ಶ್ರೀನಿವಾಸಪುರ: ಪಾಲ್ಗುಣ ಮಾಸದ ಹುಣ್ಣಿಮೆಯಂದು ತಾಲೂಕಿನ ಬಹುತೇಕ ಕಡೆ ರಟೋತ್ಸವಗಳು ನಡೆಯುವುದು ಇಲ್ಲಿನ ಆಚರಣೆ ಪ್ರಮುಖವಾಗಿ ಶ್ರೀನಿವಾಸಪುರದ ಪಟ್ಟಣದ ಪ್ರಸಿದ್ದ ಶ್ರೀ ವರದ ಬಾಲಾಂಜನೇಯ ಕ್ಷೇತ್ರದಲ್ಲಿ ಸಂಭ್ರಮದಿಂದ ರಥೋತ್ಸವ ನಡೆಯಿತು.ಕಳೆದ ಎರಡು ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ರಥೋತ್ಸವದಲ್ಲಿ ಪಾಲ್ಗೋಂಡಿದ್ದು ವಿಶೇಷವಾಗಿತ್ತು. ವೈಖಾನಸ ಆಗಮ ಶಾಸ್ತ್ರಙ್ಞ ಶೇಷಾದ್ರಿ ಅವರ ನೇತೃತ್ವದಲ್ಲಿ ಕಲ್ಯಾಣೋತ್ಸವ,ರಥೋತ್ಸವ ಕಾರ್ಯಕ್ರಮಗಳು ನಡೆಯಿತು.
ರಥೋತ್ಸವ ಕಾರ್ಯಕ್ರಮದಲ್ಲಿ ಶ್ರೀ ವರದ ಬಾಲಾಂಜನೇಯ ಕ್ಷೇತ್ರದ ಸಂಚಾಲಕ ಗೋಫಿನಾಥರಾವ್ ಶಾಸಕ ರಮೇಶ್ ಕುಮಾರ್,ಮಾಜಿ ಶಾಸಕ ವೆಂಕಟಶಿವಾರೆಡ್ಡಿ, ಇತಿಹಾಸ ತಜ್ಞ ಪ್ರೊ.ನರಸಿಂಹನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿನಾರಯಣಸ್ವಾಮಿ, ಹಳೇಪೇಟೆ ಮಂಜು ಮುಂತಾದವರು ಪಾಲ್ಗೋಂಡಿದ್ದರು.
ನಂಬಿಹಳ್ಳಿ ರಥೋತ್ಸವ
ತಾಲೂಕಿನ ನಂಬಿಹಳ್ಳಿಯ ಕೇಂದ್ರವಾಗಿ ಸುತ್ತಲಿನ ಐದು ಗ್ರಾಮಗಳಲ್ಲಿ ಪಂಚಲಿಂಗ ಕ್ಷೇತ್ರಗಳು ಇಲ್ಲಿದ್ದು ಶ್ರೀ ಪ್ರಸನ್ನ ಸೋಮೇಶ್ವರ ಈ ಭಾಗದಲ್ಲಿ ವಿಶೇಷ ಖ್ಯಾತಿ.ಐತಿಹಾಸಿಕ ಶ್ರೀ ಪ್ರಸನ್ನ ಸೋಮೇಶ್ವರ ದೇವರ ರಥೋತ್ಸವ ನಡೆಯಿತು ಇದರ ಅಂಗವಾಗಿ ಜನ ಜಾತ್ರೆ ನಡೆಯಿತು
ತಾಲೂಕಿನ ಕೋಟಬಲ್ಲಪಲ್ಲಿ ಶ್ರೀಲಕ್ಷ್ಮೀನರಸಿಂಹ ದೇವರ ರಥೋತ್ಸವ ನಡೆಯಿತು ಅರ್ಚಕ ಅರುಣ್ ಕುಮಾರ್, ರಥೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Tuesday, June 17