ಚಿಂತಾಮಣಿ:ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ಡ್ ನಂ 7ರ.ಸದಸ್ಯ ಆರ್ ಜಗನ್ನಾಥ್, ಉಪಾಧ್ಯಕ್ಷರಾಗಿ ವಾರ್ಡ್ ನಂ:27 ರ ರಾಣಿಯಮ್ಮರವರು ಅವಿರೋಧ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಅಧಿಕಾರ ಮುಂದುವರದಿದೆ.
ಇಂದು ನಡೆದ ಚಿಂತಾಮಣಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದ್ದು ಚುನಾವಣಾ ಅಧಿಕಾರಿಯಾದ ಅಶ್ವಿನ್ ರವರು ಚುನಾವಣೆಯನ್ನು ನಡೆಸಿದ್ದು ಕಾಂಗ್ರೆಸ್ ಪಕ್ಷದ ಸದಸ್ಯ ಆರ್ ಜಗನ್ನಾಥ್, ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ರಾಣಿಯಮ್ಮ ನಾಮಪತ್ರ ಸಲ್ಲಿಸಿದ್ದು ಇತರೆ ಯಾರು ಸಹ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆವಿರೋಧವಾಗಿ ಆಯ್ಕೆಯಾದರು.
ಸಚಿವರಿಂದ ಶುಭಹಾರೈಕೆ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆವಿರೋಧವಾಗಿ ಆಯ್ಕೆ ಘೋಷಣೆಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ ಸಿ ಸುಧಾಕರ್ ರವರು ಕಾಂಗ್ರೆಸ್ ನಗರಸಭಾ ಸದಸ್ಯರೊಂದಿಗೆ ಆಗಮಿಸಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭಕೋರಿ ಮಾತನಾಡಿ ಚಿಂತಾಮಣಿ ನಗರವನ್ನು ಅಭಿವೃದ್ಧಿ ಪಥದತ್ತ ತಗೆದುಕೊಂಡು ಹೋಗಲು ಪಕ್ಷಾತೀತವಾಗಿ ಶ್ರಮಿಸುವಂತೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸೂಚಿಸಿದರು,ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರಸಭೆ ಮುಂಭಾಗ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಜಗದೀಶ್.ರಾಜಾಚಾರಿ. ಹರೀಶ್.ಅಕ್ಷಯ್,ಸೇರಿದಂತೆ ನಗರಸಭಾ ಸದಸ್ಯರು ಹಾಗು ಕಾಂಗ್ರೆಸ್ ಮುಖಂಡರುಗಳು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27