ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕಿನಲ್ಲಿ ನಿರುದ್ಯೊಗ ಸಮಸ್ಯೆ ನಿವಾರಣೆಗೆ ಪಟ್ಟಣಕ್ಕೆ ಹೊಂದಿಕೊಂಡಂತೆ ಕೈಗಾರಿಕ ಪ್ರದೇಶ ನಿರ್ಮಾಣ ಮಾಡಲು ಯೋಜನೆ ಸಿದ್ದಪಡಿಸುತ್ತಿರುವುದಾಗಿ ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು ಅವರು ಇಂದು ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿ ವಿಕ್ಷಿಸಿ ಮಾತನಾಡಿದ ಅವರು ತಾಲೂಕಿಗೆ ಕೈಗಾರಿಕೆಗಳು ಬಂದರೆ ಇಲ್ಲಿನ ನಿರುದ್ಯೊಗಿ ಯುವಕರ ಸಮಸ್ಯೆ ಬಗೆಹರೆಯಲು ಸಹಕಾರಿಯಾಗುತ್ತದೆ ಎಂದರು.
ತಾಲೂಕಿನ ಮುಳಬಾಗಿಲು ರಸ್ತೆ ಅಥಾವ ಪುಂಗನೂರು ರಸ್ತೆಯಲ್ಲಿ ಜಮೀನು ಗುರುತಿಸಿ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡುವ ಕುರಿತಾಗಿ ಕೈಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ರೂಪು ರೇಷೆ ಸಿದ್ದಪಡಿಸುವುದಾಗಿ, ಮಾವು ಟಮ್ಯಾಟೊ ಸೇರಿದಂತೆ ತೋಟಗಾರಿಕೆ ಬೆಳೆಗಳ ಸಂಸ್ಕರಣ ಘಟಕಗಳು ಮತ್ತು ಕೃಷಿ ಆಧಾರಿತ ಕೈಗಾರಿಕೆಗಳ ನಿರ್ಮಾಣ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದರು.
ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣ
ಕ್ರೀಡಾಂಗಣಕ್ಕೆ ಹೊಂದಿಕೊಂಡಂತೆ ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣಕ್ಕೆ ಸಂಸದ ಮುನಿಶಾಮಿ ತಮ್ಮ ನಿಧಿಯಿಂದ ಹಣ ನೀಡಲಿದ್ದು ಇದಕ್ಕೆ ಸಂಬಂದಿಸಿದಂತೆ ಜಮೀನು ನೀಡುವುದಾಗಿ ತಿಳಿಸಿದ ಶಾಸಕ ವೆಂಕಟಶಿವಾರೆಡ್ಡಿ ಪಟ್ಟಣದ ಜನರ ಕ್ರೀಡಾಚಟುವಟಿಕೆಗಾಗಿ ಅತ್ಯಾಧುನಿಕವಾಗಿ ಕ್ರೀಡಾಂಗಣ ಸರ್ವರೀತಿಯಲ್ಲೂ ನವೀಕರಣವಾಗುತ್ತಿದೆ ಹಾಗೆ ಸುಸಜ್ಜಿತ ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣಕ್ಕೆ ಸದ್ಯದಲ್ಲಿಯೆ ಭೂಮಿ ಪೂಜೆ ಮಾಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ,ಲೋಕೋಪಯೋಗಿ ಇಲಾಖೆ ಅಭಿಯಂತರ ಟಿ.ನಾಗರಾಜ್,ಗುತ್ತಿಗೆದಾರರಾದ ಶಿವಾರೆಡ್ಡಿ,ಕಂಬಾಲಹಳ್ಳಿ ಶ್ರೀನಿವಾಸರೆಡ್ಡಿ,ಯುವ ಮುಖಂಡರಾದ ದುರ್ಗಾಪ್ರಸಾದ್,ಗುರುಮೂರ್ತಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



