ಶ್ರೀನಿವಾಸಪುರ: ಮಾನಸೀಕವಾಗಿ ಮನನೊಂದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿ ಶಿಗಪಲ್ಲಿ@ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನು ನೇಣಿಗೆ ಶರಣಾದ ತಂದೆಯೊಬ್ಬನ ಕಥೆ,ಕೃಷಿ ಕಾರ್ಮಿಕನಾಗಿದ್ದ ಶಿಗಪಲ್ಲಿ ನಾರಾಯಣಸ್ವಾಮಿ (40) ಹೆಂಡತಿ ಹಾಗು ಇಬ್ಬರು ಮಕ್ಕಳೊಂದಿಗೆ ಗ್ರಾಮದಲ್ಲಿಯೇ ವಾಸವಾಗಿದ್ದ ಇತ್ತಿಚಿಗೆ ಗಂಡ ಹೆಂಡತಿ ನಡುವೆ ಅನ್ಯೊನ್ಯತೆ ಕಡಿಮೆಯಾಗಿ ಪತ್ನಿ ಕಾಣೆಯಾಗುತ್ತಾಳೆ, ಈ ಬಗ್ಗೆ ಗ್ರಾಮದಲ್ಲಿ ಹಲವಾರು ಉಹಾಪೋಹಗಳು ಹರಡುತ್ತವೆ,ನಂತರದ ಬೆಳವಣಿಗೆಯಲ್ಲಿ ಆಕೆ ಕೋಲಾರದ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿರುವುದಾಗಿ ಹೇಳುತ್ತಾರೆ,ಇತ್ತ ನಾರಯಣಸ್ವಾಮಿ ಬಗ್ಗೆ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಹಳೆಯ ಪ್ರಕರಣಕ್ಕೆ ಸಂಬಂದಿಸಿದಂತೆ ದೂರು ಇದ್ದು ಪೋಲಿಸರು ಕರೆದಾಗ ಠಾಣೆಗೆ ಹೋಗಿಬರುತ್ತಿದ್ದ, ಹೀಗೆ ಹಲವಾರು ರಿತಿಯಲ್ಲಿ ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದ ಆತ ತನ್ನ ಇಬ್ಬರು ಮಕ್ಕಳಾದ ಪವನ್ (12) ಮತ್ತು ನಿತಿನ್ (10) ವಿಷ ಕುಡಿಸಿ ತಾನು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸುತ್ತಾರೆ.
ಈ ಸಂಬಂಧ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಇನ್ಸಪೇಕ್ಟರ್ ಗೊರವನಕೊಳ್ಳ ಭೇಟಿ ನೀಡಿರುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



