ಶ್ರೀನಿವಾಸಪುರ:ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮಗಳ ಸರಮಾಲೆ ನಡೆದಿದೆ ಜನ ಓಡಾಡುವ ರಸ್ತೆಗೂ ಖಾತೆ ಮಾಡಿರುವ ಅಲ್ಲಿನ ಅಧಿಕಾರಿಗಳು ಅಕ್ರಮಗಳ ವ್ಯವಹಾರ ಸಾಬಿತು ಪಡಿಸಿದ್ದಾರೆ ಎಂದು ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆರೋಪಿಸಿದೆ. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ಮಾಡುವಂತೆ ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಲಯದ ಮುಂದೆ ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜೈ ಭೀಮ್ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಈ ಸಮಯದಲ್ಲಿ ಮಾತಾನಾಡಿದ ಜೈ ಭೀಮ್ ಶ್ರೀನಿವಾಸ್ ಮಾತನಾಡಿ ಗ್ರಾಮಪಂಚಾಯಿತಿಯಲ್ಲಿ ದೂಡ್ಡಮಟ್ಟದಲ್ಲಿ ಅಕ್ರಮಗಳು ನಡೆದಿದ್ದು ಸಿ.ಸಿ ರಸ್ತೆಗೂ ಇ ಖಾತಾ ಮಾಡಿದ್ದಾರೆ ಅದನ್ನು ರದ್ದು ಗೊಳಿಸುವಂತೆ ಒತ್ತಾಯಿಸಿದರು. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ಮಾಡಲು ವಿಶೇಷ ತಂಡ ರಚಿಸಬೇಕು ಹಾಗೂ ಸಿ.ಸಿ ರಸ್ತೆಗೆ ಮಾಡಿರುವ ಇ ಖಾತಾ ರದ್ದು ಗೊಳಿಸಿ ವೆಂಕಟರಾಮಪ್ಪ ಮನೆಗೆ ಹೋಗಲು ರಸ್ತೆ ಅನುಕೂಲ ಮಾಡಬೇಕು ತಾಲೂಕಿನಾದ್ಯಂತ ಆಗಿರುವ ನರೇಗಾ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರಗಳು ನಡೆದಿದ್ದು ವಿಶೇಷವಾಗಿ ಪರಿಶೀಲನೆ ಮಾಡಬೇಕು ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಇವೋಗೆ ಮನವಿ ಪತ್ರ ಸಲ್ಲಿಸಿದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



