ಮೈಸೂರು:ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯುಧ ಪೂಜೆ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದ ಅವರು ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ ಸುದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ತಾಯಿ ಚಾಮುಂಡೇಶ್ವರಿ ಆಶಿರ್ವಾದದಿಂದ ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜಕೀಯದಲ್ಲಿ ವೈರಿಗಳು ಹಾಗು ಹಿತೈಷಿಗಳು ಅಭಿಮಾನಿಗಳೂ ಇರುತ್ತಾರೆ, ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ.ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇ ಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದರು.
ನಾಡಿನ ಜನರಿಗೆ ದಸರಾ ಹಬ್ಬದ ಶುಭಾಶಯಗಳು ತಿಳಿಸಿದ ಅವರು ನಾಳೆ ನಡೆಯುವ ಜಂಬೂಸವಾರಿಯಲ್ಲಿ ಭಾಗವಹಿಸುತ್ತೇನೆ. ಸುಧೀರ್ಘವಾಗಿ ಹೆಚ್ಚು ಬಾರಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡುತ್ತಿದ್ದೇನೆ. ನಾಡಿನ ಜನರ ಹಾಗೂ ದೇವರ ಆಶೀರ್ವಾದದಿಂದ ಪುಷ್ಪಾರ್ಚನೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಸದಾ ಇರುತ್ತದೆ
ನನ್ನ ಮೇಲೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಸದಾ ಇರುತ್ತದೆ. ಜನರು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಅದಕ್ಕೆ ಇಷ್ಟೊಂದು ಬಾರಿ ಪುಷ್ಪಾರ್ಚನೆ ಮಾಡಲು ಅವಕಾಶ ಸಿಕ್ಕಿದೆ ಎಂದರು
ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟ ಹಮ್ಮಿಕೊಳ್ಳುತ್ತಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಕುರಿತಾಗಿ ಪ್ರತಿಕ್ರಿಯಿಸಿ,ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗೆ ಇರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ಬಗ್ಗೆ ಪರಿಶೀಲನೆ ಮಾಡಿದ ನಂತರ ಮಾತನಾಡುತ್ತೇನೆ. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಇರುವುದಿಲ್ಲ ಎಂದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



