ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕಿನಲ್ಲಿ ನಿರುದ್ಯೊಗ ಸಮಸ್ಯೆ ನಿವಾರಣೆಗೆ ಪಟ್ಟಣಕ್ಕೆ ಹೊಂದಿಕೊಂಡಂತೆ ಕೈಗಾರಿಕ ಪ್ರದೇಶ ನಿರ್ಮಾಣ ಮಾಡಲು ಯೋಜನೆ ಸಿದ್ದಪಡಿಸುತ್ತಿರುವುದಾಗಿ ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು ಅವರು ಇಂದು ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿ ವಿಕ್ಷಿಸಿ ಮಾತನಾಡಿದ ಅವರು ತಾಲೂಕಿಗೆ ಕೈಗಾರಿಕೆಗಳು ಬಂದರೆ ಇಲ್ಲಿನ ನಿರುದ್ಯೊಗಿ ಯುವಕರ ಸಮಸ್ಯೆ ಬಗೆಹರೆಯಲು ಸಹಕಾರಿಯಾಗುತ್ತದೆ ಎಂದರು.
ತಾಲೂಕಿನ ಮುಳಬಾಗಿಲು ರಸ್ತೆ ಅಥಾವ ಪುಂಗನೂರು ರಸ್ತೆಯಲ್ಲಿ ಜಮೀನು ಗುರುತಿಸಿ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡುವ ಕುರಿತಾಗಿ ಕೈಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ರೂಪು ರೇಷೆ ಸಿದ್ದಪಡಿಸುವುದಾಗಿ, ಮಾವು ಟಮ್ಯಾಟೊ ಸೇರಿದಂತೆ ತೋಟಗಾರಿಕೆ ಬೆಳೆಗಳ ಸಂಸ್ಕರಣ ಘಟಕಗಳು ಮತ್ತು ಕೃಷಿ ಆಧಾರಿತ ಕೈಗಾರಿಕೆಗಳ ನಿರ್ಮಾಣ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದರು.
ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣ
ಕ್ರೀಡಾಂಗಣಕ್ಕೆ ಹೊಂದಿಕೊಂಡಂತೆ ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣಕ್ಕೆ ಸಂಸದ ಮುನಿಶಾಮಿ ತಮ್ಮ ನಿಧಿಯಿಂದ ಹಣ ನೀಡಲಿದ್ದು ಇದಕ್ಕೆ ಸಂಬಂದಿಸಿದಂತೆ ಜಮೀನು ನೀಡುವುದಾಗಿ ತಿಳಿಸಿದ ಶಾಸಕ ವೆಂಕಟಶಿವಾರೆಡ್ಡಿ ಪಟ್ಟಣದ ಜನರ ಕ್ರೀಡಾಚಟುವಟಿಕೆಗಾಗಿ ಅತ್ಯಾಧುನಿಕವಾಗಿ ಕ್ರೀಡಾಂಗಣ ಸರ್ವರೀತಿಯಲ್ಲೂ ನವೀಕರಣವಾಗುತ್ತಿದೆ ಹಾಗೆ ಸುಸಜ್ಜಿತ ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣಕ್ಕೆ ಸದ್ಯದಲ್ಲಿಯೆ ಭೂಮಿ ಪೂಜೆ ಮಾಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ,ಲೋಕೋಪಯೋಗಿ ಇಲಾಖೆ ಅಭಿಯಂತರ ಟಿ.ನಾಗರಾಜ್,ಗುತ್ತಿಗೆದಾರರಾದ ಶಿವಾರೆಡ್ಡಿ,ಕಂಬಾಲಹಳ್ಳಿ ಶ್ರೀನಿವಾಸರೆಡ್ಡಿ,ಯುವ ಮುಖಂಡರಾದ ದುರ್ಗಾಪ್ರಸಾದ್,ಗುರುಮೂರ್ತಿ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



