ಶ್ರೀನಿವಾಸಪುರ:ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮಗಳ ಸರಮಾಲೆ ನಡೆದಿದೆ ಜನ ಓಡಾಡುವ ರಸ್ತೆಗೂ ಖಾತೆ ಮಾಡಿರುವ ಅಲ್ಲಿನ ಅಧಿಕಾರಿಗಳು ಅಕ್ರಮಗಳ ವ್ಯವಹಾರ ಸಾಬಿತು ಪಡಿಸಿದ್ದಾರೆ ಎಂದು ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆರೋಪಿಸಿದೆ. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ಮಾಡುವಂತೆ ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಲಯದ ಮುಂದೆ ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜೈ ಭೀಮ್ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಈ ಸಮಯದಲ್ಲಿ ಮಾತಾನಾಡಿದ ಜೈ ಭೀಮ್ ಶ್ರೀನಿವಾಸ್ ಮಾತನಾಡಿ ಗ್ರಾಮಪಂಚಾಯಿತಿಯಲ್ಲಿ ದೂಡ್ಡಮಟ್ಟದಲ್ಲಿ ಅಕ್ರಮಗಳು ನಡೆದಿದ್ದು ಸಿ.ಸಿ ರಸ್ತೆಗೂ ಇ ಖಾತಾ ಮಾಡಿದ್ದಾರೆ ಅದನ್ನು ರದ್ದು ಗೊಳಿಸುವಂತೆ ಒತ್ತಾಯಿಸಿದರು. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ಮಾಡಲು ವಿಶೇಷ ತಂಡ ರಚಿಸಬೇಕು ಹಾಗೂ ಸಿ.ಸಿ ರಸ್ತೆಗೆ ಮಾಡಿರುವ ಇ ಖಾತಾ ರದ್ದು ಗೊಳಿಸಿ ವೆಂಕಟರಾಮಪ್ಪ ಮನೆಗೆ ಹೋಗಲು ರಸ್ತೆ ಅನುಕೂಲ ಮಾಡಬೇಕು ತಾಲೂಕಿನಾದ್ಯಂತ ಆಗಿರುವ ನರೇಗಾ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರಗಳು ನಡೆದಿದ್ದು ವಿಶೇಷವಾಗಿ ಪರಿಶೀಲನೆ ಮಾಡಬೇಕು ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಇವೋಗೆ ಮನವಿ ಪತ್ರ ಸಲ್ಲಿಸಿದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Tuesday, April 29