ಚಿಂತಾಮಣಿ:ಚಿಂತಾಮಣಿ ನಗರದಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ ವಾರ್ಡ್ ನಂ:24ರ ನಾರಸಿಂಹಪೇಟೆಯಲ್ಲಿ ಪ್ರತಿವರ್ಷದಂತೆ ನಾರಸಿಂಹಪೇಟೆ ಯುವಕರ ಬಳಗದ ವತಿಯಿಂದ ನವರಾತ್ರಿ ಅಂಗವಾಗಿ ವಿಶೇಷವಾಗಿ ಶ್ರೀ ದರ್ಗಾಮಾತೆಯನ್ನು ಪ್ರತಿಷ್ಠಾಪನೆ ಮಾಡಿ ಒಂಬತ್ತು ದಿನಗಳಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಿ ಪುನಿತರಾಗಿ ನವರಾತ್ರಿ ಸಂಭ್ರಮಿಸಿದ್ದು ಕಾರ್ಯಕ್ರಮ ಎಲ್ಲರ ಗಮವನ್ನು ಸೆಳೆಯಿತು. ಸಂಸದ ಶಾಸಕರು ಭಾಗಿ. ನಾರಸಿಂಹ ಪೇಟೆಯ ಶ್ರೀ ದುರ್ಗಾ ದೇವಿಗೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕೋಲಾರದ ಸಂಸದ ಮಲ್ಲೇಶ್ ಬಾಬು, ಶ್ರೀನಿವಾಸಪುರ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಚಿಂತಾಮಣಿ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಬಿಜೆಪಿ ಮುಖಂಡ ವೇಣುಗೋಪಾಲ್ ಭಾಗವಹಿಸಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗಿ ಜನತೆ ಸಂತೃಪ್ತಿಯ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂತೋಷ್,ಶ್ರೀನಿವಾಸ್,ಪ್ರಶಾಂತ್, ವೇಣು,ಶಿವರಾಜ್,ಶಿವಸಾಗರ್, ಶ್ರೀಕಾಂತ್, ಪವನ್, ಚಂದು, ಆಕಾಶ್, ಶಿವಾಜಿ,ಸುಮನ್ ಶೆಟ್ಟಿ.ಮಹೇಶ್ ಬೈ, ಗುಡೇ ಶ್ರೀನಿವಾಸ,ಮುಖಂಡರಾದ ಚಾಂದ್ ಪಾಷ,ಅಪ್ಸರ ಪಾಷಾ,ಯೂನಸ್ ಪಾಷಾ,ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27