ಶ್ರೀನಿವಾಸಪುರ: ಮೇ 10 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದು ಭಾವಿಸಿ ಪ್ರತಿಯೊಬ್ಬ ನಾಗರಿಕನೂ ಕಡ್ಡಾಯವಾಗಿ ಮತವನ್ನು ಚಲಾಯಿಸಿ, ದೇಶದ ಪ್ರಜಾತಂತ್ರದ ವ್ಯವಸ್ಥೆಯನ್ನುಎತ್ತಿ ಹಿಡಿಯಲು ಪ್ರಯತ್ನ ಮಾಡುವಂತೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣಾಧಿಕಾರಿ ಇ. ಕೃಷ್ಣಪ್ಪ ಕರೆ ಇತ್ತರು.
ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ಜಾಗೃತಿ ಅಭಿಯಾನ ಸಲುವಾಗಿ ಪಟ್ಟಣ ಎಂ. ಜಿ. ರಸ್ತೆಯಲ್ಲಿ ಮೊಂಬತ್ತಿ ಮತ್ತು ಪಂಜಿನ ಮೆರವಣಿಗೆ ಉದ್ಘಾಟಿಸಿ ಮಾತನಾಡಿದ ಇ.ಒ. ಕೃಷ್ಣಪ್ಪ, ದೇಶ ಮುನ್ನೆಡಸಲು ಉತ್ತಮ ವ್ಯಕ್ತಿಯನ್ನು ಮತದಾನದ ಮೂಲಕ ಆಯ್ಕೆಮಾಡಿಕೊಳ್ಳಲು ಅವಕಾಶ ಇರುತ್ತದೆ 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತದ ಪ್ರಜೆ ಮತದಾನ ಹಕ್ಕು ಚಲಾಯಿಸಬೇಕು, ಈ ನಿಟ್ಟಿನಲ್ಲಿ ಮತದಾರರು ಮೇ 10 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂತೆಯ ತನಕ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲು ಮುಂದಾಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಚುನಾವಣಾ ಅಧಿಕಾರಿಗಳಾದ ತಹಸೀಲ್ದಾರ್ ಶೀರಿನ್ತಾಜ್, ವೃತ್ತನಿರೀಕ್ಷಕ ನಾರಾಯಣಸ್ವಾಮಿ, ಪುರಸಭಾ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ, ಬಿ.ಇ.ಒ.ಉಮಾದೇವಿ, ತೋಟಗಾರಿಕಾ ಇಲಾಖಾ ಹಿರಿಯ ಸಹಾಯಕ ನಿರ್ದೇಶಕ ಡಾ.ಎಂ. ಶ್ರೀನಿವಾಸನ್, ನರೇಗ ಎ.ಡಿ.ರಾಮಪ್ಪ, ಪಿ.ಡಿ.ಒ ಕೃಷ್ಣ,ಗೌಸಸಾಬ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



