ಶ್ರೀನಿವಾಸಪುರ: ವಿಧಾನ ಪರಿಷತ್ ಚುನಾವಣೆಗೂ ಮುಂಚೆ ತಾಲೂಕು ಪ್ರಭಾವಿ ಕಾಂಗ್ರೆಸ್ ಮುಖಂಡ ಯು ಟರ್ನ್ ಹೊಡೆದಿರುವ ಹಿಂದಿನ ಮರ್ಮವೇನು? ಈಗ ಜನಸಾಮನ್ಯನ ಬಾಯಲ್ಲಿ ಕೇಳಿಬರುತ್ತಿರುವ ಮಿಲಿಯನ್ ಡಾಲರ್ ಪ್ರಶ್ನೆ, ಸ್ವಾಭಿಮಾನದ ಮಾತುಗಳನ್ನಾಡಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಿಂದ ದೂರವೆ ಉಳಿದಿದ್ದ ವ್ಯಕ್ತಿ ಏಕಾಏಕಿ ಸುದ್ಧಿಗೊಷ್ಠಿ ಕರೆದು ನಾನು ಪಕ್ಷಕ್ಕೆ ದ್ರೋಹ ಬಗೆಯಲ್ಲ ನಾನು ನನ್ನ ಕುಟುಂಬ ಕಾಂಗ್ರೆಸ್ ನಿಷ್ಠಾವಂತರು ನಾನು ವಿಧಾನಪರಿಷತ್ ಚುನಾವಣೆಯಲ್ಲಿ ನನ್ನ ಬೆಂಬಲ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಅವರಿಗೆ ಎಂದು ಹೇಳಿಕೆ ನೀಡುವ ಮೂಲಕ ತಾಲೂಕಿನ ರಾಜಕೀಯ ಪಡಸಾಲೆಯಲ್ಲಿ ಚರ್ಚೆಯ ವಿಷಯವಾಗಿದೆ.
ಶ್ರೀನಿವಾಸಪುರ ತಾಲೂಕಿನ ಪ್ರಭಾವಿ ಕಾಂಗ್ರೆಸ್ ಮುಖಂಡ ಮಾವು ಮಂಡಳಿ ಮಾಜಿ ಅಧ್ಯಕ್ಷ, ಜಿಲ್ಲಾ ಪರಿಷತ್ ಮಾಜಿ ಸದಸ್ಯ ದಳಸನೂರು ಗೋಪಾಲಕೃಷ್ಣ ಅವರು ಸುದ್ಧಿಗೊಷ್ಠಿಯಲ್ಲಿ ಪಕ್ಷ ದ್ರೋಹದ ಕೆಲಸ ಮಾಡಲಾರೆ ನನ್ನ ಬಗ್ಗೆ ಬಂದಿರುವಂತ ಉಹಾಪೋಹಗಳು ಕೆವಲ ಉಹಾಪೊಹಗಳಷ್ಟೆ ಇದರಲ್ಲಿ ಯಾವುದೇ ಸತ್ಯ ಇಲ್ಲ ಎಂದು ವಿಧಾನಪರಿಷತ್ ಚುನಾವಣೆಗೆ ಎರಡು ದಿನ ಇರುವ ಸಮಯದಲ್ಲಿ ನೀಡಿರುವ ಹೇಳಿಕೆ ಜನಸಾಮನ್ಯರಲ್ಲಿ ಅಲ್ಲ ಕಾಂಗ್ರೆಸ್ ಕಾರ್ಯಕರ್ತರಲ್ಲಿಯೇ ಅಚ್ಚರಿ ಮೂಡಿಸಿದೆ.
ಏನಿದು ಅಚ್ಚರಿಯ ನಡೆ?
ಲೋಕಸಭೆ ಚುನಾವಣೆ ನಂತರ ಗೋಪಾಲಕೃಷ್ಣ ತಾಲೂಕಿನಲ್ಲಿ ನಡೆದಂತ ಪಕ್ಷ ಚಟುವಟಿಕೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ದೂರವೆ ಉಳದಿದ್ದರು,ಇದು ಸಾರ್ವಜನಿಕವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ರಾಜಕೀಯವಾಗಿ ಅವರು ಕಾಂಗ್ರೆಸ್ ತೊರೆಯುತ್ತಾರೆ ಎನ್ನುವ ಮಾತು ಸಹ ಕೇಳಿಬಂದಿತ್ತು ಮುಂದಿನ ದಿನಗಳಲ್ಲಿ ಬಿಜೆಪಿ ಸೇರಬಹುದು ಎನ್ನುವಂತ ಸುದ್ಧಿ ಹರಿದಾಡುತಿತ್ತು ಯಾವುದಕ್ಕೂ ಯಾವುದೇ ನಿಖರವಾದ ಮಾಹಿತಿ ಇರಲಿಲ್ಲವಾದರು ಅವರ ಆಪ್ತರು ಸಹ ಕಾಂಗ್ರೆಸ್ ನಿಂದ ಅಂತರ ಕಾದುಕೊಂಡಿದ್ದರು.ಈ ಬೆಳವಣಿಗೆಗಳಿಂದ ಸಾರ್ವಜನಿಕವಾಗಿ ಕೇಳಿಬರುತ್ತಿದ್ದ ಮಾತುಗಳೇ ನಿಜ ಇರಬಹುದಾ ಎನ್ನುವಂತಾಗಿತ್ತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗುತ್ತಾರ!
ಹರಿದಾಡುತ್ತಿರುವ ಉಹಾಪೋಹಗಳ ನಡೆವೆ ಮತ್ತೊಂದು ಅಚ್ಚರಿಯ ಎನ್ನುವಂತ ಸುದ್ಧಿ ಹೊರಬಂದಿದೆ ಇತ್ತಿಚಿಗೆ ಬಿಜೆಪಿ ಸೇರಿರುವ ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ಸ್ಥಾನ ಕಾಲಿಯಾಗಿದ್ದು ಆ ಸ್ಥಾನದಲ್ಲಿ ಗೋಪಾಲಕೃಷ್ಣ ಸೀಟು ಅಲಂಕರಿಸುತ್ತಾರೆ ಎಂದು ಕೇಳಿಬರುತ್ತಿದೆ ಅದಕ್ಕಾಗಿಯೇ ಕಾಂಗ್ರೆಸ್ ನಿಂದ ದೂರ ಇದ್ದ ಗೋಪಾಲಕೃಷ್ಣ ಕಾಂಗ್ರೆಸ್ ನೊಂದಿಗಿನ ಮುನಿಸು ಮರೆತು ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸುವ ಮೂಲಕ ಉಹಾಪೋಹಗಳಿಗೆ ಇತಿಶ್ರೀ ಹಾಡಿದ್ದಾರೆ ಎನ್ನಲಾಗುತ್ತಿದೆ, ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರು ಯಾರಗಬೇಕು ಎನ್ನುವುದನ್ನು ಅಧಿಕೃತವಾಗಿ ದೃಡಪಡಿಸಬೇಕಾದವರು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರು,
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14