ಶ್ರೀನಿವಾಸಪುರ:ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಡೆಗಣಿಸಿದರೆ ಪಕ್ಷ ಮೂಲೆಗುಂಪಾಗುತ್ತದೆ ಆಂಧ್ರದಲ್ಲಿ ಕಾಂಗ್ರೆಸ್ ಗೆ ಬಂದಿರುವ ಗತಿ ಬರುತ್ತದೆ ಎಂದು ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈ ಮಾತನ್ನು ಹೇಳುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಗೆ ಸಿದ್ದರಾಮಯ್ಯ ಪರವಾಗಿ ಸಂದೇಶ ರವಾನಿಸಿದ್ದಾರೆ.
ಕುರುಬಸಮಾಜದವರ ಬೆಂಬಲ ಕೋರಿ ಕನಕ ಭವನದಲ್ಲಿ ಶ್ರೀನಿವಾಸಪುರ ತಾಲೂಕಿನ ಕುರುಬ ಸಮುದಾಯದವರ ಸಭೆ ನಡೆಸಿ ಮಾತನಾಡಿದ ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಸೈಡ್ ಲೈನ್ ಮಾಡಿ ಅವರ ಸ್ಥಾನಕ್ಕೆ ನಾನು ಬರಬಹುದು ಎಂಬ ಲೆಕ್ಕಾಚಾರ ಯಾರಿಗಾದರೂ ಇದ್ದರೆ ಕಾಂಗ್ರೆಸ್ ರಾಜ್ಯದಲ್ಲಿ ಪ್ರತಿಪಕ್ಷ ಸ್ಥಾನದಲ್ಲಿ ಕೂರಬೇಕಾಗುತ್ತದೆ ಎಂದರು.
ಕೆಲವರು ಸಿದ್ದರಾಮಯ್ಯ ಅವರ ಬೆನ್ನಮೇಲೆ ಕೈಹಾಕಿಕೊಂಡು ಕರೆದುಕೊಂಡು ಹೋಗಿ ವರುಣಾದಲ್ಲಿ ನಿಲ್ಲಿಸಿ ಸೋಲಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು, ಇವತ್ತು ರಾಹುಲ್ ಗಾಂಧಿಗೆ ಸರಿಸಮನಾಗಿ ವಿರೋಧ ಪಕ್ಷಗಳನ್ನು ಎದರಿಸುವ ತಾಕತ್ತು ಕೇವಲ ಸಿದ್ದರಾಮಯ್ಯ ಅವರಿಗೆ ಮಾತ್ರ ಇದ್ದು ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ದಿಸಿದರೆ ಹಿಂದುಳಿದ ಅಲ್ಪಸಂಖ್ಯಾತ ಪರಿಶಿಷ್ಟರು ಮತ ನೀಡಿ ಗೆಲ್ಲಿಸುತ್ತಾರೆ ಇದನ್ನು ಸಹಿಸದ ಕೆಲವರು ಹೊಟ್ಟೆಕಿಚ್ಚು ಬಿಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲು ನನ್ನ ಮೆಲೆ ಅಭಿಮಾನ ಇಟ್ಟು ಕುರುಬಸಮಾಜ ಒಗ್ಗಾಟ್ಟಾಗಿ ನನ್ನನ್ನು ಬೆಂಬಲಿಸುವಂತೆ ಕೋರಿದರು ಸಭೆಯಲ್ಲಿ ಕುರುಬ ಸಂಘದ ತಾಲೂಕು ಅಧ್ಯಕ್ಷ ಎಂ.ವೇಮಣ್ಣ,ಮಾಜಿ ಅಧ್ಯಕ್ಷೆ ಕಶೇಟ್ಟಳ್ಳಿ ಸುಜಾತಮ್ಮ,ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಯಲ್ದೂರು ಗೌರಮ್ಮ,ಗಂಗಾಧರ್,ಪಾತಮುತ್ತಕಪಲ್ಲಿಅಂಜನೇಯಗೌಡ, ಕೋಲಾರ ಸೋಮಶೇಖರ್, ವೆಂಕಟರಮಣಪ್ಪ ಮುಂತಾದವರು ಇದ್ದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Monday, June 16