ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕಿನಲ್ಲಿ ನಿರುದ್ಯೊಗ ಸಮಸ್ಯೆ ನಿವಾರಣೆಗೆ ಪಟ್ಟಣಕ್ಕೆ ಹೊಂದಿಕೊಂಡಂತೆ ಕೈಗಾರಿಕ ಪ್ರದೇಶ ನಿರ್ಮಾಣ ಮಾಡಲು ಯೋಜನೆ ಸಿದ್ದಪಡಿಸುತ್ತಿರುವುದಾಗಿ ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು ಅವರು ಇಂದು ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿ ವಿಕ್ಷಿಸಿ ಮಾತನಾಡಿದ ಅವರು ತಾಲೂಕಿಗೆ ಕೈಗಾರಿಕೆಗಳು ಬಂದರೆ ಇಲ್ಲಿನ ನಿರುದ್ಯೊಗಿ ಯುವಕರ ಸಮಸ್ಯೆ ಬಗೆಹರೆಯಲು ಸಹಕಾರಿಯಾಗುತ್ತದೆ ಎಂದರು.
ತಾಲೂಕಿನ ಮುಳಬಾಗಿಲು ರಸ್ತೆ ಅಥಾವ ಪುಂಗನೂರು ರಸ್ತೆಯಲ್ಲಿ ಜಮೀನು ಗುರುತಿಸಿ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡುವ ಕುರಿತಾಗಿ ಕೈಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ರೂಪು ರೇಷೆ ಸಿದ್ದಪಡಿಸುವುದಾಗಿ, ಮಾವು ಟಮ್ಯಾಟೊ ಸೇರಿದಂತೆ ತೋಟಗಾರಿಕೆ ಬೆಳೆಗಳ ಸಂಸ್ಕರಣ ಘಟಕಗಳು ಮತ್ತು ಕೃಷಿ ಆಧಾರಿತ ಕೈಗಾರಿಕೆಗಳ ನಿರ್ಮಾಣ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದರು.
ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣ
ಕ್ರೀಡಾಂಗಣಕ್ಕೆ ಹೊಂದಿಕೊಂಡಂತೆ ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣಕ್ಕೆ ಸಂಸದ ಮುನಿಶಾಮಿ ತಮ್ಮ ನಿಧಿಯಿಂದ ಹಣ ನೀಡಲಿದ್ದು ಇದಕ್ಕೆ ಸಂಬಂದಿಸಿದಂತೆ ಜಮೀನು ನೀಡುವುದಾಗಿ ತಿಳಿಸಿದ ಶಾಸಕ ವೆಂಕಟಶಿವಾರೆಡ್ಡಿ ಪಟ್ಟಣದ ಜನರ ಕ್ರೀಡಾಚಟುವಟಿಕೆಗಾಗಿ ಅತ್ಯಾಧುನಿಕವಾಗಿ ಕ್ರೀಡಾಂಗಣ ಸರ್ವರೀತಿಯಲ್ಲೂ ನವೀಕರಣವಾಗುತ್ತಿದೆ ಹಾಗೆ ಸುಸಜ್ಜಿತ ಒಳಾಂಗಣ ಶೆಟಲ್ ಕೊರ್ಟ್ ನಿರ್ಮಾಣಕ್ಕೆ ಸದ್ಯದಲ್ಲಿಯೆ ಭೂಮಿ ಪೂಜೆ ಮಾಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ,ಲೋಕೋಪಯೋಗಿ ಇಲಾಖೆ ಅಭಿಯಂತರ ಟಿ.ನಾಗರಾಜ್,ಗುತ್ತಿಗೆದಾರರಾದ ಶಿವಾರೆಡ್ಡಿ,ಕಂಬಾಲಹಳ್ಳಿ ಶ್ರೀನಿವಾಸರೆಡ್ಡಿ,ಯುವ ಮುಖಂಡರಾದ ದುರ್ಗಾಪ್ರಸಾದ್,ಗುರುಮೂರ್ತಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



