ಶ್ರೀನಿವಾಸಪುರ: ಮೇ 10 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದು ಭಾವಿಸಿ ಪ್ರತಿಯೊಬ್ಬ ನಾಗರಿಕನೂ ಕಡ್ಡಾಯವಾಗಿ ಮತವನ್ನು ಚಲಾಯಿಸಿ, ದೇಶದ ಪ್ರಜಾತಂತ್ರದ ವ್ಯವಸ್ಥೆಯನ್ನುಎತ್ತಿ ಹಿಡಿಯಲು ಪ್ರಯತ್ನ ಮಾಡುವಂತೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣಾಧಿಕಾರಿ ಇ. ಕೃಷ್ಣಪ್ಪ ಕರೆ ಇತ್ತರು.
ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ಜಾಗೃತಿ ಅಭಿಯಾನ ಸಲುವಾಗಿ ಪಟ್ಟಣ ಎಂ. ಜಿ. ರಸ್ತೆಯಲ್ಲಿ ಮೊಂಬತ್ತಿ ಮತ್ತು ಪಂಜಿನ ಮೆರವಣಿಗೆ ಉದ್ಘಾಟಿಸಿ ಮಾತನಾಡಿದ ಇ.ಒ. ಕೃಷ್ಣಪ್ಪ, ದೇಶ ಮುನ್ನೆಡಸಲು ಉತ್ತಮ ವ್ಯಕ್ತಿಯನ್ನು ಮತದಾನದ ಮೂಲಕ ಆಯ್ಕೆಮಾಡಿಕೊಳ್ಳಲು ಅವಕಾಶ ಇರುತ್ತದೆ 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತದ ಪ್ರಜೆ ಮತದಾನ ಹಕ್ಕು ಚಲಾಯಿಸಬೇಕು, ಈ ನಿಟ್ಟಿನಲ್ಲಿ ಮತದಾರರು ಮೇ 10 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂತೆಯ ತನಕ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲು ಮುಂದಾಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಚುನಾವಣಾ ಅಧಿಕಾರಿಗಳಾದ ತಹಸೀಲ್ದಾರ್ ಶೀರಿನ್ತಾಜ್, ವೃತ್ತನಿರೀಕ್ಷಕ ನಾರಾಯಣಸ್ವಾಮಿ, ಪುರಸಭಾ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ, ಬಿ.ಇ.ಒ.ಉಮಾದೇವಿ, ತೋಟಗಾರಿಕಾ ಇಲಾಖಾ ಹಿರಿಯ ಸಹಾಯಕ ನಿರ್ದೇಶಕ ಡಾ.ಎಂ. ಶ್ರೀನಿವಾಸನ್, ನರೇಗ ಎ.ಡಿ.ರಾಮಪ್ಪ, ಪಿ.ಡಿ.ಒ ಕೃಷ್ಣ,ಗೌಸಸಾಬ್ ಮುಂತಾದವರು ಇದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27