ಶ್ರೀನಿವಾಸಪುರ: ಪಂಚಾಯಿತಿ ಅಧ್ಯಕ್ಷರ ಅಧಿಕಾರನ್ನು ದುರುಪಯೋಗ ಪಡಿಸಿಕೊಳ್ಳುವಂತ ರಾಜಕೀಯ ಮುಖಂಡರಿಗೆ ನಾಚಿಕೆಯಾಗಬೇಕು ಎಂದು ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಆರೋಪಿಸಿದರು. ಅವರು ಇಂದು ತಮ್ಮ ಗೃಹ ಕಚೇರಿಯಲ್ಲಿ ಮೀಸಲಾತಿ ಅಡಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡದಿದ್ದ ತಾಲೂಕಿನ ರಾಯಲ್ಪಾಡು ಹೋಬಳಿ ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮಣಮ್ಮ ಅವರನ್ನು ಜೆಡಿಎಸ್ ಗೆ ಸೆರ್ಪಡೆ ಮಾಡಿಕೊಂಡು ಮಾತನಾಡಿದರು. ಗ್ರಾಮ ಪಂಚಾಯಿತಿ ಅಧಿಕಾರ ವ್ಯಾಪ್ತಿಯಲ್ಲಿ ಮೂರನೇ ವ್ಯಕ್ತಿ ರಾಜಕಾರಣ ಅಭಿವೃದ್ದಿಗೆ ಮಾರಕ ಆಗುತ್ತದೆ ಇದು ಒಳ್ಳೆಯ ಬೆಳವಣಿಗೆ ಅಲ್ಲ ಮೀಸಲಾತಿ ಅಡಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮಹಿಳೆಗೆ ಅಧಿಕಾರ ನಡೆಸುವ ಸ್ವೆಚ್ಚೆ ಇರಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ರವಣಮ್ಮ ಅಧ್ಯಕ್ಷೆಯಾದಾಗಿನಿಂದ ನಾನು ನಂಬಿದ್ದ ಕಾಂಗ್ರೆಸ್ ಮುಖಂಡರು ನನ್ನನ್ನು ನಾಮಕಾವಸ್ಥೆ ಅಧ್ಯಕ್ಷರನ್ನಾಗಿಸಿ ನನ್ನ ಹೆಸರಿನಲ್ಲಿ ಅಧಿಕಾರ ಚಲಾಯಿಸುವುದಲ್ಲದೆ ನನ್ನನ್ನು ಕೇವಲವಾಗಿ ಕಾಣುತ್ತಿದ್ದರು ಇದರಿಂದ ನನಗೆ ಮನಸ್ಸಿಗೆ ತುಂಬಾ ಬೇಸರ ಉಂಟಾಗಿ ಸಾರ್ವಜನಿಕ ಜೀವನದಲ್ಲಿ ಇಂತಹ ಅಪಮಾನ ಬೇಡ ಎಂದು, ಉಪಾಧ್ಯಕ್ಷ ಶ್ರೀನಿವಾಸರೆಡ್ಡಿ ಅವರೊಂದಿಗೆ ಚರ್ಚಿಸಿ ಜೆಡಿಎಸ್ ಸೇರುತ್ತಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸರೆಡ್ಡಿ, ರಮಣಪ್ಪ, ರಾಮಪ್ಪ ಮುಂತಾದವರು ಇದ್ದರು.
ತಾಲೂಕಿನ ರಾಯಲ್ಪಾಡು ಹೋಬಳಿ ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 16 ಸಂಖ್ಯೆಯ ಸದಸ್ಯರಿದ್ದು ಇವರಲ್ಲಿ ಜೆಡಿಎಸ್ 9 ಹಾಗು ಕಾಂಗ್ರೆಸ್ 7 ಸದಸ್ಯರಿದ್ದರು ಅದ್ಯಕ್ಷೆ ರವಣಮ್ಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಏಕೈಕ ಪರಿಶಿಷ್ಠ ಜಾತಿ ಮಹಿಳಾ ಅಭ್ಯರ್ಥಿಯಾಗಿ ಗೆಲವು ಸಾಧಿಸಿದ್ದರು ಅಧ್ಯಕ್ಷಗಾಧಿ ಪರಿಶಿಷ್ಠ ಜಾತಿ ಮಹಿಳೆಗೆ ಒಲಿದ ಹಿನ್ನಲೆಯಲ್ಲಿ ಜೆಡಿಎಸ್ ಪ್ರಾಭಲ್ಯದ ನಡುವೆವೂ ಮೀಸಲಾತಿ ಅಡಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28