ಚಿಂತಾಮಣಿ:ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ಡ್ ನಂ 7ರ.ಸದಸ್ಯ ಆರ್ ಜಗನ್ನಾಥ್, ಉಪಾಧ್ಯಕ್ಷರಾಗಿ ವಾರ್ಡ್ ನಂ:27 ರ ರಾಣಿಯಮ್ಮರವರು ಅವಿರೋಧ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಅಧಿಕಾರ ಮುಂದುವರದಿದೆ.
ಇಂದು ನಡೆದ ಚಿಂತಾಮಣಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದ್ದು ಚುನಾವಣಾ ಅಧಿಕಾರಿಯಾದ ಅಶ್ವಿನ್ ರವರು ಚುನಾವಣೆಯನ್ನು ನಡೆಸಿದ್ದು ಕಾಂಗ್ರೆಸ್ ಪಕ್ಷದ ಸದಸ್ಯ ಆರ್ ಜಗನ್ನಾಥ್, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ರಾಣಿಯಮ್ಮ ನಾಮಪತ್ರ ಸಲ್ಲಿಸಿದ್ದು ಇತರೆ ಯಾರು ಸಹ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆವಿರೋಧವಾಗಿ ಆಯ್ಕೆಯಾದರು.
ಸಚಿವರಿಂದ ಶುಭಹಾರೈಕೆ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆವಿರೋಧವಾಗಿ ಆಯ್ಕೆ ಘೋಷಣೆಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ ಸಿ ಸುಧಾಕರ್ ರವರು ಕಾಂಗ್ರೆಸ್ ನಗರಸಭಾ ಸದಸ್ಯರೊಂದಿಗೆ ಆಗಮಿಸಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭಕೋರಿ ಮಾತನಾಡಿ ಚಿಂತಾಮಣಿ ನಗರವನ್ನು ಅಭಿವೃದ್ಧಿ ಪಥದತ್ತ ತಗೆದುಕೊಂಡು ಹೋಗಲು ಪಕ್ಷಾತೀತವಾಗಿ ಶ್ರಮಿಸುವಂತೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸೂಚಿಸಿದರು,ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರಸಭೆ ಮುಂಭಾಗ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಜಗದೀಶ್.ರಾಜಾಚಾರಿ. ಹರೀಶ್.ಅಕ್ಷಯ್,ಸೇರಿದಂತೆ ನಗರಸಭಾ ಸದಸ್ಯರು ಹಾಗು ಕಾಂಗ್ರೆಸ್ ಮುಖಂಡರುಗಳು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



