ನ್ಯೂಜ್ ಡೆಸ್ಕ್:ಯಾಗಿ ಚಂಡಮಾರುತದ ಎಫೇಕ್ಟ್ ಸುಂದರವಾದ ಹಾಗು ಪ್ರವಾಸಿಗರ ಸ್ವರ್ಗ ದೇಶ ಮ್ಯಾನ್ಮಾರ್ ನಲ್ಲಿ ದೊಡ್ಡಮಟ್ಟದಲ್ಲಿ ಹಾನಿಗೊಳಗಾಗಿದೆ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಸುಮಾರು 236 ಜನರು ಸಾವನ್ನಪ್ಪಿದ್ದು 77 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂಎನ್ನಲಾಗಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. 6.31 ಲಕ್ಷ ಜನರು ಪ್ರವಾಹಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ರಸ್ತೆಗಳು ದೊಡ್ಡ ಪ್ರಮಾಣದಲ್ಲಿ ಹಾಳಾಗಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಭಾರತದ ನೇರವು ಯಾಗಿ ಚಂಡಮಾರುತದಿಂದ ತತ್ತರಿಸಿರುವ ಮ್ಯಾನ್ಮಾರ್, ವಿಯೆಟ್ನಾಂ ಮತ್ತು ಲಾವೋಸ್ಗೆ ಭಾರತ ಸರ್ಕಾರ ಮಾನವೀಯತೆಯ ಸಹಾಯ ಹಸ್ತ ಚಾಚಿದೆ
ಮ್ಯಾನ್ಮಾರ್ಗೆ ರೇಷನ್, ಬಟ್ಟೆ ಮತ್ತು ಔಷಧಗಳು ಸೇರಿದಂತೆ ಹತ್ತು ಟನ್ಗಳ ನೆರವು. IAF ವಿಯೆಟ್ನಾಂಗೆ ನೀರು ಶುದ್ಧೀಕರಣ ವಸ್ತುಗಳನ್ನು ನೀರಿನ ಪಾತ್ರೆಗಳು, ಹೊದಿಕೆಗಳು, ಅಡುಗೆ ಪಾತ್ರೆಗಳು, ಸೌರ ಲ್ಯಾಂಟರ್ನ್ಗಳನ್ನು ಒಳಗೊಂಡ 35 ಟನ್ಗಳ ನೆರವನ್ನು ಒಯ್ಯುತ್ತಿದೆ. ಜೆನ್ಸೆಟ್, ನೀರು ಶುದ್ಧೀಕರಣ ವಸ್ತುಗಳು, ನೈರ್ಮಲ್ಯ ಸರಬರಾಜು, ಸೊಳ್ಳೆ ಪರದೆಗಳು, ಹೊದಿಕೆಗಳು ಮತ್ತು ಮಲಗುವ ಚೀಲಗಳನ್ನು ಒಳಗೊಂಡ ಹತ್ತು ಟನ್ಗಳ ಸಹಾಯವನ್ನು ಲಾವೋಸ್ಗೆ ಕಳುಹಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸಾಮಾಜಿಕ ಮಾಧ್ಯಮ ‘X’ ನಲ್ಲಿ ಹಂಚಿಕೊಂಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



