ನ್ಯೂಜ್ ಡೆಸ್ಕ್:ಮಹಿಳೆ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಬಳಿಅಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ.ಮಹಿಳೆಯ ಗಂಡನ ಮನೆಯವರು ಮನೆ ಸೊಸೆ ಮೇಲೆ ಮೃಗೀಯವಾಗಿ ವರ್ತಿಸಿದ್ದಾರೆ.
ಬೆಂಗಳೂರಿನ ಆನೇಕಲ್ ಪಟ್ಟಣದ ನಾರಾಯಣಪುರದ ಅರುಣ್ 5 ವರ್ಷಗಳ ಹಿಂದೆ ಕುಟುಂಬದವರೆ ನೋಡಿದ ಹೆಣ್ಣು ಶ್ರೀಲಜಾ ಎಂಬಾಕೆಯನ್ನು ಮದುವೆಯಾಗಿದ್ದರು. ಈ ದಂಪತಿಗಳಿಗೆ ನಾಲ್ಕು ವರ್ಷದ ಹೆಣ್ಣು ಮಗು ಕೂಡ ಇದೆ.ಅದರೆ ಇತ್ತಿಚಿಗೆ ಗಂಡ ಅರುಣ್ ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದು,ಗಜೇಂದ್ರ, ನರಸಿಂಹಮೂರ್ತಿ, ಲಕ್ಷ್ಮಿ, ಚೌಡಪ್ಪ ಎನ್ನುವರೂ ಸಹ ಸಹಕಾರ ನೀಡಿದಲ್ಲದೆ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
ಶ್ರೀಲಜಾ ಮೇಲೆ ಅನುಮಾನ ವ್ಯಕ್ತಪಡಿಸುತ್ತ, ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದು ಇದಕ್ಕಾಗಿ ಆಗಾಗ ಜಗಳ ನಡೆಯುತ್ತಿದ್ದು ಇದಕ್ಕಾಗಿ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯತಿ ಕೂಡ ನಡೆದಿತ್ತು. ಕಳೆದ ಒಂದು ವಾರದ ಹಿಂದೆ ಶ್ರೀಲಜಾ ತವರು ಮನೆಗೆ ತೆರಳಿದ್ದು ಇದೀಗ ಅತ್ತೆ ಮನೆಗೆ ವಾಪಸ್ಸು ಬಂದ ವೇಳೆ ಸೊಸೆಯನ್ನು ಮನೆಗೆ ಸೇರಿಸಿದೆ ರಸ್ತೆಯಲ್ಲೆ ಆಕೆಯ ಕೂದಲು ಎಳೆದಾಡಿ, ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



