವರಿ ಅಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನಿತರಾದರು.ರಾತ್ರಿ ಒಂಬತ್ತು ಗಂಟೆಯಾದರೂ ಆಗಮಿಸುತ್ತಿದ್ದ ಭಕ್ತರು.
ಕೊಳ್ಳೂರು ಬಡಾವಣೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದಲ್ಲೂ ವರ್ಧಂತೋತ್ಸವ ಅಂಗವಾಗಿ ವಿಶೇಷ ಪೂಜೆ ದುರ್ಗಾ ಹೋಮ ಹವನ ನಡೆಸಿದ್ದು,ಭವ್ಯವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



