ಶ್ರೀನಿವಾಸಪುರ:ಪ್ರೀತಿಸಿ ಅಂತರ್ಜಾತಿ ವಿವಾಹವಾದ ಪ್ರೆಮಿಗಳನ್ನು ತಡೆಯಲು ಯುವತಿಯ ಪೋಷಕರು ಮದುವೆಯನ್ನು ವಿರೋಧಿಸಿ ಅಕೆಯನ್ನು ಸಾರ್ವಜನಿಕವಾಗಿ ದರದರನೆ ಎಳೆದೊಯಿದ ಘಟನೆ ಶ್ರೀನಿವಾಸಪುರ ಪಟ್ಟಣದ ಜನಜಂಗುಳಿ ಪ್ರದೇಶವಾದ ತಾಲೂಕು ಕಚೇರಿ ಆವರಣದಲ್ಲಿ ನಡೆದಿರುತ್ತದೆ.
ಅಪ್ಪಟ ಸಿನಿಮಾ ಶೈಲಿಯಲ್ಲಿ ನಡೆದಂತ ಹೈಡ್ರಾಮಾ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಬೆರಗುಗಣ್ಣಿನಿಂದ ನೊಡುತ್ತ ನಿಂತಿದ್ದಾರೆ.
ಕೋಲಾರ ತಾಲ್ಲೂಕು ಸಿಂಗೊಂಡಹಳ್ಳಿ ಗ್ರಾಮದ ಅಲೈಕ್ಯ ಹಾಗು ಶ್ರೀನಿವಾಸಪುರ ತಾಲ್ಲೂಕು ಕನಮಪಲ್ಲಿ ಗ್ರಾಮದ ಮಲ್ಲಿಕಾರ್ಜುನನು ಪ್ರೀತಿಸುತಿದ್ದು ಮೂರ್ನಾಲ್ಕು ದಿನಗಳ ಹಿಂದೆ ದೇವಸ್ಥಾನದವೊಂದರಲ್ಲಿ ಮದುವೆಯಾಗಿದ್ದಾರೆ ಮದುವೆಯನ್ನು ಕಾನೂನು ಬದ್ದವಾಗಿ ನೊಂದಣೆ ಮಾಡಿಸಲು ಶ್ರೀನಿವಾಸಪುರದ ಸಬ್ ರಿಜಿಸ್ಟಾರ್ ಕಚೇರಿಗೆ ಬಂದಿರುತ್ತಾರೆ. ಅಲ್ಲಿ ಯುವತಿಯ ಪೋಷಕರು ಕಾದು ಕುಳತಿದ್ದು ಪ್ರೇಮಿಗಳು ಬರುತ್ತಲೆ ಅವರಿದ್ದ ಕಾರಿನಿಂದ ಯುವತಿ ಅಲಖ್ಯಾಳನ್ನು ದರದರನೆ ಎಳೆದುಕೊಂಡು ಹೋಗಿದ್ದಾರೆ ಈ ಸಂದರ್ಭದಲ್ಲಿ ಯುವತಿ ರೋಧನೆ ಮುಗಿಲು ಮುಟ್ಟಿತ್ತು ನಂತರ ಯುವಕನೊಂದಿಗೆ ಬಂದಿದ್ದ ಕೆಲವರು ಯುವತಿ ಪೊಷಕರ ನಡೆಯನ್ನು ವಿರೋಧಿಸಿ ದಬಾಸಿದಾಗ ಪೊಷಕರಿಗೂ ಅಲ್ಲಿದ್ದವರಿಗೂ ವಾಗ್ವಾದ ನಡೆಯಿತು ಯುವಕ ಮಲ್ಲಿಕಾರ್ಜುನ್ ನಿಸ್ಸಹಾಯಕನಾಗಿ ಘಟನೆ ನೊಡುತ್ತ ನಿಂತಿದ್ದು ಪೋಲಿಸರ ಮದ್ಯಪ್ರಶದಿಂದ ಹೈಡ್ರಾಮಾ ಕೋಲಾರದ ಮಹಿಳಾ ಪೋಲಿಸ್ ಠಾಣೆ ಆವರಣಕ್ಕೆ ವರ್ಗಾವಣೆಯಾಗಿದೆ ಅಲ್ಲಿ ಯುವತಿ ಅಲಖ್ಯ ಕಾಣೆಯಾಗಿದ್ದಾಳೆ ಎಂದು ಆಕೆ ಪೋಷಕರು ದೂರು ನೀಡಿದ್ದು ವಿಚಾರಣೆ ನಡೆದಾಗ ಯುವತಿ ನನ್ನ ಸ್ವಯಿಚ್ಚೆಯಿಂದ ಹೋಗಿದ್ದಾಗಿ ಪೋಲಿಸರ ಮುಂದೆ ಹೇಳಿಕೆ ನೀಡಿದಾಗ ಕಾನೂನಿಲ್ಲಿ ಅವಕಾಶ ಇದೆ ಎನ್ನುವ ಬಗ್ಗೆ ಪೋಲಿಸರು ಯುವತಿ ಪೋಷಕರಿಗೆ ಮನವರಿಕೆ ಮಾಡಿದರು ಅವರು ಅಂತರ ಜಾತಿ ವಿವಾಹಕ್ಕೆ ಬಿಲ್ ಕುಲ್ ಒಪ್ಪದೆ ಹಠ ಹಿಡಿದು ಯುವತಿ ಮನವೊಲಿಕೆಗೆ ಮುಂದಾಗಿದ್ದಾರೆ ಶ್ರೀನಿವಾಸಪುರದಲ್ಲಿ ಸಾರ್ವಜನಿಕವಾಗಿ ಕೂಗಾಡಿ ಬಿದಿ ರಂಪ ಮಾಡಿದ ಪೋಷಕರು ಕೋಲಾರದಲ್ಲಿ ಯುವತಿಯನ್ನ ಅಂಗಲಾಚಿ ಬೇಡಿಕೊಂಡಿದ್ದಾರೆ ಹತ್ತು ಕರೆದು ರಂಪಾಟ ಮಾಡುವಾಗ ಯುವತಿ ತಂದೆ ನಾಗೇಶ್ ತಲೆ ಸುತ್ತಿ ಬಿದ್ದು ಆಸ್ಪತ್ರೆಗೆ ದಾಖಲಾದರು ಕ್ಯಾರೆ ಎನ್ನದ ಯುವತಿ ಅಲೈಕ್ಯ ಪ್ರೀತಿಸಿದ ಯುವಕ ಮಲ್ಲಿಕಾರ್ಜುನ್ ನನ್ನೆ ಮದುವೆಯಾದಳು ಎನ್ನುವುದು ಯುವತಿ ಕುಟುಂಬಸ್ಥರ ಆರೋಪ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27