ಶ್ರೀನಿವಾಸಪುರ: ಮಾನಸೀಕವಾಗಿ ಮನನೊಂದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿ ಶಿಗಪಲ್ಲಿ@ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನು ನೇಣಿಗೆ ಶರಣಾದ ತಂದೆಯೊಬ್ಬನ ಕಥೆ,ಕೃಷಿ ಕಾರ್ಮಿಕನಾಗಿದ್ದ ಶಿಗಪಲ್ಲಿ ನಾರಾಯಣಸ್ವಾಮಿ (40) ಹೆಂಡತಿ ಹಾಗು ಇಬ್ಬರು ಮಕ್ಕಳೊಂದಿಗೆ ಗ್ರಾಮದಲ್ಲಿಯೇ ವಾಸವಾಗಿದ್ದ ಇತ್ತಿಚಿಗೆ ಗಂಡ ಹೆಂಡತಿ ನಡುವೆ ಅನ್ಯೊನ್ಯತೆ ಕಡಿಮೆಯಾಗಿ ಪತ್ನಿ ಕಾಣೆಯಾಗುತ್ತಾಳೆ, ಈ ಬಗ್ಗೆ ಗ್ರಾಮದಲ್ಲಿ ಹಲವಾರು ಉಹಾಪೋಹಗಳು ಹರಡುತ್ತವೆ,ನಂತರದ ಬೆಳವಣಿಗೆಯಲ್ಲಿ ಆಕೆ ಕೋಲಾರದ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿರುವುದಾಗಿ ಹೇಳುತ್ತಾರೆ,ಇತ್ತ ನಾರಯಣಸ್ವಾಮಿ ಬಗ್ಗೆ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಹಳೆಯ ಪ್ರಕರಣಕ್ಕೆ ಸಂಬಂದಿಸಿದಂತೆ ದೂರು ಇದ್ದು ಪೋಲಿಸರು ಕರೆದಾಗ ಠಾಣೆಗೆ ಹೋಗಿಬರುತ್ತಿದ್ದ, ಹೀಗೆ ಹಲವಾರು ರಿತಿಯಲ್ಲಿ ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದ ಆತ ತನ್ನ ಇಬ್ಬರು ಮಕ್ಕಳಾದ ಪವನ್ (12) ಮತ್ತು ನಿತಿನ್ (10) ವಿಷ ಕುಡಿಸಿ ತಾನು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸುತ್ತಾರೆ.
ಈ ಸಂಬಂಧ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಇನ್ಸಪೇಕ್ಟರ್ ಗೊರವನಕೊಳ್ಳ ಭೇಟಿ ನೀಡಿರುತ್ತಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27