ಶ್ರೀನಿವಾಸಪುರ: ಮಾನಸೀಕವಾಗಿ ಮನನೊಂದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿ ಶಿಗಪಲ್ಲಿ@ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನು ನೇಣಿಗೆ ಶರಣಾದ ತಂದೆಯೊಬ್ಬನ ಕಥೆ,ಕೃಷಿ ಕಾರ್ಮಿಕನಾಗಿದ್ದ ಶಿಗಪಲ್ಲಿ ನಾರಾಯಣಸ್ವಾಮಿ (40) ಹೆಂಡತಿ ಹಾಗು ಇಬ್ಬರು ಮಕ್ಕಳೊಂದಿಗೆ ಗ್ರಾಮದಲ್ಲಿಯೇ ವಾಸವಾಗಿದ್ದ ಇತ್ತಿಚಿಗೆ ಗಂಡ ಹೆಂಡತಿ ನಡುವೆ ಅನ್ಯೊನ್ಯತೆ ಕಡಿಮೆಯಾಗಿ ಪತ್ನಿ ಕಾಣೆಯಾಗುತ್ತಾಳೆ, ಈ ಬಗ್ಗೆ ಗ್ರಾಮದಲ್ಲಿ ಹಲವಾರು ಉಹಾಪೋಹಗಳು ಹರಡುತ್ತವೆ,ನಂತರದ ಬೆಳವಣಿಗೆಯಲ್ಲಿ ಆಕೆ ಕೋಲಾರದ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿರುವುದಾಗಿ ಹೇಳುತ್ತಾರೆ,ಇತ್ತ ನಾರಯಣಸ್ವಾಮಿ ಬಗ್ಗೆ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಹಳೆಯ ಪ್ರಕರಣಕ್ಕೆ ಸಂಬಂದಿಸಿದಂತೆ ದೂರು ಇದ್ದು ಪೋಲಿಸರು ಕರೆದಾಗ ಠಾಣೆಗೆ ಹೋಗಿಬರುತ್ತಿದ್ದ, ಹೀಗೆ ಹಲವಾರು ರಿತಿಯಲ್ಲಿ ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದ ಆತ ತನ್ನ ಇಬ್ಬರು ಮಕ್ಕಳಾದ ಪವನ್ (12) ಮತ್ತು ನಿತಿನ್ (10) ವಿಷ ಕುಡಿಸಿ ತಾನು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸುತ್ತಾರೆ.
ಈ ಸಂಬಂಧ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಇನ್ಸಪೇಕ್ಟರ್ ಗೊರವನಕೊಳ್ಳ ಭೇಟಿ ನೀಡಿರುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



