ಶ್ರೀನಿವಾಸಪುರ:ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮಗಳ ಸರಮಾಲೆ ನಡೆದಿದೆ ಜನ ಓಡಾಡುವ ರಸ್ತೆಗೂ ಖಾತೆ ಮಾಡಿರುವ ಅಲ್ಲಿನ ಅಧಿಕಾರಿಗಳು ಅಕ್ರಮಗಳ ವ್ಯವಹಾರ ಸಾಬಿತು ಪಡಿಸಿದ್ದಾರೆ ಎಂದು ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆರೋಪಿಸಿದೆ. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ಮಾಡುವಂತೆ ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಲಯದ ಮುಂದೆ ಡಾ..ಬಿ.ಅರ್. ಅಂಬೇಡ್ಕರ್ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜೈ ಭೀಮ್ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಈ ಸಮಯದಲ್ಲಿ ಮಾತಾನಾಡಿದ ಜೈ ಭೀಮ್ ಶ್ರೀನಿವಾಸ್ ಮಾತನಾಡಿ ಗ್ರಾಮಪಂಚಾಯಿತಿಯಲ್ಲಿ ದೂಡ್ಡಮಟ್ಟದಲ್ಲಿ ಅಕ್ರಮಗಳು ನಡೆದಿದ್ದು ಸಿ.ಸಿ ರಸ್ತೆಗೂ ಇ ಖಾತಾ ಮಾಡಿದ್ದಾರೆ ಅದನ್ನು ರದ್ದು ಗೊಳಿಸುವಂತೆ ಒತ್ತಾಯಿಸಿದರು. ಮುತ್ತಕಪಲ್ಲಿ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ಮಾಡಲು ವಿಶೇಷ ತಂಡ ರಚಿಸಬೇಕು ಹಾಗೂ ಸಿ.ಸಿ ರಸ್ತೆಗೆ ಮಾಡಿರುವ ಇ ಖಾತಾ ರದ್ದು ಗೊಳಿಸಿ ವೆಂಕಟರಾಮಪ್ಪ ಮನೆಗೆ ಹೋಗಲು ರಸ್ತೆ ಅನುಕೂಲ ಮಾಡಬೇಕು ತಾಲೂಕಿನಾದ್ಯಂತ ಆಗಿರುವ ನರೇಗಾ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರಗಳು ನಡೆದಿದ್ದು ವಿಶೇಷವಾಗಿ ಪರಿಶೀಲನೆ ಮಾಡಬೇಕು ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಇವೋಗೆ ಮನವಿ ಪತ್ರ ಸಲ್ಲಿಸಿದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14